ಇದಲ್ಲದೆ--ನಿನ್ನ ದಾಸನಾದ ಯಾಕೋಬನು ನಮ್ಮ ಹಿಂದೆ ಬರುತ್ತಾನೆಂದು ಹೇಳಬೇಕು ಎಂದು ಆಜ್ಞಾಪಿಸಿದನು. ಯಾಕಂದರೆ ನನ್ನ ಮುಂದೆ ಹೋಗುವ ಕಾಣಿಕೆಯಿಂದ ಅವನನ್ನು ಸಮಾಧಾನಪಡಿಸುವೆನು. ತರುವಾಯ ಅವನ ಮುಖವನ್ನು ನೋಡುವೆನು; ಅವನು ನನ್ನನ್ನು ಅಂಗೀಕರಿಸುವನೇನೋ ಎಂದು ಅಂದು ಕೊಂಡನು.
Cross references
ಆಗ ಅವರ ತಂದೆಯಾದ ಇಸ್ರಾಯೇಲನು ಅವರಿಗೆ--ನೀವು ಹೀಗೆ ಮಾಡಿರಿ, ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ಫಲಗಳನ್ನು ನಿಮ್ಮ ಸಾಮಾನು ಗಳಲ್ಲಿ ಇಟ್ಟುಕೊಂಡು ಆ ಮನುಷ್ಯನಿಗೆ ಕಾಣಿಕೆ ಯಾಗಿ ಸ್ವಲ್ಪ ತೈಲ, ಸ್ವಲ್ಪ ಜೇನು, ಸುಗಂಧದ್ರವ್ಯ, ರಕ್ತಬೋಳ, ಅಕ್ರೋಡು ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.
ಆದದರಿಂದ ನಿಮ್ಮ ಗಡ್ಡೆವ್ಯಾಧಿಯ ರೂಪಗಳನ್ನೂ ಭೂಮಿಯನ್ನು ಕೆಡಿಸಿಬಿಟ್ಟ ನಿಮ್ಮ ಇಲಿ ಗಳ ರೂಪಗಳನ್ನೂ ನೀವು ಮಾಡಿ ಇಸ್ರಾಯೇಲ್ ದೇವರಿಗೆ ಮಹಿಮೆಯನ್ನು ಸಲ್ಲಿಸಬೇಕು. ಆಗ ಒಂದು ವೇಳೆ ಆತನು ನಿಮ್ಮ ಮೇಲೆಯೂ ನಿಮ್ಮ ದೇವರುಗಳ ಮೇಲೆಯೂ ನಿಮ್ಮ ಭೂಮಿಯ ಮೇಲೆಯೂ ಇರುವ ತನ್ನ ಕೈಯನ್ನು ತೆಗೆದು ಹಗುರಮಾಡುವನು.
ಈಗ ನೀನು ಅದಕ್ಕೆ ಮಾಡಬೇಕಾ ದದ್ದೇನೆಂದು ತಿಳುಕೊಂಡು ನೋಡು. ಯಾಕಂದರೆ ಕೇಡು ನಮ್ಮ ಯಜಮಾನನ ಮೇಲೆಯೂ ಅವನ ಮನೆಯೆಲ್ಲಾದರ ಮೇಲೆಯೂ ನಿಶ್ಚಯಿಸಲ್ಪಟ್ಟಿದೆ; ಏನಂದರೆ, ಅವನು ಬೆಲಿಯಾಳನ ಮಗನಾಗಿರುವದ ರಿಂದ ಅವನ ಸಂಗಡ ಯಾವನೂ ಮಾತನಾಡ ಕೂಡದು ಅಂದನು.
ಆಗ ಅವನ ಸೇವಕರು ಅವನಿಗೆ -- ಇಗೋ, ಇಸ್ರಾಯೇಲಿನ ಮನೆಯ ಅರಸುಗಳು ಕರುಣೆಯುಳ್ಳವರೆಂದು ನಾವು ಕೇಳಿದ್ದೇವೆ; ನಾವು ಗೋಣಿಯನ್ನು ನಡುವಿನಲ್ಲಿ ಕಟ್ಟಿ ಕೊಂಡು ಹಗ್ಗಗಳನ್ನು ನಮ್ಮ ತಲೆಗಳಲ್ಲಿ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಹೋಗೋಣ; ಒಂದು ವೇಳೆ ಅವನು ನಿನ್ನ ಪ್ರಾಣವನ್ನು ರಕ್ಷಿಸುವನು ಅಂದರು.
ಹಾಗಾದರೆ ಈಗ ಏಳು ಎತ್ತುಗಳೂ ಏಳು ಹೋತಗಳೂ ನಿಮ ಗೋಸ್ಕರ ತಕ್ಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಬನ್ನಿರಿ; ಅವುಗಳನ್ನು ನಿಮಗೋಸ್ಕರ ದಹನ ಬಲಿಯಾಗಿ ಅರ್ಪಿಸಿರಿ; ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥನೆ ಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ಮಾಡದ ಹಾಗೆ ಅವನ ಪ್ರಾರ್ಥನೆಯನ್ನು ಅಂಗೀಕರಿಸುವೆನು. ಯಾಕಂ ದರೆ ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾ ಡಲಿಲ್ಲ.
ಅವನು ಯಾವ ಈಡನ್ನು ಲಕ್ಷಿಸುವದಿಲ್ಲ; ಇದ ಲ್ಲದೆ ನೀನು ಎಷ್ಟು ಲಂಚಕೊಟ್ಟರೂ ಅವನು ಒಪ್ಪುವದಿಲ್ಲ.
ಕೋಪಿಷ್ಠನು ವಿವಾದವನ್ನು ಎಬ್ಬಿಸುವನು; ದೀರ್ಘ ಶಾಂತನು ವಿವಾದವನ್ನು ಶಮನಪಡಿಸುತ್ತಾನೆ.
ಅರಸನ ಕೋಪವು ಮೃತ್ಯುವಿನ ದೂತರಂತೆ ಇರುತ್ತದೆ; ಜ್ಞಾನಿಯು ಅದನ್ನು ಶಮನಪಡಿಸುವನು.
ಗುಪ್ತ ಲಂಚವು ಕೋಪವನ್ನು ಅಡಗಿಸುವದು; ಎದೆಯಲ್ಲಿ ಕೊಟ್ಟ ಬಹುಮಾನವು ರೌದ್ರವನ್ನು ಆರಿಸುತ್ತದೆ.
ದೇವರು ತಿರುಗಿ ಕೊಂಡು ಪಶ್ಚಾತ್ತಾಪಪಟ್ಟು ನಾವು ನಾಶವಾಗದ ಹಾಗೆ ತನ್ನ ಕೋಪದ ಉರಿಯನ್ನು ಬಿಟ್ಟಾನೇನೋ ಯಾರು ಬಲ್ಲರು ಅಂದನು.ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ.
ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.