ಯಾಕೋಬನು ಎದೋಮ್ಯರ ದೇಶವಾದ ಸೇಯಾರಿನ ಸೀಮೆಯಲ್ಲಿರುವ ತನ್ನ ಸಹೋದರನಾದ ಏಸಾವನ ಬಳಿಗೆ ದೂತರನ್ನು ತನ್ನ ಮುಂದಾಗಿ ಕಳುಹಿಸಿದನು.
Cross references
ಅವರ ಬೆಟ್ಟ ವಾದ ಸೇಯಾರಿನಲ್ಲಿ ಹೋರಿಯರನ್ನೂ ಅರಣ್ಯಕ್ಕೆ ಸವಿಾಪವಾದ ಏಲ್ಪಾರಾನಿನ ವರೆಗೂ ಅವರನ್ನು ಸಂಹರಿಸಿದರು.
ಏಸಾವನು ಯಾಕೋಬನಿಗೆ--ಆ ಕೆಂಪಾದ ಪದಾರ್ಥವನ್ನು ತಿನ್ನುವದಕ್ಕೆ ನನಗೆ ಕೊಡು, ನಾನು ದಣಿದಿದ್ದೇನೆ ಅಂದನು. ಆದದರಿಂದ ಅವನಿಗೆ ಎದೋಮ್ ಎಂದು ಹೆಸರಾಯಿತು.
ತಂದೆಯು ಯಾಕೋಬನಿಗೆ ಕೊಟ್ಟ ಆಶೀರ್ವಾದ ಕ್ಕೋಸ್ಕರ ಏಸಾವನು ಅವನನ್ನು ಹಗೆಮಾಡಿ--ನನ್ನ ತಂದೆಗೋಸ್ಕರ ದುಃಖಪಡುವ ದಿನಗಳು ಸವಿಾಪ ವಾಗಿವೆ, ತರುವಾಯ ನಾನು ನನ್ನ ಸಹೋದರ ನಾದ ಯಾಕೋಬನನ್ನು ಕೊಲ್ಲುವೆನು ಎಂದು ಹೃದಯದಲ್ಲಿ ಅಂದುಕೊಂಡನು.
ಆದದರಿಂದ ನನ್ನ ಒಡೆಯನೇ, ನಿನ್ನ ಸೇವಕನಿಗಿಂತಲೂ ಮುಂಚೆ ಹೋಗಬಹುದು. ನಾನು ನನ್ನ ಒಡೆಯನ ಬಳಿಗೆ ಸೇಯಾರಿಗೆ ಬರುವ ವರೆಗೆ ನನ್ನ ಮುಂದಿರುವ ಮಂದೆಗಳ ನಡಿಗೆಗೂ ಮಕ್ಕಳ ನಡಿಗೆಗೂ ತಕ್ಕ ಹಾಗೆ ಮೆಲ್ಲಗೆ ನಡೆದು ಬರುವೆನು ಅಂದನು.
ಹೀಗೆ ಏಸಾವನು ಆ ದಿನವೇ ತನ್ನ ಮಾರ್ಗವಾಗಿ ಸೇಯಾರಿಗೆ ಹಿಂದಿರುಗಿ ಹೋದನು.
ತರುವಾಯ ಏಸಾವನು ತನ್ನ ಹೆಂಡತಿಯರನ್ನೂ ಕುಮಾರ ಕುಮಾರ್ತೆಯರನ್ನೂ ತನ್ನ ಮನೆಯಲ್ಲಿದ್ದ ಎಲ್ಲಾ ಮನುಷ್ಯರನ್ನೂ ತನ್ನ ಹಿಂಡುಗಳನ್ನೂ ತನ್ನ ಎಲ್ಲಾ ದನಗಳನ್ನೂ ಕಾನಾನ್ ದೇಶದಲ್ಲಿ ತಾನು ಸಂಪಾದಿಸಿದ್ದ ಎಲ್ಲಾ ಸಂಪತ್ತನ್ನೂ ತೆಗೆದುಕೊಂಡು ತನ್ನ ಸಹೋದರನಾದ ಯಾಕೋಬನ ಎದುರಿನಿಂದ ಮತ್ತೊಂದು ದೇಶಕ್ಕೆ ಹೋದನು.
ಅವರ ಸಂಗಡ ಜಗಳವಾಡಬೇಡಿರಿ. ನಾನು ನಿಮಗೆ ಅವರ ದೇಶದಲ್ಲಿ ಪಾದದಷ್ಟೂ ಸ್ಥಳ ಕೊಡುವದಿಲ್ಲ; ಸೇಯಾರ್ ಬೆಟ್ಟವನ್ನು ಏಸಾವನಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲಾ.
ಕರ್ತನು ಸೇಯಾರಿನಲ್ಲಿ ವಾಸವಾಗಿ ರುವ ಏಸಾವನ ಮಕ್ಕಳಿಗೆ ಮಾಡಿದ ಹಾಗಾಯಿತು. ಅವನು ಅವರ ಮುಂದೆ ಹೋರಿಯರನ್ನು ನಾಶ ಮಾಡಿದಾಗ ಅವರು ಇವರನ್ನು ಹೊರಡಿಸಿ ಇವರ ಬದಲಾಗಿ ಇಂದಿನ ವರೆಗೂ ವಾಸಿಸಿದ್ದವರಲ್ಲಾ.
ಅದು ಯಾವದಂದರೆ, ಮಹನಯಾಮಿ ನಿಂದ ಬಾಷಾನಿನ ಅರಸನಾದ ಓಗನ ಸಮಸ್ತ ರಾಜ್ಯವಾಗಿರುವ ಬಾಷಾನೆಲ್ಲವೂ ಬಾಷಾನಿನಲ್ಲಿರುವ ಯಾಯಾರಿನ ಸಮಸ್ತ ಊರುಗಳಾದ ಅರವತ್ತು ಪಟ್ಟಣಗಳೂ ಅವರ ಮೇರೆಗೆ ಒಳಗಾದವು.
ಅವನಿಗೆ ಇಸಾಕನನ್ನು ಕೊಟ್ಟೆನು; ಇಸಾಕನಿಗೆ ಯಾಕೋಬನನ್ನೂ ಏಸಾವನನ್ನೂ ಕೊಟ್ಟು ಏಸಾವನಿಗೆ ಸೇಯಾರ್ ಪರ್ವತದ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟೆನು. ಆದರೆ ಯಾಕೋಬನೂ ಅವನ ಮಕ್ಕಳೂ ಐಗುಪ್ತಕ್ಕೆ ಹೋದರು.
ಆದರೆ ಸೌಲನ ಸೈನ್ಯಾಧಿಪತಿಯಾದ ನೇರನ ಮಗ ನಾಗಿರುವ ಅಬ್ನೇರನು ಸೌಲನ ಮಗನಾದ ಈಷ್ಬೋ ಶೆತನನ್ನು ಮಹನಯಿಮಿಗೆ ಕರಕೊಂಡು ಹೋಗಿ
ಆಗ ಎಲೀಷನುಕರ್ತನೇ, ನೀನು ದಯಮಾಡಿ ಅವನು ನೋಡುವ ಹಾಗೆ ಅವನ ಕಣ್ಣುಗಳನ್ನು ತೆರೆ ಎಂದು ಪ್ರಾರ್ಥಿಸಿ ದನು. ಕರ್ತನು ಆ ಯೌವನಸ್ಥನ ಕಣ್ಣುಗಳನ್ನು ತೆರೆ ದಾಗ ಇಗೋ, ಎಲೀಷನ ಸುತ್ತಲೂ ಬೆಟ್ಟದಲ್ಲಿ ಬೆಂಕಿಯ ಕುದುರೆಗಳೂ ರಥಗಳೂ ತುಂಬಿರುವದನ್ನು ಅವನು ನೋಡಿದನು.
ಕರ್ತನ ವಾಕ್ಯದ ಪ್ರಕಾರ ಸೌಲನ ರಾಜ್ಯವನ್ನು ದಾವೀದನ ಕಡೆಗೆ ತಿರುಗಿಸುವದಕ್ಕೆ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಯುದ್ಧಕ್ಕೆ ಆಯುಧಗಳನ್ನು ಧರಿಸಿ ಕೊಂಡು ಬಂದ ದಂಡುಗಳ ಲೆಕ್ಕವೇನಂದರೆ --
ಓ ರಾಜಪುತ್ರನ ಮಗಳೇ! ಕೆರಗಳು ಮೆಟ್ಟಿರುವ ನಿನ್ನ ಪಾದಗಳು ಎಷ್ಟು ಸುಂದ ರವಾಗಿವೆ; ನಿನ್ನ ಸೊಂಟದ ಕೀಲುಗಳು ಪ್ರವೀಣನ ಕೈಕೆಲಸವಾದ ವಿಚಿತ್ರ ಆಭರಣಗಳಂತಿವೆ
ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ.
ತನಗೆ ಮುಂದಾಗಿ ದೂತರನ್ನು ಕಳುಹಿಸಿದನು. ಅವರು ಹೋಗಿ ಆತನಿಗಾಗಿ ಸಿದ್ಧ ಪಡಿಸುವಂತೆ ಸಮಾರ್ಯದ ಒಂದು ಹಳ್ಳಿಯೊಳಕ್ಕೆ ಪ್ರವೇಶಿಸಿದರು.
ಇಲ್ಲವೆ ಯಾವ ಅರಸನಾದರೂ ಬೇರೆ ಅರಸನಿಗೆ ವಿರೋಧ ವಾಗಿ ಯುದ್ಧಮಾಡುವದಕ್ಕೆ ಹೋಗುವಾಗ ಮೊದಲು ಕೂತುಕೊಂಡು ತನಗೆ ವಿರೋಧವಾಗಿ ಇಪ್ಪತ್ತು ಸಾವಿರ (ಸೈನ್ಯ)ದೊಂದಿಗೆ ಬರುವ ಆ ಅರಸನನ್ನು ತನ್ನ ಹತು ಸಾವಿರ (ಸೈನ್ಯ)ದೊಂದಿಗೆ ಎದುರಿಸಲು ಸಮರ್ಥನೋ ಎಂದು ವಿಚಾರಿಸುವದಿಲ್ಲವೋ?