ಅವನು ಪೆನೂವೇಲನ್ನು ದಾಟಿ ಹೋದಾಗ ಅವನಿಗೆ ಸೂರ್ಯೋದಯವಾಯಿತು. ಆದರೆ ಅವನು ತೊಡೆಯ ನಿಮಿತ್ತ ಕುಂಟಿಕೊಂಡು ನಡೆದನು.ಆತನು ಯಾಕೋಬನ ತೊಡೆಯ ಕೀಲನ್ನು ಮುದುರಿದ ನರದಲ್ಲಿ ಮುಟ್ಟಿದ್ದರಿಂದ ಇಸ್ರಾಯೇಲ್ ಮಕ್ಕಳು ತೊಡೆಯ ಕೀಲಿನ ಮೇಲಿರುವ ಮುದುರಿದ ನರವನ್ನು ಈ ದಿನದ ವರೆಗೂ ತಿನ್ನುವದಿಲ್ಲ.
Cross references
ಹಾಗರಳು ತನ್ನ ಸಂಗಡ ಮಾತನಾಡಿದ ಕರ್ತನಿಗೆ--ನೀನು ನನ್ನನ್ನು ನೋಡುವ ದೇವರು ಎಂದು ಹೆಸರಿಟ್ಟಳು. ಯಾಕಂದರೆ ನನ್ನನ್ನು ನೋಡುವಾ ತನನ್ನು ನಾನು ಇಲ್ಲಿಯೂ ನೋಡುವಂತಾಯಿತಲ್ಲಾ ಎಂದು ಅಂದುಕೊಂಡಳು.
ಸೂರ್ಯೋದಯವಾದಾಗ ದೂತರು ಲೋಟನನ್ನು ತ್ವರೆಪಡಿಸಿ--ನೀನು ಈ ಪಟ್ಟಣದ ದುಷ್ಟತನದಿಂದ ನಾಶವಾಗದ ಹಾಗೆ ಎದ್ದು ನಿನ್ನ ಹೆಂಡತಿಯನ್ನೂ ಇಲ್ಲಿರುವ ನಿನ್ನ ಇಬ್ಬರು ಕುಮಾರ್ತೆಯರನ್ನೂ ಕರಕೊಂಡು ನಡೆ ಅಂದರು.
ಲೋಟನು ಚೋಗರಿಗೆ ಬಂದಾಗ ಭೂಮಿಯ ಮೇಲೆ ಸೂರ್ಯನು ಉದಯಿ ಸಿದನು.
ಆ ಮನುಷ್ಯನು ಅವನನ್ನು ಜಯಿಸದೆ ಇರುವದನ್ನು ನೋಡಿ ಅವನ ತೊಡೆಯ ಕೀಲನ್ನು ಮುಟ್ಟಿದನು. ಅವನು ಹಾಗೆಯೇ ಆತನ ಸಂಗಡ ಹೋರಾಡುವಲ್ಲಿ ಯಾಕೋಬನ ತೊಡೆಯ ಕೀಲು ತಪ್ಪಿತು.
ಅವರು ಇಸ್ರಾಯೇಲಿನ ದೇವರನ್ನು ನೋಡಿದರು. ಆತನ ಪಾದಗಳ ಕೆಳಗೆ ನೀಲವರ್ಣದ ಕಲ್ಲಿನ ಕೆಲಸಕ್ಕೆ ಸಮಾನವಾದದ್ದೂ ಆಕಾಶದ ಹಾಗೆ ನಿರ್ಮಲವಾದದ್ದೂ ಇತ್ತು.
ಆದರೆ ಇಸ್ರಾಯೇಲ್ ಮಕ್ಕಳ ಶ್ರೇಷ್ಠರ ಮೇಲೆ ಆತನು ಕೈ ಹಾಕಲಿಲ್ಲ. ಅವರು ಸಹ ದೇವರ ದರ್ಶನದ ನಂತರ ತಿಂದು ಕುಡಿದರು.
ಇಗೋ, ನಮ್ಮ ದೇವರಾದ ಕರ್ತನು ತನ್ನ ಮಹಿಮೆಯನ್ನೂ ತನ್ನ ಘನವನ್ನೂ ನಮಗೆ ತೋರಿಸಿದ್ದಾನೆ; ಆತನ ಶಬ್ದವನ್ನು ಬೆಂಕಿಯೊಳಗಿಂದ ಕೇಳಿದ್ದೇವೆ; ದೇವರು ಮನುಷ್ಯರ ಸಂಗಡ ಮಾತ ನಾಡಲು ಅವರು ಬದುಕುತ್ತಾರೆಂದು ಈಹೊತ್ತು ನೋಡಿದ್ದೇವೆ.
ಸಮಸ್ತ ಜನರಲ್ಲಿ ಯಾರು ನಮ್ಮ ಹಾಗೆ ಬೆಂಕಿಯೊಳ ಗಿಂದ ಮಾತನಾಡುವ ಜೀವವುಳ್ಳ ದೇವರ ಶಬ್ದವನ್ನು ಕೇಳಿ ಬದುಕಿದರು?
ಅವನು ಕರ್ತನ ದೂತನೆಂದು ಗಿದ್ಯೋನನು ತಿಳಿದಾಗ ಗಿದ್ಯೋ ನನು--ಅಯ್ಯೋ! ಓ ಕರ್ತನಾದ ದೇವರೇ, ನಾನು ಕರ್ತನ ದೂತನನ್ನು ಮುಖಾಮುಖಿಯಾಗಿ ನೋಡಿ ದೆನು ಅಂದನು.
ಆದರೆ ಕರ್ತನು ಅವನಿಗೆ--ನಿನಗೆ ಸಮಾಧಾನವಾಗಲಿ; ಭಯಪಡಬೇಡ, ನೀನು ಸಾಯುವದಿಲ್ಲ ಅಂದನು.
ಅಲ್ಲಿಂದ ಪೆನೂವೇ ಲಿಗೆ ಹೋಗಿ ಆ ಊರಿನವರ ಸಂಗಡ ಆ ಪ್ರಕಾರವೇ ಮಾತನಾಡಿದನು. ಅವರು ಸುಖೋತಿನ ಮನುಷ್ಯರು ಪ್ರತ್ಯುತ್ತರಕೊಟ್ಟ ಹಾಗೆಯೇ ಪ್ರತ್ಯುತ್ತರಕೊಟ್ಟರು.
ಯಾರೊಬ್ಬಾಮನು ಎಫ್ರಾಯಾಮನ ಬೆಟ್ಟದಲ್ಲಿ ಶೆಕೆಮನನ್ನು ಕಟ್ಟಿಸಿ ಅದರಲ್ಲಿ ವಾಸಿಸಿದನು. ಅಲ್ಲಿಂದ ಹೊರಟುಹೋಗಿ ಪೆನೂವೇಲನ್ನು ಕಟ್ಟಿಸಿದನು.
ನಾನು ಕೆಡಲ್ಪಡುವ ಸ್ಥಿತಿಯಲ್ಲಿದ್ದೇನೆ; ನನ್ನ ವ್ಯಸನವು ಯಾವಾಗಲೂ ನನ್ನ ಮುಂದೆ ಅದೆ.
ಆಗ ನಾನು--ಅಯ್ಯೋ, ನಾನು ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು, ನಾನು ಹೊಲಸು ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು; ಆದರೂ ಸೈನ್ಯಗಳ ಕರ್ತನಾದ ಅರಸನನ್ನು ನನ್ನ ಕಣ್ಣುಗಳು ಕಂಡವಲ್ಲಾ ಅಂದೆನು.
ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.
ಇದಲ್ಲದೆ ಹೇರಳವಾದ ಪ್ರಕಟಣೆಗಳ ಮೂಲಕ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಬಾರದೆಂದು ನನ್ನನ್ನು ಗುದ್ದುವದಕ್ಕಾಗಿ ಸೈತಾನನ ದೂತನಂತೆ ನನ್ನ ಶರೀರದಲ್ಲಿ ಒಂದು ಮುಳ್ಳು ನನಗೆ ಕೊಡಲ್ಪಟ್ಟಿದೆ; ಹೀಗೆ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಲಾರದಂತೆ ಇದಾಯಿತು.
ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು.