ಆಗ ಯಾಕೋಬನು--ಹಾಗಲ್ಲ, ಈಗ ನಿನ್ನ ದೃಷ್ಟಿಯಲ್ಲಿ ನಾನು ಕೃಪೆ ಹೊಂದಿದ್ದೇಯಾದರೆ ನನ್ನ ಕಾಣಿಕೆಯನ್ನು ನನ್ನ ಕೈಯಿಂದ ತಕ್ಕೊಳ್ಳಬೇಕು. ಯಾಕಂದರೆ ನಾನು ದೇವರ ಮುಖವನ್ನು ಕಂಡ ಹಾಗೆ ನಿನ್ನ ಮುಖವನ್ನು ಕಂಡದ್ದಕ್ಕಾಗಿಯೂ ನೀನು ನನ್ನನ್ನು ಮೆಚ್ಚಿದ್ದಕ್ಕಾಗಿಯೂ
Cross references
ಇಗೋ, ಈಗ ನಿನ್ನ ದಾಸನಿಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಿದೆ. ನನ್ನ ಪ್ರಾಣವನ್ನು ಉಳಿಸುವ ಹಾಗೆ ನೀನು ನನಗೆ ಮಾಡಿದ ಕೃಪೆಯನ್ನು ಘನಪಡಿಸಿದ್ದೀ. ಆದರೆ ನಾನು ತಪ್ಪಿಸಿಕೊಂಡು ಬೆಟ್ಟಕ್ಕೆ ಹೋಗಲಾರೆನು; ನನಗೆ ಕೇಡು ಉಂಟಾಗಿ ನಾನು ಸತ್ತೇನು;
ಆಗ ಯಾಕೋಬನು--ನಾನು ದೇವರನ್ನು ಮುಖಾಮುಖಿ ಯಾಗಿ ನೋಡಿದರೂ ನನ್ನ ಪ್ರಾಣವು ಕಾಪಾಡಲ್ಪಟ್ಟಿತು ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.
ಆಗ ಯೆಹೂದನು ಅವನಿಗೆ--ಆ ಮನುಷ್ಯನು ನಮಗೆ--ನಿಮ್ಮ ತಮ್ಮನನ್ನು ನಿಮ್ಮ ಸಂಗಡ ಕರಕೊಂಡುಬಾರದ ಹೊರತು ನೀವು ನನ್ನ ಮುಖ ವನ್ನು ನೋಡಬಾರದೆಂದು ನಮಗೆ ಖಂಡಿತವಾಗಿ ಹೇಳಿದ್ದಾನೆ.
ಇಸ್ರಾಯೇಲನು ಸಾಯುವ ಸಮಯವು ಸವಿಾಪಿಸಿ ದಾಗ ಅವನು ತನ್ನ ಮಗನಾದ ಯೋಸೇಫನನ್ನು ಕರೆಯಿಸಿ ಅವನಿಗೆ--ಈಗ ನಿನ್ನ ಸಮ್ಮುಖದಲ್ಲಿ ನಾನು ಕೃಪೆ ಹೊಂದಿದ್ದೇಯಾದರೆ ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಟ್ಟು ನನ್ನ ಕಡೆಗೆ ದಯೆಯನ್ನೂ ಸತ್ಯವನ್ನೂ ತೋರಿಸು. ಹೇಗಂದರೆ ಐಗುಪ್ತದಲ್ಲಿ ನನ್ನನ್ನು ಹೂಣಿಡಬೇಡ.
ಅವ ನಿಗಾಗಿ ದುಃಖಿಸುವ ದಿನಗಳು ಮುಗಿದ ಮೇಲೆ ಯೋಸೇಫನು ಫರೋಹನ ಮನೆಯವರಿಗೆ--ನಾನು ನಿಮ್ಮ ಕಣ್ಣುಗಳ ಮುಂದೆ ಕೃಪೆ ಹೊಂದಿದ್ದರೆ ಫರೋಹನ ಕಿವಿಗಳಲ್ಲಿ ಈ ಮಾತು ಹೇಳಬೇಕು.
ಆಗ ಮೋಶೆಯು ಕರ್ತನಿಗೆ--ನೋಡು, ನೀನು ಜನರನ್ನು ಕರೆದುಕೊಂಡು ಹೋಗು ಎಂದು ನನಗೆ ಹೇಳಿದ್ದೀ ಯಾರನ್ನು ನನ್ನ ಸಂಗಡ ಕಳುಹಿಸುವಿ ಎಂದು ನೀನು ನನಗೆ ತಿಳಿಸಲಿಲ್ಲ. ಆದಾಗ್ಯೂ ನೀನು--ನಾನು ನಿನ್ನ ಹೆಸರಿನ ಮೂಲಕ ನಿನ್ನನ್ನು ತಿಳಿದಿದ್ದೇನೆ, ನನ್ನ ದೃಷ್ಟಿಯಲ್ಲಿ ನಿನಗೆ ಕೃಪೆ ದೊರೆ ಯಿತು ಎಂದು ಹೇಳಿದ್ದೀಯಲ್ಲಾ.
ಆಗ ಅವಳು ಸಾಷ್ಟಾಂಗ ಬಿದ್ದು ವಂದಿಸಿ ಅವನಿಗೆ ನಾನು ಅನ್ಯಳಾಗಿರುವಾಗ ನೀನು ನನ್ನನ್ನು ತಿಳುಕೊಂಡು ನನ್ನ ಮೇಲೆ ನಿನ್ನ ಕೃಪೆ ಯನ್ನು ತೋರಿಸಿದ್ದು ಹೇಗೆ ಅಂದಳು.
ಆಗ ದಾವೀದನು ಪ್ರಮಾಣಮಾಡಿ--ನಿನ್ನ ಕಣ್ಣು ಮುಂದೆ ನನಗೆ ದಯೆದೊರಕೀತೆಂದು ನಿನ್ನ ತಂದೆಯು ನಿಶ್ಚಯವಾಗಿ ಬಲ್ಲನು; ಆದಕಾರಣ ಯೋನಾತಾನನು ವ್ಯಥೆಪಡದ ಹಾಗೆ--ಅವನು ಇದನ್ನು ತಿಳಿಯಬಾರದು ಎಂದು ಅನ್ನುತ್ತಾನೆ. ನಿಶ್ಚಯವಾಗಿ ಕರ್ತನಾಣೆ, ನಿನ್ನ ಪ್ರಾಣದಾಣೆ, ನನಗೂ ಮರಣಕ್ಕೂ ಒಂದು ಹೆಜ್ಜೆ ದೂರ ಮಾತ್ರವದೆ ಅಂದನು.
ಅದಕ್ಕವನು--ಒಳ್ಳೇದು, ನಾನು ನಿನ್ನ ಸಂಗಡ ಒಡಂಬಡಿಕೆಯನ್ನು ಮಾಡುವೆನು; ಆದರೆ ಒಂದನ್ನು ನಾನು ನಿನ್ನನ್ನು ಕೇಳುತ್ತೇನೆ; ಏನಂದರೆ, ನೀನು ನನ್ನ ಮುಖವನ್ನು ನೋಡುವದಕ್ಕೆ ಬರುವಾಗ ಸೌಲನ ಮಗಳಾದ ವಿಾಕಲಳನ್ನು ನೀನು ಕರಕೊಂಡು ಬಾರದೆ ಹೋದರೆ ನೀನು ನನ್ನ ಮುಖವನ್ನು ನೋಡಬಾರದು ಅಂದನು.
ಆದರೆ ಅರಸನು--ಅವನು ತನ್ನ ಮನೆಗೆ ತಿರುಗಿ ಹೋಗಲಿ; ಅವನು ನನ್ನ ಮುಖವನ್ನು ನೋಡಬಾರದು ಅಂದನು. ಆದದರಿಂದ ಅಬ್ಷಾಲೋಮನು ಅರಸನ ಮುಖವನ್ನು ನೋಡದೆ ತನ್ನ ಮನೆಗೆ ತಿರುಗಿ ಹೋದನು.
ಹೀಗೆಯೇ ಅಬ್ಷಾಲೋಮನು ಅರಸನ ಮುಖ ವನ್ನು ನೋಡದೆ ಪೂರ್ಣವಾಗಿ ಎರಡು ವರುಷ ಯೆರೂಸಲೇಮಿನಲ್ಲಿ ವಾಸವಾಗಿದ್ದನು.
ಅಬ್ಷಾಲೋಮನು ಯೋವಾಬನಿಗೆ--ಇಗೋ, ನಾನು ಗೆಷೂರಿನಿಂದ ಯಾಕೆ ಬಂದೆನೆಂದು ಅರಸನಿಗೆ ಹೇಳುವದಕ್ಕೆ ನಿನ್ನನ್ನು ಕಳುಹಿಸುವ ಹಾಗೆ ಇಲ್ಲಿಗೆ ಬಾ ಎಂದು ನಿನ್ನನ್ನು ಕರೇಕಳುಹಿಸಿದೆನು. ನಾನು ಇನ್ನೂ ಅಲ್ಲಿಯೇ ಇದ್ದಿದ್ದರೆ ನನಗೆ ಉತ್ತಮವಾಗಿತ್ತು. ಈಗ ನಾನು ಅರಸನ ಮುಖವನ್ನು ನೋಡಬೇಕು; ನನ್ನಲ್ಲಿ ಅಕ್ರಮ ಇದ್ದರೆ ಅವನು ನನ್ನನ್ನು ಕೊಂದುಹಾಕಲಿ ಅಂದನು.ಹಾಗೆಯೇ ಯೋವಾಬನು ಅರಸನ ಬಳಿಗೆ ಹೋಗಿ ತಿಳಿಸಿದ್ದರಿಂದ ಅರಸನು ಅಬ್ಷಾ ಲೋಮನನ್ನು ಕರೆಸಿದನು. ಆಗ ಅವನು ಅರಸನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರ ಮಾಡಿದನು. ಆಗ ಅರಸನು ಅಬ್ಷಾಲೋಮನನ್ನು ಮುದ್ದಿಟ್ಟನು.
ಅವನು ದೇವರಿಗೆ ಬಿನ್ನಹ ಮಾಡು ವನು; ಆತನು ಅವನಿಗೆ ಕೃಪಾಳುವಾಗಿರುವನು. ಅವನು ಆತನ ಮುಖವನ್ನು ಸಂತೋಷದಿಂದ ನೋಡುವನು; ಆತನು ಮನುಷ್ಯನಿಗೆ ತನ್ನ ನೀತಿಯನ್ನು ಅನುಗ್ರಹಿ ಸುವನು.
ನನ್ನ ಶತ್ರು ನನ್ನ ಮೇಲೆ ಜಯಧ್ವನಿ ಮಾಡದೆ ಇರುವದ ರಿಂದಲೇ ನಿನ್ನ ಒಲುಮೆಯು ನನಗಿರುವ ದೆಂದು ನಾನು ಬಲ್ಲೆನು.
ಆಗ ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಿತ್ತು; ಪ್ರವಾದಿಯಾದ ಯೆರೆವಿಾಯನು ಯೆಹೂದದ ಅರಸನ ಮನೆಯಲ್ಲಿರುವ ಸೆರೆಮನೆಯ ಅಂಗಳದಲ್ಲಿ ಮುಚ್ಚಲ್ಪಟ್ಟನು.
ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ತಾತ್ಸಾರ ಮಾಡದಂತೆ ನೋಡಿಕೊಳ್ಳಿರಿ; ಯಾಕಂದರೆ ನಾನು ನಿಮಗೆ ಹೇಳುವದೇನಂದರೆ--ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಾರೆ.
ಅವರು ಆತನ ಮುಖವನ್ನು ನೋಡುವರು; ಅವರ ಹಣೆಗಳ ಮೇಲೆ ಆತನ ಹೆಸರು ಇರುವದು.