ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ ಏಲೆಲೋಹೇ ಇಸ್ರಾಯೇಲ್ ಎಂದು ಹೆಸರಿಟ್ಟನು.
Cross references
ನೋಹನು ಕರ್ತನಿಗೆ ಬಲಿಪೀಠವನ್ನು ಕಟ್ಟಿ ಶುದ್ಧವಾದ ಎಲ್ಲಾ ಪಶು ಪಕ್ಷಿಗಳಿಂದಲೂ (ಕೆಲವನ್ನು) ತೆಗೆದು ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸಿದನು.
ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಿನ್ನ ಸಂತತಿಗೆ ನಾನು ಈ ದೇಶವನ್ನು ಕೊಡುವೆನು ಅಂದನು. ಆಗ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಕರ್ತನಿಗೆ ಬಲಿಪೀಠವನ್ನು ಕಟ್ಟಿದನು.
ಅಲ್ಲಿಂದ ಅವನು ಬೇತೇಲಿನ ಪೂರ್ವದ ಬೆಟ್ಟಕ್ಕೆ ಹೋಗಿ ಪಶ್ಚಿಮದಲ್ಲಿ ಬೇತೇಲು ಪೂರ್ವದಲ್ಲಿ ಆಯಿಯು ಇರುವ ಹಾಗೆ ತನ್ನ ಗುಡಾರವನ್ನು ಹಾಕಿ ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡನು.
ಆಗ ಅಬ್ರಾಮನು ತನ್ನ ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನ ಲ್ಲಿರುವ ಮಮ್ರೆಯ ಮೈದಾನಕ್ಕೆ ಬಂದು ಅಲ್ಲಿ ವಾಸವಾಗಿದ್ದನು. ಅವನು ಅಲ್ಲಿ ಕರ್ತನಿಗೆ ಬಲಿ ಪೀಠವನ್ನು ಕಟ್ಟಿದನು.
ಆಗ ಅಬ್ರಹಾಮನು ಬೇರ್ಷೆಬದಲ್ಲಿ ತೋಪನ್ನು ನೆಟ್ಟು (ಪಿಚುಲ ವೃಕ್ಷ) ನಿತ್ಯದೇವರಾದ ಕರ್ತನ ಹೆಸರನ್ನು ಹೇಳಿಕೊಂಡು ಆರಾಧಿಸಿದನು.ಅಬ್ರಹಾಮನು ಫಿಲಿಷ್ಟಿಯರ ದೇಶದಲ್ಲಿ ಬಹು ದಿವಸ ಪ್ರವಾಸಿಯಾಗಿದ್ದನು.
ಅದಕ್ಕೆ ಆತನುನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಕರೆಯಲ್ಪಡದೆ ಇಸ್ರಾಯೇಲ ಎಂದು ಕರೆಯಲ್ಪಡು ವದು. ಯಾಕಂದರೆ ನೀನು ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಜಯಿಸಿದ್ದೀ ಅಂದನು.
ಅಲ್ಲಿ ಅವನು ಯಜ್ಞ ವೇದಿಯನ್ನು ಕಟ್ಟಿ ತಾನು ತನ್ನ ಸಹೋದರನ ಬಳಿ ಯಿಂದ ಓಡಿಹೋದಾಗ ಅಲ್ಲಿ ದೇವರು ತನಗೆ ಪ್ರತ್ಯಕ್ಷನಾದದ್ದರಿಂದ ಆ ಸ್ಥಳಕ್ಕೆ ಏಲ್ ಬೇತೇಲ್ ಎಂದು ಹೆಸರಿಟ್ಟನು.
ಆಗ ದಾವೀದನು ಸಮಸ್ತ ಕೂಟದ ಮುಂದೆ ಕರ್ತನನ್ನು ಕೊಂಡಾಡಿ ಹೇಳಿದ್ದೇನಂದರೆ -- ನಮ್ಮ ತಂದೆ ಯಾದ ಇಸ್ರಾಯೇಲಿನ ದೇವರಾದ ಕರ್ತನೇ, ನೀನು ಯುಗಯುಗಾಂತರಗಳಿಂದ ಯುಗಯುಗಾಂತರ ಗಳಿಗೂ ಸ್ತುತಿಸಲ್ಪಡುವವನಾಗಿದ್ದೀ.