ಆಗ ಯಾಕೋಬನ ಮಕ್ಕಳು ಶೆಕೆಮನಿಗೂ ಅವನ ತಂದೆಯಾದ ಹಮೋರನಿಗೂ ವಂಚನೆಯ ಉತ್ತರವನ್ನು ಕೊಟ್ಟರು. ಅವನು ತಮ್ಮ ತಂಗಿಯಾದ ದೀನಳನ್ನು ಅಶುದ್ಧಮಾಡಿದ್ದನು.
Cross references
ಆ ಹುಡುಗರು ಬೆಳೆದಾಗ ಏಸಾವನು ಬೇಟೆ ಯಾಡುವದರಲ್ಲಿ ಜಾಣನಾಗಿದ್ದು ಅಡವಿಯ ಮನುಷ್ಯ ನಾದನು; ಯಾಕೋಬನು ಗುಡಾರಗಳಲ್ಲಿ ವಾಸ ಮಾಡುವ ಸಾಧುಮನುಷ್ಯನಾಗಿದ್ದನು.
ಆಗ ಸಂಸೋನನು ಅವರನ್ನು ಕುರಿತುನಾನು ಈ ಸಾರಿ ಫಿಲಿಷ್ಟಿಯರಿಗೆ ಕೇಡನ್ನುಮಾಡಿದರೆ ಅವರಿಗಿಂತ ಹೆಚ್ಚು ನಿರಪರಾಧಿಯಾಗಿರುವೆನು ಎಂದು ಅಂದುಕೊಂಡು ಹೊರಟು ಹೋಗಿ ಮುನ್ನೂರು ನರಿ ಗಳನ್ನು ಹಿಡಿದು
ಎರಡು ವರುಷ ಪೂರ್ಣಮುಗಿದ ತರುವಾಯ ಏನಾಯಿತಂದರೆ, ಅಬ್ಷಾಲೋಮನಿಗೆ ಎಫ್ರಾಯಾಮ್ ಬಳಿಯಲ್ಲಿರುವ ಬಾಳ್ಹಾಚೋರಿನಲ್ಲಿ ಕುರಿಗಳ ಉಣ್ಣೆ ಕತ್ತರಿಸುವವರಿದ್ದರು. ಆದದರಿಂದ ಅಬ್ಷಾಲೋಮನು ಅರಸನ ಮಕ್ಕಳನ್ನೆಲ್ಲಾ ಔತಣಕ್ಕೆ ಕರೆದನು.
ಆದರೆ ನೀವು ಸುಳ್ಳನ್ನು ಕಲ್ಪಿಸುವವರು; ನೀವೆಲ್ಲರೂ ವ್ಯರ್ಥ ವೈದ್ಯರೇ.
ದೇವರಿಗೋಸ್ಕರ ನೀವು ದುಷ್ಟತನದಿಂದ ಮಾತನಾಡುವಿರೋ? ಆತನಿಗೋ ಸ್ಕರ ಮೋಸದ ನುಡಿಗಳನ್ನಾಡುವಿರೋ?
ಒಬ್ಬೊಬ್ಬನು ತನ್ನ ನೆರೆಯವನ ಸಂಗಡ ವ್ಯರ್ಥವಾದ ಮಾತನ್ನು ಆಡುತ್ತಾನೆ; ಮುಖಸ್ತುತಿಯ ತುಟಿಯಿಂದಲೂ ವಂಚನೆಯ ಹೃದಯದಿಂದಲೂ ಅವರು ಮಾತನಾಡುತ್ತಾರೆ.
ತನ್ನ ತುಟಿಗಳ ದೋಷದಿಂದ ದುಷ್ಟನು ಉರ್ಲಿಗೆ ಬೀಳುವನು; ನೀತಿವಂತರು ಇಕ್ಕಟ್ಟಿ ನೊಳಗಿಂದ ತಪ್ಪಿಸಿಕೊಳ್ಳುವರು.
ಕತ್ತಿಯ ಇರಿತದ ಹಾಗೆ ಮಾತನಾಡುವದು ಉಂಟು. ಜ್ಞಾನವಂತರ ನಾಲಿಗೆಯು ಆರೋಗ್ಯ.
ಕಾರಣವಿಲ್ಲದೆ ನೆರೆಯವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಬೇಡ; ನಿನ್ನ ತುಟಿಗಳಿಂದ ಮೋಸಮಾಡಬೇಡ.
ಹಗೆಮಾಡುವವನು ತನ್ನ ತುಟಿಗಳಿಂದ ಮೋಸವನ್ನು ನಟಿಸುತ್ತಾನೆ, ತನ್ನ ಅಂತರಂಗದಲ್ಲಿ ಮೋಸವನ್ನು ಇಟ್ಟುಕೊಳ್ಳುತ್ತಾನೆ.
ದ್ರೋಹ ಮಾಡಿ ದ್ದೇವೆ, ಕರ್ತನಿಗೆ ಸುಳ್ಳಾಡಿದ್ದೇವೆ; ನಮ್ಮ ದೇವರ ಕಡೆಯಿಂದ ಹಿಂದಿರುಗಿದ್ದೇವೆ; ಬಲಾತ್ಕಾರದಿಂದ ತಿರುಗಿ ಬೀಳುವಿಕೆಯ ಕಾರ್ಯಗಳನ್ನು ಮಾತಾಡಿದ್ದೇವೆ; ಹೃದಯದಲ್ಲಿ ಸುಳ್ಳು ಮಾತುಗಳನ್ನು ಕಲ್ಪಿಸಿಕೊಂಡು ನುಡಿದಿದ್ದೇವೆ.
ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.
ನಾವು ನಿದ್ರೆ ಮಾಡುತ್ತಿರುವಾಗ ಆತನ ಶಿಷ್ಯರು ರಾತ್ರಿಯಲ್ಲಿ ಬಂದು ಅವನನ್ನು ಕದ್ದು ಕೊಂಡುಹೋದ ರೆಂದು ನೀವು ಹೇಳಿರಿ;
ಅತಿ ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ--ಮುಯ್ಯಿಗೆ ಮುಯ್ಯಿ ತೀರಿಸು ವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆ ಎಂಬದಾಗಿ ಬರೆದದೆ.
ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿ ಕೊಳ್ಳಿರಿ; ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವದಲ್ಲದೆ ಎಲ್ಲರಿಗೂ ಹಿತ ವನ್ನು ಮಾಡುವವರಾಗಿರ್ರಿ.