Home Bibles ಆದಿಕಾಂಡ 34:14 · ಕನ್ನಡ ಬೈಬಲ್
ಆದಿಕಾಂಡ 34:14 · ಕನ್ನಡ ಬೈಬಲ್

ಯಾಕೋಬನ ಮಕ್ಕಳು ಅವರಿಗೆ--ನಾವು ಈ ಕಾರ್ಯವನ್ನು ಮಾಡಲಾರೆವು, ಸುನ್ನತಿಯಿಲ್ಲದ ಮನುಷ್ಯನಿಗೆ ನಮ್ಮ ತಂಗಿಯನ್ನು ಕೊಡಲಾರೆವು, ಅದು ನಮಗೆ ಅವಮಾನ.

Cross references

ಆದಿಕಾಂಡ 17:11

ನಿಮ್ಮ ಮುಂದೊಗಲಿನ ಮಾಂಸವನ್ನು ಸುನ್ನತಿಮಾಡಿಸಬೇಕು; ಅದು ನನಗೂ ನಿಮಗೂ ಮಧ್ಯೆ ಇರುವ ಒಡಂಬಡಿಕೆಗೆ ಗುರುತಾಗಿ ರುವದು.

ಆದಿಕಾಂಡ 17:14

ಸುನ್ನತಿಯಾಗದ ಗಂಡಸಿಗೆ ನನ್ನ ಒಡಂಬಡಿಕೆಯನ್ನು ವಿಾರಿದ ಕಾರಣ ಅವನು ಜನರೊಳಗಿಂದ ತೆಗೆದುಹಾಕಲ್ಪಡಬೇಕು ಅಂದನು.

ಯೆಹೋಶುವ 5:2

ಆ ಕಾಲದಲ್ಲಿ ಕರ್ತನು ಯೆಹೋಶುವ ನಿಗೆ--ನೀನು ಹರಿತವಾದ ಚೂರಿಗಳನ್ನು ಮಾಡಿ ಕೊಂಡು ತಿರಿಗಿ ಎರಡನೇ ಸಾರಿ ಇಸ್ರಾಯೇಲ್‌ ಮಕ್ಕಳಿಗೆ ಸುನ್ನತಿಮಾಡು ಅಂದನು.

ಯೆಹೋಶುವ 5:7

ಅವರಿಗೆ ತರುವಾಯ ಹುಟ್ಟಿದ ಅವರ ಮಕ್ಕಳಿಗೆ ಯೆಹೋಶುವನು ಸುನ್ನತಿಮಾಡಿದನು. ಯಾಕಂದರೆ ಇವರಿಗೆ ಮಾರ್ಗದಲ್ಲಿ ಸುನ್ನತಿಮಾಡದೆ ಇದ್ದದರಿಂದ ಇವರು ಸುನ್ನತಿ ಇಲ್ಲದವರಾಗಿದ್ದರು.

ಯೆಹೋಶುವ 5:9

ಕರ್ತನು ಯೆಹೋಶು ವನಿಗೆ--ಈ ದಿನ ಐಗುಪ್ತದ ನಿಂದೆಯನ್ನು ನಿಮ್ಮಿಂದ ನಿವಾರಿಸಿಬಿಟ್ಟಿದ್ದೇನೆ ಅಂದನು. ಆದದರಿಂದ ಆ ಸ್ಥಳವು ಇಂದಿನ ವರೆಗೂ ಗಿಲ್ಗಾಲ್‌ ಎಂದು ಹೇಳಲ್ಪಡುವದು.

ನ್ಯಾಯಾಧಿಪತಿಗಳು 14:3

ಆಗ ಅವನ ತಂದೆ ತಾಯಿಯೂ ಅವನಿಗೆ--ನಿನಗೆ ಸುನ್ನತಿ ಇಲ್ಲದ ಫಿಲಿಷ್ಟಿ ಯರಲ್ಲಿ ಹೆಂಡತಿಯನ್ನು ತಕ್ಕೊಳ್ಳುವದಕ್ಕೆ ನಿನ್ನ ಸಹೋ ದರರ ಕುಮಾರ್ತೆಯರಲ್ಲಿಯೂ ನಮ್ಮ ಎಲ್ಲಾ ಜನರ ಲ್ಲಿಯೂ ಸ್ತ್ರೀ ಇಲ್ಲವೋ ಅಂದರು. ಆದರೆ ಸಂಸೋನನು ತನ್ನ ತಂದೆಗೆ--ಅವಳನ್ನು ನನಗೆ ತೆಗೆದುಕೋ; ಅವಳು ನನ್ನ ಮನಸ್ಸಿಗೆ ಒಪ್ಪಿದ್ದಾಳೆ ಅಂದನು.

1 ಸಮುವೇಲ 14:6

ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ಯೌವನಸ್ಥನಿಗೆ--ನಾವು ಈ ಸುನ್ನತಿ ಇಲ್ಲದವರ ಠಾಣಕ್ಕೆ ದಾಟಿಹೋಗೋಣ ಬಾ; ಒಂದು ವೇಳೆ ದೇವರು ನಮಗೋಸ್ಕರ ಕಾರ್ಯ ನಡಿಸುವನು. ಯಾಕಂದರೆ ಅನೇಕ ಜನರಿಂದಾದರೂ ಸ್ವಲ್ಪ ಜನರಿಂದಾದರೂ ರಕ್ಷಿಸುವದಕ್ಕೆ ಕರ್ತನಿಗೆ ಯಾವ ಆಟಂಕವಿಲ್ಲ ಅಂದನು.

1 ಸಮುವೇಲ 17:26

ಆಗ ದಾವೀದನು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರಿಗೆ--ಈ ಫಿಲಿಷ್ಟಿಯನನ್ನು ಕೊಂದು ಇಸ್ರಾಯೇಲಿನ ಮೇಲಿನಿಂದ ನಿಂದೆಯನ್ನು ತೆಗೆದುಬಿಡುವ ಆ ಮನುಷ್ಯನಿಗೆ ಏನು ಮಾಡಲ್ಪಡುವದು? ಯಾಕಂದರೆ ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಹೀಯಾ ಳಿಸುವದಕ್ಕೆ ಎಷ್ಟರವನು ಅಂದನು.

1 ಸಮುವೇಲ 17:36

ಹೀಗೆಯೇ ನಿನ್ನ ಸೇವಕನು ಆ ಸಿಂಹವನ್ನೂ ಆ ಕರಡಿಯನ್ನೂ ಕೊಂದು ಬಿಟ್ಟನು. ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಪ್ರತಿಭಟಿಸಿದ್ದರಿಂದ ಅವುಗಳಲ್ಲಿ ಒಂದರ ಹಾಗೆ ಆಗುವನು ಅಂದನು.

2 ಸಮುವೇಲ 1:20

ಗತ್‌ ಊರಿನಲ್ಲಿ ತಿಳಿಸಬೇಡಿರಿ. ಅಷ್ಕೆಲೋನಿನ ಬೀದಿಗಳಲ್ಲಿ ಸಾರ ಬೇಡಿರಿ. ಫಿಲಿಷ್ಟಿಯರ ಕುಮಾರ್ತೆಯರು ಸಂತೋಷ ಪಟ್ಟಾರಲ್ಲಾ; ಸುನ್ನತಿ ಇಲ್ಲದವರ ಕುಮಾರ್ತೆಯರು ಉತ್ಸಾಹ ಪಟ್ಟಾರಲ್ಲಾ.

2 ಸಮುವೇಲ 15:7

ನಾಲ್ಕು ವರುಷಗಳಾದ ತರುವಾಯ ಅಬ್ಷಾಲೋ ಮನು ಅರಸನಿಗೆ--ನಾನು ಕರ್ತನಿಗೆ ಮಾಡಿಕೊಂಡಿದ್ದ ನನ್ನ ಪ್ರಮಾಣವನ್ನು ಹೆಬ್ರೋನಿನಲ್ಲಿ ಸಲ್ಲಿಸಲು ಹೋಗುವದಕ್ಕೆ ಅಪ್ಪಣೆಕೊಡಬೇಕು.

1 ಅರಸುಗಳು 21:9

ಅವಳು ಪತ್ರಗಳಲ್ಲಿ--ನೀವು ಉಪವಾಸವನ್ನು ಪ್ರಕಟಮಾಡಿ ನಾಬೋತನನ್ನು ಜನರೊಳಗೆ ಎತ್ತರದ ಸ್ಥಳದಲ್ಲಿ ನಿಲ್ಲಿಸಿ--

ಮತ್ತಾಯ 2:8

ಅವರನ್ನು ಬೇತ್ಲೆಹೇಮಿಗೆ ಕಳುಹಿ ಸುವಾಗ--ನೀವು ಹೋಗಿ ಆ ಶಿಶುವಿನ ವಿಷಯದಲ್ಲಿ ಪರಿಷ್ಕಾರವಾಗಿ ಹುಡುಕಿ ಆತನನ್ನು ಕಂಡುಕೊಂಡ ಮೇಲೆ ತಿರಿಗಿ ಬಂದು ನನಗೆ ತಿಳಿಸಿರಿ; ಆಗ ನಾನು ಸಹ ಬಂದು ಆತನನ್ನು ಆರಾಧಿಸುವೆನು ಅಂದನು.

ಮತ್ತಾಯ 2:13

ಅವರು ಹೋದಮೇಲೆ ಇಗೋ, ಕರ್ತನ ದೂತನು ಕನಸಿನಲ್ಲಿ ಯೋಸೇಫನಿಗೆ ಕಾಣಿಸಿ ಕೊಂಡು -- ಎದ್ದು ಈ ಶಿಶುವನ್ನೂ ಇದರ ತಾಯಿ ಯನ್ನೂ ಕರಕೊಂಡು ಐಗುಪ್ತಕ್ಕೆ ಓಡಿಹೋಗಿ ನಾನು ನಿನಗೆ ತಿಳಿಸುವ ತನಕ ಅಲ್ಲೇ ಇರು; ಯಾಕಂದರೆ ಹೆರೋದನು ಈ ಶಿಶುವನ್ನು ಕೊಲ್ಲಬೇಕೆಂದು

ಮತ್ತಾಯ 23:1

ತರುವಾಯ ಯೇಸು ಜನಸಮೂಹಕ್ಕೂ ಶಿಷ್ಯರಿಗೂ ಹೇಳಿದ್ದೇನಂದರೆ --

ರೋಮಾಪುರದವರಿಗೆ 4:11

ಆಮೇಲೆ ನೀತಿಗೆ ಮುದ್ರೆಯಾಗಿ ಸುನ್ನತಿಯನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾಯಿತು. ಹೀಗೆ ಅವನು ನಂಬುವವರೆಲ್ಲರಿಗೆ ಅಂದರೆ ಅವರು ಸುನ್ನತಿ ಯಿಲ್ಲದವರಾದಾಗ್ಯೂ ಅವರಿಗೆ ತಂದೆಯಾದನು; ಹೀಗೆ ಅವರೂ ನೀತಿವಂತರೆಂದು ಎಣಿಸಲ್ಪಡುವರು.

Interlinear

Choose Theme