ದೇಶದ ಪ್ರಭುವಾಗಿದ್ದ ಹಿವ್ವಿಯನಾದ ಹಮೋರನ ಮಗನಾದ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಕೂಡಿ ಅಶುದ್ಧ ಮಾಡಿದನು.
Cross references
ಆಗ ದೇವಕುಮಾರರು ಮನುಷ್ಯ ಕುಮಾರ್ತೆಯರ ಸೌಂದರ್ಯವನ್ನು ನೋಡಿ ತಾವು ಆರಿಸಿಕೊಂಡವರನ್ನೆಲ್ಲಾ ತಮಗೆ ಹೆಂಡತಿಯ ರನ್ನಾಗಿ ಮಾಡಿಕೊಂಡರು.
ಹಿವ್ವಿಯನೂ ಅರ್ಕಿಯನೂ ಸೀನಿಯನೂ
ಅಬ್ರಹಾಮನು ತನ್ನ ಹೆಂಡತಿಯಾದ ಸಾರಳ ವಿಷಯವಾಗಿ--ಅವಳು ನನ್ನ ತಂಗಿ ಎಂದು ಹೇಳಿ ದನು. ಆದದರಿಂದ ಗೆರಾರಿನ ಅರಸನಾದ ಅಬೀಮೆಲೆ ಕನು ಸಾರಳನ್ನು ಕರೆಯಿಸಿ ತೆಗೆದುಕೊಂಡನು.
ಅವನು ತನ್ನ ಗುಡಾರಗಳನ್ನು ಹಾಕಿದ ಭೂಮಿಯನ್ನು ಶೆಕೆಮಿನ ತಂದೆಯಾದ ಹಮೋರನ ಮಕ್ಕಳ ಕೈಯಿಂದ ನೂರು ನಾಣ್ಯಗಳಿಗೆ ಕೊಂಡು ಕೊಂಡನು.ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ ಏಲೆಲೋಹೇ ಇಸ್ರಾಯೇಲ್ ಎಂದು ಹೆಸರಿಟ್ಟನು.
ತಮ್ಮ ಸಹೋದರಿಯನ್ನು ಅಶುದ್ಧ ಮಾಡಿದ್ದರಿಂದ ಯಾಕೋಬನ ಮಕ್ಕಳು ಕೊಂದವರ ಬಳಿಗೆ ಬಂದು ಕೊಳ್ಳೆಹೊಡೆದರು.
ಹೀಗಿರುವದರಿಂದ ಅವನು ತನಗಿದ್ದದ್ದನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿ ತಾನು ತಿನ್ನುವ ರೊಟ್ಟಿಯ ವಿಷಯದಲ್ಲಿ ಹೊರತು ಬೇರೆ ಯಾವದರ ವಿಷಯದಲ್ಲೂ ಚಿಂತಿಸಲಿಲ್ಲ. ಯೋಸೇಫನು ಸುರೂಪಿಯೂ ಸೌಂದರ್ಯವಂತನೂ ಆಗಿದ್ದನು.
ಆದರೆ ನೀನು ಅವಳನ್ನು ಮೆಚ್ಚದೆ ಹೋದರೆ ಅವಳನ್ನು ಅವಳ ಮನಸ್ಸಿದ್ದಲ್ಲಿಗೆ ಕಳುಹಿಸಿಬಿಡಬೇಕು; ಹೇಗಾದರೂ ಹಣಕ್ಕೆ ಮಾರಲೇಬಾರದು; ನೀನು ಅವಳನ್ನು ತಗ್ಗಿಸಿದ್ದರಿಂದ ಅವಳನ್ನು ದಾಸಿಯ ಹಾಗೆ ನಡಿಸಬಾರದು.
ಅವರಿಬ್ಬರನ್ನು ಆ ಪಟ್ಟಣದ ಬಾಗಲಿನ ಹೊರಗೆ ತಂದು ಅವರು ಸಾಯುವ ಹಾಗೆ ಕಲ್ಲೆಸೆಯಬೇಕು; ಆ ಹುಡುಗಿಯು ಪಟ್ಟಣದಲ್ಲಿ ಇದ್ದಾಗ್ಯೂ ಕೂಗದೆ ಇದ್ದದ್ದರಿಂದಲೂ ಆ ಮನುಷ್ಯನು, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿದ್ದರಿಂದಲೂ ಅವರನ್ನು ಸಾಯಿಸ ಬೇಕು. ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದು ಹಾಕಬೇಕು.
ಅವಳ ಸಂಗಡ ಮಲಗಿದ ಮನುಷ್ಯನು ಆ ಹುಡುಗಿಯ ತಂದೆಗೆ ಐವತ್ತು ಬೆಳ್ಳಿಯ ಹಣಗಳನ್ನು ಕೊಡಬೇಕು; ಮತ್ತು ಅವಳು ಅವನಿಗೆ ಹೆಂಡತಿಯಾಗಬೇಕು; ಅವನು ಅವಳನ್ನು ಕೆಡಿಸಿದ್ದರಿಂದ ಬದುಕುವ ದಿವಸಗಳೆಲ್ಲಾ ಅವಳನ್ನು ಕಳುಹಿಸಿಬಿಡಕೂಡದು.ಒಬ್ಬನು ತನ್ನ ತಂದೆಯ ಹೆಂಡತಿಯನ್ನು ತಕ್ಕೊಳ್ಳ ಕೂಡದು; ತನ್ನ ತಂದೆಯ ವಸ್ತ್ರದ ಸೆರಗನ್ನು ತೆರೆಯ ಕೂಡದು.
ಆಗ ಇಸ್ರಾಯೇಲ್ ಮನುಷ್ಯರು ಹಿವ್ವಿಯರಿಗೆ--ನೀವು ಒಂದು ವೇಳೆ ನಮ್ಮ ಮಧ್ಯದಲ್ಲಿ ವಾಸಿಸುವವರು ಆಗಿರಬಹುದು; ಆದರೆ ನಿಮ್ಮ ಸಂಗಡ ಒಡಂಬಡಿಕೆಯನ್ನು ಮಾಡುವದು ಹೇಗೆ ಅಂದರು.
ಸಂಸೋನನು ತಿಮ್ನಾಗೆ ಹೋಗಿ ತಿಮ್ನಾ ದೊಳಗೆ ಪಿಲಿಷ್ಟಿಯರ ಕುಮಾರ್ತೆಯರಲ್ಲಿ ಒಬ್ಬ ಸ್ತ್ರೀಯನ್ನು ನೋಡಿ
ಇಗೋ, ಕನ್ನಿಕೆ ಯಾದ ನನ್ನ ಮಗಳನ್ನೂ ಅವನ ಉಪಪತ್ನಿಯನ್ನೂ ಹೊರಗೆ ತರುವೆನು; ನೀವು ಅವರನ್ನು ಕುಂದಿಸಿ ನಿಮಗೆ ಸರಿಯಾಗಿ ತೋರುವ ಹಾಗೆ ಅವರಿಗೆ ಮಾಡಿರಿ. ಆದರೆ ಈ ಮನುಷ್ಯನಿಗೆ ಅಂಥಾ ಬುದ್ಧಿಹೀನವಾದ ಕಾರ್ಯವನ್ನು ಮಾಡಬೇಡಿರಿ ಅಂದನು.
ಆಗ ಆದದ್ದೇನಂದರೆ, ದಾವೀದನು ಒಂದು ದಿನ ಸಾಯಂಕಾಲದಲ್ಲಿ ತನ್ನ ಹಾಸಿಗೆಯಿಂದ ಎದ್ದು ಅರಮನೆಯ ಉಪ್ಪರಿಗೆಯ ಮೇಲೆ ತಿರುಗಾಡುತ್ತಾ ಇರುವಾಗ ಸ್ನಾನಮಾಡುತ್ತಿರುವ ಒಬ್ಬ ಸ್ತ್ರೀಯನ್ನು ಉಪ್ಪರಿಗೆಯ ಮೇಲಿನಿಂದ ನೋಡಿದನು.
ದಾವೀದನು ದೂತರನ್ನು ಕಳುಹಿಸಿ ಅವಳನ್ನು ಕರೆಯಿಸಿದನು. ಅವಳು ಅವನ ಬಳಿಗೆ ಬಂದಾಗ ಅವಳು ತನ್ನ ಮೈಲಿಗೆಯನ್ನು ಕಳಕೊಂಡು ಶುಚಿಯಾಗಿದ್ದದರಿಂದ ದಾವೀದನು ಅವಳ ಸಂಗಡ ಮಲಗಿದನು.
ಅವನು ಅವಳ ಮಾತನ್ನು ಕೇಳಲೊಲ್ಲದೆ ತಾನು ಅವಳಿಗಿಂತ ಬಲವುಳ್ಳವನಾಗಿದ್ದದರಿಂದ ಅವಳನ್ನು ಕುಂದಿಸಿ ಅವಳ ಸಂಗಡ ಮಲಗಿದನು.
ನನ್ನ ಕಣ್ಣುಗಳೊಡನೆ ಒಡಂಬಡಿಕೆ ಮಾಡಿದೆನು; ಕನ್ನಿಕೆಯ ಮೇಲೆ ಲಕ್ಷ್ಯವಿಡುವದು ಹೇಗೆ?
ನನ್ನ ಹೃದಯವು ಸ್ತ್ರೀಗೋಸ್ಕರ ಮರುಳು ಗೊಂಡಿದ್ದರೆ, ನನ್ನ ನೆರೆಯವನ ಬಾಗಲ ಹತ್ತಿರ ನಾನು ಹೊಂಚಿಕೊಂಡಿದ್ದರೆ,
ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗಿರುವನು. ಬುದ್ಧಿ ಹೀನರ ಜೊತೆಗಾರನು ನಾಶವಾಗುವನು.
ನಿನ್ನಲ್ಲಿ ತಂದೆಯ ಬೆತ್ತಲೆತನವನ್ನು ಹೊರಗೆಡವಿದ್ದಾರೆ; ನಿನ್ನಲ್ಲಿ ಮುಟ್ಟಾಗಿ ಪ್ರತ್ಯೇಕವಾಗಿರುವವರನ್ನು ಕೂಡಿದ್ದಾರೆ;
ಆದರೆ ನಾನು ನಿಮಗೆ ಹೇಳುವದೇನಂದರೆ--ಒಬ್ಬ ಸ್ತ್ರೀಯನ್ನು ಮೋಹಿಸುವದಕ್ಕೆ ನೋಡುವ ಪ್ರತಿಯೊಬ್ಬನು ಆಗಲೇ ತನ್ನ ಹೃದಯದಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದ್ದಾನೆ.