ಇದಲ್ಲದೆ ಅಬ್ರಹಾಮನಿಗೂ ಇಸಾಕ ನಿಗೂ ನಾನು ಕೊಟ್ಟ ದೇಶವನ್ನು ನಿನಗೆ ಕೊಡುವೆನು. ನಿನ್ನ ತರುವಾಯ ನಿನ್ನ ಸಂತತಿಗೂ ಆ ದೇಶವನ್ನು ಕೊಡುವೆನು ಅಂದನು.
Cross references
ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಿನ್ನ ಸಂತತಿಗೆ ನಾನು ಈ ದೇಶವನ್ನು ಕೊಡುವೆನು ಅಂದನು. ಆಗ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಕರ್ತನಿಗೆ ಬಲಿಪೀಠವನ್ನು ಕಟ್ಟಿದನು.
ಲೋಟನು ಅಬ್ರಾಮನಿಂದ ಅಗಲಿದ ಮೇಲೆ ಕರ್ತನು ಅವನಿಗೆ--ನಿನ್ನ ಕಣ್ಣುಗಳನ್ನು ಎತ್ತಿ ನೀನಿರುವ ಸ್ಥಳದಿಂದ ಉತ್ತರಕ್ಕೂ ದಕ್ಷಿಣಕ್ಕೂ ಪೂರ್ವಕ್ಕೂ ಪಶ್ಚಿಮಕ್ಕೂ ನೋಡು.
ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್ ನದಿಯ ವರೆಗೆ ವಾಸಿಸುವ
ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಸಂಗಡ ಇದ್ದು ನಿನ್ನನ್ನು ಆಶೀರ್ವದಿಸುವೆನು. ನಿನಗೂ ನಿನ್ನ ಸಂತಾನಕ್ಕೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ತಂದೆಯಾದ ಅಬ್ರಹಾಮನಿಗೆ ನಾನು ಮಾಡಿದ ಪ್ರಮಾಣವನ್ನು ಈಡೇರಿಸುವೆನು.
ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನೀನು ಜನಸಮುದಾಯವಾಗುವಂತೆ ನಿನ್ನನ್ನು ಅಭಿವೃದ್ಧಿ ಮಾಡಿ ಹೆಚ್ಚಿಸಲಿ,
ಇಗೋ, ಕರ್ತನು ಅದರ ಮೇಲೆ ನಿಂತುಕೊಂಡು ಹೇಳಿದ್ದೇನಂದರೆ--ನಿನ್ನ ತಂದೆ ಯಾದ ಅಬ್ರಹಾಮನ ಕರ್ತನಾದ ದೇವರೂ ಇಸಾಕನ ದೇವರೂ ನಾನೇ, ನೀನು ಮಲಗಿರುವ ಭೂಮಿಯನ್ನು ನಿನಗೂ ನಿನ್ನ ಸಂತತಿಗೂ ಕೊಡುವೆನು.
ಆತನು ನನಗೆ--ಇಗೋ, ನಿನ್ನನ್ನು ಅಭಿವೃದ್ಧಿಪಡಿಸಿ ಹೆಚ್ಚಿಸಿ ಜನ ಸಮೂಹವನ್ನಾಗಿ ಮಾಡಿ ನಿನ್ನ ತರುವಾಯ ಹುಟ್ಟುವ ನಿನ್ನ ಸಂತತಿಗೆ ಈ ದೇಶವನ್ನು ಶಾಶ್ವತ ಸ್ವಾಸ್ಥ್ಯವಾಗಿ ಕೊಡುತ್ತೇನೆ ಎಂದು ಹೇಳಿದನು.
ದೇವರು ಅವರ ನರಳಾಟವನ್ನು ಕೇಳಿ ಅಬ್ರಹಾಮ ಇಸಾಕ ಯಾಕೋಬ ಇವರ ಸಂಗಡ ತಾನು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಂಡನು.ಆಗ ದೇವರು ಇಸ್ರಾಯೇಲ್ ಮಕ್ಕಳನ್ನು ನೋಡಿ ಅವರಲ್ಲಿ ಲಕ್ಷ್ಯವಿಟ್ಟನು.
ಆದಕಾರಣ ಅವರನ್ನು ಐಗುಪ್ತ್ಯರ ಕೈಯೊ ಳಗಿಂದ ಬಿಡುಗಡೆ ಮಾಡುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡಿಸಿ ಕೊಂಡು ಹೋಗುವದಕ್ಕೂ ಇಳಿದು ಬಂದಿದ್ದೇನೆ.
ಆಗ ಇಸ್ರಾಯೇಲ್ ಮಕ್ಕಳ ನಿಮಿತ್ತವಾಗಿ ಒಬ್ಬರೂ ಹೊರಗೆ ಬಾರದ ಹಾಗೆಯೂ ಒಳಗೆ ಹೋಗದ ಹಾಗೆಯೂ ಯೆರಿಕೋವು ಭದ್ರ ವಾಗಿ ಮುಚ್ಚಲ್ಪಟ್ಟಿತು.
ಅದೇ ದಿವಸದಲ್ಲಿ ಜನರು ಕೇಳುವ ಹಾಗೆ ಮೋಶೆಯ ಪುಸ್ತಕದೊಳಗೆ ಓದುವಾಗ ಅಮ್ಮೋನ್ಯರೂ ಮೋವಾಬ್ಯರೂ ಎಂದಿಗೂ ದೇವರ ಸಭೆಗೆ ಬರಕೂಡದೆಂದು ಅದರಲ್ಲಿ ಬರೆದದ್ದು ಸಿಕ್ಕಿತು.