ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ--ನಿಮ್ಮ ಮಧ್ಯದಲ್ಲಿರುವ ಅನ್ಯದೇವ ರುಗಳನ್ನು ತೆಗೆದುಹಾಕಿ ಶುದ್ಧರಾಗಿರಿ; ನೀವು ನಿಮ್ಮ ಬಟ್ಟೆಗಳನ್ನು ಬದಲಾಯಿಸಿರಿ;
Cross references
ಕರ್ತನು ಅಬ್ರಹಾಮ ನಿಗೆ ಹೇಳಿದ್ದು ನೆರವೇರುವಂತೆ ಅವನು ತನ್ನ ಮಕ್ಕಳಿಗೂ ತರುವಾಯ ಅವನ ಮನೆಯವರಿಗೂ ಆತನ ಮಾರ್ಗವನ್ನು ಕೈಕೊಂಡು ನೀತಿನ್ಯಾಯಗಳನ್ನು ಅನುಸರಿಸಬೇಕೆಂದು ಅಪ್ಪಣೆಕೊಡುವನು ಎಂದು ನನಗೆ ತಿಳಿದದೆ ಎಂದು ಅಂದುಕೊಂಡನು.
ಆಗ ಲಾಬಾನನು ತನ್ನ ಕುರಿಗಳ ಉಣ್ಣೆ ಕತ್ತರಿಸುವದಕೆ ಹೋಗಿದ್ದನು. ಆದದರಿಂದ ರಾಹೇಲಳು ತನ್ನ ತಂದೆಯ ವಿಗ್ರಹಗಳನ್ನು ಕದ್ದುಕೊಂಡಳು.
ಆದರೆ ರಾಹೇಲಳು ವಿಗ್ರಹಗಳನ್ನು ತಕ್ಕೊಂಡು ಒಂಟೆಯ ಸಾಮಗ್ರಿಯಲ್ಲಿಟ್ಟು ಅದರ ಮೇಲೆ ಕೂತುಕೊಂಡಳು. ಲಾಬಾನನು ಗುಡಾರವನ್ನೆಲ್ಲಾ ಹುಡುಕಿದಾಗ್ಯೂ ಅವನು ಅವುಗಳನ್ನು ಕಂಡುಕೊಳ್ಳಲಿಲ್ಲ.
ದೇಶದ ಪ್ರಭುವಾಗಿದ್ದ ಹಿವ್ವಿಯನಾದ ಹಮೋರನ ಮಗನಾದ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಕೂಡಿ ಅಶುದ್ಧ ಮಾಡಿದನು.
ಆಗ ಪಟ್ಟಣದ ದ್ವಾರದಲ್ಲಿ ಹೋಗುವವರೆಲ್ಲಾ ಹಮೋರನೂ ಅವನ ಮಗನಾದ ಶೆಕೆಮನೂ ಹೇಳಿದ ಮಾತುಗಳನ್ನು ಕೇಳಿ ಅವನ ಪಟ್ಟಣ ದ್ವಾರದಲ್ಲಿ ಹೋಗುವ ಎಲ್ಲಾ ಗಂಡಸರು ಸುನ್ನತಿಮಾಡಿಸಿಕೊಂಡರು.
ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ಹೋಗಿ ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳ ಸಂಗಡ ಮಲಗಿದನು. ಅದನ್ನು ಇಸ್ರಾಯೇಲನು ಕೇಳಿದನು. ಯಾಕೋಬನಿಗೆ ಹನ್ನೆರಡು ಮಂದಿ ಕುಮಾರರು ಇದ್ದರು.
ಆಗ ಕರ್ತನು ಮೋಶೆಗೆ--ಜನರ ಬಳಿಗೆ ಹೋಗಿ ಈ ಹೊತ್ತೂ ನಾಳೆಯೂ ಅವರನ್ನು ಶುದ್ಧಮಾಡು, ಅವರು ತಮ್ಮ ವಸ್ತ್ರಗಳನ್ನು ತೊಳಕೊಳ್ಳಲಿ.
ಆಗ ಮೋಶೆಯು ಬೆಟ್ಟದಿಂದಿಳಿದು ಜನರನ್ನು ಶುದ್ಧಿಮಾಡಿದನು. ಅವರು ತಮ್ಮ ವಸ್ತ್ರಗಳನ್ನು ತೊಳೆದು ಕೊಂಡರು.
ನನ್ನ ಮುಂದೆ ನಿನಗೆ ಬೇರೆ ದೇವರುಗಳು ಇರಬಾರದು.
ನಾನು ನಿಮಗೆ ಹೇಳಿದ್ದನ್ನೆಲ್ಲಾ ಕೈಕೊಳ್ಳಬೇಕು; ಬೇರೆ ದೇವರುಗಳ ಹೆಸರನ್ನು ಎತ್ತಬೇಡ, ಇಲ್ಲವೆ ನಿನ್ನ ಬಾಯಿಂದ ಅದು ಹೊರಡಬಾರದು.
ಅವನ ಹಾಸಿಗೆಯನ್ನು ಮುಟ್ಟುವವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು.
ಆದರೆ ಅವನು ಅವುಗಳನ್ನು ಒಗೆದುಕೊಳ್ಳದೆ ಇದ್ದರೆ ಇಲ್ಲವೆ ತಾನು ಸ್ನಾನಮಾಡದಿದ್ದರೆ ತನ್ನ ಅಪರಾಧವನ್ನು ತಾನೇ ಹೊತ್ತುಕೊಳ್ಳಬೇಕು.
ಏಳನೇ ದಿವಸದಲ್ಲಿ ನೀವು ನಿಮ್ಮ ಬಟ್ಟೆಗಳನ್ನು ಒಗೆದುಕೊಂಡು ಶುದ್ಧರಾಗ ಬೇಕು; ತರುವಾಯ ಪಾಳೆಯದೊಳಗೆ ಬರಬೇಕು ಎಂದು ಹೇಳಿದನು.
ನನ್ನ ಮುಂದೆ ನಿನಗೆ ಬೇರೆ ದೇವರುಗಳು ಇರಬಾರದು.
ನಿಮ್ಮ ಸುತ್ತಲಿರುವ ಜನಗಳ ದೇವರುಗಳಾದ ಬೇರೆ ದೇವರುಗಳನ್ನು ನೀವು ಹಿಂಬಾಲಿಸಬೇಡಿರಿ.
ಅವರ ದೇವರುಗಳ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು; ಅವುಗಳ ಮೇಲಿರುವ ಬೆಳ್ಳಿ ಬಂಗಾರವನ್ನು ಆಶಿಸಿ ನೀನು ತಕ್ಕೊಳ್ಳಬಾರದು; ಅದು ನಿನಗೆ ಉರ್ಲಾ ದೀತು; ಅದು ನಿನ್ನ ದೇವರಾದ ಕರ್ತನಿಗೆ ಅಸಹ್ಯವೇ.ನೀನು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿನ್ನ ಮನೆಗೆ ತಕ್ಕೊಂಡು ಬರ ಬಾರದು; ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು; ಸಂಪೂರ್ಣವಾಗಿ ಹೇಸಿಕೊಳ್ಳಬೇಕು; ಯಾಕಂದರೆ ಅದು ಶಪಿಸಲ್ಪಟ್ಟದ್ದೇ.
ನಿಮ್ಮ ದೇವರಾದ ಕರ್ತನ ಆಜ್ಞೆಗಳಿಗೆ ವಿಧೇಯರಾಗದೆ, ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ಮಾರ್ಗಕ್ಕೆ ಓರೆಯಾಗಿ ನೀವು ತಿಳಿಯದ ಬೇರೆ ದೇವರುಗಳನ್ನು ಹಿಂಬಾಲಿಸಿದರೆ ಶಾಪವು.
ಅನ್ಯದೇವತೆಗಳಿಂದ ಆತನಿಗೆ ಅವರು ರೋಷ ಹುಟ್ಟಿಸಿದರು. ಅಸಹ್ಯವಾದವುಗಳಿಂದ ಆತನಿಗೆ ಕೋಪ ವನ್ನು ಎಬ್ಬಿಸಿದರು.
ನಿಮ್ಮ ಮಧ್ಯದಲ್ಲಿ ಉಳಿದಿರುವ ಈ ಜನಾಂಗಗಳಲ್ಲಿ ಸೇರದೆ ಅವರ ದೇವರುಗಳ ಹೆಸರುಗಳನ್ನು ಸ್ಮರಿಸದೆ ಅವುಗಳ ಮೇಲೆ ಆಣೆ ಇಡದೆ ನೀವು ಅವುಗಳಿಗೆ ಸೇವೆಮಾಡದೆ ಅಡ್ಡಬೀಳದೆ ಇರುವ ಹಾಗೆ ಬಲ ಗೊಂಡು
ಯೆಹೋಶುವನು ಎಲ್ಲಾ ಜನರಿಗೆ--ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ--ಪೂರ್ವ ದಲ್ಲಿ ನಿಮ್ಮ ತಂದೆಗಳು, ಅಬ್ರಹಾಮನೂ ನಾಹೋ ರನೂ ಅವರ ತಂದೆಯಾದ ತೆರಹನೂ ನದಿಯ ಆಚೆ ವಾಸವಾಗಿದ್ದು ಅನ್ಯದೇವರುಗಳನ್ನು ಆರಾಧಿಸುತ್ತಿದ್ದರು.
ಆದದರಿಂದ ಈಗ ಕರ್ತನಿಗೆ ಭಯಪಟ್ಟು ಯಥಾರ್ಥದಲ್ಲಿಯೂ ಸತ್ಯದಲ್ಲಿಯೂ ಆತನನ್ನು ಸೇವಿಸಿರಿ. ನಿಮ್ಮ ತಂದೆಗಳು ನದಿಯ ಆಚೆಯಲ್ಲಿಯೂ ಐಗುಪ್ತದಲ್ಲಿಯೂ ಸೇವಿ ಸಿದ ದೇವರುಗಳನ್ನು ತೊರೆದುಬಿಟ್ಟು ಕರ್ತನನ್ನೇ ನೀವು ಸೇವಿಸಿರಿ.
ಕರ್ತನನ್ನು ಸೇವಿಸುವದು ನಿಮಗೆ ಕೆಟ್ಟದ್ದಾಗಿ ಕಂಡರೆ ಈಹೊತ್ತು ನೀವು ಯಾರನ್ನು ಸೇವಿಸುವಿರಿ? ನಿಮ್ಮ ತಂದೆಗಳು ನದಿಯ ಆಚೆ ಸೇವಿ ಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆರಿಸಿ ಕೊಳ್ಳಿರಿ; ಆದರೆ ನಾನೂ ನನ್ನ ಮನೆಯವರೂ ಕರ್ತನನ್ನೇ ಸೇವಿಸುವೆವು ಅಂದನು.
ಕರ್ತನನ್ನು ಬಿಟ್ಟು ಅನ್ಯ ದೇವರುಗಳನ್ನು ಸೇವಿಸಿದರೆ ಒಳ್ಳೇದನ್ನು ಮಾಡದೆ ಆತನು ನಿಮಗೆ ಕೇಡುಮಾಡಿ ನಿಮ್ಮನ್ನು ದಹಿಸಿಬಿಡುವನು ಎಂದು ಹೇಳಿದನು.
ಅದಕ್ಕವರು--ನಾವೇ ಸಾಕ್ಷಿಗಳಾಗಿದ್ದೇವೆ ಅಂದರು. ಅದಕ್ಕವನು--ಈಗ ನಿಮ್ಮ ಮಧ್ಯದಲ್ಲಿರುವ ಅನ್ಯ ದೇವರುಗಳನ್ನು ತೊರೆದು ನಿಮ್ಮ ಹೃದಯವನ್ನು ಇಸ್ರಾಯೇಲಿನ ದೇವರಾದ ಕರ್ತನಿಗೆ ತಿರುಗಿಸಿರಿ ಅಂದನು.
ಅವರು ಅನ್ಯದೇವರುಗಳನ್ನು ತಮ್ಮ ಮಧ್ಯದಲ್ಲಿಂದ ತೊರೆದುಬಿಟ್ಟು ಕರ್ತನನ್ನು ಸೇವಿಸಿ ದರು. ಆಗ ಆತನ ಮನಸ್ಸು ಇಸ್ರಾಯೇಲಿನ ಕಷ್ಟ ಕ್ಕೋಸ್ಕರ ನೊಂದುಕೊಂಡಿತು.
ಆಗ ಆಕೆಯು ಇಗೋ, ನಿನ್ನ ಓರಗಿತ್ತಿಯು ತನ್ನ ಜನರ ಬಳಿಗೂ ತನ್ನ ದೇವರುಗಳ ಬಳಿಗೂ ತಿರಿಗಿ ಹೋದಳು; ನೀನೂ ನಿನ್ನ ಓರಗಿತ್ತಿಯ ಹಿಂದೆ ಹೋಗು ಅಂದಳು.
ಆಗ ಸಮುವೇಲನು ಇಸ್ರಾಯೇಲ್ ಮನೆಯವರಿಗೆಲ್ಲಾ ಮಾತನಾಡಿ--ನೀವು ನಿಮ್ಮ ಪೂರ್ಣಹೃದಯದಿಂದ ಕರ್ತನ ಕಡೆಗೆ ತಿರುಗಿ ನಿಮ್ಮಲ್ಲಿರುವ ಅನ್ಯದೇವರುಗಳನ್ನೂ ಅಷ್ಟೋ ರೆತ್ನ್ನೂ ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿ ನಿಮ್ಮ ಹೃದಯವನ್ನು ಕರ್ತನಿಗೆ ಸಿದ್ಧಮಾಡಿ ಆತನೊಬ್ಬನನ್ನೇ ಸೇವಿಸಿದರೆ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಗಳೊ ಳಗಿಂದ ತಪ್ಪಿಸುವನು.
ಭೂಲೋಕದಲ್ಲಿ ನಿನ್ನ ಜನರಾದ ಇಸ್ರಾಯೇಲ್ಯರಿಗೆ ಸಮಾನವಾದ ಜನಾಂಗ ಯಾವದು? ಅವರನ್ನು ಸ್ವಜನರಾಗಿ ವಿಮೋಚಿಸು ವಂತೆಯೂ ತನಗೆ ಹೆಸರನ್ನು ಪಡಕೊಳ್ಳುವಂತೆಯೂ ದೇವರು ಹೋದನು; ಅವರಿಗೋಸ್ಕರ ನಿನ್ನ ದೇಶಕ್ಕೆ, ಐಗುಪ್ತದಿಂದ ಜನಾಂಗಗಳಿಂದಲೂ ಅವರ ದೇವರು ಗಳಿಂದಲೂ ವಿಮೋಚಿಸಿದ ನಿನ್ನ ಜನರ ಮುಂದೆ ಈ ಮಹಾಭಯಂಕರವಾದ ಕಾರ್ಯಗಳನ್ನು ಮಾಡು ವದಕ್ಕಾಗಿಯೇ ದೇವರು ಹೋದನು.
ಆಗ ಎಲೀಷನುನೀನು ಹೋಗಿ ಯೊರ್ದನಿನಲ್ಲಿ ಏಳು ಸಾರಿ ಸ್ನಾನ ಮಾಡು; ಆಗ ನಿನ್ನ ಶರೀರವು ಮೊದಲಿನಂತೆ ಮಾರ್ಪ ಡುವದು; ನೀನು ಶುದ್ಧನಾಗುವಿ ಎಂದು ಹೇಳಿ ಅವನ ಬಳಿಗೆ ಸೇವಕನನ್ನು ಕಳುಹಿಸಿದನು.
ನಾನು ಹೊಳೆಗಳಲ್ಲಿ ಸ್ನಾನ ಮಾಡಿ ಶುದ್ಧನಾಗುವ ಹಾಗೆ ದಮಸ್ಕದ ನದಿಗಳಾದ ಅಬಾನಾ ಪರ್ಪರ್ ಇಸ್ರಾಯೇಲಿನ ಎಲ್ಲಾ ನೀರಿಗಿಂತ ಉತ್ತಮವಲ್ಲವೋ ಎಂದು ಹೇಳಿ ತಿರುಗಿಕೊಂಡು ಕೋಪದಿಂದ ಹೋದನು.
ಆದರೆ ಪ್ರತಿ ಜನಾಂಗದವರೂ ತಾವು ನಿವಾಸಿಸಿದ ಪಟ್ಟಣಗಳಲ್ಲಿ ತಮಗೆ ದೇವರುಗಳನ್ನು ಮಾಡಿ ಸಮಾರ್ಯದವರು ಮಾಡಿದ ಉನ್ನತ ಸ್ಥಳಗಳ ಮನೆಗಳಲ್ಲಿ ಅವುಗಳನ್ನು ಇರಿಸಿದರು.
ಆತನು ಎಲ್ಲಾ ದೇವರುಗಳ ಮೇಲೆ ಭಯಂಕರನೂ. ಯಾಕಂದರೆ ಜನಗಳ ದೇವರುಗಳೆಲ್ಲಾ ಬೊಂಬೆಗಳಾಗಿವೆ. ಆದರೆ ಕರ್ತನು ಆಕಾಶಗಳನ್ನು ಉಂಟುಮಾಡಿದನು.
ಔತಣದ ದಿನಗಳು ಮುಗಿದ ಬಳಿಕ ಯೋಬನು ಅವರನ್ನು ಕರೆಕಳುಹಿಸಿ ಅವರನ್ನು ಶುದ್ಧಿ ಮಾಡಿ ಬೆಳಿಗ್ಗೆ ಎದ್ದು ಅವರೆಲ್ಲರ ಲೆಕ್ಕದ ಪ್ರಕಾರ ದಹನಬಲಿಗಳನ್ನು ಅರ್ಪಿಸುತ್ತಿದ್ದನು; ಯೋಬನುಒಂದುವೇಳೆ ನನ್ನ ಕುಮಾರರು ಪಾಪ ಮಾಡಿ ತಮ್ಮ ಹೃದಯಗಳಲ್ಲಿ ದೇವರನ್ನು ಶಪಿಸಿರಬಹುದು ಅಂದು ಕೊಂಡನು. ಹೀಗೆಯೇ ಯೋಬನು ಕ್ರಮವಾಗಿ ಮಾಡುತ್ತಿದ್ದನು.
ನನ್ನ ಅಕ್ರಮದಿಂದ ನನ್ನನ್ನು ಪೂರ್ಣವಾಗಿ ತೊಳೆ; ನನ್ನ ಪಾಪದಿಂದ ನನ್ನನ್ನು ಶುದ್ಧಿಮಾಡು.
ಹಿಸ್ಸೋಪ್ನಿಂದ ನನ್ನನ್ನು ತೊಳೆ; ಆಗ ನಾನು ಶುಚಿಯಾಗುವೆನು. ನನ್ನನ್ನು ತೊಳೆ, ಆಗ ಹಿಮಕ್ಕಿಂತ ಬಿಳುಪಾಗುವೆನು.
ಸಂಪೂರ್ಣವಾದ ಮಾರ್ಗದಲ್ಲಿ ಬುದ್ಧಿ ಯಿಂದ ನಡೆದು ಕೊಳ್ಳುವೆನು; ಯಾವಾಗ ನನ್ನ ಬಳಿಗೆ ಬರುವಿ? ನನ್ನ ಹೃದಯದ ಸಂಪೂರ್ಣತೆಯಿಂದ ನನ್ನ ಮನೆಯೊಳಗೆ ನಡೆದುಕೊಳ್ಳುವೆನು.
ದೇವರ ಆಲಯಕ್ಕೆ ನೀನು ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು; ಬುದ್ಧಿಹೀನರು ಅರ್ಪಿಸುವ ಯಜ್ಞಕ್ಕಿಂತ, ಹೆಚ್ಚಾಗಿ ಕಿವಿಗೊಡುವದಕ್ಕೆ ಸಿದ್ಧನಾಗಿರು. ಅವರು ತಿಳಿಯದೆ ಕೆಟ್ಟದ್ದನ್ನೇ ಮಾಡು ತ್ತಾರೆ.
ನಿಮ್ಮನ್ನು ತೊಳೆದುಕೊಂಡು ಶುದ್ಧ ಮಾಡಿಕೊಳ್ಳಿರಿ; ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟ ಕೃತ್ಯಗಳನ್ನು ತೆಗೆದುಹಾಕಿರಿ, ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ;
ಹೊರಡಿರಿ, ಹೊರಡಿರಿ, ಅಲ್ಲಿಂದ ಹೊರಗೆ ಹೋಗಿರಿ, ಅಶುದ್ಧವಾದದ್ದನ್ನು ಮುಟ್ಟಬೇಡಿರಿ; ಅವಳ ಮಧ್ಯದಿಂದ ಹೊರಗೆ ಹೋಗಿರಿ; ಕರ್ತನ ಪಾತ್ರೆಗ ಳನ್ನು ಹೊರುವವರೇ, ನೀವು ಶುದ್ಧರಾಗಿರ್ರಿ.
ಬುಗ್ಗೆಯು ತನ್ನ ನೀರನ್ನು ಹರಿಯ ಮಾಡುವ ಹಾಗೆ ಅವಳು ತನ್ನ ಕೆಟ್ಟತನವನ್ನು ಹರಿಯ ಮಾಡುತ್ತಾಳೆ; ಬಲಾತ್ಕಾರವೂ ಸುಲಿಗೆಯೂ ಅವಳಲ್ಲಿ ಕೇಳಬರುತ್ತವೆ. ದುಃಖವೂ ಗಾಯಗಳೂ ಯಾವಾ ಗಲೂ ನನ್ನ ಮುಂದೆ ಅವೆ.