ಅವರು ಊಟಕ್ಕೆ ಕೂತುಕೊಂಡಾಗ ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಇಷ್ಮಾಯೇಲ್ಯರ ಗುಂಪು ಗಿಲ್ಯಾದಿನಿಂದ ಬರುತ್ತಿತ್ತು. ಅವರ ಒಂಟೆಗಳು ಸಾಂಬ್ರಾಣಿ ಸುಗಂಧತೈಲ ರಕ್ತಬೋಳಗಳನ್ನು ಹೊರು ತ್ತಿದ್ದವು. ಅವರು ಅವುಗಳನ್ನು ಐಗುಪ್ತಕ್ಕೆ ತೆಗೆದು ಕೊಂಡು ಹೋಗುತ್ತಿದ್ದರು.
Cross references
ಕರ್ತನ ದೂತನು ಅವಳಿಗೆ--ಇಗೋ, ನೀನು ಗರ್ಭಿಣಿ ಯಾಗಿದ್ದೀ, ನೀನು ಒಬ್ಬ ಮಗನನ್ನು ಹೆರುವಿ; ಅವನಿಗೆ ಇಷ್ಮಾಯೇಲ ಎಂದು ಹೆಸರಿಡಬೇಕು. ಯಾಕಂದರೆ ಕರ್ತನು ನಿನ್ನ ವ್ಯಥೆಯನ್ನು ಕೇಳಿದ್ದಾನೆ.
ತರುವಾಯ ಅಬ್ರಹಾಮನು ಇನ್ನೊಬ್ಬ ಹೆಂಡತಿಯನ್ನು ಮಾಡಿಕೊಂಡನು. ಅವಳ ಹೆಸರು ಕೆಟೂರಳು.
ಇವರೇ ಇಷ್ಮಾಯೇಲನ ಕುಮಾರರು; ಇವುಗಳೇ ಅವರ ಗ್ರಾಮಗಳ ಕೋಟೆಗಳ ಪ್ರಕಾರವಾಗಿ ಇರುವ ಅವರ ಹೆಸರುಗಳು. ಅವರು ತಮ್ಮ ಜನಾಂಗಗಳ ಪ್ರಕಾರ ಹನ್ನೆರಡು ಮಂದಿ ಪ್ರಭುಗಳು.
ಅವನು ತನಗಿದ್ದದ್ದನ್ನೆಲ್ಲಾ ತೆಗೆದು ಕೊಂಡು ಓಡಿಹೋದನು. ಅವನು ಎದ್ದು ಗಿಲ್ಯಾದ್ ಪರ್ವತಕ್ಕೆ ಅಭಿಮುಖನಾಗಿ ನದಿಯನ್ನು ದಾಟಿದನು.
ಆಗ ಅವನು ತನ್ನ ಸಹೋದರರನ್ನು ಕರಕೊಂಡು ಅವನನ್ನು ಬೆನ್ನಟ್ಟಿ ಏಳು ದಿನ ಪ್ರಯಾಣಮಾಡಿ ಗಿಲ್ಯಾದ್ ಪರ್ವತದಲ್ಲಿ ಅವನನ್ನು ಸಂಧಿಸಿದನು.
ಈ ಪ್ರಕಾರ (ಮಿದ್ಯಾನ್ಯರ ವರ್ತಕರು ಹಾದುಹೋಗುತ್ತಿದ್ದಾಗ) ಅವರು ಯೋಸೇಫನನ್ನು ತಗ್ಗಿನಿಂದ ಮೇಲೆತ್ತಿ ಇಷ್ಮಾಯೇಲ್ಯ ರಿಗೆ ಅವನನ್ನು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು, ಅವರು ಯೋಸೇಫನನ್ನು ಐಗುಪ್ತಕ್ಕೆ ಕರಕೊಂಡು ಹೋದರು.
ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ಐಗುಪ್ತದಲ್ಲಿ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದನು. ಅವನು ಮೈಗಾವಲಿನ ದಳವಾಯಿಯಾಗಿದ್ದನು.
ಯೋಸೇಫನನ್ನು ಐಗುಪ್ತಕ್ಕೆ ತಕ್ಕೊಂಡು ಹೋದರು. ಅವನನ್ನು ಅಲ್ಲಿಗೆ ತಕ್ಕೊಂಡು ಹೋದ ಇಷ್ಮಾಯೇಲ್ಯರ ಕೈಯಿಂದ ಐಗುಪ್ತದವನೂ ಫರೋಹನ ಉದ್ಯೋಗಸ್ಥನೂ ಮೈಗಾವಲಿನವನೂ ಅಧಿಪತಿಯೂ ಆದ ಪೋಟೀಫರನು ಅವನನ್ನು ಕೊಂಡುಕೊಂಡನು.
ಆಗ ಅವರ ತಂದೆಯಾದ ಇಸ್ರಾಯೇಲನು ಅವರಿಗೆ--ನೀವು ಹೀಗೆ ಮಾಡಿರಿ, ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ಫಲಗಳನ್ನು ನಿಮ್ಮ ಸಾಮಾನು ಗಳಲ್ಲಿ ಇಟ್ಟುಕೊಂಡು ಆ ಮನುಷ್ಯನಿಗೆ ಕಾಣಿಕೆ ಯಾಗಿ ಸ್ವಲ್ಪ ತೈಲ, ಸ್ವಲ್ಪ ಜೇನು, ಸುಗಂಧದ್ರವ್ಯ, ರಕ್ತಬೋಳ, ಅಕ್ರೋಡು ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.
ಅಂಚೆ ಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಹೊರಟು ಹೋದರು. ಶೂಷನ್ ಅರಮನೆಯಲ್ಲಿ ಆ ಆಜ್ಞೆಯು ಕೊಡಲ್ಪಟ್ಟಿತು. ಅರಸನೂ ಹಾಮಾನನೂ ಕುಡಿಯಲು ಕುಳಿತುಕೊಂಡರು. ಆದರೆ ಶೂಷನ್ ಪಟ್ಟಣವು ತಳ ಮಳಗೊಂಡಿತು.
ಕರ್ತನನ್ನು ಪ್ರಾರ್ಥಿಸದೆ ರೊಟ್ಟಿಯನ್ನೋ ಎಂಬಂತೆ ನನ್ನ ಜನರನ್ನು ತಿಂದು ಅಪರಾಧಮಾಡಿದವರಿಗೆ ತಿಳುವಳಿಕೆಯಿಲ್ಲವೋ?
ಎದೋಮ್ಯರ ಮತ್ತು ಇಷ್ಮಾಯೇಲ್ಯರ ಗುಡಾರಗಳೂ ಮೋವಾಬೂ ಹಗ್ರೀಯರೂ
ಜಾರಸ್ತ್ರೀಯ ನಡತೆಯು ಹಾಗೆಯೇ ಇದೆ; ಅವಳು ತಿಂದು ತನ್ನ ಬಾಯನ್ನು ಒರಸಿಕೊಂಡು--ನಾನು ಯಾವ ಕೆಟ್ಟದ್ದನ್ನೂ ಮಾಡಲಿಲ್ಲ ಎಂದು ಹೇಳುತ್ತಾಳೆ.
ನನ್ನ ತೋಟಕ್ಕೆ ಬಂದೆನು, ನನ್ನ ಸಹೋದರಿಯೇ, ವಧುವೇ; ನನ್ನ ರಕ್ತಬೋಳ ವನ್ನೂ ನನ್ನ ಸುಗಂಧಗಳನ್ನೂ ಕೂಡಿಸಿದ್ದೇನೆ; ನನ್ನ ಜೇನು ಗೂಡನ್ನೂ ಜೇನು ತುಪ್ಪವನ್ನೂ ತಿಂದಿದ್ದೇನೆ; ನನ್ನ ದ್ರಾಕ್ಷಾರಸವನ್ನೂ ನನ್ನ ಹಾಲನ್ನೂ ಕುಡಿದಿದ್ದೇನೆ. ತಿನ್ನಿರಿ, ಓ ಸ್ನೇಹಿತರೇ; ಕುಡಿಯಿರಿ. ಹೌದು, ನನ್ನ ಪ್ರಿಯರೇ, ಸಮೃದ್ಧಿಯಾಗಿ ಕುಡಿಯಿರಿ.
ಕರ್ತನು ಹೀಗೆ ಅನ್ನುತ್ತಾನೆ--ಮಾತನಾಡು, ಏನಂದರೆ ಮನು ಷ್ಯರ ಹೆಣಗಳು ಗೊಬ್ಬರದಂತೆ ಬಯಲಿನಲ್ಲಿ ಬೀಳು ವವು; ಧಾನ್ಯ ಕೊಯ್ಯುವವನು ಉಳಿಸಿದ ಕೈ ಹಿಡಿಯಂತೆ ಕೂಡಿಸುವವನಿಲ್ಲದೆ ಬೀಳುವವು.
ದಂತದ ಮಂಚಗಳ ಮೇಲೆ ಮಲಗಿಕೊಳ್ಳು ತ್ತಾರೆ; ತಮ್ಮ ಹಾಸಿಗೆಗಳ ಮೇಲೆ ಹಾಯಾಗಿ ಒರಗಿ ಕೊಳ್ಳುತ್ತಾರೆ; ಮಂದೆಯೊಳಗಿಂದ ಕುರಿಮರಿಗಳನ್ನು, ಹಟ್ಟಿಯ ಮಂದೆಯೊಳಗಿಂದ ಕರುಗಳನ್ನು ತಿನ್ನುತ್ತಾರೆ.
ದ್ರಾಕ್ಷಾರಸದ ಪಾತ್ರೆಗಳಲ್ಲಿ ಕುಡಿಯುತ್ತಾರೆ. ಶ್ರೇಷ್ಠವಾದ ಎಣ್ಣೆಗಳಿಂದ ತಮ್ಮನ್ನು ಅಭಿಷೇಕಿಸಿ ಕೊಳ್ಳುತ್ತಾರೆ. ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡು ವದಿಲ್ಲ.