ಅವನ ಕುಮಾರ ಕುಮಾರ್ತೆಯರೆಲ್ಲಾ ಅವನನ್ನು ಆದರಿಸಿದಾಗ್ಯೂ ಅವನು ಆದರಣೆ ಹೊಂದಲೊಲ್ಲದೆ--ನನ್ನ ಮಗನ ಬಳಿಗೆ ಸಮಾಧಿಗೆ ದುಃಖದಿಂದಲೇ ಇಳಿದು ಹೋಗು ವೆನು ಅಂದನು. ಹೀಗೆ ಅವನ ತಂದೆ ಅವನಿಗೋಸ್ಕರ ಅತ್ತನು.ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ಐಗುಪ್ತದಲ್ಲಿ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದನು. ಅವನು ಮೈಗಾವಲಿನ ದಳವಾಯಿಯಾಗಿದ್ದನು.
Cross references
ಲಾಬಾನನು ಅದಕ್ಕೆ ಉತ್ತರವಾಗಿ ಯಾಕೋಬನಿಗೆ --ಈ ಕುಮಾರ್ತೆಯರು ನನ್ನ ಕುಮಾರ್ತೆಯರೇ; ಈ ಮಕ್ಕಳೂ ನನ್ನ ಮಕ್ಕಳೇ; ಈ ಮಂದೆಯೂ ನನ್ನ ಮಂದೆಯೇ; ಅಂತೂ ನೀನು ನೋಡುವದೆಲ್ಲಾ ನನ್ನದೇ. ಹಾಗಾದರೆ ನನ್ನ ಕುಮಾರ್ತೆಯರಿಗಾಗಲಿ ಅವರು ಹೆತ್ತ ಮಕ್ಕಳಿಗಾಗಲಿ ನಾನು ಈಹೊತ್ತು ಏನು ಮಾಡಲಿ?
ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ಹೋಗಿ ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳ ಸಂಗಡ ಮಲಗಿದನು. ಅದನ್ನು ಇಸ್ರಾಯೇಲನು ಕೇಳಿದನು. ಯಾಕೋಬನಿಗೆ ಹನ್ನೆರಡು ಮಂದಿ ಕುಮಾರರು ಇದ್ದರು.
ನಾವು ಅವ ನಿಗೆ--ನಾವು ಗೂಢಚಾರರಲ್ಲ, ಸತ್ಯವಂತರೇ.
ಆದರೆ ಅವನು--ನನ್ನ ಮಗನು ನಿಮ್ಮ ಸಂಗಡ ಹೋಗಬಾರದು; ಅವನ ಅಣ್ಣನು ಸತ್ತುಹೋಗಿ ಅವನೊಬ್ಬನೇ ಉಳಿದಿದ್ದಾನೆ; ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ ಮುದಿ ಪ್ರಾಯದಲ್ಲಿ ನನ್ನನ್ನು ದುಃಖದಿಂದ ಸಮಾಧಿಗೆ ಹೋಗುವಂತೆ ಮಾಡುವಿರಿ ಅಂದನು.
(ಈಗ) ನನ್ನ ಬಳಿಯಿಂದ ಇವನನ್ನೂ ತಕ್ಕೊಂಡು ಹೋಗ ಬೇಕೆಂದಿದೀರಿ, ಅವನಿಗೂ ಕೇಡು ಬಂದರೆ ನನ್ನ ಮುದಿ ತಲೆಯನ್ನು ದುಃಖದಿಂದ ಸಮಾಧಿಗೆ ಇಳಿಯ ಮಾಡುವಿರಿ ಎಂದು ಹೇಳಿದನು.
ಹುಡುಗನು ನಮ್ಮ ಸಂಗಡ ಇಲ್ಲದೆ ಹೋದರೆ ಆ ಹುಡುಗ ನಿಲ್ಲದ್ದನ್ನು ಕಂಡಾಗಲೇ ಅವನು ಸಾಯುವನು. ನಿನ್ನ ದಾಸನಾಗಿರುವ ನಮ್ಮ ತಂದೆಯ ನರೇಕೂದಲನ್ನು ದುಃಖದಿಂದ ಸಮಾಧಿಗೆ ನಿನ್ನ ದಾಸರು ಇಳಿಯ ಮಾಡುವರು.
ಆಗ ಇಸ್ರಾಯೇಲನು--ನನ್ನ ಮಗನಾದ ಯೋಸೇಫನು ಇನ್ನೂ ಜೀವದಿಂದಿದ್ದಾನೆ, ಅದು ಸಾಕು; ನಾನು ಸಾಯುವದಕ್ಕಿಂತ ಮುಂಚೆ ಹೋಗಿ ಅವನನ್ನು ನೋಡುವೆನು ಅಂದನು.
ಇಸ್ರಾಯೇಲನು ಯೋಸೇಫನಿಗೆ--ನಿನ್ನ ಮುಖ ವನ್ನು ನೋಡುವೆನೆಂದು ನಾನು ನೆನಸಲಿಲ್ಲ. ಆದರೆ ಇಗೋ, ನಿನ್ನ ಸಂತಾನವನ್ನು ಸಹ ದೇವರು ನನಗೆ ನೋಡಮಾಡಿದ್ದಾನೆ ಅಂದನು.
ಅವನನ್ನು ಎಬ್ಬಿಸುವದಕ್ಕೆ ಅವನ ಮನೆಯ ಹಿರಿಯರು ಅವನ ಬಳಿಗೆ ಬಂದರು; ಆದರೆ ಅವನಿಗೆ ಮನಸ್ಸಿಲ್ಲದೆ ಇತ್ತು. ಅವರ ಸಂಗಡ ಭೋಜನ ಮಾಡದೆ ಹೋದನು.
ಆಗ ಇಗೋ, ಅರಸನು ಅಬ್ಷಾಲೋಮನಿ ಗೋಸ್ಕರ ಅತ್ತು ದುಃಖಪಡುತ್ತಾ ಇದ್ದಾ ನೆಂದು ಯೋವಾಬನಿಗೆ ತಿಳಿಸಲ್ಪಟ್ಟಿತು.
ಅವರ ತಂದೆಯಾದ ಎಫ್ರಾಯಾಮನು ಅನೇಕ ದಿವಸಗಳು ದುಃಖಪಟ್ಟದ್ದರಿಂದ ಅವನ ಸಹೋದರರು ಅವನನ್ನು ಆದರಿಸಲು ಬಂದರು.
ಇದಲ್ಲದೆ ಯೋಬನ ಮೂವರು ಸ್ನೇಹಿತರು ಅವನ ಮೇಲೆ ಬಂದ ಈ ಎಲ್ಲಾ ಕೇಡನ್ನು ಕುರಿತು ಕೇಳಿ ತಮ್ಮ ತಮ್ಮ ಸ್ಥಳಗಳಿಂದ ಬಂದರು. ಅವರಾ ರಂದರೆ; ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು; ಇವರು ಅವನಿಗೋಸ್ಕರ ಗೋಳಾಡುವದಕ್ಕೂ ಅವನನ್ನು ಸಂತೈ ಸುವದಕ್ಕೂ ಹೋಗಬೇಕೆಂದು ತಮ್ಮಲ್ಲಿ ಆಲೋಚನೆ ಮಾಡಿಕೊಂಡರು.
ನನ್ನ ಇಕ್ಕ ಟ್ಟಿನ ದಿವಸದಲ್ಲಿ ಕರ್ತನನ್ನು ಹುಡುಕಿದೆನು; ನಾನು ರಾತ್ರಿಯೆಲ್ಲಾ ವ್ಯಥೆಪಟ್ಟದ್ದರಿಂದ ನನ್ನ ಪ್ರಾಣವು ಆದರಣೆ ಹೊಂದಲೊಲ್ಲದು.
ನಾನು ವ್ಯಥೆಪಡುತ್ತಾ ದೇವರನ್ನು ಜ್ಞಾಪಕಮಾಡಿಕೊಂಡೆನು. ನಾನು ಚಿಂತಿ ಸುವದರಿಂದ ನನ್ನ ಆತ್ಮವು ಬಳಲಿ ಹೋಗಿದೆ ಸೆಲಾ.
ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು --ಈ ದೇಶದಲ್ಲಿ ತಿರುಗಿ ಮನೆಗಳೂ ಹೊಲಗಳೂ ದ್ರಾಕ್ಷೇ ತೋಟಗಳೂ ಸ್ವಾಧೀನವಾಗುವವೆಂದು ಹೇಳುತ್ತಾನೆ.