ಆಗ ಅವನ ಸಹೋದರರು ಅವನಿಗೆ--ನೀನು ನಮ್ಮನ್ನು ನಿಶ್ಚಯವಾಗಿಯೂ ಆಳುವಿಯೋ ಇಲ್ಲವೆ ನಿಜವಾಗಿ ನಮ್ಮ ಮೇಲೆ ದೊರೆತನ ಮಾಡುವಿಯೋ ಎಂದು ಹೇಳಿ ಅವನ ಕನಸುಗಳಿಗಾಗಿಯೂ ಅವನ ಮಾತುಗಳಿಗಾಗಿಯೂ ಅವನನ್ನು ಮತ್ತಷ್ಟು ಹಗೆ ಮಾಡಿದರು.
Cross references
ತಮ್ಮ ತಂದೆಯು ಅವನನ್ನು ಅವನ ಎಲ್ಲಾ ಸಹೋದರರಿಗಿಂತ ಹೆಚ್ಚು ಪ್ರೀತಿ ಮಾಡುತ್ತಾನೆಂದು ಅವನ ಸಹೋದರರು ನೋಡಿ ಅವನನ್ನು ದ್ವೇಷಿಸಿ ಅವನ ಸಂಗಡ ಸಮಾಧಾನವಾಗಿ ಮಾತಾಡಲಾರದೆ ಇದ್ದರು.
ನಿನ್ನ ತಂದೆಯ ಆಶೀರ್ವಾದಗಳು ನನ್ನ ಹೆತ್ತವರ ಆಶೀರ್ವಾದಗಳನ್ನು ನಿತ್ಯ ಗುಡ್ಡಗಳ ಮೇರೆಗಿಂತ ವಿಾರಿವೆ. ಯೋಸೇಫನ ತಲೆಯ ಮೇಲೆಯೂ ತನ್ನ ಸಹೋದರರಿಂದ ಪ್ರತ್ಯೇಕ ಮಾಡಲ್ಪಟ್ಟವನ ತಲೆಯ ಮೇಲೆಯೂ ಅವು ಬರಲಿ.
ಅದಕ್ಕ ವನು--ಯಾರು ನಿನ್ನನ್ನು ನಮ್ಮ ಮೇಲೆ ಪ್ರಭುವ ನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ನೇಮಿಸಿ ದ್ದಾರೆ? ಆ ಐಗುಪ್ತ್ಯನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದೀಯೋ ಅಂದನು. ಆಗ ಮೋಶೆಯು ಭಯಪಟ್ಟು--ನಿಶ್ಚಯವಾಗಿ ಈ ಕಾರ್ಯವು ತಿಳಿದುಬಂತು ಎಂದು ಅಂದುಕೊಂಡನು.
ಆದರೆ ಬೆಲಿಯಾಳ ಮಕ್ಕಳು--ಇವನು ಹೇಗೆ ನಮ್ಮನ್ನು ರಕ್ಷಿಸುವನು ಎಂದು ಅವನನ್ನು ತಿರಸ್ಕರಿಸಿ ದರು; ಅವನಿಗೆ ಕಾಣಿಕೆಗಳನ್ನು ತಕ್ಕೊಂಡು ಬರಲಿಲ್ಲ. ಆದರೆ ಅವನು ಕೇಳದವನ ಹಾಗೆ ಇದ್ದನು.
ಆದರೆ ಅವನು ಆ ಮನುಷ್ಯರ ಸಂಗಡ ಮಾತನಾಡುತ್ತಿರು ವದನ್ನು ಅವನ ಹಿರಿಯ ಸಹೋದರನಾದ ಎಲೀಯಾ ಬನು ಕೇಳಿ ಅವನ ಮೇಲೆ ಕೋಪಗೊಂಡು--ನೀನು ಇಲ್ಲಿಗೆ ಬಂದದ್ದೇನು? ಅಡವಿಯಲ್ಲಿರುವ ಆ ಸ್ವಲ್ಪ ಕುರಿಗಳನ್ನು ಯಾರ ವಶಕ್ಕೆ ಒಪ್ಪಿಸಿ ಬಂದೆ? ನಿನ್ನ ಗರ್ವವನ್ನೂ ನಿನ್ನ ಹೃದಯದ ಅಹಂಕಾರವನ್ನೂ ನಾನು ಬಲ್ಲೆನು; ನೀನು ಯುದ್ಧವನ್ನು ನೋಡಲು ಇಳಿದು ಬಂದಿದ್ದೀ ಅಂದನು.
ಸೌಲನಿಗೆ ಬಹು ಕೋಪವಾಯಿತು; ಆ ಮಾತು ಅವನಿಗೆ ವ್ಯಸನಕರವಾಗಿತ್ತು. ಇವರು ದಾವೀದ ನಿಗೆ ಹತ್ತು ಸಾವಿರಗಳನ್ನು ಹೇಳಿದ್ದಾರೆ; ನನಗೆ ಸಾವಿರ ಗಳನ್ನು ಹೇಳಿದ್ದಾರೆ; ಅವನಿಗೆ ರಾಜ್ಯವಲ್ಲದೆ ಇನ್ನು ಹೆಚ್ಚು ಬೇಕಾದದ್ದೇನು ಅಂದನು.
ಅವರು--ಅವರ ಬಂಧನಗಳನ್ನು ತುಂಡುತುಂಡಾಗಿ ಮುರಿದು ಅವರ ಕಟ್ಟುಗಳನ್ನು ನಮ್ಮಿಂದ ಬಿಸಾಡೋಣ ಅನ್ನುತ್ತಾರೆ.
ಮನೆ ಕಟ್ಟುವವರು ತಳ್ಳಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
ಆದರೆ ಅವರ ಪಟ್ಟಣದವರು ಅವನನ್ನು ದ್ವೇಷಿಸಿ--ಇವನು ನಮ್ಮ ಮೇಲೆ ಆಡಳಿತ ಮಾಡುವದು ನಮಗೆ ಮನಸ್ಸಿಲ್ಲ ಎಂದು ಹೇಳಿ ಅವನ ಹಿಂದೆ ಸಂದೇಶವನ್ನು ಕಳುಹಿಸಿದರು.
ಆಗ ಆತನು ಅವರನ್ನು ನೋಡಿ--ಹಾಗಾದರೆ ಮನೇ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು ಎಂದು ಬರೆದಿರು ವದು ಏನು?
ನಿಜವಾಗಿಯೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಹೆರೋದನೂ ಪೊಂತ್ಯ ಪಿಲಾತನೂ ಅನ್ಯಜನರ ಮತ್ತು ಇಸ್ರಾಯೇಲ್ ಜನರ ಸಹಿತ ಒಂದಾಗಿ ಕೂಡಿಕೊಂಡು
ಅವರು ಯಾವ ಮೋಶೆಗೆ--ನಿನ್ನನ್ನು ಅಧಿಕಾರಿ ಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿ ದವರು ಯಾರೆಂದು ಹೇಳಿ ಬೇಡವೆಂದರೋ ಅವ ನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿರುವಂತೆಯೂ ಬಿಡುಗಡೆ ಮಾಡುವವನನ್ನಾಗಿರುವಂತೆಯೂ ಕಳುಹಿಸಿದನು.
ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ.