ಆಗ ಯೆಹೂದನು ಅವುಗಳನ್ನು ಗುರುತಿಸಿ--ಆಕೆಯು ನನಗಿಂತ ನೀತಿವಂತಳು, ಯಾಕಂದರೆ ನಾನು ನನ್ನ ಮಗನಾದ ಶೇಲಹನಿಗೆ ಅವಳನ್ನು ಕೊಡಲಿಲ್ಲ ಅಂದನು. ಅವನು ಮತ್ತೆ ಆಕೆಯನ್ನು ಅರಿಯಲಿಲ್ಲ.
Cross references
ಆದಾಮನು ತನ್ನ ಹೆಂಡತಿಯಾದ ಹವ್ವಳನ್ನು ಕೂಡಿದನು. ಆಗ ಆಕೆಯು ಗರ್ಭಿಣಿಯಾಗಿ ಕಾಯಿನನನ್ನು ಹೆತ್ತು--ನಾನು ಕರ್ತ ನಿಂದ ಒಬ್ಬ ಮನುಷ್ಯನನ್ನು ಪಡೆದಿದ್ದೇನೆ ಅಂದಳು.
ಯಾಕೋಬನು ಅದನ್ನು ಗುರುತು ಹಿಡಿದು--ಇದು ನನ್ನ ಮಗನ ಅಂಗಿ ಹೌದು; ದುಷ್ಟಮೃಗವು ಅವನನ್ನು ತಿಂದುಬಿಟ್ಟಿತು; ಯೋಸೇಫನು ನಿಸ್ಸಂದೇಹವಾಗಿ ತುಂಡು ತುಂಡಾಗಿ ಮಾಡಲ್ಪಟ್ಟಿದ್ದಾನೆ ಅಂದನು.
ಆಕೆಯು ವಿಧವೆಯ ವಸ್ತ್ರಗಳನ್ನು ತೆಗೆದಿಟ್ಟು ಮುಸುಕು ಹಾಕಿ ಮುಚ್ಚಿಕೊಂಡು ತಿಮ್ನಾತಿನ ಮಾರ್ಗದಲ್ಲಿರುವ ಬಹಿರಂಗ ಸ್ಥಳದಲ್ಲಿ ಕೂತು ಕೊಂಡಳು; ಯಾಕಂದರೆ ಶೇಲಹನು ದೊಡ್ಡವನಾ ಗಿದ್ದರೂ ತನ್ನನ್ನು ಅವನಿಗೆ ಹೆಂಡತಿಯಾಗಿ ಕೊಡಲಿಲ್ಲ ವೆಂದು ನೋಡಿದಳು.
ದಾವೀದನಿಗೆ--ನೀನು ನನಗಿಂತ ನೀತಿವಂತನು; ನೀನು ನನಗೆ ಒಳ್ಳೇದನ್ನು ಮಾಡಿದಿ; ಆದರೆ ನಾನು ನಿನಗೆ ಕೇಡನ್ನು ಮಾಡಿದೆನು.
ಕರ್ತನು ನನ್ನನ್ನು ನಿನ್ನ ಕೈಯಲ್ಲಿ ಒಪ್ಪಿಸಿ ಕೊಟ್ಟಾಗ ನೀನು ನನ್ನನ್ನು ಕೊಂದುಹಾಕದೆ ಇದದ್ದ ರಿಂದ ನೀನು ನನಗೆ ಉಪಕಾರಮಾಡಿದ್ದನ್ನು ಈ ಹೊತ್ತು ತೋರಿಸಿದಿ.
ಹಾಗೆಯೇ ಅವರು ಅಬ್ಷಾಲೋಮನಿಗೋಸ್ಕರ ಮನೆಯ ಮೇಲೆ ಡೇರೆ ಹಾಕಿದರು; ಅಲ್ಲಿ ಅಬ್ಷಾಲೋಮನು ಎಲ್ಲಾ ಇಸ್ರಾಯೇಲ್ಯರ ಕಣ್ಣುಗಳ ಮುಂದೆ ತನ್ನ ತಂದೆಯ ಉಪಪತ್ನಿಗಳನ್ನು ಕೂಡಿದನು.ಆ ದಿವಸಗಳಲ್ಲಿ ಅಹೀತೋಫೆಲನು ಆಲೋಚಿಸಿದ ಆಲೋಚನೆಯು ಒಬ್ಬನು ದೈವೋಕ್ತಿಗಳನ್ನು ವಿಚಾರಿಸುವ ಹಾಗೆ ಇತ್ತು. ಅಹೀತೋಫೆಲನ ಆಲೋಚನೆಯೆಲ್ಲಾ ದಾವೀದನಿಗೂ ಅಬ್ಷಾಲೋಮನಿಗೂ ಹಾಗೆಯೇ ಇತ್ತು.
ದಾವೀದನು ಯೆರೂಸಲೇಮಿನಲ್ಲಿರುವ ತನ್ನ ಮನೆಗೆ ಬಂದನು; ಅರಸನು ಮನೆಯಲ್ಲಿ ಕಾಯಲಿಟ್ಟ ಉಪಪತ್ನಿಗಳಾದ ಹತ್ತುಮಂದಿ ಸ್ತ್ರೀಯರನ್ನು ತೆಗೆದು ಕೊಂಡು ಅವರನ್ನು ಒಂದು ಕಾವಲಿನಲ್ಲಿ ಇರಿಸಿ ಸಾಕುತ್ತಿದ್ದನು. ಆದರೆ ಅವರನ್ನು ತಿರುಗಿ ಕೂಡಲಿಲ್ಲ. ಹಾಗೆಯೇ ಅವರು ಸಾಯುವ ದಿವಸದ ವರೆಗೂ ಕಾವಲಲ್ಲಿ ಇರಿಸಲ್ಪಟ್ಟು ವಿಧವೆಯರ ಹಾಗೆಯೇ ಬದುಕಿದರು.
ಆಗ ಕರ್ತನ ದೂತನು ಯೆಬೂಸಿ ಯನಾದ ಅರೌನನು ತುಳಿಸುವ ಕಣದ ಬಳಿಯಲ್ಲಿ ಇದ್ದನು. ದಾವೀದನು ಜನಸಂಹಾರ ದೂತನನ್ನು ನೋಡಿದಾಗ ಅವನು ಕರ್ತನಿಗೆ--ಇಗೋ, ನಾನೇ ಪಾಪಮಾಡಿದೆನು; ದುಷ್ಟತ್ವದಿಂದ ಮಾಡಿದವನು ನಾನೇ; ಆದರೆ ಈ ಕುರಿಗಳಂತಿರುವ ಜನರು ಮಾಡಿ ದ್ದೇನು? ನಿನ್ನ ಕೈ ನನಗೆ ವಿರೋಧವಾಗಿಯೂ ನನ್ನ ತಂದೆಯ ಮನೆಗೆ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ ಅಂದನು.
ಈಗ ಅದು ನಿನ್ನ ಮೇಲೆ ಬಂದದ್ದರಿಂದ ನೀನು ದಣಿಯುತ್ತೀ; ನಿನ್ನನ್ನೂ ಅದು ಮುಟ್ಟಿದ್ದರಿಂದ ಕಳವಳಪಡುತ್ತೀ;
ನಿಶ್ಚಯವಾಗಿ ದೇವರಿಗೆ ಹೇಳತಕ್ಕದ್ದೇನಂದರೆ--ನಾನು ಶಿಕ್ಷೆಯನ್ನು ತಾಳಿದ್ದೇನೆ, ಇನ್ನು ಮೇಲೆ ಕೆಟ್ಟತನ ಮಾಡುವದಿಲ್ಲ.
ನಾನು ನೋಡಿದ್ದನ್ನು ನೀನು ನನಗೆ ಬೋಧಿಸು; ನಾನು ಅನ್ಯಾಯವನ್ನು ಮಾಡಿದ್ದರೆ, ಇನ್ನು ಮೇಲೆ ತಿರುಗಿ ಮಾಡೆನು.
ಒಂದು ಸಾರಿ ಮಾತಾಡಿದೆನು, ಆದರೆ ಉತ್ತರ ಕೊಡೆನು; ಹೌದು, ಎರಡು ಸಾರಿ. ಆದರೆ ಹೆಚ್ಚು ಮಾತಾಡೆನು ಅಂದೆನು.
ನಿನ್ನ ದೋಷಗಳೇ ನಿನ್ನ ಅಕ್ಕ ತಂಗಿಯರ ಪಕ್ಷವಾಗಿ ನಿಂತಿದ್ದರಿಂದ ನೀನು ನಾಚಿಕೆ ಪಡು; ನೀನು ಅವರಿಗಿಂತ ಅಸಹ್ಯವಾಗಿ ಮಾಡಿದ ನಿನ್ನ ಪಾಪಗಳಿಗೆ ತಕ್ಕ ನಿಂದೆಯನ್ನು ಹೊತ್ತುಕೋ; ಅವರು ನಿನಗಿಂತ ನೀತಿವಂತರು; ಹೌದು, ನೀನು ನಿನ್ನ ಸಹೋದರಿಗಳನ್ನು ನೀತಿವಂತರೆಂದು ತೋರ್ಪಡಿಸಿ ದ್ದರಿಂದ ನೀನೇ ನಾಚಿಕೆಪಟ್ಟು ನಿನ್ನ ನಿಂದೆಯನ್ನು ಹೊತ್ತುಕೋ.
ನೀನು ಕೆಟ್ಟದ್ದನ್ನು ನೋಡಕೂಡದ ಹಾಗೆ ಶುದ್ಧ ಕಣ್ಣುಗಳುಳ್ಳವನು; ನೀನು ಅನ್ಯಾಯವನ್ನು ದೃಷ್ಟಿಸಲಾರಿ; ವಂಚಿಸುವವರನ್ನು ಯಾಕೆ ದೃಷ್ಟಿಸುತ್ತೀ? ದುಷ್ಟನು ತನಗಿಂತ ನೀತಿವಂತ ನನ್ನು ನುಂಗಿಬಿಡುವ ವೇಳೆಯಲ್ಲಿ ಯಾಕೆ ಸುಮ್ಮನಿ ರುತ್ತೀ?
ಹಾಗಾದರೆ ಮಾನಸಾಂತರಕ್ಕೆ ತಕ್ಕ ಫಲ ಗಳನ್ನು ಫಲಿಸಿರಿ;
ಅದನ್ನು ಕೇಳಿದವರು ತಮ್ಮ ಸ್ವಂತ ಮನಸ್ಸಾಕ್ಷಿಯಿಂದ ಮನವರಿಕೆಯಾಗಿ ಹಿರಿಯವನು ಮೊದಲುಗೊಂಡು ಕಡೆಯವನವರೆಗೂ ಒಬ್ಬೊಬ್ಬರಾಗಿ ಹೊರಗೆಹೋದರು; ಆಗ ಯೇಸು ಒಬ್ಬನೇ ಉಳಿದನು; ಆ ಹೆಂಗಸು ನಡುವೆ ನಿಂತು ಕೊಂಡಿದ್ದಳು.
ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸವಿಾಪವಾಯಿತು; ಆದದರಿಂದ ನಾವು ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ.
ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು.
ಹೀಗೆ ಶರೀರದಲ್ಲಿ ಇನ್ನು ಉಳಿದಿರುವ ತನ್ನ ಜೀವಿತಕಾಲದಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವನು.