ಆಗ ಯೋಸೇಫನ ಯಜಮಾನನು ಅವನನ್ನು ಹಿಡುಕೊಂಡು ರಾಜನ ಕೈದಿಗಳು ಬಂಧಿಸಲ್ಪಡುವ ಸೆರೆಮನೆಯಲ್ಲಿ ಹಾಕಿದನು. ಯೋಸೇಫನು ಆ ಸೆರೆಮನೆಯಲ್ಲಿದ್ದನು.
Cross references
ಇವುಗಳಾದ ಮೇಲೆ ಐಗುಪ್ತದ ಅರಸನ ಪಾನದಾಯಕನೂ ರೊಟ್ಟಿಗಾರನೂ ಐಗು ಪ್ತದ ಅರಸನಾದ ತಮ್ಮ ಪ್ರಭುವಿಗೆ ಅಪರಾಧ ಮಾಡಿದರು.
ಅವರನ್ನು ಮೈಗಾವಲಿನವರ ಅಧಿಪತಿಯ ಮನೆಯೊಳಗೆ ಕಾವಲಿರಿಸಿದನು. ಅದು ಯೋಸೇಫನು ಬಂಧಿಸಲ್ಪಟ್ಟ ಸ್ಥಳವಾಗಿತ್ತು.
ನಾನು ನಿಜವಾಗಿಯೂ ಇಬ್ರಿ ಯರ ದೇಶದೊಳಗಿಂದ ಕದಿಯಲ್ಪಟ್ಟೆನು. ಇಲ್ಲಿಯೂ ಸಹ ನನ್ನನ್ನು ಸೆರೆಯಲ್ಲಿ ಹಾಕುವದಕ್ಕೆ ನಾನು ಏನೂ ಮಾಡಲಿಲ್ಲ ಅಂದನು.
ಆಗ ಪಾನದಾಯಕರ ಮುಖ್ಯಸ್ಥನು ಫರೋಹ ನಿಗೆ--ಈ ಹೊತ್ತು ನನ್ನ ತಪ್ಪುಗಳನ್ನು ಜ್ಞಾಪಕ ಮಾಡಿಕೊಳ್ಳುತ್ತೇನೆ;
ನಿಶ್ಚಯವಾಗಿ ಮನುಷ್ಯನ ಕೋಪವು ನಿನ್ನನ್ನು ಕೊಂಡಾಡುವದು; ಕೋಪಶೇಷವನ್ನು ನೀನು ಬಿಗಿ ಹಿಡಿದು ಕೊಳ್ಳುವಿ.
ಅವರು ಸಂಕೋಲೆಗಳಿಂದ ಅವನ ಕಾಲುಗಳನ್ನು ಬಾಧಿಸಿದರು; ಅವನನ್ನು ಕಬ್ಬಿಣದ ಬೇಡಿಗಳಲ್ಲಿ ಬಂಧಿಸಿದರು.
ಆತನು ಸೆರೆಯಿಂದಲೂ ನ್ಯಾಯತೀರ್ಪಿ ನಿಂದಲೂ ತೆಗೆಯಲ್ಪಟ್ಟನು; ಆತನ ಸಂತತಿಯನ್ನು ತಿಳಿಯಪಡಿಸಿದವರು ಯಾರು? ಆತನು ಜೀವಿತರ ದೇಶದಿಂದ ಕಡಿಯಲ್ಪಟ್ಟವನು (ತೆಗೆಯಲ್ಪಟ್ಟನು); ತನ್ನ ಪ್ರಜೆಯ ದ್ರೋಹಕ್ಕಾಗಿ ಆತನು ಪೆಟ್ಟು ತಿಂದನು.
ಅವರು ತಮ್ಮ ಶಲ್ಯ, ಇಜಾರು, ಮುಂಡಾಸ ಮೊದಲಾದವುಗಳನ್ನು ಧರಿಸಿಕೊಂಡವರಾಗಿರುವಾಗ ಅವರು ಧಗಧಗನೆ ಉರಿಯುವ ಬೆಂಕಿಯ ಆವಿಗೆಯಲ್ಲಿ ಹಾಕಲ್ಪಟ್ಟರು.
ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಕಟ್ಟಲ್ಪಟ್ಟವನಾ ಗಿದ್ದೇನೆ; ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.
ಒಬ್ಬನು ಅನ್ಯಾಯವಾಗಿ ಬಾಧೆಪಡುವವ ನಾಗಿದ್ದು ದೇವರ ವಿಷಯವಾದ ಮನಸ್ಸಾಕ್ಷಿಗೋಸ್ಕರ ಆ ದುಃಖವನ್ನು ಸಹಿಸಿಕೊಂಡರೆ ಅದು ಶ್ಲಾಘ್ಯವಾಗಿದೆ.