ಆದರೆ ಕರ್ತನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯಿಟ್ಟು ಸೆರೆಮನೆಯ ಯಜಮಾನನು ಅವನ ಮೇಲೆ ದಯೆತೋರಿಸುವಂತೆ ಮಾಡಿದನು.
Cross references
ಆ ಕಾಲದಲ್ಲಿ ಅಬೀಮೆಲೆಕನೂ ಅವನ ಮುಖ್ಯ ಸೈನ್ಯಾಧಿಪತಿಯಾದ ಫೀಕೋಲನೂ ಅಬ್ರಹಾಮ ನಿಗೆ--ನೀನು ಮಾಡುವದೆಲ್ಲದರಲ್ಲಿ ದೇವರು ನಿನ್ನ ಸಂಗಡ ಇದ್ದಾನೆ.
ಕರ್ತನು ಯೋಸೇಫನ ಸಂಗಡ ಇದದ್ದರಿಂದ ಅವನು ಏಳಿಗೆಯಾಗಿ ಐಗುಪ್ತದವನಾದ ತನ್ನ ಯಜಮಾನನ ಮನೆಯಲ್ಲಿ ಇದ್ದನು.
ಕರ್ತನು ಅವನ ಸಂಗಡ ಇದ್ದಾನೆಂದೂ ಅವನು ಮಾಡಿದ್ದನ್ನೆಲ್ಲಾ ಕರ್ತನು ಅವನ ಕೈಯಿಂದ ಅಭಿವೃದ್ಧಿಮಾಡಿದನೆಂದೂ ಅವನ ಯಜಮಾನನು ನೋಡಿದನು.
ಆದದರಿಂದ ಯೋಸೇಫನು ಅವನ ದೃಷ್ಟಿಯಲ್ಲಿ ಕೃಪೆಹೊಂದಿ ಅವನ ಸೇವೆಮಾಡಿದನು. ಪೋಟೀಫರನು ಅವನನ್ನು ತನ್ನ ಮನೆಯ ಮೇಲೆ ಮೇಲ್ವಿಚಾರಕನನ್ನಾಗಿ ಮಾಡಿ ತನಗಿದ್ದದ್ದನ್ನೆಲ್ಲಾ ಅವನ ಕೈಗೆ ಒಪ್ಪಿಸಿದನು.
ಅವರನ್ನು ಮೈಗಾವಲಿನವರ ಅಧಿಪತಿಯ ಮನೆಯೊಳಗೆ ಕಾವಲಿರಿಸಿದನು. ಅದು ಯೋಸೇಫನು ಬಂಧಿಸಲ್ಪಟ್ಟ ಸ್ಥಳವಾಗಿತ್ತು.
ಬಿಲ್ಲುಗಾರರು ಅವನನ್ನು ಬಹಳವಾಗಿ ದುಃಖ ಪಡಿಸಿ ಬಾಣಗಳನ್ನು ಎಸೆದು ಅವನನ್ನು ಹಗೆ ಮಾಡುವರು.
ಇದಲ್ಲದೆ ಈ ಜನರಿಗೆ ಐಗುಪ್ತ್ಯರ ಕಣ್ಣೆದುರಿನಲ್ಲಿ ದಯೆ ದೊರಕುವಂತೆ ಮಾಡುವೆನು. ನೀವು ಹೋಗುವಾಗ ಬರಿಗೈಯಲ್ಲಿ ಹೋಗುವದಿಲ್ಲ.ಮನೆಯಲ್ಲಿ ಇಳು ಕೊಂಡಿರುವವಳಿಂದಲೂ ಬೆಳ್ಳಿ ಬಂಗಾರದ ಒಡವೆಗಳನ್ನೂ ವಸ್ತ್ರಗಳನ್ನೂ ಕೇಳಿ ಕೊಳ್ಳಲಿ. ಅವುಗಳನ್ನು ನಿಮ್ಮ ಕುಮಾರ ಕುಮಾರ್ತೆ ಯರ ಮೇಲೆ ಹಾಕಿರಿ. ಹೀಗೆ ನೀವು ಐಗುಪ್ತ್ಯರನ್ನು ಸುಲುಕೊಳ್ಳುವಿರಿ ಅಂದನು.
ಇದಲ್ಲದೆ ಕರ್ತನು ಐಗುಪ್ತ್ಯರ ದೃಷ್ಟಿಯಲ್ಲಿ ಜನರಿಗೆ ದಯೆದೊರಕುವಂತೆ ಮಾಡಿದನು. ಆ ಮನುಷ್ಯನಾದ ಮೋಶೆಯು ಐಗುಪ್ತದೇಶದಲ್ಲಿಯೂ ಫರೋಹನ ಸೇವಕರ ದೃಷ್ಟಿಯಲ್ಲಿಯೂ ಜನರ ದೃಷ್ಟಿಯಲ್ಲಿಯೂ ಬಹು ದೊಡ್ಡವನಾಗಿದ್ದನು.
ಕರ್ತನು ಐಗುಪ್ತ್ಯರ ಎದುರಿನಲ್ಲಿ ಜನರ ಮೇಲೆ ಕೃಪೆ ತೋರಿಸಿದ್ದರಿಂದ ಅವರು ಕೇಳಿದ್ದನ್ನು ಕೊಟ್ಟರು. ಹೀಗೆ ಅವರು ಐಗುಪ್ತ್ಯರನ್ನು ಸುಲು ಕೊಂಡರು.
ಆತನ ವಾಕ್ಯವು ಬರುವ ವರೆಗೆ ಕರ್ತನ ಮಾತು ಅವನನ್ನು ಪುಟಕ್ಕೆ ಹಾಕಿತು.
ತನ್ನ ಪ್ರಧಾನರನ್ನು ಮನಸ್ಸು ಬಂದ ಹಾಗೆ ಕಟ್ಟುವದಕ್ಕೂ ತನ್ನ ಜ್ಞಾನ ವನ್ನು ಆಲೋಚನಾ ಕರ್ತರಿಗೆ ಕಲಿಸುವದಕ್ಕೂ ಇಟ್ಟನು.
ಅವರನ್ನು ಸೆರೆಹಿಡಿದವರ ಮುಂದೆ ಅವರು ಕರುಣೆ ಹೊಂದುವಂತೆ ಮಾಡಿದನು.
ಮನುಷ್ಯನ ಮಾರ್ಗಗಳು ಕರ್ತನನ್ನು ಮೆಚ್ಚಿಸಿದಾಗ ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನ ದಲ್ಲಿರುವಂತೆ ಆತನು ಮಾಡುತ್ತಾನೆ.
ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು.
ಆಗ ದೇವರು ದಾನಿಯೇಲನನ್ನು ಕಂಚುಕಿಯರ ಯಜಮಾನನ ದಯೆಯಲ್ಲಿಯೂ ಕರುಣೆ ಯಲ್ಲಿಯೂ ಸೇರಿಸಿದನು.
ನನ್ನ ದೇವರು ತನ್ನ ದೂತನನ್ನು ಕಳುಹಿಸಿ ನನಗೆ ಕೇಡು ಮಾಡದ ಹಾಗೆ ಸಿಂಹಗಳ ಬಾಯಿಗಳನ್ನು ಮುಚ್ಚಿ ಹಾಕಿದ್ದಾನೆ; ಆತನ ಮುಂದೆ ನಾನು ಯಥಾರ್ಥನೆಂದು ತಿಳಿದುಬಂದಿದ್ದೇನೆ. ಓ ಅರಸನೇ, ನಿನ್ನ ಮುಂದೆಯೂ ಸಹ ನಾನು ಯಾರಿಗೂ ಕೇಡುಮಾಡಲಿಲ್ಲ ಎಂದು ಹೇಳಿದನು.
ಮೂಲಪಿತೃಗಳು ಹೊಟ್ಟೇಕಿಚ್ಚಿನಿಂದ ಯೋಸೇಫ ನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಟರು. ಆದರೆ ದೇವರು ಅವನ ಸಂಗಡ ಇದ್ದು
ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
ಹೌದು, ನಮ್ಮನ್ನು ಪ್ರಿತಿಸಿದಾತನ ಮೂಲಕವಾಗಿ ನಾವು ಈ ಎಲ್ಲವುಗಳಲ್ಲಿ ಜಯಶಾಲಿ ಗಳಿಗಿಂತಲೂ ಹೆಚ್ಚಿನವರಾಗಿದ್ದೇವೆ.
ನೀವು ಒಳ್ಳೇದನ್ನು ಅನುಸರಿಸುವವರಾಗಿದ್ದರೆ ನಿಮಗೆ ಕೇಡು ಮಾಡುವವರು ಯಾರಿದ್ದಾರೆ?
ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವದಕ್ಕಿಂತ ಒಳ್ಳೇನಡತೆಯುಳ್ಳವರಾಗಿಯೇ ದೇವರ ಚಿತ್ತವಿದ್ದರೆ ಬಾಧೆಪಡುವದು ಲೇಸು.
ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಸಂತೋಷಪಡಿರಿ; ಯಾಕಂದರೆ ಮಹಿಮೆ ಯುಳ್ಳ ದೇವರ ಆತ್ಮನು ನಿಮ್ಮ ಮೇಲೆ ನೆಲೆಗೊಂಡಿ ದ್ದಾನಲ್ಲಾ. ಅವರ ವಿಷಯದಲ್ಲಿ ಆತನು ದೂಷಿಸ ಲ್ಪಡುತ್ತಾನೆ; ಆದರೆ ನಿಮ್ಮ ವಿಷಯದಲ್ಲಿ ಆತನು ಮಹಿಮೆ ಹೊಂದುತ್ತಾನೆ.