ಆತನು--ನೀನು ಮಾಡಿದ್ದೇನು? ನಿನ್ನ ಸಹೋದರನ ರಕ್ತದ ಸ್ವರವು ಭೂಮಿಯಿಂದ ನನ್ನನ್ನು ಕೂಗುತ್ತದೆ.
Cross references
ಕರ್ತನಾದ ದೇವರು ಸ್ತ್ರೀಗೆ--ಇದೇನು ನೀನು ಮಾಡಿದ್ದು ಎಂದು ಕೇಳಿದಾಗ ಸ್ತ್ರೀಯು--ಸರ್ಪವು ನನ್ನನ್ನು ವಂಚಿಸಿದ್ದರಿಂದ ನಾನು ತಿಂದೆನು ಅಂದಳು.
ಇದಲ್ಲದೆ ನಿಮ್ಮ ಪ್ರಾಣಗಳಿಗೋಸ್ಕರ ನಿಮ್ಮ ರಕ್ತವನ್ನು ನಾನು ಖಂಡಿತವಾಗಿಯೂ ವಿಚಾರಿಸುವೆನು.
ಕರ್ತನು--ಸೊದೋಮ್ ಗೊಮೋರಗಳ ಕೂಗು ದೊಡ್ಡದಾಗಿರುವದರಿಂದಲೂ ಅವರ ಪಾಪವು ಘೋರವಾಗಿರುವದರಿಂದಲೂ
ಆಗ ಕರ್ತನು--ಐಗುಪ್ತದಲ್ಲಿರುವ ನನ್ನ ಜನರ ವ್ಯಥೆಯನ್ನು ನಿಶ್ಚಯವಾಗಿಯೂ ಕಂಡಿದ್ದೇನೆ, ಬಿಟ್ಟೀ ಕೆಲಸಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.
ಹೀಗೆ ನೀವು ಇರುವ ದೇಶವನ್ನು ಅಪವಿತ್ರ ಮಾಡಬೇಡಿರಿ; ದೇಶವನ್ನು ಅಪವಿತ್ರಮಾಡು ವಂಥದ್ದು ರಕ್ತವೇ. ಅದರಲ್ಲಿ ಚೆಲ್ಲಲ್ಪಟ್ಟ ರಕ್ತದ ನಿಮಿತ್ತ ಅದನ್ನು ಚೆಲ್ಲಿದವನ ರಕ್ತದಿಂದಲ್ಲದೆ ದೇಶವು ಶುದ್ಧವಾ ಗುವದಿಲ್ಲ.ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ.
ಆಗ ಯೆಹೋಶುವನು ಆಕಾನನಿಗೆ--ನನ್ನ ಮಗನೇ, ನೀನು ಈಗ ಇಸ್ರಾ ಯೇಲಿನ ದೇವರಾದ ಕರ್ತನನ್ನು ಘನಪಡಿಸಿ ಆತನಿಗೆ ಅರಿಕೆಮಾಡು; ಏನು ಮಾಡಿದಿಯೋ ಅದನ್ನು ನನಗೆ ತಿಳಿಸು; ನನಗೆ ಮರೆಮಾಡಬೇಡ ಅಂದನು.
ಸಮುವೇಲನುನೀನೇನು ಮಾಡಿದಿ ಎಂದು ಸೌಲನನ್ನು ಕೇಳಿದಾಗ ಅವನು--ಜನರು ನನ್ನನ್ನು ಬಿಟ್ಟು ಚದರಿಹೋದದ್ದನ್ನೂ ನೇಮಿಸಿದ ದಿವಸಗಳ ಪ್ರಕಾರಕ್ಕೆ ನೀನು ಬಾರದ್ದನ್ನೂ ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಕೂಡಿಕೊಂಡಿರುವದನ್ನೂ
ನಾನೂ ನೀನೂ ಅವನ ತಂದೆಯಾದ ಅಹಾಬನ ಹಿಂದೆ ಕುದುರೆ ಏರಿಕೊಂಡು ಹೋಗುತ್ತಿರುವಾಗ ಕರ್ತನು ಈ ಭಾರವನ್ನು ಅವನ ಮೇಲೆ ಹೊರಿಸಿದನೆಂದು ಜ್ಞಾಪಕಮಾಡಿಕೋ. ಏನಂದರೆ--ನಾಬೋತನ ರಕ್ತವನ್ನೂ ಅವನ ಕುಮಾರರ ರಕ್ತವನ್ನೂ ನಿನ್ನೆ ನಾನು ನಿಶ್ಚಯವಾಗಿ ನೋಡಿದೆನಲ್ಲಾ ಎಂದು ಕರ್ತನು ಹೇಳುತ್ತಾನೆ. ಇದಲ್ಲದೆ--ಇದೇ ಹೊಲದಲ್ಲಿ ನಿನಗೆ ಮುಯ್ಯಿಗೆ ಮುಯ್ಯಿ ಕೊಡುವೆ ನೆಂದು ಕರ್ತನು ಹೇಳುತ್ತಾನೆ. ಆದದರಿಂದ ಕರ್ತನ ವಾಕ್ಯದ ಪ್ರಕಾರ ಅವನನ್ನು ಎತ್ತಿಕೊಂಡು ಆ ಹೊಲ ದಲ್ಲಿ ಹಾಕಿಬಿಡು ಅಂದನು.
ಅಲ್ಲಿ ಕರ್ತನ ಒಬ್ಬ ಪ್ರವಾದಿ ಇದ್ದನು; ಅವನ ಹೆಸರು ಓದೇದನು. ಅವನು ಸಮಾರ್ಯಕ್ಕೆ ಬಂದ ಸೈನ್ಯೆಕ್ಕೆದುರಾಗಿ ಹೊರಟುಹೋಗಿ ಅವರಿಗೆ--ಇಗೋ, ನಿಮ್ಮ ಪಿತೃಗಳ ಕರ್ತನಾದ ದೇವರು ಯೆಹೂದದ ಮೇಲೆ ಉರಿಗೊಂಡದ್ದರಿಂದ ಆತನು ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿರಲಾಗಿ, ನೀವು ಆಕಾಶಕ್ಕೆ ಮುಟ್ಟುವ ಉಗ್ರದಿಂದ ಅವರನ್ನು ಕೊಂದುಹಾಕಿದ್ದೀರಿ.
ಭೂಮಿಯೇ, ನನ್ನ ರಕ್ತವನ್ನು ಮುಚ್ಚಬೇಡ; ನನ್ನ ಕೂಗಿಗೆ ಸ್ಥಳ ಇಲ್ಲದೆ ಇರಲಿ.
ಪಟ್ಟಣದೊಳಗಿಂದ ಮನುಷ್ಯರು ನರಳುತ್ತಾರೆ; ಗಾಯಪಟ್ಟವರ ಪ್ರಾಣವು ಕೂಗುತ್ತದೆ; ಆದರೂ ದೇವರು ತಪ್ಪುಹೊರಿಸುವದಿಲ್ಲ.
ನನ್ನ ಭೂಮಿಯು ನನಗೆ ವಿರೋಧವಾಗಿ ಕೂಗಿದರೆ, ಅದರ ಸಾಲುಗಳು ಕೂಡ ದೂರಿದರೆ,
ಆತನು ರಕ್ತಾಪರಾಧವನ್ನು ವಿಚಾರಿಸುವಾಗ ಅವರನ್ನು ಜ್ಞಾಪಕಮಾಡಿಕೊಳ್ಳುವನು; ಆತನು ದೀನರ ಕೂಗನ್ನು ಮರೆತುಬಿಡನು.
ಓ ಕರ್ತನೇ, ನನ್ನ ಮೇಲೆ ಕರುಣೆತೋರಿಸು; ನನ್ನನ್ನು ಹಗೆಮಾಡುವವರಿಂದ ನನಗೆ ಬಂದ ಶ್ರಮೆ ಯನ್ನು ನೋಡು. ಮರಣದ ಬಾಗಲುಗಳಿಂದ ನನ್ನನ್ನು ಎತ್ತುವಾತನೇ,
ಇವುಗಳನ್ನು ನೀನು ಮಾಡಿದಾಗ್ಯೂ ನಾನು ಮೌನವಾಗಿದ್ದೆನು; ಆದದರಿಂದ ನಾನೂ ಸಹ ನಿನ್ನ ಹಾಗೆ ಒಬ್ಬನೆಂದು ನೀನು ನೆನಸಿದಿ; ಆದರೆ ನಾನು ನಿನ್ನನ್ನು ಗದರಿಸಿ ನಿನ್ನ ಕಣ್ಣುಗಳ ಮುಂದೆ ಈ ಕೃತ್ಯಗಳನ್ನು ಕ್ರಮವಾಗಿಡುವೆನು.
ಮೋಸದಿಂದಲೂ ಬಲಾತ್ಕಾರ ದಿಂದಲೂ ಅವರ ಪ್ರಾಣವನ್ನು ಬಿಡುಗಡೆ ಮಾಡು ವನು; ಅವರ ರಕ್ತವು ಆತನ ದೃಷ್ಟಿಯಲ್ಲಿ ಅಮೂಲ್ಯ ವಾಗಿರುವದು.
ಸೈನ್ಯಗಳ ಕರ್ತನ ದ್ರಾಕ್ಷೇ ತೋಟವು ಇಸ್ರಾಯೇಲಿನ ಮನೆಯೇ, ಯೆಹೂದದ ಜನವೋ, ಆತನ ಇಷ್ಟದ ಗಿಡವೇ. ಆತನು ನ್ಯಾಯವನ್ನು ನಿರೀ ಕ್ಷಿಸಲು, ಇಗೋ, ಹಿಂಸೆಯೇ; ನೀತಿಯನ್ನು ನಿರೀಕ್ಷಿಸಲು ಗೋಳಾಟವೇ ಸಿಕ್ಕೀತು.
ಆಗ ಪೇತ್ರನು--ಅನನೀಯನೇ, ಪವಿತ್ರಾತ್ಮನಿಗೆ ಸುಳ್ಳು ಹೇಳಿ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಡುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿ ಕೊಂಡದ್ದು ಯಾಕೆ?
ಆಗ ಪೇತ್ರನು ಆಕೆಗೆ--ಕರ್ತನ ಆತ್ಮನನ್ನು ಶೋಧಿಸುವದಕ್ಕಾಗಿ ನೀವು ಹೇಗೆ ಒಟ್ಟಾಗಿ ಸಮ್ಮತಿಸಿ ದ್ದೀರಿ? ಇಗೋ, ನಿನ್ನ ಗಂಡನನ್ನು ಹೂಣಿಟ್ಟವರ ಪಾದಗಳು ಬಾಗಿಲಲ್ಲಿ ಇವೆ, ಅವರು ನಿನ್ನನ್ನೂ ಹೊತ್ತು ಕೊಂಡು ಹೋಗುವರು ಅಂದನು.
ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞ ಕ್ಕಿಂತ ಅತಿ ಶ್ರೇಷ್ಠವಾದ ಯಜ್ಞವನ್ನು ದೇವರಿಗೆ ಸಮ ರ್ಪಿಸಿದನು. ಅದರ ಮೂಲಕ ಅವನು ನೀತಿವಂತ ನೆಂದು ಸಾಕ್ಷಿ ಹೊಂದಿದನು: ದೇವರು ಅವನ ಕಾಣಿಕೆಗಳ ವಿಷಯವಾಗಿ ಸಾಕ್ಷಿಕೊಟ್ಟನು; ಅವನು ಸತ್ತವನಾಗಿದ್ದರೂ ಅದರಿಂದ ಇನ್ನೂ ಮಾತನಾಡುತ್ತಾನೆ.
ಹೊಸಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.
ಇಗೋ, ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿ ದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ; ಕೊಯಿದವರ ಕೂಗು ಸೈನ್ಯಗಳ ಕರ್ತನ ಕಿವಿಗಳಲ್ಲಿ ಬಿದ್ದಿದೆ.
ಆತನು ಐದನೆಯ ಮುದ್ರೆಯನ್ನು ತೆರೆದಾಗ ದೇವರವಾಕ್ಯದ ನಿಮಿತ್ತವಾಗಿಯೂ ತಾವು ಹೊಂದಿದ್ದ ಸಾಕ್ಷಿಯ ನಿಮಿತ್ತವಾಗಿಯೂ ಹತವಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವದನ್ನು ನಾನು ಕಂಡೆನು.