ತರುವಾಯ ಆಕೆಯು ಅವನ ಸಹೋದರನಾದ ಹೇಬೆಲನನ್ನು ಹೆತ್ತಳು. ಹೇಬೆಲನು ಕುರಿ ಕಾಯುವವನಾ ದನು, ಕಾಯಿನನು ವ್ಯವಸಾಯಮಾಡುವವನಾದನು.
Cross references
ಆದದರಿಂದ ಕರ್ತನಾದ ದೇವರು ಅವನನ್ನು ಯಾವದರಿಂದ ತೆಗೆದನೋ ಆ ಭೂಮಿಯನ್ನು ವ್ಯವಸಾಯಮಾಡುವದಕ್ಕೆ ಏದೆನ್ ತೋಟದಿಂದ ಹೊರಡಿಸಿಬಿಟ್ಟನು.ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಏದೆನ್ ತೋಟದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಕತ್ತಿಯನ್ನೂ ಇರಿಸಿದನು.
ಇದಲ್ಲದೆ ಆದಾಮನು ತಿರಿಗಿ ತನ್ನ ಹೆಂಡತಿಯನ್ನು ಕೂಡಿದ್ದರಿಂದ ಅವಳು ಮಗನನ್ನು ಹೆತ್ತು ಅವನಿಗೆ ಸೇತನೆಂದು ಹೆಸರಿಟ್ಟಳು. ಯಾಕಂದರೆ--ಕಾಯಿನನು ಕೊಂದುಹಾಕಿದ ಹೇಬೆಲನಿಗೆ ಬದಲಾಗಿ ದೇವರು ನನಗೆ ಬೇರೆ ಸಂತತಿಯನ್ನು ಕೊಟ್ಟನೆಂದು ಆಕೆಯು ಹೇಳಿದಳು.ಸೇತನಿಗೂ ಒಬ್ಬ ಮಗನು ಹುಟ್ಟಿದನು; ಅವನಿಗೆ ಎನೋಷ್ ಎಂದು ಹೆಸರಿಟ್ಟನು; ತರುವಾಯ ಮನುಷ್ಯರು ಕರ್ತನ ಹೆಸರನ್ನು ಕರೆದು ಆರಾಧಿಸುವದಕ್ಕೆ ಆರಂಭಿಸಿದರು.
ನೋಹನು ವ್ಯವಸಾಯಗಾರನಾಗುವದಕ್ಕೆ ಪ್ರಾರಂಭಿಸಿ ಒಂದು ದ್ರಾಕ್ಷೇತೋಟವನ್ನು ಮಾಡಿದನು.
ಅದಕ್ಕೆ ಯಾಕೋಬನು ಅವನಿಗೆ--ನಾನು ನಿನಗೆ ಮಾಡಿದ ಸೇವೆಯನ್ನೂ ನಿನ್ನ ಮಂದೆಯು ನನ್ನ ಬಳಿಯಲ್ಲಿ ಹೇಗೆ ಇತ್ತೆಂಬದ್ದನ್ನೂ ನೀನು ಬಲ್ಲೆ.
ಆದದರಿಂದ ಇಸ್ರಾಯೇಲನು ಯೋಸೇಫನಿಗೆ--ನಿನ್ನ ಸಹೋದ ರರು ಶೆಕೆಮಿನಲ್ಲಿ ಮಂದೆಯನ್ನು ಮೇಯಿಸುತ್ತಾರಲ್ಲಾ; ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ ಹೋಗು ಅಂದನು. ಅದಕ್ಕೆ ಅವನು--ನಾನು ಇಲ್ಲಿದ್ದೇನೆ ಅಂದನು.
ಆದರೆ ಆ ಮನುಷ್ಯರು ಕುರಿಕಾಯುವವರು, ಅವರಿಗೆ ಮಂದೆಗಳು ಇವೆ; ತಮ್ಮ ಕುರಿ ದನಗಳನ್ನೂ ತಮಗಿದ್ದದ್ದೆಲ್ಲವನ್ನೂ ತಕ್ಕೊಂಡು ಬಂದಿದ್ದಾರೆ ಎಂದು ಹೇಳುವೆನು.
ಫರೋಹನು ಯೋಸೇಫನ ಸಹೋದರರಿಗೆ--ನಿಮ್ಮ ಕೆಲಸವೇನು ಎಂದು ಕೇಳಿದಾಗ ಅವರು ಫರೋಹನಿಗೆ--ನಿನ್ನ ದಾಸರಾದ ನಾವೂ ನಮ್ಮ ತಂದೆಗಳೂ ಕುರಿಕಾಯುವವರಾಗಿದ್ದೇವೆ ಅಂದರು.
ಮೋಶೆಯು ತನ್ನ ಮಾವನಾಗಿರುವ ಮಿದ್ಯಾನಿನ ವೈದಿಕನಾದ ಇತ್ರೋವನ ಮಂದೆಯನ್ನು ಮೇಯಿಸುತ್ತಿರಲಾಗಿ ಅರಣ್ಯದ ಹಿಂಭಾ ಗಕ್ಕೆ ನಡಿಸಿಕೊಂಡುಹೋಗಿ ಹೋರೇಬ್ ಎಂಬ ದೇವರ ಬೆಟ್ಟಕ್ಕೆ ಬಂದನು.
ಇದಲ್ಲದೆ ತನ್ನ ಸೇವಕನಾದ ದಾವೀದನನ್ನು ಆದುಕೊಂಡು, ಕುರಿ ಹಟ್ಟಿಗಳಿಂದ ಅವನನ್ನು ತೆಗೆದು,
ಇಗೋ, ಮಕ್ಕಳು ಕರ್ತನಿಂದ ಸಿಕ್ಕಿದ ಸ್ವಾಸ್ಥ್ಯವಾಗಿ ದ್ದಾರೆ; ಗರ್ಭಫಲವು ಆತನ ಬಹುಮಾನವಾಗಿದೆ.
ನಾನು ಕುರಿಯ ಹಿಂಡನ್ನು ಹಿಂಬಾಲಿಸುವ ವೇಳೆ ಯಲ್ಲಿ ಕರ್ತನು ನನ್ನನ್ನು ಕರೆದು ಹೇಳಿದ್ದೇನಂದರೆ--ನೀನು ಹೋಗಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಪ್ರವಾದಿಸು.
ಹೇಬೆಲನ ರಕ್ತ ಮೊದಲುಗೊಂಡು ಯಜ್ಞವೇದಿಗೂ ದೇವಾಲಯಕ್ಕೂ ಮಧ್ಯದಲ್ಲಿ ಹತವಾದ ಜಕರೀಯನ ರಕ್ತದವರೆಗೂ ಈ ಸಂತತಿಯು ಉತ್ತರಕೊಡಬೇಕು; ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
ನೀವು ನಿಮ್ಮ ತಂದೆಯಾದ ಸೈತಾನನಿಗೆ ಸಂಬಂಧಪಟ್ಟವರಾಗಿದ್ದೀರಿ. ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡುವದಕ್ಕೆ ಇಚ್ಛೈಸುತ್ತೀರಿ; ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯ ದಲ್ಲಿ ನಿಲ್ಲಲಿಲ್ಲ. ಯಾಕಂದರೆ ಅವನಲ್ಲಿ ಸತ್ಯವೇ ಇಲ್ಲ; ಅವನು ಸುಳ್ಳಾಡುವಾಗ ತನ್ನ ಸ್ವಂತವಾದವುಗಳಿಂದ ಮಾ
ಇವರು ದೇವರ ಮಕ್ಕಳೆಂಬದೂ ಅವರು ಸೈತಾನನ ಮಕ್ಕಳೆಂಬದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರಿಗೆ ಸಂಬಂಧಪಟ್ಟವನಲ್ಲ.
ಕೆಡುಕ ನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನ ನಂತೆ ಅಲ್ಲ. ಯಾವ ಕಾರಣದಿಂದ ಅವನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದದರಿಂದಲೇ.
ಯಾರಾದರೂ ತನ್ನ ಸಹೋದರನನ್ನು ದ್ವೇಷಿಸುವ ವನು ಕೊಲೆಗಾರನಾಗಿದ್ದಾನೆ. ಯಾವ ಕೊಲೆಗಾರ ನಲ್ಲಿಯೂ ನಿತ್ಯಜೀವವು ಇರುವದಿಲ್ಲವೆಂಬದು ನಿಮಗೆ ಗೊತ್ತಾಗಿದೆ.