ನೀನು ಒಳ್ಳೆಯದನ್ನು ಮಾಡಿದರೆ ಅಂಗೀಕರಿಸಲ್ಪಡುವದಿಲ್ಲವೇ? ನೀನು ಒಳ್ಳೆಯದನ್ನು ಮಾಡದೆ ಹೋದರೆ ಪಾಪವು ಬಾಗಲಲ್ಲಿ ಹೊಂಚಿ ಕೊಂಡಿರುವದು; ನಿನ್ನ ಮೇಲೆ ಅದಕ್ಕೆ ಆಶೆ ಇರುವದು, ನೀನು ಅದನ್ನು ಆಳಬೇಕು ಎಂದು ಹೇಳಿದನು.
Cross references
ಸ್ತ್ರೀಗೆ ಆತನು--ನಾನು ನಿನ್ನ ದುಃಖವನ್ನೂ ಗರ್ಭವೇದನೆಯನ್ನೂ ಅಧಿಕವಾಗಿ ಹೆಚ್ಚಿಸುವೆನು, ನೀನು ಕಷ್ಟದಿಂದ ಮಕ್ಕಳನ್ನು ಹೆರುವಿ, ನಿನ್ನ ಗಂಡನ ಮೇಲೆ ನಿನಗೆ ಆಶೆ ಇರುವದು; ಅವನು ನಿನ್ನನ್ನು ಆಳುವನು ಅಂದನು.
ಆಗ ಕಾಯಿನನು ತನ್ನ ಸಹೋದರನಾದ ಹೇಬೆಲನ ಸಂಗಡ ಮಾತನಾಡಿದನು; ತರುವಾಯ ಆದದ್ದೇ ನಂದರೆ, ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ಸಹೋದರನಾದ ಹೇಬೆಲನಿಗೆ ವಿರುದ್ಧವಾಗಿ ಎದ್ದು ಅವನನ್ನು ಕೊಂದುಹಾಕಿದನು.
ಆತನು ಅವನಿಗೆ--ಈ ವಿಷಯದಲ್ಲಿಯೂ ನಾನು ನಿನ್ನ ಬೇಡಿಕೆಯನ್ನು ಅಂಗೀಕರಿಸಿದ್ದೇನೆ, ನೋಡು; ನೀನು ಹೇಳಿದ ಆ ಪಟ್ಟಣವನ್ನು ಕೆಡವಿಹಾಕುವದಿಲ್ಲ.
ಆದರೆ ನೀವು ಈ ಪ್ರಕಾರ ಮಾಡದಿದ್ದರೆ ಇಗೋ, ಕರ್ತನಿಗೆ ವಿರೋಧವಾಗಿ ಪಾಪಮಾಡಿದವರಾಗುವಿರಿ; ನಿಮ್ಮ ಪಾಪ ನಿಮ್ಮನ್ನು ಹಿಡಿದುಕೊಳ್ಳುವದೆಂದು ತಿಳುಕೊಳ್ಳಿರಿ.
ಅರೌನನು ಇವುಗಳನ್ನೆಲ್ಲಾ ಅರಸನ ಸೇವಕನಾದ ನಾನು ಅರಸನಿಗೆ ಕೊಟ್ಟೆನು. ಇದಲ್ಲದೆ ಅರೌನನು ಅರಸನಿಗೆ--ನಿನ್ನ ದೇವರಾದ ಕರ್ತನು ನಿನ್ನನ್ನು ಅಂಗೀಕರಿಸಲಿ ಅಂದನು.
ಅವನು ಅಹಾಬನ ಮಗನಾದ ಯೋರಾಮನ ಸಂಗಡ ಗಿಲ್ಯಾದಿನಲ್ಲಿರುವ ರಾಮೋ ತಿಗೆ ಅರಾಮ್ಯರ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಲು ಹೋದನು. ಆದರೆ ಅರಾಮ್ಯರು ಯೋರಾಮನನ್ನು ಹೊಡೆದರು.ಅರಸನಾದ ಯೋರಾಮನು ಅರಾಮ್ಯರ ದೇಶದ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಿದಾಗ ರಾಮೋ ತಿನಲ್ಲಿ ಅರಾಮ್ಯರು ತನ್ನನ್ನು ಹೊಡೆದ ಗಾಯಗಳನ್ನು ಗುಣಮಾಡಿಕೊಳ್ಳುವದಕ್ಕೆ ಇಜ್ರೇಲಿಗೆ ತಿರುಗಿ ಹೋದನು. ಆಗ ಅಹಾಬನ ಮಗನಾದ ಯೋರಾ ಮನು ಇಜ್ರೇಲಿನಲ್ಲಿ ಅಸ್ವಸ್ಥನಾಗಿರುವದರಿಂದ ಯೆಹೂದದ ಅರಸನಾಗಿರುವ ಯೆಹೋರಾಮನ ಮಗನಾದ ಅಹಜ್ಯನು ಅವನನ್ನು ನೋಡಲು ಅಲ್ಲಿಗೆ ಹೋದನು.
ನಾನು ನನ್ನ ಯೌವನದ ದಿವಸಗಳಲ್ಲಿದ್ದಾಗ ದೇವರ ಮರ್ಮವು ನನ್ನ ಗುಡಾರದ ಮೇಲೆ ಇತ್ತು.
ಹಾಗಾದರೆ ಈಗ ಏಳು ಎತ್ತುಗಳೂ ಏಳು ಹೋತಗಳೂ ನಿಮ ಗೋಸ್ಕರ ತಕ್ಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಬನ್ನಿರಿ; ಅವುಗಳನ್ನು ನಿಮಗೋಸ್ಕರ ದಹನ ಬಲಿಯಾಗಿ ಅರ್ಪಿಸಿರಿ; ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥನೆ ಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ಮಾಡದ ಹಾಗೆ ಅವನ ಪ್ರಾರ್ಥನೆಯನ್ನು ಅಂಗೀಕರಿಸುವೆನು. ಯಾಕಂ ದರೆ ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾ ಡಲಿಲ್ಲ.
ನನ್ನ ನ್ಯಾಯತೀರ್ಪಿನಲ್ಲಿ ನೀತಿವಂತರನ್ನು ಕೆಡವುವಂತೆ ದುಷ್ಟ ರನ್ನು ಸ್ವೀಕರಿಸುವದು ಯುಕ್ತವಲ್ಲ.
ದುಷ್ಟರ ಯಜ್ಞವು ಅಸಹ್ಯ; ಹೀಗಾದರೆ ದುರ್ಬುದ್ಧಿ ಯಿಂದ ಅದನ್ನು ಅರ್ಪಿಸಿದರೆ ಇನ್ನೂ ಎಷ್ಟೋ ಅಸಹ್ಯ ಕರವಾಗಿದೆ.
ಪಾಪಿಯು ನೂರು ಸಾರಿ ಕೆಟ್ಟದ್ದನ್ನು ಮಾಡಿ ದಿವಸಗಳನ್ನು ಹೆಚ್ಚಿಸಿದರೂ ದೇವರಿಗೆ ಭಯ ಪಟ್ಟು ಆತನಲ್ಲಿ ಭಯಪಡುವವರಿಗೆ ಒಳ್ಳೇದಾಗುವ ದೆಂದು ನಾನು ನಿಶ್ಚಯವಾಗಿಯೂ ಬಲ್ಲೆನು.
ನೀತಿವಂತನಿಗೆ ನೀವು--ಅವನಿಗೆ ಒಳ್ಳೇದಿರಲಿ ಎಂದು ಹೇಳಿರಿ; ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು.
ಆದದರಿಂದ ಕರ್ತ ನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಈ ಸ್ಥಳದ ಮೇಲೆಯೂ ಮನುಷ್ಯರ ಮೇಲೆಯೂ ಮೃಗಗಳ ಮೇಲೆಯೂ ಹೊಲದ ಮರಗಳ ಮೇಲೆಯೂ ಭೂಮಿಯ ಫಲದ ಮೇಲೆಯೂ ನನ್ನ ಕೋಪವೂ ಮತ್ತು ಉಗ್ರತೆಯೂ ಹೊಯ್ಯಲ್ಪಡುವದು; ಅದು ಉರಿಯುವದು ಆರಿಹೋಗುವದಿಲ್ಲ.
ಇದ ಲ್ಲದೆ ನೀವು ಕುರುಡಾದದ್ದನ್ನು ಬಲಿಗಾಗಿ ಅರ್ಪಿಸಿ ದರೆ ಅದು ಕೆಟ್ಟದ್ದಲ್ಲವೋ? ಕುಂಟಾದದ್ದನ್ನೂ ರೋಗ ವುಳ್ಳದ್ದನ್ನೂ ಅರ್ಪಿಸಿದರೆ ಅದು ಕೆಟ್ಟದ್ದಲ್ಲವೋ? ಸೈನ್ಯ ಗಳ ಕರ್ತನು--ಅದನ್ನು ನಿನ್ನ ದೊರೆಗೆ ಅರ್ಪಿಸು, ಅವನು ನಿನಗೆ ಮೆಚ್ಚುವನೋ? ಇಲ್ಲವೆ ನಿನಗೆ ಮುಖ ದಾಕ್ಷಿಣ್ಯ ತೋರಿಸುವನೋ?
ಉಚಿತವಾಗಿ ಬಾಗಲು ಗಳನ್ನಾದರೂ ಮುಚ್ಚವವನೂ ಇಲ್ಲವೆ ನನ್ನ ಬಲಿಪೀಠದಲ್ಲಿ ಉಚಿತವಾಗಿ ಬೆಂಕಿ ಹಚ್ಚುವವನೂ ನಿಮ್ಮಲ್ಲಿ ಯಾರು ಎಂದು ಹೇಳುತ್ತಾನೆ. ಸೈನ್ಯಗಳ ಕರ್ತನು--ನಿಮ್ಮಲ್ಲಿ ನನಗೆ ಇಷ್ಟವಿಲ್ಲ ಮತ್ತು ನಿಮ್ಮ ಕೈಯಿಂದ ನಾನು ಕಾಣಿಕೆಯನ್ನು ಅಂಗೀಕರಿಸುವದಿಲ್ಲ.
ಇದಲ್ಲದೆ ನೀವು--ಇಗೋ, ಎಂಥಾ ಪ್ರಯಾಸ ಎಂದು ಹೇಳಿ ಅದರ ಮೇಲೆ ಊದಿಬಿಟ್ಟಿರಿ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಹರಿಯಲ್ಪಟ್ಟದ್ದನ್ನೂ ಕುಂಟಾದದ್ದನ್ನೂ ರೋಗವುಳ್ಳದ್ದನ್ನೂ ಕಾಣಿಕೆಯಾಗಿ ತಂದಿರಿ; ಇಂಥದ್ದನ್ನು ನಾನು ನಿಮ್ಮ ಕೈಯಿಂದ ಅಂಗೀ ಕರಿಸಬಹುದೋ ಎಂದು ಕರ್ತನು ಹೇಳುತ್ತಾನೆ.ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಆದರೆ ಪ್ರತಿ ಯೊಂದು ಜನಾಂಗದವರಲ್ಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವನು ಆತನಿಗೆ ಮೆಚ್ಚಿಕೆಯಾ ಗಿದ್ದಾನೆ.
ದೇವರು ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿ ಗನುಸಾರವಾಗಿ ಪ್ರತಿಫಲ ಕೊಡುವನು.
ನೀವು ಯಾರಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ಒಪ್ಪಿಸಿಕೊಡುತ್ತಿರೋ ಅವರಿಗೆ ದಾಸರಾಗಿಯೇ ವಿಧೇ ಯರಾಗಿರುವಿರೆಂಬದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ; ಇಲ್ಲವೆ ವಿಧೇಯತ್ವಕ್ಕೆ ದಾಸ ರಾದರೆ ನೀತಿಯೇ.
ಆದರೆ ಪಾಪವು ಈ ಆಜ್ಞೆಯಿಂದ ಅನುಕೂಲ ಹೊಂದಿ ಸಕಲ ವಿಧವಾದ ದುರಾಶೆಯನ್ನು ನನ್ನಲ್ಲಿ ಹುಟ್ಟಿಸಿತು. ನ್ಯಾಯಪ್ರಮಾಣವು ಇಲ್ಲದಿರು ವಾಗ ಪಾಪವು ಸತ್ತದ್ದಾಗಿದೆ.
ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ.
ಕ್ರಿಸ್ತನ ಸೇವೆಯನ್ನು ಮಾಡುವವನು ಈ ವಿಷಯಗಳಲ್ಲಿ ದೇವರಿಗೆ ಮೆಚ್ಚಿಕೆಯಾದವನಾಗಿಯೂ ಮನುಷ್ಯರಿಗೆ ಸಂಭಾವಿತನಾಗಿಯೂ ಇರುವನಷ್ಟೆ.
ಹೀಗೆ ಅನ್ಯಜನಗಳೆಂಬ ಅರ್ಪಣೆಯು ಪವಿತ್ರಾತ್ಮನ ಮೂಲಕ ಶುದ್ಧೀಕರಿಸಲ್ಪಟ್ಟು ಆತನಿಂದ ಅಂಗೀಕಾರವಾಗುವಂತೆ ನಾನು ದೇವರ ಸುವಾರ್ತಾ ಸೇವೆಯನ್ನು ನಡಿಸುತ್ತಾ ಅನ್ಯಜನರಿಗೆ ಯೇಸು ಕ್ರಿಸ್ತನ ಸೇವಕನಾಗಿರುವೆನು.
ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ.
ಆದರೆ ಯಾವ ವಿಧವೆಗಾದರೂ ಮಕ್ಕಳಾಗಲಿ, ಮೊಮ್ಮಕ್ಕಳಾ ಗಲಿ, ಇದ್ದರೆ ಅವರೇ ಮೊದಲು ತಮ್ಮ ಮನೆಯಲ್ಲಿ ಭಕ್ತಿ ತೋರಿಸುವದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪ ಕಾರ ಮಾಡುವದಕ್ಕೂ ಕಲಿತುಕೊಳ್ಳಲಿ; ಇದು ದೇವರ ದೃಷ್ಟಿಯಲ್ಲಿ ಯೋಗ್ಯವಾದದ್ದೂ ಮೆಚ್ಚಿಕೆಯಾದದ್ದೂ ಆಗಿದೆ.
ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞ ಕ್ಕಿಂತ ಅತಿ ಶ್ರೇಷ್ಠವಾದ ಯಜ್ಞವನ್ನು ದೇವರಿಗೆ ಸಮ ರ್ಪಿಸಿದನು. ಅದರ ಮೂಲಕ ಅವನು ನೀತಿವಂತ ನೆಂದು ಸಾಕ್ಷಿ ಹೊಂದಿದನು: ದೇವರು ಅವನ ಕಾಣಿಕೆಗಳ ವಿಷಯವಾಗಿ ಸಾಕ್ಷಿಕೊಟ್ಟನು; ಅವನು ಸತ್ತವನಾಗಿದ್ದರೂ ಅದರಿಂದ ಇನ್ನೂ ಮಾತನಾಡುತ್ತಾನೆ.
ಆಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ; ಪಾಪವು ಸಂಪೂರ್ಣವಾದ ಮೇಲೆ ಮರಣ ವನ್ನು ಹಡೆಯುತ್ತದೆ.
ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.