ಆಗ ಕಾಯಿನನು ತನ್ನ ಸಹೋದರನಾದ ಹೇಬೆಲನ ಸಂಗಡ ಮಾತನಾಡಿದನು; ತರುವಾಯ ಆದದ್ದೇ ನಂದರೆ, ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ಸಹೋದರನಾದ ಹೇಬೆಲನಿಗೆ ವಿರುದ್ಧವಾಗಿ ಎದ್ದು ಅವನನ್ನು ಕೊಂದುಹಾಕಿದನು.
Cross references
ಅಬ್ನೇರನು ಹೆಬ್ರೋನಿಗೆ ತಿರಿಗಿ ಬಂದ ತರುವಾಯ ಯೋವಾಬನು ಬಾಗಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತ ನಾಡಿ ಅವನನ್ನು ಒಂದು ಕಡೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ಇರಿದು ಕೊಂದುಹಾಕಿದನು.
ಆಗ ಅಬ್ಷಾಲೋಮನು--ಹಾಗಾ ದರೆ ನನ್ನ ಸಹೋದರನಾದ ಅಮ್ನೋನನು ನಮ್ಮ ಸಂಗಡ ಬರಲಿ ಅಂದನು.
ಆದರೆ ನಿನ್ನ ಸೇವಕಳಿಗೆ ಇಬ್ಬರು ಕುಮಾರರಿದ್ದರು; ಅವರಿಬ್ಬರೂ ಹೊಲದಲ್ಲಿ ಹೊಡೆದಾಡಿದರು; ಅವ ರನ್ನು ಬಿಡಿಸುವವರು ಯಾರೂ ಇಲ್ಲದ್ದರಿಂದ ಒಬ್ಬನು ಮತ್ತೊಬ್ಬನನ್ನು ಹೊಡೆದು ಕೊಂದುಹಾಕಿದನು.
ಆಗ ಯೋವಾಬನು ಅಮಾಸನಿಗೆ--ನನ್ನ ಸಹೋದರನೇ, ಕ್ಷೇಮವೋ ಅಂದನು. ಯೋವಾಬನು ಮುದ್ದಿಡುವುದಕ್ಕೋಸ್ಕರ ತನ್ನ ಬಲಗೈಯಿಂದ ಅವನ ಗಡ್ಡವನ್ನು ಹಿಡಿದನು. ಆದರೆ ಅಮಾಸನು ಯೋವಾಬನ ಕೈಯಲ್ಲಿದ್ದ ಕತ್ತಿ ಯನ್ನು ಗಮನಿಸದಿದ್ದಾಗ ಯೋವಾಬನು ಅವನನ್ನು ಕರುಳುಗಳು ಹೊರಬರುವ ಹಾಗೆ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ತಿವಿದನು.
ಸನ್ಬಲ್ಲಟನೂ ಗೆಷೆಮನೂ ನನಗೆ--ಓನೋನು ಎಂಬ ಬೈಲಿನಲ್ಲಿರುವ ಗ್ರಾಮಗಳಲ್ಲಿ ಸಂಧಿಸಿಕೊಳ್ಳೋಣ ಬಾ ಅಂದರು. ಆದರೆ ಅವರು ನನಗೆ ಕೇಡುಮಾಡಲು ನೆನಸಿಕೊಂಡಿದ್ದರು.
ನಿನ್ನ ಮುಖವನ್ನು ದೋಷವಿಲ್ಲದೆ ಎತ್ತುವಿ; ಹೌದು, ಸ್ಥಿರ ವಾಗಿದ್ದು ಹೆದರದೆ ಇರುವಿ.
ಕರ್ತನ ಪರ್ವತವನ್ನು ಹತ್ತುವವನು ಯಾರು? ಇಲ್ಲವೆ ಆತನ ಪರಿಶುದ್ಧ ಸ್ಥಳದಲ್ಲಿ ನಿಲ್ಲುವವನು ಯಾರು?
ಅವನ ಬಾಯಿಯ ಮಾತುಗಳು ಅಕ್ರಮವೂ ಮೋಸವೂ ಆಗಿವೆ; ಬುದ್ಧಿ ಯಿಂದ ನಡೆಯುವದನ್ನೂ ಒಳ್ಳೇದು ಮಾಡುವದನ್ನೂ ಬಿಟ್ಟಿದ್ದಾನೆ.
ಅವನ ಬಾಯಿ ಮಾತುಗಳು ಬೆಣ್ಣೆಗಿಂತ ನುಣುಪಾಗಿವೆ; ಅವನ ಹೃದ ಯವೋ ಕಲಹಮಯವೇ. ಅವನ ಮಾತುಗಳು ಎಣ್ಣೆ ಗಿಂತ ನಯವಾಗಿವೆ; ಆದರೆ ಅವು ಬಿಚ್ಚು ಕತ್ತಿಗಳಾಗಿವೆ.
ಓ ದೇವರೇ, ನಿಶ್ಚಯವಾಗಿ ನೀನು ದುಷ್ಟನನ್ನು ಕೊಂದುಹಾಕುವಿ; ರಕ್ತ ಪ್ರಿಯರೇ, ನನ್ನಿಂದ ತೊಲ ಗಿರಿ.
ಹಗೆಮಾಡುವವನು ತನ್ನ ತುಟಿಗಳಿಂದ ಮೋಸವನ್ನು ನಟಿಸುತ್ತಾನೆ, ತನ್ನ ಅಂತರಂಗದಲ್ಲಿ ಮೋಸವನ್ನು ಇಟ್ಟುಕೊಳ್ಳುತ್ತಾನೆ.
ಯಾವನ ಹಗೆ ತನವು ಮೋಸದಿಂದ ಮುಚ್ಚಲ್ಪಟ್ಟಿದೆಯೋ ಅವನ ಕೆಟ್ಟತನವು ಸಭೆಯಲ್ಲಿ ಬಯಲಾಗುವದು.
ಮಗನು ತನ್ನ ತಂದೆಯನ್ನು ಅವಮಾನ ಮಾಡುತ್ತಾನೆ; ಮಗಳು ತನ್ನ ತಾಯಿಗೂ ಸೊಸೆಯು ತನ್ನ ಅತ್ತೆಗೂ ವಿರೋಧವಾಗಿ ಏಳುತ್ತಾರೆ; ಒಬ್ಬ ಮನುಷ್ಯನಿಗೆ ಸ್ವಂತ ಮನೆಯವರೇ ಶತ್ರುಗಳು.
ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು.
ಹೇಬೆಲನ ರಕ್ತ ಮೊದಲುಗೊಂಡು ಯಜ್ಞವೇದಿಗೂ ದೇವಾಲಯಕ್ಕೂ ಮಧ್ಯದಲ್ಲಿ ಹತವಾದ ಜಕರೀಯನ ರಕ್ತದವರೆಗೂ ಈ ಸಂತತಿಯು ಉತ್ತರಕೊಡಬೇಕು; ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
ಆದರೆ ಯೇಸು ಅವನಿಗೆ-- ಯೂದನೇ, ಮುದ್ದಿನಿಂದ ಮನುಷ್ಯಕುಮಾರನನ್ನು ಹಿಡುಕೊಡುತ್ತೀಯೋ ಅಂದನು.
ಹೊಸಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.
ಕೆಡುಕ ನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನ ನಂತೆ ಅಲ್ಲ. ಯಾವ ಕಾರಣದಿಂದ ಅವನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದದರಿಂದಲೇ.
ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ!