Cross references
ಆಗ ದೇವರು ರಾತ್ರಿ ಕನಸಿನಲ್ಲಿ ಅಬೀಮೆಲೆಕನ ಬಳಿಗೆ ಬಂದು--ಇಗೋ, ನೀನು ತಕ್ಕೊಂಡ ಆ ಸ್ತ್ರೀಗೋಸ್ಕರ ನೀನು ಸತ್ತವನೇ; ಆಕೆಯು ಒಬ್ಬ ಮನುಷ್ಯನ ಹೆಂಡತಿ ಎಂದು ಅವನಿಗೆ ಹೇಳಿದನು.
ಆಗ ಲಾಬಾನನು ಅವನಿಗೆ--ನಿಶ್ಚಯವಾಗಿ ನೀನು ನನ್ನ ಎಲುಬೂ ಮಾಂಸವೂ ಆಗಿದ್ದೀ ಅಂದನು. ಇದಲ್ಲದೆ ಯಾಕೋಬನು ಅವನ ಸಂಗಡ ಒಂದು ತಿಂಗಳು ವಾಸವಾಗಿದ್ದನು.
ಅವನು ತನಗಿದ್ದದ್ದನ್ನೆಲ್ಲಾ ತೆಗೆದು ಕೊಂಡು ಓಡಿಹೋದನು. ಅವನು ಎದ್ದು ಗಿಲ್ಯಾದ್ ಪರ್ವತಕ್ಕೆ ಅಭಿಮುಖನಾಗಿ ನದಿಯನ್ನು ದಾಟಿದನು.
ಯೋಸೇಫನು ಒಂದು ಕನಸನ್ನು ಕಂಡು ತನ್ನ ಸಹೋದರರಿಗೆ ತಿಳಿಸಿದಾಗ ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು.
ಅವರಿಬ್ಬರಿಗೂ ಅಂದರೆ ಐಗುಪ್ತದೇಶದ ಅರಸನು ಸೆರೆಯಲ್ಲಿ ಹಾಕಿಸಿದ್ದ ಪಾನದಾಯಕನಿಗೂ ರೊಟ್ಟಿ ಗಾರನಿಗೂ ಒಂದೇ ರಾತ್ರಿ ಕನಸುಬಿತ್ತು. ಅವರವರ ಕನಸಿನ ಪ್ರಕಾರ ಅರ್ಥವಿತ್ತು.
ಆದರೆ ಫರೋಹನು ತನ್ನ ಜನರಿಗೆಲ್ಲಾ--(ಇಬ್ರಿಯರಿಗೆ) ಹುಟ್ಟುವ ಗಂಡು ಮಕ್ಕಳನ್ನೆಲ್ಲಾ ನದಿಯಲ್ಲಿ ಹಾಕಬೇಕು. ಹೆಣ್ಣು ಮಕ್ಕಳ ನ್ನೆಲ್ಲಾ ಜೀವದಿಂದ ಉಳಿಸಬೇಕು ಎಂದು ಅಪ್ಪಣೆ ಕೊಟ್ಟನು.
ಆ ಎರಡೂ ಮಹತ್ಕಾರ್ಯ ಗಳನ್ನು ಅವರು ನಂಬದೆಯೂ ನಿನ್ನ ಮಾತನ್ನು ಕೇಳ ದೆಯೂ ಹೋದರೆ ನದಿಯ ನೀರನ್ನು ತೆಗೆದು ಒಣಗಿದ ನೆಲದಮೇಲೆ ಸುರಿಯಬೇಕು. ಆಗ ನೀನು ನದಿಯಿಂದ ತೆಗೆದ ನೀರು ಒಣಗಿದ ನೆಲದ ಮೇಲೆ ರಕ್ತವಾಗುವದು ಅಂದನು.
ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶವು ನೀನು ಹೊರಟ ಐಗುಪ್ತದೇಶದ ಹಾಗಲ್ಲ; ಅಲ್ಲಿ ನೀನು ನಿನ್ನ ಬೀಜವನ್ನು ಬಿತ್ತಿ ಪಲ್ಯಗಳ ತೋಟಕ್ಕೆ ಮಾಡುವ ಹಾಗೆ ನಿನ್ನ ಕಾಲಿನಿಂದ ನೀರು ಹಣಿಸಿದಿಯಲ್ಲಾ.
ಗಿದ್ಯೋನನು ಬಂದಾಗ ಇಗೋ, ಒಬ್ಬನು ತನ್ನ ಜೊತೆಗಾರನಿಗೆ ತನಗಾದ ಸ್ವಪ್ನವನ್ನು ವಿವರಿಸಿ ಹೇಳಿದ್ದೇ ನಂದರೆ--ಇಗೋ, ನಾನು ಒಂದು ಕನಸನ್ನು ಕಂಡೆನು. ಇಗೋ, ಒಂದು ಜವೆಗೋಧಿಯ ರೊಟ್ಟಿಯು ಮಿದ್ಯಾ ನ್ಯರ ದಂಡಿನ ಮೇಲೆ ಹೊರಳಿ ಒಂದು ಡೇರೆಯಮೇಲೆ ಬಂದು ಅದು ಬೀಳುವ ಹಾಗೆ ಅದನ್ನು ಹೊಡೆದು ಕೆಡವಿಹಾಕಿತು; ಆಗ ಡೇರೆಯು ಬಿದ್ದುಹೋಯಿತು ಅಂದನು.
ಆ ರಾತ್ರಿ ಅರಸನಿಗೆ ನಿದ್ರೆ ಬಾರದ್ದದರಿಂದ ವೃತಾಂತಗಳನ್ನು ಬರೆದಿರುವ ಪುಸ್ತಕವನ್ನು ತಕ್ಕೊಂಡು ಬರಲು ಹೇಳಿದನು.
ಸ್ವಪ್ನದಲ್ಲಿ ರಾತ್ರಿಯ ದರ್ಶನ ದಲ್ಲಿ; ಗಾಢ ನಿದ್ರೆಯು ಮನುಷ್ಯರ ಮೇಲೆ ಬೀಳುವಾಗ ಮಂಚದ ಮೇಲಿನ ತೂಕಡಿಕೆಗಳಲ್ಲಿ
ಇದಲ್ಲದೆ ಸಮುದ್ರದ ಕಡೆಯಿಂದ ನೀರು ಬತ್ತಿ ಹೋಗುವದು; ನದಿಗಳು ಇಂಗಿ ಒಣಗುವವು.
ನೀನು ಮಾತನಾಡಿ ಹೇಳಬೇಕಾದ ದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಐಗುಪ್ತದ ಅರಸನಾದ ಫರೋಹನೇ, ತನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು--ಈ ನದಿ ನನ್ನದು, ನಾನೇ ಅದನ್ನು ನನಗೋಸ್ಕರ ಮಾಡಿ ಕೊಂಡಿದ್ದೇನೆಂದು ಹೇಳಿಕೊಂಡ ದೊಡ್ಡ ಘಟ ಸರ್ಪವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ.
ಅವನು--ಆ ನದಿಯು ನನ್ನದೇ, ನಾನೇ ಅದನ್ನು ನಿರ್ಮಿಸಿದವನೆಂದು ಹೇಳಿಕೊಂಡದ್ದ ರಿಂದ ಐಗುಪ್ತ ದೇಶವು ಹಾಳು ಅರಣ್ಯವಾಗುವದು; ಆಗ ನಾನೇ ಕರ್ತನೆಂದು ಅವರು ತಿಳಿಯುವರು.
ನೆಬೂಕದ್ನೆಚ್ಚರನ ಆಳಿಕೆಯ ಎರಡನೆಯ ವರುಷದಲ್ಲಿ ನೆಬೂಕದ್ನೆಚ್ಚರನು ಕಂಡ ಕನಸುಗಳ ಪರಿಣಾಮದಿಂದ ಅವನ ಆತ್ಮವು ಕಳವಳ ಗೊಂಡು ನಿದ್ರೆಯು ಅವನನ್ನು ಬಿಟ್ಟು ಹೋಯಿತು.
ನನ್ನನ್ನು ಭಯಪಡಿಸುವಂತೆ ನಾನು ಒಂದು ಕನಸನ್ನು ಕಂಡೆನು. ನನ್ನ ಹಾಸಿಗೆಯ ಮೇಲೆ ಆದ ಯೋಚನೆಗಳು ನನ್ನ ಮನಸ್ಸಿನ ದರ್ಶನ ಗಳು ನನ್ನನ್ನು ಕಳವಳಪಡಿಸಿದವು.
ಬಾಬೆಲಿನ ಅರಸನಾದ ಬೇಲ್ಯಚ್ಚರನ ಮೊದಲನೆಯ ವರುಷದಲ್ಲಿ ದಾನಿಯೇಲನು ಹಾಸಿಗೆಯ ಮೇಲೆ ತನ್ನ ಮನಸ್ಸಿನ ಕನಸನ್ನೂ ದರ್ಶನವನ್ನೂ ಕಂಡು; ಆ ಮೇಲೆ ಅವುಗಳನ್ನು ಬರೆದು ಅದರ ತಾತ್ಪರ್ಯವನ್ನು ತಿಳಿಸಿದನು.
ಅವನು ನ್ಯಾಯಾಸನದ ಮೇಲೆ ಕೂತಿದ್ದಾಗ ಅವನ ಹೆಂಡತಿಯು ಅವ ನಿಗೆ--ನೀನು ಆ ನೀತಿವಂತನ ಗೊಡವೆಗೆ ಹೋಗ ಬೇಡ; ಯಾಕಂದರೆ ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ ಎಂದು ಹೇಳಿಕಳುಹಿಸಿದಳು.