ಅವುಗಳ ಹಿಂದೆ ಏಳು ವರುಷಗಳ ಬರಗಾಲ ಬರುತ್ತವೆ. ಆಗ ಐಗುಪ್ತದಲ್ಲಿದ್ದ ಸುಭಿಕ್ಷೆಯು ಮರೆಯುವದು. ಇದಲ್ಲದೆ ಬರಗಾಲವು ದೇಶವನ್ನು ನಾಶಮಾಡುವದು.
Cross references
ಇವು ಅವುಗಳನ್ನು ತಿಂದಮೇಲೆ ಅವು ತಿಂದಹಾಗೆ ತೋರಲಿಲ್ಲ. ಆದರೆ ಅವು ಮೊದಲಿನಂತೆ ಬಡಕ ಲಾಗಿಯೇ ಇದ್ದವು. ತರುವಾಯ ನಾನು ಎಚ್ಚೆತ್ತೆನು.
ಅವುಗಳ ತರುವಾಯ ಏರಿಬಂದ ಬಡಕಲಾದ ಕೆಟ್ಟ ಏಳು ಹಸುಗಳು ಏಳು ವರುಷಗಳು. ಮೂಡಣ ಗಾಳಿಯಿಂದ ಬತ್ತಿಹೋದ ಏಳು ಬಡಕಲಾದ ತೆನೆಗಳು ಬರವು ಇರುವ ಏಳು ವರುಷಗಳು ಅಂದನು.
ಚೊಚ್ಚಲ ಮಗನಿಗೆ ಯೋಸೇಫನು ಮನಸ್ಸೆ ಎಂದು ಹೆಸರಿಟ್ಟನು. ಯಾಕಂದರೆ ಅವನು--ದೇವರು ನನ್ನ ಕಷ್ಟವನ್ನು ಮತ್ತು ನನ್ನ ತಂದೆಯ ಮನೆಯನ್ನೆಲ್ಲಾ ಮರೆತುಬಿಡುವಂತೆ ಮಾಡಿದನು ಅಂದನು.
ಯೋಸೇಫನು ಹೇಳಿದಂತೆ ಬರುವದಕ್ಕಿದ್ದ ಬರಗಾಲದ ಏಳು ವರುಷ ಗಳು ಆರಂಭವಾದವು. ಆಗ ಎಲ್ಲಾ ದೇಶಗಳಲ್ಲಿ ಬರವಿತ್ತು. ಆದರೆ ಐಗುಪ್ತದೇಶದಲ್ಲೆಲ್ಲಾ ಆಹಾರ ವಿತ್ತು.
ಭೂಮುಖದ ಮೇಲೆಲ್ಲಾ ಬರವಿತ್ತು. ಯೋಸೇಫನು ಧಾನ್ಯವಿದ್ದ ಕಣಜಗಳನ್ನೆಲ್ಲಾ ತೆರೆದು ಐಗುಪ್ತ್ಯರಿಗೆ ಮಾರಿದನು. ಆಗ ಬರವು ಐಗುಪ್ತದೇಶದಲ್ಲಿ ಕಠಿಣವಾಗಿತ್ತು.ಇದಲ್ಲದೆ ಭೂಮಿಯ ಮೇಲೆಲ್ಲಾ ಬರವು ಕಠಿಣವಾಗಿದ್ದದರಿಂದ ಎಲ್ಲಾ ದೇಶದವರು ಯೋಸೇಫನಿಂದ ಧಾನ್ಯವನ್ನು ಕೊಂಡುಕೊಳ್ಳುವದಕ್ಕೆ ಐಗುಪ್ತಕ್ಕೆ ಬಂದರು.
ಆದರೆ ಬರವು ಅತಿ ಘೋರವಾಗಿದ್ದರಿಂದ ದೇಶದಲ್ಲೆಲ್ಲಾ ಆಹಾರ ಇರಲಿಲ್ಲ. ಐಗುಪ್ತದೇಶವೂ ಕಾನಾನ್ದೇಶವೂ ಕ್ಷಾಮದಿಂದ ಕ್ಷೀಣವಾದವು.
ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ನಿನ್ನ ದೇಶದಲ್ಲಿ ನಿನಗೆ ಏಳು ವರುಷ ಬರವು ಆಗಬೇಕೋ ಇಲ್ಲವೆ ಮೂರು ತಿಂಗಳು ನಿನ್ನ ಶತ್ರುಗಳು ನಿನ್ನನ್ನು ಹಿಂದಟ್ಟುವಾಗ ನೀನು ಅವರ ಮುಂದೆ ಓಡಿಹೋಗಬೇಕೋ? ಇಲ್ಲವೆ ನಿನ್ನ ದೇಶದಲ್ಲಿ ಮೂರು ದಿವಸ ಬಾಧೆ ಉಂಟಾಗಬೇಕೋ? ಈಗ ನನ್ನನ್ನು ಕಳುಹಿಸಿದಾತನಿಗೆ ನಾನು ಏನು ಪ್ರತ್ಯುತ್ತರ ತಕ್ಕೊಂಡು ಹೋಗಬೇಕು ಯೋಚಿಸಿನೋಡು ಅಂದನು.
ಗಿಲ್ಯಾದಿನ ನಿವಾಸಿಗಳಲ್ಲಿ ತಿಷ್ಬೀಯನಾದ ಎಲೀಯನು ಅಹಾಬನಿಗೆ--ಯಾವಾತನ ಸಮ್ಮುಖದಲ್ಲಿ ನಿಲ್ಲುತ್ತೇನೋ ಆ ಇಸ್ರಾಯೇಲಿನ ದೇವ ರಾದ ಕರ್ತನ ಜೀವದಾಣೆ, ನನ್ನ ಮಾತಿನ ಪ್ರಕಾರ ವಲ್ಲದೆ ಈ ವರ್ಷಗಳಲ್ಲಿ ಮಂಜೂ ಮಳೆಯೂ ಬೀಳು ವದಿಲ್ಲ ಅಂದನು.
ಎಲೀಷನು ತಾನು ಬದುಕಿಸಿದ ಮಗನ ತಾಯಿಯಾದವಳಿಗೆ -- ನೀನು ಎದ್ದು ನೀನೂ ನಿನ್ನ ಮನೆಯವರೂ ಎಲ್ಲಿ ಇಳುಕೊಳ್ಳುವದಕ್ಕೆ ಸ್ಥಳ ಉಂಟೋ ಅಲ್ಲಿ ಹೋಗಿ ಇಳುಕೊಂಡಿರು. ಯಾಕಂದರೆ ಕರ್ತನು ಬರವನ್ನು ಕಳುಹಿಸುವದಕ್ಕಿದ್ದಾನೆ. ಅದು ದೇಶದ ಮೇಲೆ ಏಳು ವರುಷದ ವರೆಗೂ ಇರುವದು ಎಂದು ಹೇಳಿದನು.
ದೇಶದ ಮೇಲೆ ಬರವನ್ನು ಬರಮಾಡಿ ಆಹಾರ ವೆಂಬ ಊರುಕೋಲನ್ನು ಮುರಿದನು.
ಅವನು ಕುಡಿದು ತನ್ನ ಬಡತನವನ್ನು ಮರೆತುಬಿಡಲಿ; ತನ್ನ ಶ್ರೆಮೆಯನ್ನು ಇನ್ನು ಜ್ಞಾಪಕಕ್ಕೆ ತಾರದಿರಲಿ;
ಆಗ ದೇಶದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳು ವವನು ಸತ್ಯ ದೇವರಲ್ಲಿ ಆಶೀರ್ವದಿಸಿಕೊಳ್ಳುವನು. ದೇಶದಲ್ಲಿ ಆಣೆ ಇಟ್ಟುಕೊಳ್ಳುವವನು; ಸತ್ಯದೇವರ ಮೇಲೆ ಆಣೆ ಇಟ್ಟುಕೊಳ್ಳುವನು; ಮುಂಚಿನ ಕಷ್ಟಗಳು ಮರೆತುಹೋಗಿವೆ ಮತ್ತು ಅವು ನನ್ನ ಕಣ್ಣುಗಳಿಗೆ ಮರೆಯಾಗಿವೆ.
ಆದರೆ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಎಲೀಯನ ದಿವಸಗಳಲ್ಲಿ ಮೂರು ವರುಷ ಆರು ತಿಂಗಳು ಆಕಾಶವು ಮುಚ್ಚಲ್ಪಟ್ಟು ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ ಇಸ್ರಾಯೇಲಿನಲ್ಲಿ ಅನೇಕ ವಿಧವೆಯರು ಇದ್ದರೂ
ಎಲೀಯನು ನಮ್ಮಂಥ ಸ್ವಭಾವವುಳ್ಳವ ನಾಗಿದ್ದನು; ಅವನು ಮಳೆ ಬರಬಾರದೆಂದು ಆಸಕ್ತಿ ಯಿಂದ ಪ್ರಾರ್ಥಿಸಲು ಮೂರು ವರುಷ ಆರು ತಿಂಗಳ ವರೆಗೂ ಮಳೆ ಬೀಳಲಿಲ್ಲ.