ಆದಿಕಾಂಡ 41:36 · ಕನ್ನಡ ಬೈಬಲ್
ಐಗುಪ್ತದಲ್ಲಿ ಬರುವದ ಕ್ಕಿರುವ ಬರಗಾಲದ ಏಳು ವರುಷಗಳಲ್ಲಿ ದೇಶವು ಹಾಳಾಗದ ಹಾಗೆ ಆಹಾರವು ದೇಶಕ್ಕೆ ಸಂಗ್ರಹವಾಗಿ ರುವದು ಅಂದನು.
Cross references
ಆದಿಕಾಂಡ 47:13
ಆದರೆ ಬರವು ಅತಿ ಘೋರವಾಗಿದ್ದರಿಂದ ದೇಶದಲ್ಲೆಲ್ಲಾ ಆಹಾರ ಇರಲಿಲ್ಲ. ಐಗುಪ್ತದೇಶವೂ ಕಾನಾನ್ದೇಶವೂ ಕ್ಷಾಮದಿಂದ ಕ್ಷೀಣವಾದವು.
ಆದಿಕಾಂಡ 47:15
ಐಗುಪ್ತ ದೇಶದಲ್ಲಿಯೂ ಕಾನಾನ್ದೇಶದಲ್ಲಿಯೂ ಹಣವು ಮುಗಿದಾಗ ಐಗುಪ್ತ್ಯರೆಲ್ಲರೂ ಯೋಸೇಫನ ಬಳಿಗೆ ಬಂದು--ನಮಗೆ ರೊಟ್ಟಿಯನ್ನು ಕೊಡು, ನಾವು ನಿನ್ನ ಮುಂದೆ ಯಾಕೆ ಸಾಯಬೇಕು? ಯಾಕಂದರೆ ಹಣವೆಲ್ಲಾ ತೀರಿತು ಅಂದರು.
ಆದಿಕಾಂಡ 47:19
ನಾವೂ ನಮ್ಮ ಭೂಮಿಯೂ ನಿನ್ನ ಕಣ್ಣೆದುರಿಗೆ ಸಾಯುವದು ಯಾಕೆ? ನಮ್ಮನ್ನೂ ನಮ್ಮ ಭೂಮಿಯನ್ನೂ ರೊಟ್ಟಿಗೆ ಕೊಂಡುಕೋ. ಆಗ ನಮ್ಮ ಭೂಮಿಯು ಫರೋಹನ ವಶವಾಗಿ ನಾವು ಅವನಿಗೆ ಗುಲಾಮರಾಗಿರುವೆವು. ನಮಗೆ ಬೀಜವನ್ನು ಕೊಡು; ಆಗ ನಾವು ಸಾಯದೆ ಬದುಕುವೆವು, ಭೂಮಿಯು ಹಾಳಾಗದೆ ಇರುವದು ಅಂದರು.