ತನಗಿದ್ದ ಎರಡನೆಯ ರಥದಲ್ಲಿ ಅವನನ್ನು ಕೂರಿಸಿ ದಾಗ--ಅವನ ಮುಂದೆ ಮೊಣಕಾಲೂರಿರಿ ಎಂದು ಜನರು ಕೂಗಿದರು. ಹೀಗೆ ಅವನನ್ನು ಐಗುಪ್ತ ದೇಶದ ಮೇಲೆಲ್ಲಾ ಆಳುವವನನ್ನಾಗಿ ನೇಮಿಸಿದನು.
Cross references
ಆಗ ಯೋಸೇಫನು ದೇಶದ ಮೇಲೆಲ್ಲಾ ಅಧಿಪತಿಯಾ ಗಿದ್ದನು. ದೇಶದ ಜನರಿಗೆಲ್ಲಾ ಧಾನ್ಯವನ್ನು ಮಾರು ವವನು ಅವನೇ ಆಗಿದ್ದನು. ಹೀಗಿರಲಾಗಿ ಯೋಸೇಫನ ಸಹೋದರರು ಬಂದು ತಮ್ಮ ಮುಖಗಳನ್ನು ನೆಲದ ಮಟ್ಟಿಗೂ ತಗ್ಗಿಸಿ ಅವನಿಗೆ ಅಡ್ಡಬಿದ್ದರು.
ಆ ದೇಶದ ಪ್ರಭುವಾಗಿರುವ ಮನುಷ್ಯನು ನಮ್ಮ ಸಂಗಡ ಕಠಿಣವಾಗಿ ಮಾತನಾಡಿ ಗೂಢಚಾರ ರನ್ನಾಗಿ ನಮ್ಮನ್ನು ಎಣಿಸಿದನು.
ಆಗ ದೇಶದ ಪ್ರಭುವಾಗಿರುವ ಆ ಮನುಷ್ಯನು--ನೀವು ಯಥಾರ್ಥರೆಂದು ನಾನು ಇದರ ಮೂಲಕ ತಿಳುಕೊಳ್ಳುವೆನು. ನೀವು ನಿಮ್ಮ ಸಹೋದರರಲ್ಲಿ ಒಬ್ಬನನ್ನು ನನ್ನ ಬಳಿಯಲ್ಲಿಟ್ಟು ನಿಮ್ಮ ಮನೆಯ ಕ್ಷಾಮಕ್ಕೆ ಅವಶ್ಯವಾದದ್ದನ್ನು ತಕ್ಕೊಂಡುಹೋಗಿರಿ.
ಆದದರಿಂದ ಈಗ ನೀವಲ್ಲ, ದೇವರು ತಾನೇ ನನ್ನನ್ನು ಇಲ್ಲಿಗೆ ಕಳುಹಿಸಿದ್ದಾನೆ. ಆತನು ನನ್ನನ್ನು ಫರೋಹನಿಗೆ ತಂದೆಯಾಗಿಯೂ ಅವನ ಮನೆಗೆಲ್ಲಾ ಯಜಮಾನನನ್ನಾಗಿಯೂ ಐಗುಪ್ತ ದೇಶಕ್ಕೆಲ್ಲಾ ಅಧಿಕಾರಿಯನ್ನಾಗಿಯೂ ಮಾಡಿದ್ದಾನೆ.
ಯೋಸೇಫನು ಇನ್ನೂ ಜೀವದಿಂದ ಇದ್ದಾನೆ; ಅವನೇ ಐಗುಪ್ತದೇಶವನ್ನೆಲ್ಲಾ ಆಳುತಿದ್ದಾ ನೆಂದು ಅವನಿಗೆ ತಿಳಿಸಿದಾಗ ಅವನು ನಂಬದೆ ಇದ್ದದ್ದರಿಂದ ಹೃದಯವು ಕುಂದಿಹೋಯಿತು.
ರಥಗಳೂ ರಾಹುತರೂ ಅವನ ಸಂಗಡ ಹೊರಟುಹೋದರು.ಆ ಸಮೂಹವು ಬಹಳ ದೊಡ್ಡದಾಗಿತ್ತು.
ಆದಕಾರಣ ಅರಮನೆಯ ಬಾಗಲ ಲ್ಲಿರುವ ಅರಸನ ಸಮಸ್ತ ಸೇವಕರು ಬೊಗ್ಗಿ ಹಾಮಾನ ನಿಗೆ ಅಡ್ಡಬಿದ್ದರು. ಅರಸನು ಅವನನ್ನು ಕುರಿತು ಹಾಗೆಯೇ ಆಜ್ಞಾಪಿಸಿದ್ದನು, ಆದರೆ ಮೊರ್ದೆಕೈ ಬೊಗ್ಗದೆ ಅಡ್ಡಬೀಳದೆ ಇದ್ದನು.
ಅರಸನು ಧರಿಸಿ ಕೊಳ್ಳುವ ರಾಜವಸ್ತ್ರಗಳೂ ಅರಸನು ಹತ್ತುವ ಕುದು ರೆಯೂ ಅವನ ತಲೆಯ ಮೇಲೆ ಇಟ್ಟುಕೊಳ್ಳುವ ರಾಜಕಿರೀಟವೂ ತರಲ್ಪಡಲಿ;
ಸೆರೆ ಯಿಂದ ಆಳುವದಕ್ಕಾಗಿ ಅವನು ಬರುತ್ತಾನೆ; ಇದಲ್ಲದೆ, ತನ್ನ ರಾಜ್ಯದಲ್ಲಿ ಹುಟ್ಟಿದವನು ಬಡವನಾಗುತ್ತಾನೆ.
ಆಗ ಅರಸನು ದಾನಿಯೇಲನನ್ನು ಒಬ್ಬ ಮಹಾ ವ್ಯಕ್ತಿಯನ್ನಾಗಿ ಮಾಡಿ ಅವನಿಗೆ ಅನೇಕ ದೊಡ್ಡ ಬಹುಮಾನಗಳನ್ನು ಕೊಟ್ಟು ಸಮಸ್ತ ಬಾಬೆಲಿನ ಪ್ರಾಂತ್ಯಗಳಿಗೆ ಅಧಿಕಾರಿಯನ್ನಾ ಗಿಯೂ ಬಾಬೆಲಿನ ಸಮಸ್ತ ಜ್ಞಾನಿಗಳಿಗೆ ಮುಖ್ಯಾಧಿ ಪತಿಯನ್ನಾಗಿಯೂ ನೇಮಿಸಿದನು.ಆ ಮೇಲೆ ದಾನಿ ಯೇಲನು ಅರಸನನ್ನು ಬೇಡಿಕೊಂಡದ್ದರಿಂದ ಅರಸನು ಶದ್ರಕ್ ಮೇಷಕ್ ಮತ್ತು ಅಬೇದ್ನೆಗೋ ಎಂಬವರಿಗೆ ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು. ದಾನಿಯೇಲನಾದರೋ ಅರಸನ ಅರಮನೆಯಲ್ಲೇ ಇದ್ದನು.
ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತ ದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾ ಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿ ಸಿದನು. ಫರೋಹನು ಅವನನ್ನು ಐಗುಪ್ತ ದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯನ್ನಾಗಿ ನೇಮಿಸಿದನು.
ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.