ಐಗುಪ್ತದಲ್ಲಿ ಧಾನ್ಯ ಉಂಟೆಂದುಯಾಕೋಬನು ತಿಳಿದಾಗ ಅವನು ತನ್ನ ಕುಮಾರರಿಗೆನೀವು ಒಬ್ಬರನ್ನೊಬ್ಬರು ನೋಡಿಕೊಳ್ಳು ವದೇನು ಅಂದನು.
Cross references
ಯೋಸೇಫನು ಹೇಳಿದಂತೆ ಬರುವದಕ್ಕಿದ್ದ ಬರಗಾಲದ ಏಳು ವರುಷ ಗಳು ಆರಂಭವಾದವು. ಆಗ ಎಲ್ಲಾ ದೇಶಗಳಲ್ಲಿ ಬರವಿತ್ತು. ಆದರೆ ಐಗುಪ್ತದೇಶದಲ್ಲೆಲ್ಲಾ ಆಹಾರ ವಿತ್ತು.
ಇದಲ್ಲದೆ ಭೂಮಿಯ ಮೇಲೆಲ್ಲಾ ಬರವು ಕಠಿಣವಾಗಿದ್ದದರಿಂದ ಎಲ್ಲಾ ದೇಶದವರು ಯೋಸೇಫನಿಂದ ಧಾನ್ಯವನ್ನು ಕೊಂಡುಕೊಳ್ಳುವದಕ್ಕೆ ಐಗುಪ್ತಕ್ಕೆ ಬಂದರು.
ಅವನು--ಇಗೋ, ಐಗುಪ್ತದಲ್ಲಿ ಧಾನ್ಯ ಉಂಟೆಂದು ನಾನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಇಳಿದು ಹೋಗಿ ನಮಗಾಗಿ ಅಲ್ಲಿಂದ ಧಾನ್ಯವನ್ನು ಕೊಂಡು ಕೊಳ್ಳಿರಿ ಅಂದನು.
ದಿನದಿನವೂ ಒಪ್ಪಿಸಬೇಕಾದ ಇಟ್ಟಿಗೆಗಳ ಲೆಕ್ಕ ಕಡಿಮೆಯಾಗಬಾರದೆಂದು ಅಪ್ಪಣೆಯಾದದ್ದರಿಂದ ಇಸ್ರಾಯೇಲ್ ಅಧಿಕಾರಿಗಳು ತಾವು ದುರವಸ್ಥೆಯಲ್ಲಿ ದ್ದೇವೆಂದು ತಿಳುಕೊಂಡರು.
ಜನರೆಲ್ಲಾ ಗುಡುಗುಗಳನ್ನೂ ಮಿಂಚುಗಳನ್ನೂ ತುತೂರಿಯ ಶಬ್ದವನ್ನೂ ಬೆಟ್ಟವು ಹೊಗೆ ಹಾಯು ವದನ್ನೂ ನೋಡಿದರು; ಜನರು ಅದನ್ನು ನೋಡಿ ದೂರ ಹೋಗಿ ನಿಂತುಕೊಂಡರು.
ಆಗ ಕರ್ತನು ಯೆಹೋಶುವನಿಗೆ--ನೀನು ಎದ್ದೇಳು; ನೀನು ಈ ಪ್ರಕಾರ ಬೋರಲು ಬಿದ್ದಿರುವ ದೇನು?
ಅವನು ಅದನ್ನು ಕೇಳಿ ಎದ್ದು ತನ್ನ ಪ್ರಾಣಕ್ಕೋಸ್ಕರ ಯೆಹೂದಕ್ಕೆ ಸೇರಿದ ಬೇರ್ಷೆಬಕ್ಕೆ ಹೊರಟುಹೋಗಿ ಅಲ್ಲಿ ತನ್ನ ಸೇವಕನನ್ನು ಬಿಟ್ಟನು.
ಏಳು ವರುಷದ ತರುವಾಯ ಏನಾಯಿತಂದರೆ, ಆ ಸ್ತ್ರೀಯು ಫಿಲಿಷ್ಟಿಯರ ದೇಶವನ್ನು ಬಿಟ್ಟು ತಿರಿಗಿ ಬಂದು ತನ್ನ ಮನೆಗೋಸ್ಕರವೂ ಹೊಲಕ್ಕೋಸ್ಕರವೂ ಅರಸನಿಗೆ ಮೊರೆಯಿಟ್ಟಳು.
ನೀನು ಏಳು; ಯಾಕಂದರೆ ಈ ಕಾರ್ಯ ನಿನಗೆ ಸಂಬಂಧಿಸಿದೆ. ನಾವು ನಿನ್ನ ಸಂಗಡ ಇರುವೆವು; ಧೈರ್ಯದಿಂದಿರು, ಅದನ್ನು ಮಾಡು ಅಂದರು.
ತಮ್ಮ ಹೃದಯದ ಕಾಠಿಣ್ಯದ ಪ್ರಕಾರವಾಗಿಯೂ ತಮ್ಮ ತಂದೆಗಳು ಅವರಿಗೆ ಬೋಧಿಸಿದ ಬಾಳ್ ದೇವತೆ ಗಳ ಹಿಂದೆಯೂ ನಡೆದರು.
ಎಫ್ರಾಯಾಮು ತನ್ನ ರೋಗವನ್ನು ಯೆಹೂದವು ತನ್ನ ಗಾಯವನ್ನು ನೋಡಿದಾಗ ಎಫ್ರಾಯೀಮ್ ಅಶ್ಯೂರಕ್ಕೆ ಹೋಗಿ ಅರಸನಾದ ಯಾರೇಬನ ಬಳಿಗೆ ಕಳುಹಿಸಿತು; ಆದಾಗ್ಯೂ ಅವನು ನಿಮ್ಮನ್ನು ಸ್ವಸ್ಥಮಾಡ ಲಿಲ್ಲ, ಇಲ್ಲವೆ ನಿಮ್ಮ ಗಾಯವನ್ನು ಗುಣಪಡಿಸಲೂ ಇಲ್ಲ.
ಆದರೆ ಐಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬದನ್ನು ಯಾಕೋ ಬನು ಕೇಳಿ ನಮ್ಮ ಪಿತೃಗಳನ್ನು ಮೊದಲನೆಯ ಸಾರಿ ಅಲ್ಲಿಗೆ ಕಳುಹಿಸಿದನು.
ಅದಕ್ಕೆ ಬದಲಾಗಿ ಸುನ್ನತಿಯವರ ಸುವಾರ್ತೆಯು ಪೇತ್ರನಿಗೆ ಹೇಗೋ ಹಾಗೆಯೇ ಸುನ್ನತಿಯಿಲ್ಲದವರ ಸುವಾ ರ್ತೆಯು ನನಗೆ ಒಪ್ಪಿಸಲ್ಪಟ್ಟಿತು.