ನಾವೆಲ್ಲರೂ ಒಬ್ಬ ಮನುಷ್ಯನ ಕುಮಾರರಾಗಿದ್ದು ಸತ್ಯವಂತರಾಗಿದ್ದೇವೆ. ಆದದರಿಂದ ನಿನ್ನ ದಾಸರು ಗೂಢಚಾರರಲ್ಲ ಅಂದರು.
Cross references
ನೀವು ಸತ್ಯವಂತರಾಗಿದ್ದರೆ ನಿಮ್ಮ ಸಹೋದರರಲ್ಲಿ ಒಬ್ಬನು ನೀವು ಇದ್ದ ಸೆರೆಮನೆಯಲ್ಲಿ ಬಂಧಿಸಲ್ಪಡಲಿ. ಆದರೆ ನೀವು ನಿಮ್ಮ ಮನೆಗಳ ಕ್ಷಾಮಕ್ಕೆ ಧಾನ್ಯವನ್ನು ತಕ್ಕೊಂಡು ಹೋಗಿರಿ.
ಆಗ ದೇಶದ ಪ್ರಭುವಾಗಿರುವ ಆ ಮನುಷ್ಯನು--ನೀವು ಯಥಾರ್ಥರೆಂದು ನಾನು ಇದರ ಮೂಲಕ ತಿಳುಕೊಳ್ಳುವೆನು. ನೀವು ನಿಮ್ಮ ಸಹೋದರರಲ್ಲಿ ಒಬ್ಬನನ್ನು ನನ್ನ ಬಳಿಯಲ್ಲಿಟ್ಟು ನಿಮ್ಮ ಮನೆಯ ಕ್ಷಾಮಕ್ಕೆ ಅವಶ್ಯವಾದದ್ದನ್ನು ತಕ್ಕೊಂಡುಹೋಗಿರಿ.
ಅವರು ಅವನಿಗೆ--ಆ ಮನುಷ್ಯನು ನಮ್ಮ ವಿಷಯದಲ್ಲಿಯೂ ನಮ್ಮ ವಂಶದ ವಿಷಯದಲ್ಲಿಯೂ ನೇರವಾಗಿ ಕೇಳಿ--ನಿಮ್ಮ ತಂದೆ ಇನ್ನೂ ಬದುಕಿದ್ದಾನೋ? ನಿಮಗೆ ಇನ್ನೊಬ್ಬ ಸಹೋದರನು ಇದ್ದಾನೋ ಎಂದು ಕೇಳಿ ದನು. ಆಗ ಈ ಮಾತುಗಳಿಗೆ ತಕ್ಕ ಹಾಗೆ ನಾವು ಅವನಿಗೆ ತಿಳಿಸಿದೆವು. ನಿಮ್ಮ ತಮ್ಮನನ್ನು ಕರಕೊಂಡು ಬನ್ನಿರಿ ಎಂದು ಅವನು ನಮಗೆ ಹೇಳುವನೆಂದು ನಮಗೆ ಹೇಗೆ ತಿಳಿಯುವದು ಅಂದರು.
ತನ್ನ ವಿಷಯವಾಗಿ ತಾನೇ ಮಾತನಾಡುವವನು ತನ್ನ ಸ್ವಂತ ಮಹಿಮೆಯನ್ನು ಹುಡುಕುತ್ತಾನೆ; ಆದರೆ ತನ್ನನ್ನು ಕಳುಹಿಸಿದಾತನ ಮಹಿಮೆಯನ್ನು ಹುಡುಕುವಾತನೇ ಸತ್ಯವಂತನು; ಆತ ನಲ್ಲಿ ಅನೀತಿಯಿಲ್ಲ.
ಆದರೆ ಎಲ್ಲಾ ಸಂಗತಿಗಳಲ್ಲಿ ಹೆಚ್ಚು ತಾಳ್ಮೆಯಲ್ಲಿಯೂ ಸಂಕಟ ಗಳಲ್ಲಿಯೂ ಕೊರತೆಗಳಲ್ಲಿಯೂ ಇಕ್ಕಟ್ಟುಗಳಲ್ಲಿಯೂ