Home Bibles ಆದಿಕಾಂಡ 42:21 · ಕನ್ನಡ ಬೈಬಲ್
ಆದಿಕಾಂಡ 42:21 · ಕನ್ನಡ ಬೈಬಲ್

ಆಗ ಅವರು--ನಿಶ್ಚಯವಾಗಿ ನಮ್ಮ ಸಹೋದರನ ಅಪರಾಧವು ನಮ್ಮ ಮೇಲೆ ಇದೆ. ಅವನು ನಮ್ಮನ್ನು ಬೇಡಿಕೊಂಡಾಗ ಅವನ ಪ್ರಾಣ ಸಂಕಟವನ್ನು ನೋಡಿಯೂ ಕೇಳದೆ ಹೋದೆವು. ಆದಕಾರಣ ಈ ಸಂಕಟವು ನಮ್ಮ ಮೇಲೆ ಬಂದಿತು ಎಂದು ಅಂದುಕೊಂಡರು.

Cross references

ಆದಿಕಾಂಡ 37:23

ಯೋಸೇಫನು ತನ್ನ ಸಹೋದರರ ಬಳಿಗೆ ಬಂದಾಗ ಅವರು ಯೋಸೇಫನ ಮೇಲಿದ್ದ ಬಣ್ಣದ ಅಂಗಿಯನ್ನು ತೆಗೆದರು.

ಆದಿಕಾಂಡ 37:24

ಅವನನ್ನು ತಕ್ಕೊಂಡು ತಗ್ಗಿನಲ್ಲಿ ಹಾಕಿದರು; ಆ ತಗ್ಗು ನೀರಿಲ್ಲದೆ ಬರಿದಾಗಿತ್ತು.

ಆದಿಕಾಂಡ 41:9

ಆಗ ಪಾನದಾಯಕರ ಮುಖ್ಯಸ್ಥನು ಫರೋಹ ನಿಗೆ--ಈ ಹೊತ್ತು ನನ್ನ ತಪ್ಪುಗಳನ್ನು ಜ್ಞಾಪಕ ಮಾಡಿಕೊಳ್ಳುತ್ತೇನೆ;

ಆದಿಕಾಂಡ 44:16

ಯೆಹೂದನು--ನಾವು ನಮ್ಮ ಒಡೆಯ ನಿಗೆ ಏನು ಹೇಳೋಣ? ಏನು ಮಾತನಾಡೋಣ? ಹೇಗೆ ನಮ್ಮನ್ನು ನಾವು ನಿರ್ದೋಷಿಗಳೆಂದು ತೋರಿಸಿ ಕೊಳ್ಳೋಣ? ನಿನ್ನ ದಾಸರ ಪಾಪವನ್ನು ದೇವರು ಕಂಡುಕೊಂಡಿದ್ದಾನೆ. ಇಗೋ, ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನೂ ನಾವೂ ನಮ್ಮ ಒಡೆಯ ನಿಗೆ ದಾಸರಾಗಿದ್ದೇವೆ ಅಂದನು.

ಅಂಕೆಗಳ ಪುಸ್ತಕ 32:23

ಆದರೆ ನೀವು ಈ ಪ್ರಕಾರ ಮಾಡದಿದ್ದರೆ ಇಗೋ, ಕರ್ತನಿಗೆ ವಿರೋಧವಾಗಿ ಪಾಪಮಾಡಿದವರಾಗುವಿರಿ; ನಿಮ್ಮ ಪಾಪ ನಿಮ್ಮನ್ನು ಹಿಡಿದುಕೊಳ್ಳುವದೆಂದು ತಿಳುಕೊಳ್ಳಿರಿ.

ನ್ಯಾಯಾಧಿಪತಿಗಳು 1:7

ಆಗ ಅದೋನೀಬೆಜೆಕನು--ನಾನು ಕೈಕಾಲು ಗಳ ಹೆಬ್ಬೆರಳುಗಳನ್ನು ಕತ್ತರಿಸಿದ ಎಪ್ಪತ್ತು ಮಂದಿ ಅರಸುಗಳು ನನ್ನ ಮೇಜಿನ ಕೆಳಗೆ ತಮ್ಮ ಆಹಾರ ವನ್ನು ಕೂಡಿಸಿದರು; ನಾನು ಹೇಗೆ ಮಾಡಿದೆನೋ ಹಾಗಾಯೇ ದೇವರು ನನಗೆ ಮುಯ್ಯಿಗೆ ಮುಯ್ಯಿಮಾಡಿದ್ದಾನೆ ಅಂದನು. ಅವನನ್ನು ಯೆರೂಸಲೇಮಿಗೆ ತಕ್ಕೊಂಡು ಬಂದರು; ಅವನು ಅಲ್ಲಿ ಸತ್ತನು.

2 ಸಮುವೇಲ 12:13

ಆಗ ದಾವೀದನು ನಾತಾನನಿಗೆ--ನಾನು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆನು ಅಂದನು. ನಾತಾನನು ದಾವೀದನಿಗೆ--ನೀನು ಸಾಯದಹಾಗೆ ಕರ್ತನು ನಿನ್ನ ಪಾಪವನ್ನು ಪರಿಹರಿಸಿದನು.

1 ಅರಸುಗಳು 17:18

ಆಗ ಅವಳು ಎಲೀಯ ನಿಗೆ--ಓ ದೇವರ ಮನುಷ್ಯನೇ, ನನಗೂ ನಿನಗೂ ಏನು? ನನ್ನ ಅಕ್ರಮವನ್ನು ಜ್ಞಾಪಕಪಡಿಸುವ ದಕ್ಕೂ ನನ್ನ ಮಗನು ಸಾಯುವದಕ್ಕೂ ನನ್ನ ಬಳಿಗೆ ಬಂದಿಯೋ ಅಂದಳು.

ಯೋಬ 33:27

ಆತನು ಮನುಷ್ಯರನ್ನು ನೋಡಿ--ಯಾವನಾದರೂ--ನಾನು ಪಾಪಮಾಡಿ; ನ್ಯಾಯವನ್ನು ವಕ್ರಮಾಡಿದ್ದೇನೆ, ಆದರೆ ನನಗೆ ಅದರಿಂದ ಲಾಭವಾಗಲಿಲ್ಲ ಎಂದು ಹೇಳಿದರೆ;

ಯೋಬ 34:31

ನಿಶ್ಚಯವಾಗಿ ದೇವರಿಗೆ ಹೇಳತಕ್ಕದ್ದೇನಂದರೆ--ನಾನು ಶಿಕ್ಷೆಯನ್ನು ತಾಳಿದ್ದೇನೆ, ಇನ್ನು ಮೇಲೆ ಕೆಟ್ಟತನ ಮಾಡುವದಿಲ್ಲ.

ಯೋಬ 36:8

ಆದರೆ ಸಂಕೋಲೆ ಗಳಿಂದ ಕಟ್ಟಲ್ಪಟ್ಟಿದ್ದಾರೆ. ಬಾಧೆಯ ಬಂಧಗಳಿಂದ ಹಿಡಿಯಲ್ಪಟ್ಟಿದ್ದಾರೆ.

ಸಾಮೇತಿಗಳು 1:27

ನಿಮ್ಮ ಭಯವು ತೀವ್ರ ದುಃಖದಂತೆಯೂ ನಿಮ್ಮ ನಾಶನವು ತುಫಾನಿನಂತೆಯೂ ಬರುವಾಗ ಅಪಾಯ ಮತ್ತು ಆಪತ್ತು ನಿಮ್ಮ ಮೇಲೆ ಬರುವಾಗ ನಾನು ಸಹ ನಕ್ಕು ಪರಿಹಾಸ್ಯಮಾಡುವೆನು.

ಸಾಮೇತಿಗಳು 21:13

ಬಡವರ ಕೂಗಿಗೆ ತನ್ನ ಕಿವಿಗಳನ್ನು ಮುಚ್ಚಿಕೊಳ್ಳುವವನು ತಾನು ಕೂಗಿದಾಗ ಯಾರೂ ಅವನಿಗೆ ಉತ್ತರಕೊಡುವದಿಲ್ಲ.

ಸಾಮೇತಿಗಳು 24:11

ಮರಣಕ್ಕೆ ಸೆಳೆಯ ಲ್ಪಟ್ಟವನನ್ನು ಬಿಡಿಸುವದಕ್ಕೂ ವಧಿಸಲ್ಪಡುವದಕ್ಕೆ ಸಿದ್ಧವಾದವರನ್ನು ನೀನು ರಕ್ಷಿಸಲೂ ಹಿಂದೆಗೆದರೆ

ಸಾಮೇತಿಗಳು 28:17

ಒಬ್ಬ ಮನುಷ್ಯನ ರಕ್ತಕ್ಕೆ ಬಲಾತ್ಕಾರ ಮಾಡುವವನು ಕುಣಿಗೆ ಹಾರುವನು; ಅವನನ್ನು ಯಾವನೂ ತಡೆಯದಿರಲಿ.

ಯೆರೆಮಿಯ 2:17

ಆತನು ನಿನ್ನನ್ನು ದಾರಿಯಲ್ಲಿ ನಡೆಸುತ್ತಿರುವಾಗ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟಿದ್ದರಿಂದಲೇ ಇದನ್ನು ನಿನಗೆ ನೀನೇ ಮಾಡಿಕೊಂಡಿ ಅಲ್ಲವೋ?

ಯೆರೆಮಿಯ 2:19

ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವದು; ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವವು; ಹೀಗಿ ರುವದರಿಂದ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟದ್ದೂ ನನ್ನ ಭಯವೂ ನಿನ್ನಲ್ಲಿ ಇಲ್ಲದಿರುವದೂ ಕೆಟ್ಟದ್ದೂ ಕಹಿಯಾದದ್ದೂ ಎಂದು ತಿಳುಕೊಂಡು ನೋಡು ಎಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ.

ಯೆರೆಮಿಯ 4:18

ನಿನ್ನ ಮಾರ್ಗಗಳು ನಿನ್ನ ಕ್ರಿಯೆಗಳು ಇವುಗಳನ್ನು ನಿನಗೆ ಉಂಟುಮಾಡಿದವು, ಇದು ನಿನ್ನ ಕೆಟ್ಟತನವೇ; ಅದು ಕಹಿಯಾದದ್ದಲ್ಲವೋ? ನಿನ್ನ ಹೃದಯಕ್ಕೆ ತಾಕುತ್ತದ್ದಲ್ಲವೋ?

ಯೆರೆಮಿಯ 34:17

ಇಸ್ರಾಯೇಲಿನ ದೇವರೂ ಸೈನ್ಯಗಳ ದೇವರಾದ ಕರ್ತನೂ ಹೇಳುವದೇನಂದರೆ--ಇಗೋ, ನಾನು ಯೆಹೂದದ ಮೇಲೆಯೂ ಯೆರೂಸಲೇಮಿನ ನಿವಾಸಿ ಗಳೆಲ್ಲರ ಮೇಲೆಯೂ ಅವರ ವಿಷಯವಾಗಿ ಹೇಳಿದ ಕೇಡನ್ನೆಲ್ಲಾ ಬರಮಾಡುತ್ತೇನೆ; ನಾನು ಅವರ ಸಂಗಡ ಮಾತನಾಡುವಾಗ ಅವರು ಕೇಳಲಿಲ್ಲ ಅವರನ್ನು ಕರೆಯು ವಾಗ ಉತ್ತರ ಕೊಡಲಿಲ್ಲ.

ಹೊಶೇಯ 5:15

ತಾವು ತಮ್ಮ ಅಪರಾಧವನ್ನು ಅರಿಕೆಮಾಡಿ ನನ್ನ ಮುಖವನ್ನು ಹುಡುಕುವ ವರೆಗೂ ನಾನು ತಿರುಗಿ ಕೊಂಡು ನನ್ನ ಸ್ಥಳಕ್ಕೆ ಹೋಗುವೆನು, ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.

ಮತ್ತಾಯ 7:2

ನೀವು ಮಾಡುವ ತೀರ್ಪಿ ನಿಂದಲೇ ನಿಮಗೆ ತೀರ್ಪಾಗುವದು; ಮತ್ತು ನೀವು ಅಳೆಯುವ ಅಳತೆಯಿಂದಲೇ ನಿಮಗೆ ತಿರಿಗಿ ಅಳತೆ ಯಾಗುವದು.

ಮತ್ತಾಯ 27:3

ಆಗ ಆತನನ್ನು ಹಿಡುಕೊಟ್ಟ ಯೂದನು ಆತನಿಗೆ ಮರಣದಂಡನೆಯ ತೀರ್ಪಾದದ್ದನ್ನು ನೋಡಿ ಪಶ್ಚಾ ತ್ತಾಪಪಟ್ಟು ಆ ಮೂವತ್ತು ಬೆಳ್ಳಿಯ ನಾಣ್ಯಗಳನು ತಿರಿಗಿ ಪ್ರಧಾನ ಯಾಜಕರ ಮತ್ತು ಹಿರಿಯರ ಬಳಿಗೆ ತಂದು

ಮಾರ್ಕ 9:43

ನಿನ್ನ ಕೈ ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದುಹಾಕು; ಯಾಕಂದರೆ ಎರಡು ಕೈಗಳು ಳ್ಳವನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹೋಗುವದಕ್ಕಿಂತ ಅಂಗಹೀನನಾಗಿ ಜೀವದಲ್ಲಿ ಸೇರು ವದು ನಿನಗೆ ಒಳ್ಳೇದು;

ಮಾರ್ಕ 9:48

ಅಲ್ಲಿ ಅವರ ಹುಳವು ಸಾಯುವದಿಲ್ಲ ಮತ್ತು ಬೆಂಕಿಯು ಆರುವದಿಲ್ಲ.

ಲೂಕ 16:28

ನನಗೆ ಐದುಮಂದಿ ಸಹೋದರರಿದ್ದಾರೆ; ಅವರು ಸಹ ಈ ಯಾತನೆಯ ಸ್ಥಳಕ್ಕೆ ಬಾರದ ಹಾಗೆ ಇವನು ಅವರಿಗೆ ಸಾಕ್ಷಿ ಕೊಡಲಿ ಅಂದನು.

ಅಪೋಸ್ತಲರ ಕೃತ್ಯಗಳು 19:18

ನಂಬಿದ ಅನೇಕರು ಬಂದು ಒಪ್ಪಿಕೊಂಡು ತಮ್ಮ ಕ್ರಿಯೆಗಳನ್ನು ತೋರಿಸಿ ದರು.

ಯಾಕೋಬ 2:13

ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.

1 ಯೋಹಾನ 1:9

ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.

Interlinear

Choose Theme