ಆಗ ರೂಬೇನನು ಅವರಿಗೆ ಪ್ರತ್ಯುತ್ತರವಾಗಿ--ಆ ಹುಡುಗನಿಗೆ ಏನೂ ಕೇಡುಮಾಡಬೇಡಿರಿ ಎಂದು ನಾನು ನಿಮಗೆ ಹೇಳಿ ದಾಗ್ಯೂ ನೀವು ಕೇಳಲಿಲ್ಲ. ಆದದರಿಂದ ಈಗ ಇಗೋ, ಅವನ ರಕ್ತವು ನಮ್ಮ ಮೇಲೆ ಇದೆ ಅಂದನು.
Cross references
ಆತನು--ನೀನು ಮಾಡಿದ್ದೇನು? ನಿನ್ನ ಸಹೋದರನ ರಕ್ತದ ಸ್ವರವು ಭೂಮಿಯಿಂದ ನನ್ನನ್ನು ಕೂಗುತ್ತದೆ.
ಇದಲ್ಲದೆ ನಿಮ್ಮ ಪ್ರಾಣಗಳಿಗೋಸ್ಕರ ನಿಮ್ಮ ರಕ್ತವನ್ನು ನಾನು ಖಂಡಿತವಾಗಿಯೂ ವಿಚಾರಿಸುವೆನು.
ಎಲ್ಲಾ ಮೃಗಗಳಿಂದ ಅದನ್ನು ವಿಚಾರಿಸುವೆನು. ಮನುಷ್ಯನ ಪ್ರಾಣವನ್ನು ಮನುಷ್ಯನಿಂದಲೂ ಅವ ನವನ ಸಹೋದರನಿಂದಲೂ ವಿಚಾರಿಸುವೆನು. ಯಾವನು ಮನುಷ್ಯನ ರಕ್ತವನ್ನು ಸುರಿಸುವನೋ ಅವನ ರಕ್ತವು ಮನುಷ್ಯನಿಂದಲೇ ಸುರಿಸಲ್ಪಡುವದು. ಯಾಕಂದರೆ ದೇವರು ತನ್ನ ಸ್ವರೂಪದಲ್ಲಿ ಮನುಷ್ಯ ನನ್ನು ಉಂಟುಮಾಡಿದನು.
ಆದರೆ ರೂಬೇನನು ಅದನ್ನು ಕೇಳಿ ಅವನನ್ನು ಅವರ ಕೈಗಳಿಂದ ತಪ್ಪಿಸಿ--ಅವನನ್ನು ಕೊಲ್ಲುವದು ಬೇಡ ಅಂದನು.
ರೂಬೇನನು ತಗ್ಗಿನ ಬಳಿಗೆ ತಿರಿಗಿ ಬಂದಾಗ ಇಗೋ, ಯೋಸೇಫನು ತಗ್ಗಿನಲ್ಲಿ ಇಲ್ಲದ್ದರಿಂದ ತನ್ನ ವಸ್ತ್ರಗಳನ್ನು ಹರಿದು ಕೊಂಡನು.
ಹಾಗೆಯೇ ಯೋನಾತಾನನು ತನ್ನ ತಂದೆಯಾದ ಸೌಲನ ಸಂಗಡ ದಾವೀದನನ್ನು ಕುರಿತು ಒಳ್ಳೇದನ್ನು ಮಾತನಾಡಿ ಅವನಿಗೆ--ಅರಸನು ತನ್ನ ಸೇವಕನಾದ ದಾವೀದನಿಗೆ ವಿರೋಧವಾಗಿ ಪಾಪಮಾಡದೆ ಇರಲಿ, ಅವನು ನಿನಗೆ ವಿರೋಧವಾಗಿ ಪಾಪಮಾಡಲಿಲ್ಲ; ಅವನ ಕ್ರಿಯೆಗಳು ನಿನಗೆ ಬಹಳ ಉತ್ತಮವಾಗಿವೆ;
ಆಗ ಕರ್ತನು ಅವನ ತಲೆಯ ಮೇಲೆ ಅವನ ರಕ್ತಾಪರಾಧ ವನ್ನು ಬರಮಾಡುವನು. ನನ್ನ ತಂದೆಯಾದ ದಾವೀ ದನು ತಿಳಿಯದಿರುವಾಗ ಅವನು ತನಗಿಂತ ನೀತಿಯುಳ್ಳ ಉತ್ತಮರಾದ ಇಬ್ಬರ ಮೇಲೆ ಬಿದ್ದು ಅವರನ್ನು ಕತ್ತಿ ಯಿಂದ ಕೊಂದನು. ಅವರು ಯಾರಂದರೆ, ಇಸ್ರಾ ಯೇಲಿನ ಸೈನ್ಯಕ್ಕೆ ಅಧಿಪತಿಯಾಗಿದ್ದ ನೇರನ ಮಗನಾದ ಅಬ್ನೇರನೂ ಯೆಹೂದ ಸೈನ್ಯಕ್ಕೆ ಅಧಿಪತಿಯಾಗಿದ್ದ ಯೆತೆರನ ಮಗನಾದ ಅಮಾಸನೂ.
ಆದದರಿಂದ ಅವರ ರಕ್ತಾಪರಾಧವು ಯೋವಾಬನ ತಲೆಯ ಮೇಲೆ ಯೂ ಅವನ ಸಂತತಿಯವರ ತಲೆಯ ಮೇಲೆಯೂ ಯುಗಯುಗಕ್ಕೂ ಇರುವದು. ಆದರೆ ದಾವೀದನ ಮೇಲೆಯೂ ಅವನ ಸಂತಾನದವರ ಮೇಲೆಯೂ ಮನೆಯ ಮೇಲೆಯೂ ಸಿಂಹಾಸನದ ಮೇಲೆಯೂ ಕರ್ತನಿಂದ ಸಮಾಧಾನವು ಯುಗಯುಗಾಂತರಕ್ಕೂ ಇರುವದು ಅಂದನು.
ಹಾಗೆಯೇ ಇವನ ತಂದೆಯಾದ ಯೆಹೋಯಾದನು ತನಗೆ ತೋರಿಸಿದ ಕೃಪೆಯನ್ನು ಜ್ಞಾಪಕಮಾಡದೆ ಅರಸನಾದ ಯೆಹೋವಾಷನು ಅವನ ಮಗನನ್ನು ಕೊಂದುಹಾಕಿದನು. ಇವನು ಸಾಯುವಾಗ--ಕರ್ತನು ನೋಡಿ ವಿಚಾರಿಸಲಿ ಎಂದು ಹೇಳಿದನು.
ಆತನು ರಕ್ತಾಪರಾಧವನ್ನು ವಿಚಾರಿಸುವಾಗ ಅವರನ್ನು ಜ್ಞಾಪಕಮಾಡಿಕೊಳ್ಳುವನು; ಆತನು ದೀನರ ಕೂಗನ್ನು ಮರೆತುಬಿಡನು.
ನಾನು ದುಷ್ಟನಿಗೆ--ನೀನು ನಿಶ್ಚಯವಾಗಿ ಸಾಯುವಿ ಯೆಂದು ಹೇಳುವಾಗ ನೀನು ಅವನನ್ನು ಎಚ್ಚರಿಸದೆ ಅವನನ್ನು ಬದುಕಿಸುವ ಹಾಗೆ ದುಷ್ಟನನ್ನು ಅವನ ದುಷ್ಟಮಾರ್ಗದ ವಿಷಯದಲ್ಲಿ ಎಚ್ಚರಿಸಿ ಮಾತನಾಡದೆ ಹೋದರೆ ಆ ದುಷ್ಟನು ತನ್ನ ಅಕ್ರಮದಲ್ಲೇ ಸಾಯು ವನು. ಆದರೆ ಅವನ ರಕ್ತವನ್ನು ನಿನ್ನ ಕೈಯಿಂದ ದುಷ್ಟತ್ವ ಕ್ಕಾಗಿ ನಾನು ವಿಚಾರಿಸುವೆನು.
ಹೀಗೆ ಜಗತ್ತಿನ ಅಸ್ತಿವಾರ ಮೊದಲುಗೊಂಡು ಸುರಿಸಲ್ಪಟ್ಟ ಎಲ್ಲಾ ಪ್ರವಾದಿಗಳ ರಕ್ತಕ್ಕೆ ಈ ಸಂತತಿಯು ಉತ್ತರ ಕೊಡಬೇಕಾಗಿರುವದು.
ನಾವಂತೂ ನ್ಯಾಯವಾಗಿಯೇ ನಮ್ಮ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಹೊಂದುತ್ತಾ ಇದ್ದೇವೆ; ಈತನಾದರೋ ತಪ್ಪಾದದ್ದೇನೂ ಮಾಡಲಿಲ್ಲ ಅಂದನು.
ಆ ವಿಷಜಂತು ಅವನ ಕೈಯಿಂದ ಜೋತಾಡುವದನ್ನು ಆ ಅನಾಗರಿಕರು ನೋಡಿ--ಈ ಮನುಷ್ಯನು ಸಮುದ್ರದಿಂದ ತಪ್ಪಿಸಿ ಕೊಂಡರೂ ಪ್ರತೀಕಾರವು ಇವನನ್ನು ಬದುಕಗೊಡಿಸು ವದಿಲ್ಲ. ಇವನು ನಿಸ್ಸಂದೇಹವಾಗಿ ಕೊಲೆ ಪಾತಕನು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.
ಅವರ ಮನಸ್ಸಾಕ್ಷಿಯು ಸಹ ಸಾಕ್ಷಿಕೊಟ್ಟು ಅವರ ಯೋಚನೆಗಳು ಒಂದಕ್ಕೊಂದು ತಪ್ಪುಹೊರಿಸುತ್ತಾ ಇಲ್ಲವೆ ಪ್ರತಿವಾದ ಮಾಡುತ್ತಾ ಇರುವದರಿಂದ ಅವರು ತಮ್ಮ ಹೃದಯ ಗಳಲ್ಲಿ ಬರೆದಿರುವ ನ್ಯಾಯಪ್ರಮಾಣದ ಕ್ರಿಯೆಗಳನ್ನು ತೋರಿಸುತ್ತಾರೆ).
ಸೆರೆಗೆ ನಡಿಸುವವನು ಸೆರೆಗೆ ಹೋಗುವನು; ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲೆಯಾಗಬೇಕು. ಇದರಲ್ಲಿ ಪರಿ ಶುದ್ಧರ ತಾಳ್ಮೆಯೂ ನಂಬಿಕೆಯೂ ಇರುತ್ತದೆ.
ಮನುಷ್ಯರು ಬಲವಾದ ಕಾವಿನಿಂದ ಕಂದಿಹೋದರೂ ಅವರು ದೇವರನ್ನು ಘನಪಡಿಸುವ ಹಾಗೆ ಮಾನಸಾಂತರ ಮಾಡಿಕೊಳ್ಳದೆ ಈ ಉಪದ್ರವ ಗಳ ಮೇಲೆ ಅಧಿಕಾರವುಳ್ಳ ದೇವರ ನಾಮವನ್ನು ದೂಷಿಸಿದರು.