ಆದರೆ ಅವನು--ನನ್ನ ಮಗನು ನಿಮ್ಮ ಸಂಗಡ ಹೋಗಬಾರದು; ಅವನ ಅಣ್ಣನು ಸತ್ತುಹೋಗಿ ಅವನೊಬ್ಬನೇ ಉಳಿದಿದ್ದಾನೆ; ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ ಮುದಿ ಪ್ರಾಯದಲ್ಲಿ ನನ್ನನ್ನು ದುಃಖದಿಂದ ಸಮಾಧಿಗೆ ಹೋಗುವಂತೆ ಮಾಡುವಿರಿ ಅಂದನು.
Cross references
ಆಗ ದೇವರು ರಾಹೇಲಳನ್ನು ಜ್ಞಾಪಕಮಾಡಿ ಕೊಂಡನು. ದೇವರು ಆಕೆಯನ್ನು ಆಲೈಸಿ ಆಕೆಯ ಗರ್ಭವನ್ನು ತೆರೆದನು.
ಬೇತೇಲಿನಿಂದ ಅವರು ಪ್ರಯಾಣಮಾಡಿ ಎಫ್ರಾತೂರಿಗೆ ಇನ್ನೂ ಸ್ವಲ್ಪ ದೂರ ಇರುವಾಗ ರಾಹೇಲಳು ಪ್ರಸವವೇದನೆಪಡುತ್ತಾ ಕಷ್ಟಪಟ್ಟಳು.
ಯಾಕೋಬನು ಅದನ್ನು ಗುರುತು ಹಿಡಿದು--ಇದು ನನ್ನ ಮಗನ ಅಂಗಿ ಹೌದು; ದುಷ್ಟಮೃಗವು ಅವನನ್ನು ತಿಂದುಬಿಟ್ಟಿತು; ಯೋಸೇಫನು ನಿಸ್ಸಂದೇಹವಾಗಿ ತುಂಡು ತುಂಡಾಗಿ ಮಾಡಲ್ಪಟ್ಟಿದ್ದಾನೆ ಅಂದನು.
ಅವನ ಕುಮಾರ ಕುಮಾರ್ತೆಯರೆಲ್ಲಾ ಅವನನ್ನು ಆದರಿಸಿದಾಗ್ಯೂ ಅವನು ಆದರಣೆ ಹೊಂದಲೊಲ್ಲದೆ--ನನ್ನ ಮಗನ ಬಳಿಗೆ ಸಮಾಧಿಗೆ ದುಃಖದಿಂದಲೇ ಇಳಿದು ಹೋಗು ವೆನು ಅಂದನು. ಹೀಗೆ ಅವನ ತಂದೆ ಅವನಿಗೋಸ್ಕರ ಅತ್ತನು.ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ಐಗುಪ್ತದಲ್ಲಿ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದನು. ಅವನು ಮೈಗಾವಲಿನ ದಳವಾಯಿಯಾಗಿದ್ದನು.
ಆದರೆ ಯಾಕೋಬನು ಯೋಸೆಫನ ತಮ್ಮನಾದ ಬೆನ್ಯಾವಿಾನ ನಿಗೆ ಕೇಡುಬಂದೀತು ಎಂದು ಹೇಳಿ ಅಣ್ಣಂದಿರ ಸಂಗಡ ಅವನನ್ನು ಕಳುಹಿಸಲಿಲ್ಲ.
ಅದಕ್ಕವರು--ನಿನ್ನ ದಾಸರಾದ ನಾವು ಹನ್ನೆರಡು ಮಂದಿ ಸಹೋದರರು; ನಾವು ಕಾನಾನ್ ದೇಶದಲ್ಲಿರುವ ಒಬ್ಬ ಮನುಷ್ಯನ ಮಕ್ಕಳು. ಇಗೋ, ಈಗ ಚಿಕ್ಕವನು ನಮ್ಮ ತಂದೆಯೊಂದಿಗೆ ಇದ್ದಾನೆ. ಮತ್ತೊಬ್ಬನು ಇಲ್ಲ ಎಂದು ಹೇಳಿದರು.
ನಿಮ್ಮ ಸಹೋದರನನ್ನು ಕರಕೊಂಡು ಎದ್ದು ಆ ಮನುಷ್ಯನ ಬಳಿಗೆ ತಿರಿಗಿ ಹೋಗಿರಿ.
ನಾವು ನಮ್ಮ ಒಡೆಯನಿಗೆ--ನಮಗೆ ಮುದುಕನಾದ ತಂದೆಯೂ ಅವನಿಗೆ ಮುದಿಪ್ರಾಯದಲ್ಲಿ ಹುಟ್ಟಿದ ಚಿಕ್ಕಮಗನೂ ಇದ್ದಾರೆ; ಅವನ ಸಹೋದರನು ಸತ್ತುಹೋಗಿದ್ದಾನೆ. ಆದದರಿಂದ ಅವನೊಬ್ಬನೇ ತನ್ನ ತಾಯಿಗೆ ಉಳಿದಿದ್ದಾನೆ. ಅವನ ತಂದೆಯು ಅವನನ್ನು ಪ್ರೀತಿ ಮಾಡುತ್ತಾನೆ ಎಂದು ಹೇಳಿದೆವು.
ನಾವು ನಮ್ಮ ಒಡೆಯನಿಗೆಆ ಹುಡುಗನು ತನ್ನ ತಂದೆಯನ್ನು ಅಗಲಕೂಡದು. ಅವನು ತಂದೆಯನ್ನು ಬಿಟ್ಟಗಲಿದರೆ ತಂದೆಯು ಸಾಯುವನು ಎಂದು ಹೇಳಿದೆವು.
ಅದಕ್ಕೆ ನಿನ್ನ ದಾಸನಾದ ನನ್ನ ತಂದೆಯು--ನನ್ನ ಹೆಂಡತಿಯು ನನಗೆ ಇಬ್ಬರು ಕುಮಾರರನ್ನು ಹೆತ್ತಳೆಂಬದು ನಿಮಗೆ ತಿಳಿದಿದೆ.
ಆದಕಾರಣ ನೀನು ನಿನ್ನ ಜ್ಞಾನದ ಪ್ರಕಾರ ಮಾಡಿ ಅವನ ನರೆ ತಲೆಯನ್ನು ಸಮಾಧಾನದಿಂದ ಸಮಾಧಿಗೆ ಇಳಿಯಗೊಡಿಸದಿರು.
ತನ್ನ ಹಿಂದೆ ಹಾದಿ ಬೆಳಗುವಂತೆ ಅದು ಮಾಡುತ್ತದೆ. ಅಗಾಧವು ನರೆ ಕೂದಲಿನ ಹಾಗೆ ಇರುವದೆಂದು ಒಬ್ಬನು ಯೋಚಿಸುತ್ತಾನೆ.
ಓ ದೇವರೇ, ನಾನು ಮುಪ್ಪಿನವನೂ ನರೆ ಕೂದಲಿನವನೂ ಆದಾಗ ಈ ಸಂತತಿಯವರಿಗೆ ನಿನ್ನ ಶಕ್ತಿಯನ್ನೂ ಮುಂದೆ ಬರುವ ಪ್ರತಿಯೊಬ್ಬನಿಗೆ ನಿನ್ನ ಅಧಿಕಾರವನ್ನೂ ತಿಳಿಸುವ ವರೆಗೂ ನನ್ನನ್ನು ಕೈಬಿಡಬೇಡ.
ನಮ್ಮ ಆಯುಷ್ಕಾಲವು ಎಪ್ಪತ್ತು ವರುಷ, ಬಲದಿಂದಿದ್ದರೆ ಎಂಭತ್ತು ವರುಷ; ಆದಾಗ್ಯೂ ಅವು ಗಳ ಬಲವು ಪ್ರಯಾಸವೂ ದುಃಖವೂ ಆಗಿವೆ; ಅದು ಬೇಗ ಕೊಯಿದು ಹಾಕಲ್ಪಡುತ್ತದೆ; ನಾವು ಹಾರಿ ಹೋಗುತ್ತೇವೆ.
ಸೂರ್ಯನ ಕೆಳಗೆ ನಡೆಯುವ ಎಲ್ಲಾ ಕೆಲಸಗಳನ್ನು ನಾನು ನೋಡಿದ್ದೇನೆ; ಇಗೋ, ಎಲ್ಲವು ವ್ಯರ್ಥವೂ ಮನಸ್ಸಿಗೆ ಆಯಾಸವೂ ಆಗಿವೆ.
ದೇವರು ತನ್ನ ದೃಷ್ಟಿಯಲ್ಲಿ ಒಳ್ಳೆಯ ವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ದಯಪಾಲಿಸುತ್ತಾನೆ; ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವದಕ್ಕಾಗಿ ಕೂಡಿಸಿ ಒದಗಿಸು ವಂತೆ ಪಾಪಿಗೆ ಪ್ರಯಾಸವನ್ನು ಕೊಡುತ್ತಾನೆ. ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
ನನ್ನ ದಿವಸಗಳು ಕಡಿಮೆ ಮಾಡಲ್ಪಟ್ಟದ್ದರಿಂದ ನಾನು ಪಾತಾಳದ ದ್ವಾರ ಗಳೊಳಗೆ ಹೋಗಬೇಕು ನನ್ನ ಆಯುಷ್ಯದಲ್ಲಿ ಮಿಕ್ಕಾ ದದ್ದು ನನಗೆ ತಪ್ಪಿಹೋಯಿತು ಎಂದು ಅಂದು ಕೊಂಡನು.
ನಿಮ್ಮ ಮುಪ್ಪಿನ ಪ್ರಾಯದ ವರೆಗೆ ನಾನೇ (ಆಧಾರ) ನರೆಗೂದಲು ಬಂದಾಗಲೂ ನಾನು ನಿಮ್ಮನ್ನು ಹೊರುವೆನು, ನಾನೇ ಉಂಟುಮಾಡಿದೆನು, ನಾನೇ ಹೊರುವೆನು, ಅಂತೂ ನಾನು ನಿಮ್ಮನ್ನು ಹೊತ್ತು ಬಿಡುಗಡೆ ಮಾಡುವೆನು.