ಆದರೆ ಯಾಕೋಬನು ಯೋಸೆಫನ ತಮ್ಮನಾದ ಬೆನ್ಯಾವಿಾನ ನಿಗೆ ಕೇಡುಬಂದೀತು ಎಂದು ಹೇಳಿ ಅಣ್ಣಂದಿರ ಸಂಗಡ ಅವನನ್ನು ಕಳುಹಿಸಲಿಲ್ಲ.
Cross references
ಇದ ಲ್ಲದೆ ಕರ್ತನಾದ ದೇವರು--ಇಗೋ, ಮನುಷ್ಯನು ಒಳ್ಳೇದರ ಕೆಟ್ಟದರ ಭೇದವನ್ನು ತಿಳಿದು ನಮ್ಮಲ್ಲಿ ಒಬ್ಬನಂತಾದನು; ಈಗ ಅವನು ಕೈಚಾಚಿ ಜೀವವೃಕ್ಷದ ಫಲವನ್ನು ತೆಗೆದು ತಿಂದು ಎಂದೆಂದಿಗೂ ಬದುಕ ಬಾರದು ಅಂದನು.
ಅವರು--ಬನ್ನಿರಿ, ಭೂಮಿಯ ಮೇಲೆಲ್ಲಾ ನಾವು ಚದರಿಹೋಗದ ಹಾಗೆ ಆಕಾಶವನ್ನು ಮುಟ್ಟುವ ಒಂದು ಪಟ್ಟಣವನ್ನೂ ಗೋಪುರವನ್ನೂ ನಮಗಾಗಿ ಕಟ್ಟಿಕೊಂಡು ನಾವು ಹೆಸರನ್ನು ಪಡೆಯೋಣ ಅಂದರು;
ಯಾಕೋಬನು ಕಣ್ಣೆತ್ತಿ ನೋಡಿದಾಗ ಇಗೋ, ಏಸಾವನು ನಾನೂರು ಮಂದಿ ಮನುಷ್ಯರ ಸಂಗಡ ಬರುತ್ತಿದ್ದನು. ಆಗ ಅವನು ಲೇಯಳಿಗೂ ರಾಹೇಲಳಿಗೂ ಇಬ್ಬರು ದಾಸಿಯರಿಗೂ ಅವರವರ ಮಕ್ಕಳನ್ನು ಒಪ್ಪಿಸಿ ಅವರನ್ನು ಬೇರೆ ಬೇರೆ ಮಾಡಿದನು.
ಬೇತೇಲಿನಿಂದ ಅವರು ಪ್ರಯಾಣಮಾಡಿ ಎಫ್ರಾತೂರಿಗೆ ಇನ್ನೂ ಸ್ವಲ್ಪ ದೂರ ಇರುವಾಗ ರಾಹೇಲಳು ಪ್ರಸವವೇದನೆಪಡುತ್ತಾ ಕಷ್ಟಪಟ್ಟಳು.
ಆದರೆ ಅವನು--ನನ್ನ ಮಗನು ನಿಮ್ಮ ಸಂಗಡ ಹೋಗಬಾರದು; ಅವನ ಅಣ್ಣನು ಸತ್ತುಹೋಗಿ ಅವನೊಬ್ಬನೇ ಉಳಿದಿದ್ದಾನೆ; ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ ಮುದಿ ಪ್ರಾಯದಲ್ಲಿ ನನ್ನನ್ನು ದುಃಖದಿಂದ ಸಮಾಧಿಗೆ ಹೋಗುವಂತೆ ಮಾಡುವಿರಿ ಅಂದನು.
ಸರ್ವಶಕ್ತನಾದ ದೇವರು ನಿಮ್ಮ ಬೇರೆ ಸಹೋದರ ನನ್ನೂ ಬೆನ್ಯಾವಿಾನನನ್ನೂ ಕಳುಹಿಸಿ ಕೊಡುವಹಾಗೆ ಆ ಮನುಷ್ಯನು ನಿಮ್ಮ ಮೇಲೆ ಕರುಣೆ ತೋರಿಸುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳಕೊಂಡವನಾಗಿರಬೇಕಾದರೆ ಹಾಗೆಯೇ ಆಗಲಿ ಅಂದನು.
ಆಗ ಅವನು ತನ್ನ ಕಣ್ಣು ಗಳನ್ನೆತ್ತಿ ತನ್ನ ತಾಯಿಯ ಮಗನೂ ತನ್ನ ತಮ್ಮನೂ ಆದ ಬೆನ್ಯಾವಿಾನನನ್ನು ನೋಡಿ--ನೀವು ನನಗೆ ಹೇಳಿದ ನಿಮ್ಮ ತಮ್ಮನು ಇವನೋ ಎಂದು ಹೇಳಿ ಅವನು--ನನ್ನ ಮಗನೇ, ದೇವರು ನಿನಗೆ ಕೃಪಾಳು ವಾಗಿರಲಿ ಅಂದನು.
ನಾವು ನಮ್ಮ ಒಡೆಯನಿಗೆ--ನಮಗೆ ಮುದುಕನಾದ ತಂದೆಯೂ ಅವನಿಗೆ ಮುದಿಪ್ರಾಯದಲ್ಲಿ ಹುಟ್ಟಿದ ಚಿಕ್ಕಮಗನೂ ಇದ್ದಾರೆ; ಅವನ ಸಹೋದರನು ಸತ್ತುಹೋಗಿದ್ದಾನೆ. ಆದದರಿಂದ ಅವನೊಬ್ಬನೇ ತನ್ನ ತಾಯಿಗೆ ಉಳಿದಿದ್ದಾನೆ. ಅವನ ತಂದೆಯು ಅವನನ್ನು ಪ್ರೀತಿ ಮಾಡುತ್ತಾನೆ ಎಂದು ಹೇಳಿದೆವು.
ಅದಕ್ಕೆ ನಿನ್ನ ದಾಸನಾದ ನನ್ನ ತಂದೆಯು--ನನ್ನ ಹೆಂಡತಿಯು ನನಗೆ ಇಬ್ಬರು ಕುಮಾರರನ್ನು ಹೆತ್ತಳೆಂಬದು ನಿಮಗೆ ತಿಳಿದಿದೆ.
(ಈಗ) ನನ್ನ ಬಳಿಯಿಂದ ಇವನನ್ನೂ ತಕ್ಕೊಂಡು ಹೋಗ ಬೇಕೆಂದಿದೀರಿ, ಅವನಿಗೂ ಕೇಡು ಬಂದರೆ ನನ್ನ ಮುದಿ ತಲೆಯನ್ನು ದುಃಖದಿಂದ ಸಮಾಧಿಗೆ ಇಳಿಯ ಮಾಡುವಿರಿ ಎಂದು ಹೇಳಿದನು.