ಸರ್ವಶಕ್ತನಾದ ದೇವರು ನಿಮ್ಮ ಬೇರೆ ಸಹೋದರ ನನ್ನೂ ಬೆನ್ಯಾವಿಾನನನ್ನೂ ಕಳುಹಿಸಿ ಕೊಡುವಹಾಗೆ ಆ ಮನುಷ್ಯನು ನಿಮ್ಮ ಮೇಲೆ ಕರುಣೆ ತೋರಿಸುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳಕೊಂಡವನಾಗಿರಬೇಕಾದರೆ ಹಾಗೆಯೇ ಆಗಲಿ ಅಂದನು.
Cross references
ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಾನೇ ಸರ್ವಶಕ್ತನಾದ ದೇವರು; ನನ್ನ ಸನ್ನಿಧಿಯಲ್ಲಿ ನಡೆದು ನೀನು ಸಂಪೂರ್ಣನಾಗಿರು.
ಅಬ್ರಹಾಮನು ಆ ಸ್ಥಳಕ್ಕೆ ಯೆಹೋವಯಾರೆ ಎಂದು ಹೆಸರನ್ನು ಇಟ್ಟದ್ದರಿಂದ ಕರ್ತನ ಪರ್ವತದಲ್ಲಿ ಅದು ಕಾಣಲ್ಪಡುವದು ಎಂದು ಇಂದಿನ ವರೆಗೂ ಹೇಳುತ್ತಾರೆ.
ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನೀನು ಜನಸಮುದಾಯವಾಗುವಂತೆ ನಿನ್ನನ್ನು ಅಭಿವೃದ್ಧಿ ಮಾಡಿ ಹೆಚ್ಚಿಸಲಿ,
ಈಗ ನನ್ನ ಸಹೋದರನಾದ ಏಸಾವನ ಕೈಯಿಂದ ನನ್ನನ್ನು ತಪ್ಪಿಸು. ಅವನು ಬಂದು ನನ್ನನ್ನು ಮಕ್ಕಳ ಸಂಗಡ ತಾಯಿಯನ್ನು ಕೊಲ್ಲುವನೇನೋ ಎಂದು ನಾನು ಅವನಿಗೆ ಭಯಪಡುತ್ತೇನೆ.
ದೇವರು ಅವನಿಗೆ ಹೇಳಿದ್ದೇನಂದರೆ--ಸರ್ವಶಕ್ತನಾದ ದೇವರು ನಾನೇ, ನೀನು ಅಭಿವೃದ್ಧಿಯಾಗಿ ಹೆಚ್ಚಾಗು; ಜನಾಂಗವೂ ಜನಾಂಗಗಳ ಗುಂಪೂ ನಿನ್ನಿಂದ ಉಂಟಾಗುವವು; ಅರಸರು ನಿನ್ನಿಂದ ಹುಟ್ಟುವರು.
ಆದರೆ ಕರ್ತನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯಿಟ್ಟು ಸೆರೆಮನೆಯ ಯಜಮಾನನು ಅವನ ಮೇಲೆ ದಯೆತೋರಿಸುವಂತೆ ಮಾಡಿದನು.
ಆಗ ಅವನು ಅವರ ಕಡೆಯಿಂದ ಹೊರಟುಹೋಗಿ ಅತ್ತು ಮತ್ತೆ ಅವರ ಬಳಿಗೆ ಬಂದು ಅವರ ಸಂಗಡ ಮಾತನಾಡಿ ಅವರಲ್ಲಿ ಸಿಮೆಯೋನನನ್ನು ಹಿಡಿಸಿ ಅವರ ಕಣ್ಣೆದುರಿನಲ್ಲಿ ಬಂಧಿಸಿ ಸೆರೆಯಲ್ಲಿ ಹಾಕಿಸಿದನು..
ಆಗ ಅವರ ತಂದೆಯಾದ ಯಾಕೋಬನು ಅವರಿಗೆ--ನನ್ನನ್ನು ಮಕ್ಕಳಿಲ್ಲದವ ನನ್ನಾಗಿ ಮಾಡಿದ್ದೀರಿ. ಯೋಸೇಫನೂ ಇಲ್ಲ, ಸಿಮೆಯೋನನೂ ಇಲ್ಲ, ಬೆನ್ಯಾವಿಾನನ್ನೂ ಕರಕೊಂಡು ಹೋಗುವದಕ್ಕಿದ್ದೀರಿ. ಇವುಗಳೆಲ್ಲಾ ನನಗೆ ವಿರೋಧವಾಗಿವೆ ಅಂದನು.
ಅವನು ಹಿರಿಯವನ ಮೊದಲು ಗೊಂಡು ಕಿರಿಯವನ ವರೆಗೆ ಶೋಧಿಸಲಾಗಿ ಆ ಪಾತ್ರೆಯು ಬೆನ್ಯಾವಿಾನನ ಚೀಲದಲ್ಲಿ ಸಿಕ್ಕಿತು.
ಆಗ ಎಜ್ರನು -- ಯೆರೂಸಲೇಮಿನಲ್ಲಿರುವ ಕರ್ತನ ಆಲಯವನ್ನು ಅಲಂಕರಿಸುವದಕ್ಕೆ ಅರ ಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟು ಅರಸನ ಮುಂದೆಯೂ ಅವನ ಸಲಹೆಗಾರರ ಮುಂದೆಯೂ ಅರಸನ ಪರಾಕ್ರಮವುಳ್ಳ ಪ್ರಧಾನರ ಮುಂದೆಯೂ ನನಗೆ ಕೃಪೆ ಮಾಡಿದ ನಮ್ಮ ತಂದೆಗಳ ದೇವರಾಗಿ ರುವ ಕರ್ತನು ಸ್ತುತಿಸಲ್ಪಡಲಿ.ಹೀಗೆಯೇ ನನ್ನ ದೇವರಾಗಿರುವ ಕರ್ತನ ಹಸ್ತವು ನನ್ನ ಮೇಲೆ ಇದ್ದದ್ದರಿಂದ ನಾನು ಬಲಗೊಂಡು ಇಸ್ರಾಯೇಲಿ ನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು ಅಂದನು.
ಓ ಕರ್ತನೇ, ನಿನ್ನ ನಾಮಕ್ಕೆ ಭಯಪಡಲು ಇಚ್ಛಿಸುವ ನಿನ್ನ ಸೇವಕನ ಪ್ರಾರ್ಥನೆಯನ್ನೂ ಸೇವಕರ ಪ್ರಾರ್ಥನೆಯನ್ನೂ ನಿನ್ನ ಕಿವಿ ಆಲೈಸುತ್ತಾ ಇರಲಿ; ಇಂದು ನಿನ್ನ ಸೇವಕನಿಗೆ ವೃದ್ಧಿಯನ್ನು ಕೊಟ್ಟು ಈ ಮನುಷ್ಯನ ದೃಷ್ಟಿಯಲ್ಲಿ ಅವನಿಗೆ ಕರುಣೆ ದೊರಕುವ ಹಾಗೆ ಮಾಡು. ಯಾಕಂದರೆ ನಾನು ಅರಸನಿಗೆ ಪಾನ ಕೊಡುವವನಾಗಿದ್ದೆನು.
ನಾನೂ ನನ್ನ ದಾಸಿಯರೂ ಹಾಗೆಯೇ ಉಪವಾಸ ಮಾಡುವೆವು. ಅನಂತರ ನಾನು ಆಜ್ಞೆ ವಿಾರಿ ಅರಸನ ಬಳಿಗೆ ಪ್ರವೇಶಿಸುವೆನು. ನಾನು ನಾಶವಾದರೆ ನಾಶವಾಗುವೆನು ಅಂದಳು.ಆಗ ಮೊರ್ದೆಕೈ ಹೊರಟು ಹೋಗಿ ಎಸ್ತೇರಳು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿದನು.
ನಿನ್ನ ಮಾರ್ಗವನ್ನು ಕರ್ತನಿಗೆ ಒಪ್ಪಿಸು; ಆತನಲ್ಲಿ ಭರವಸ ವಿಡು; ಆತನು ಅದನ್ನು ನೆರವೇರಿಸುವನು.
ಓ ಕರ್ತನೇ, ನಿನ್ನ ಕರುಣೆಯನ್ನು ನಮಗೆ ದಯಪಾಲಿಸು. ನಿನ್ನ ರಕ್ಷಣೆಯನ್ನು ನಮಗೆ ಕೊಡು.
ಕರ್ತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.
ಕರ್ತನೇ, ನಿನ್ನ ವಾಕ್ಯದ ಪ್ರಕಾರ ನಿನ್ನ ಕರು ಣೆಯೂ ರಕ್ಷಣೆಯೂ ನನಗೆ ದೊರಕಲಿ.
ಇಸ್ರಾಯೇಲ್ಯರ ಅರಸನೂ ದಾವೀದನ ಮಗನೂ ಆದ ಸೊಲೊಮೋನನ ಸಾಮ ತಿಗಳು.
ಮನುಷ್ಯನ ಮಾರ್ಗಗಳು ಕರ್ತನನ್ನು ಮೆಚ್ಚಿಸಿದಾಗ ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನ ದಲ್ಲಿರುವಂತೆ ಆತನು ಮಾಡುತ್ತಾನೆ.
ನೀರಿನ ನದಿಗಳಂತೆ ಅರಸನ ಹೃದಯವು ಕರ್ತನ ಕೈಯಲ್ಲಿದೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ.
ಆಕಾಶವೇ, ಹರ್ಷಿಸು; ಭೂಮಿಯೇ, ಉಲ್ಲಾಸಪಡು! ಪರ್ವತ ಗಳೇ ಹರ್ಷಧ್ವನಿಗೈಯಿರಿ. ಯಾಕಂದರೆ ಕರ್ತನು ತನ್ನ ಜನರನ್ನು ಆದರಿಸಿ, ಶ್ರಮೆಪಟ್ಟ ತನ್ನವರನ್ನು ಕರುಣಿಸುವನು.
ಆತನಿಗೆ ಭಯಪಡು ವವರ ಮೇಲೆ ಆತನ ಕರುಣೆಯು ತಲತಲಾಂತರ ಗಳಿಗೂ ಇರುವದು.
ಪಿಲಾತನು ಪ್ರತ್ಯುತ್ತರವಾಗಿ--ನಾನು ಬರೆದದ್ದು ಬರೆದಾಯಿತು ಅಂದನು.
ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತ ದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾ ಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿ ಸಿದನು. ಫರೋಹನು ಅವನನ್ನು ಐಗುಪ್ತ ದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯನ್ನಾಗಿ ನೇಮಿಸಿದನು.
ಅವನು ಒಪ್ಪದೆ ಇದ್ದದರಿಂದ--ಕರ್ತನ ಚಿತ್ತದಂತೆಯೇ ಆಗಲಿ ಎಂದು ಹೇಳಿ ನಾವು ಸುಮ್ಮನಾದೆವು.
ನಂಬಿಕೆಯ ವಿಷಯದಲ್ಲಿ ನನ್ನ ಸ್ವಂತಮಗನಾಗಿರುವ ತಿಮೊಥೆಯನಿಗೆ ನಮ್ಮ ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.
ಹೇಗಿದ್ದರೂ ಇನ್ನು ಮುಂದೆ ನಿತ್ಯ ಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ ದೃಷ್ಟಾಂತವಿರಬೇಕೆಂದು ಯೇಸು ಕ್ರಿಸ್ತನು ಮೊದಲು ನನ್ನನ್ನು ಕರುಣಿಸಿ ನನ್ನಲ್ಲಿ ತನ್ನ ಪೂರ್ಣದೀರ್ಘ ಶಾಂತಿಯನ್ನು ತೋರ್ಪಡಿಸಿದನು.
ನಮ್ಮಲ್ಲಿ ಹುದುವಾಗಿರುವ ನಂಬಿಕೆ ಗನುಸಾರವಾಗಿ ನನ್ನ ನಿಜಕುಮಾರನಾದ ತೀತನಿಗೆ-- ತಂದೆಯಾದ ದೇವರಿಂದಲೂ ನಮ್ಮ ರಕ್ಷಕನೂ ಕರ್ತನೂ ಆಗಿರುವ ಯೇಸು ಕ್ರಿಸ್ತನಿಂದಲೂ ನಿನಗೆ ಕೃಪೆಯೂ ಕನಿಕರವೂ ಶಾಂತಿಯೂ ಆಗಲಿ.
ತಂದೆಯಾದ ದೇವರಿಂದಲೂ ಆ ತಂದೆಯ ಮಗನಾಗಿರುವ ಕರ್ತನಾದ ಯೇಸು ಕ್ರಿಸ್ತನಿಂದಲೂ ಕೃಪೆಯು ಕರುಣೆಯು ಮತ್ತು ಶಾಂತಿಯು ಸತ್ಯ ದಲ್ಲಿಯೂ ಪ್ರೀತಿಯಲ್ಲಿಯೂ ನಿಮ್ಮೊಂದಿಗಿರಲಿ.