ಯೆಹೂದನು--ನಾವು ನಮ್ಮ ಒಡೆಯ ನಿಗೆ ಏನು ಹೇಳೋಣ? ಏನು ಮಾತನಾಡೋಣ? ಹೇಗೆ ನಮ್ಮನ್ನು ನಾವು ನಿರ್ದೋಷಿಗಳೆಂದು ತೋರಿಸಿ ಕೊಳ್ಳೋಣ? ನಿನ್ನ ದಾಸರ ಪಾಪವನ್ನು ದೇವರು ಕಂಡುಕೊಂಡಿದ್ದಾನೆ. ಇಗೋ, ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನೂ ನಾವೂ ನಮ್ಮ ಒಡೆಯ ನಿಗೆ ದಾಸರಾಗಿದ್ದೇವೆ ಅಂದನು.
Cross references
ಇಗೋ, ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು; ಆಗ ಇಗೋ, ನನ್ನ ಸಿವುಡು ಎದ್ದು ನಿಂತಿತು; ಆಗ ಇಗೋ, ನಿಮ್ಮ ಸಿವುಡುಗಳು ತಿರುಗಿ ಕೊಂಡು ನನ್ನ ಸಿವುಡಿಗೆ ಅಡ್ಡಬಿದ್ದವು ಅಂದನು.
ಇದಲ್ಲದೆ ಅವನು ಇನ್ನೊಂದು ಕನಸನ್ನು ಕಂಡು ತನ್ನ ಸಹೋದರರಿಗೆ--ಇಗೋ, ಇನ್ನೊಂದು ಕನಸನ್ನು ಕಂಡಿದ್ದೇನೆ; ಇಗೋ, ಸೂರ್ಯನೂ ಚಂದ್ರನೂ ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡಬಿದ್ದವು ಅಂದನು.
ಅವರು ದೂರದಿಂದ ಅವನನ್ನು ನೋಡಿದಾಗ ಅವನು ಅವರ ಸವಿಾಪಕ್ಕೆ ಬರುವದಕ್ಕೆ ಮುಂಚೆಯೇ ಅವರು ಅವನನ್ನು ಕೊಂದುಹಾಕಬೇಕೆಂದು ಅವ ನಿಗೆ ವಿರೋಧವಾಗಿ ಒಳಸಂಚುಮಾಡಿಕೊಂಡರು.
ಆಗ ಅವರು--ನಿಶ್ಚಯವಾಗಿ ನಮ್ಮ ಸಹೋದರನ ಅಪರಾಧವು ನಮ್ಮ ಮೇಲೆ ಇದೆ. ಅವನು ನಮ್ಮನ್ನು ಬೇಡಿಕೊಂಡಾಗ ಅವನ ಪ್ರಾಣ ಸಂಕಟವನ್ನು ನೋಡಿಯೂ ಕೇಳದೆ ಹೋದೆವು. ಆದಕಾರಣ ಈ ಸಂಕಟವು ನಮ್ಮ ಮೇಲೆ ಬಂದಿತು ಎಂದು ಅಂದುಕೊಂಡರು.
ಯೆಹೂದನು ತನ್ನ ತಂದೆಯಾದ ಇಸ್ರಾಯೇಲನಿಗೆ--ಆ ಹುಡುಗ ನನ್ನು ನನ್ನ ಸಂಗಡ ಕಳುಹಿಸು; ನಾವು ಹೊರಟು ಹೋಗುವೆವು. ನಾವೂ ನೀನೂ ನಮ್ಮ ಮಕ್ಕಳೂ ಸಾಯದೆ ಬದುಕುವೆವು.
ಅದು ನಿನ್ನ ದಾಸರಲ್ಲಿ ಯಾರ ಹತ್ತಿರ ಸಿಕ್ಕುವದೋ ಅವನು ಸಾಯಲಿ ಮತ್ತು ನಾವು ಸಹ ನಮ್ಮ ಒಡೆಯನಿಗೆ ದಾಸರಾಗುವೆವು ಅಂದರು.
ನಿನ್ನ ದಾಸನಾದ ನಾನು ಆ ಹುಡುಗನಿಗೋಸ್ಕರ ನನ್ನ ತಂದೆಯ ಬಳಿಯಲ್ಲಿ ಹೊಣೆ ಯಾಗಿ--ಅವನನ್ನು ನಿನ್ನ ಬಳಿಗೆ ತಾರದೆ ಹೋದರೆ ಎಂದೆಂದಿಗೂ ನನ್ನ ತಂದೆಗೆ ದೋಷಿಯಾಗಿರುವೆ ನೆಂದು ಹೇಳಿಕೊಂಡಿದ್ದೇನೆ.
ಆದರೆ ನೀವು ಈ ಪ್ರಕಾರ ಮಾಡದಿದ್ದರೆ ಇಗೋ, ಕರ್ತನಿಗೆ ವಿರೋಧವಾಗಿ ಪಾಪಮಾಡಿದವರಾಗುವಿರಿ; ನಿಮ್ಮ ಪಾಪ ನಿಮ್ಮನ್ನು ಹಿಡಿದುಕೊಳ್ಳುವದೆಂದು ತಿಳುಕೊಳ್ಳಿರಿ.
ಜನರಲ್ಲಿ ಏನಾದರೂ ವಿರೋಧವಿದ್ದರೆ ಅವರು ನ್ಯಾಯತೀರ್ವಿಕೆ ಹೊಂದುವ ಹಾಗೆ ನ್ಯಾಯಾಧಿಪತಿಗಳ ಬಳಿಗೆ ನ್ಯಾಯಕ್ಕೆ ಬಂದರೆ ನೀತಿವಂತನನ್ನು ನೀತಿವಂತನೆಂದೂ ದುಷ್ಟನನ್ನು ಅಪರಾಧಿಯೆಂದೂ ನ್ಯಾಯತೀರಿಸಬೇಕು.
ಯೆಹೂದ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಶಾಪಕ್ಕೀಡಾದದ್ದರಲ್ಲಿ ಕೆಲವನ್ನು ತೆಗೆದುಕೊಂಡನು. ಈ ಕಾರಣದಿಂದ ಇಸ್ರಾಯೇಲ್ ಮಕ್ಕಳು ಶಾಪಕ್ಕೀಡಾದವರಲ್ಲಿ ಅಪರಾಧಿಗಳಾದರು. ಆದದರಿಂದ ಕರ್ತನ ಕೋಪವು ಇಸ್ರಾಯೇಲ್ ಮಕ್ಕಳ ಮೇಲೆ ಉರಿಯಹತ್ತಿತ್ತು.
ಅವನ ಮನೆಯವರನ್ನು ಅವನು ಹೆಸರುಹೆಸರಾಗಿ ಕರೆದಾಗ ಯೂದನ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಹಿಡಿಯಲ್ಪಟ್ಟನು.
ಆಗ ಅದೋನೀಬೆಜೆಕನು--ನಾನು ಕೈಕಾಲು ಗಳ ಹೆಬ್ಬೆರಳುಗಳನ್ನು ಕತ್ತರಿಸಿದ ಎಪ್ಪತ್ತು ಮಂದಿ ಅರಸುಗಳು ನನ್ನ ಮೇಜಿನ ಕೆಳಗೆ ತಮ್ಮ ಆಹಾರ ವನ್ನು ಕೂಡಿಸಿದರು; ನಾನು ಹೇಗೆ ಮಾಡಿದೆನೋ ಹಾಗಾಯೇ ದೇವರು ನನಗೆ ಮುಯ್ಯಿಗೆ ಮುಯ್ಯಿಮಾಡಿದ್ದಾನೆ ಅಂದನು. ಅವನನ್ನು ಯೆರೂಸಲೇಮಿಗೆ ತಕ್ಕೊಂಡು ಬಂದರು; ಅವನು ಅಲ್ಲಿ ಸತ್ತನು.
ಆಗ ಅವಳು ಎಲೀಯ ನಿಗೆ--ಓ ದೇವರ ಮನುಷ್ಯನೇ, ನನಗೂ ನಿನಗೂ ಏನು? ನನ್ನ ಅಕ್ರಮವನ್ನು ಜ್ಞಾಪಕಪಡಿಸುವ ದಕ್ಕೂ ನನ್ನ ಮಗನು ಸಾಯುವದಕ್ಕೂ ನನ್ನ ಬಳಿಗೆ ಬಂದಿಯೋ ಅಂದಳು.
ಹಾಗಾದರೆ ನನ್ನ ದೇವರೇ, ಇದರ ತರುವಾಯ ನಾವು ಏನು ಹೇಳೋಣ? ಪ್ರವಾದಿಗಳಾದ ನಿನ್ನ ಸೇವಕರ ಮುಖಾಂತರ ನೀನು ಆಜ್ಞಾಪಿಸಿದ ನಿನ್ನ ಆಜ್ಞೆಗಳನ್ನು ತೊರೆದಿದ್ದೇವೆ.
ಇಸ್ರಾಯೇಲ್ ದೇವ ರಾಗಿರುವ ಕರ್ತನೇ, ನೀನು ನೀತಿವಂತನಾಗಿದ್ದೀ; ಇಂದಿನ ಪ್ರಕಾರ ನಾವು ತಪ್ಪಿಸಿಕೊಂಡವರಾಗಿ ಉಳಿ ದಿದ್ದೇವೆ. ಇಗೋ, ನಾವು ನಿನ್ನ ಮುಂದೆ ನಮ್ಮ ಅಪರಾಧಗಳಲ್ಲಿದ್ದೇವೆ. ಇದರ ನಿಮಿತ್ತವಾಗಿ ನಿನ್ನ ಮುಂದೆ ನಿಲ್ಲಲಾರದವರಾಗಿದ್ದೇವೆ.
ಇಗೋ, ನೀಚನಾಗಿದ್ದೇನೆ; ನಿನಗೆ ಏನು ಪ್ರತ್ಯುತ್ತರ ಕೊಡಲಿ? ನನ್ನ ಕೈಯಿಂದ ಬಾಯಿ ಮುಚ್ಚಿಕೊಳ್ಳುತ್ತೇನೆ.
ದುಷ್ಟರನ್ನು ನೀತಿ ವಂತರೆಂದು ನಿರ್ಣಯಿಸುವವನೂ ನೀತಿವಂತನನ್ನು ದಂಡನೆಗೆ ಗುರಿಮಾಡುವವನೂ ಇವರಿಬ್ಬರೂ ಕರ್ತ ನಿಗೆ ಅಸಹ್ಯರು.
ಒಬ್ಬ ಮನುಷ್ಯನ ರಕ್ತಕ್ಕೆ ಬಲಾತ್ಕಾರ ಮಾಡುವವನು ಕುಣಿಗೆ ಹಾರುವನು; ಅವನನ್ನು ಯಾವನೂ ತಡೆಯದಿರಲಿ.
ಓ ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನನಗೂ ನನ್ನ ದ್ರಾಕ್ಷೆಯ ತೋಟಕ್ಕೂ ನ್ಯಾಯತೀರಿಸಿರಿ ಎಂದು ನಿಮ್ಮನ್ನು ಪ್ರಾರ್ಥಿಸುತ್ತೇನೆ.
ಹೀಗಿರಲು (ಈ ಕಾರಣದಿಂದ) ಯಾಕೋಬು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಒಡೆದುಹೋದ ಸುಣ್ಣದ ಕಲ್ಲುಗಳಂತೆ ಮಾಡುವಾಗ ವಿಗ್ರಹಸ್ತಂಭಗಳೂ ಸೂರ್ಯಸ್ತಂಭ ಗಳೂ ಏಳುವದಿಲ್ಲ ಮತ್ತು ಅದರ ಪಾಪಪರಿಹಾರಕ್ಕೆ ಗುರುತಾದ ಪೂರ್ಣಫಲವು ಇದೇ.
ಓ ಕರ್ತನೇ, ನೀನು ನೀತಿವಂತನು; ಆದರೆ ನಾವು ಈ ದಿನದ ಪ್ರಕಾರ ನಾಚಿಕೆಗೀಡಾದವರು; ಯೆಹೂದದ ಮನುಷ್ಯರನ್ನೂ ಯೆರೂಸಲೇಮಿನ ನಿವಾ ಸಿಗಳನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಹತ್ತಿರದಲ್ಲಿ ರುವವರನ್ನೂ ಮತ್ತು ದೂರದಲ್ಲಿರುವವರನ್ನೂ ಅವರು ನಿನಗೆ ವಿರುದ್ಧವಾಗಿ ಮಾಡಿರುವ ಅವರ ಅಪರಾಧದ ನಿಮಿತ್ತ ನೀನು ಅವರನ್ನು ಎಲ್ಲಾ ದೇಶಗಳಲ್ಲಿಯೂ ಓಡಿಸಿ ಬಿಟ್ಟಿದ್ದೀ.
ನೀವು ಮಾಡುವ ತೀರ್ಪಿ ನಿಂದಲೇ ನಿಮಗೆ ತೀರ್ಪಾಗುವದು; ಮತ್ತು ನೀವು ಅಳೆಯುವ ಅಳತೆಯಿಂದಲೇ ನಿಮಗೆ ತಿರಿಗಿ ಅಳತೆ ಯಾಗುವದು.
ಪ್ರಕಟವಾಗದಂತೆ ಯಾವದೂ ಮರೆಯಾಗಿರು ವದಿಲ್ಲ; ಇಲ್ಲವೆ ತಿಳಿಯುವದಕ್ಕಾಗದಂತೆ ಯಾವದೂ ಗುಪ್ತವಾಗಿರುವದಿಲ್ಲ.
ಅವರು ಇದನ್ನು ಕೇಳಿ ತಮ್ಮ ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಪೇತ್ರನಿಗೂ ಉಳಿದ ಅಪೊಸ್ತಲರಿಗೂ--ಜನರೇ, ಸಹೋದರರೇ, ನಾವು ಏನು ಮಾಡಬೇಕು ಎಂದು ಕೇಳಿದರು.