ಆಗ ಅವರು ಅವನಿಗೆ--ನಮ್ಮ ಒಡೆಯನು ಯಾಕೆ ಇಂಥಾ ಮಾತುಗಳನ್ನಾಡುತ್ತಾನೆ? ಈ ಪ್ರಕಾರ ಮಾಡುವದು ನಿನ್ನ ದಾಸರಿಗೆ ದೂರವಾಗಿರಲಿ.
Cross references
ಮೂರನೆಯ ದಿನದಲ್ಲಿ ಅವರಿಗೆ ನೋವು ಉಂಟಾದಾಗ ಯಾಕೋಬನ ಮಕ್ಕಳಲ್ಲಿ ಇಬ್ಬರು ಅಂದರೆ ದೀನಳ ಸಹೋದರರಾದ ಸಿಮೆಯೋನನೂ ಲೇವಿಯೂ ತಮ್ಮ ತಮ್ಮ ಕತ್ತಿಗಳನ್ನು ತಕ್ಕೊಂಡು ಧೈರ್ಯವಾಗಿ ಪಟ್ಟಣಕ್ಕೆ ಬಂದು ಗಂಡಸರನ್ನೆಲ್ಲಾ ಕೊಂದುಹಾಕಿದರು.
ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ಹೋಗಿ ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳ ಸಂಗಡ ಮಲಗಿದನು. ಅದನ್ನು ಇಸ್ರಾಯೇಲನು ಕೇಳಿದನು. ಯಾಕೋಬನಿಗೆ ಹನ್ನೆರಡು ಮಂದಿ ಕುಮಾರರು ಇದ್ದರು.
ಅವರು ದೂರದಿಂದ ಅವನನ್ನು ನೋಡಿದಾಗ ಅವನು ಅವರ ಸವಿಾಪಕ್ಕೆ ಬರುವದಕ್ಕೆ ಮುಂಚೆಯೇ ಅವರು ಅವನನ್ನು ಕೊಂದುಹಾಕಬೇಕೆಂದು ಅವ ನಿಗೆ ವಿರೋಧವಾಗಿ ಒಳಸಂಚುಮಾಡಿಕೊಂಡರು.
ಮಾರ್ಗ ದಿಂದ ಆಕೆಯ ಕಡೆಗೆ ತಿರುಗಿಕೊಂಡು ಅವನು--ನನ್ನನ್ನು ನಿನ್ನ ಬಳಿಗೆ ಬರಗೊಡಿಸು ಅಂದನು. (ಯಾಕಂದರೆ ಅವಳು ತನ್ನ ಸೊಸೆಯೆಂದು ಅವನಿಗೆ ತಿಳಿದಿರಲಿಲ್ಲ). ಅವಳು--ನೀನು ನನ್ನ ಬಳಿಗೆ ಬಂದರೆ ನನಗೆ ಏನು ಕೊಡುವಿ ಅಂದಳು.
ದೇವಾದಿ ದೇವರಾದ ಕರ್ತನೇ, ದೇವಾದಿ ದೇವರಾದ ಕರ್ತನೇ ತಿಳಿದಿದ್ದಾನೆ. ಇಸ್ರಾಯೇಲ್ಯರಿಗೂ ತಿಳಿಯುವದು. ಇದು ತಿರುಗಿ ಬೀಳುವದರಿಂದಲಾದರೂ ಕರ್ತನಿಗೆ ವಿರೋಧವಾಗಿ ಅಪರಾಧಮಾಡುವದರಿಂದಲಾದರೂ ಆಗಿದ್ದರೆ ನಮ್ಮನ್ನು ಈಹೊತ್ತು ರಕ್ಷಿಸಬಾರದು.
ಅದಕ್ಕೆ ಯೋವಾಬನು ಪ್ರತ್ಯುತ್ತರವಾಗಿ--ನನಗೆ ಅದು ದೂರವಾಗಿರಲಿ, ನುಂಗುವದೂ ಕೆಡಿಸುವದೂ ನನಗೆ ದೂರವಾಗಿರಲಿ.
ಹಜಾಯೇಲನು -- ಇಂಥಾ ಮಹಾ ಕೆಲಸವನ್ನು ಮಾಡುವದಕ್ಕೆ ನಿನ್ನ ಸೇವಕನು ನಾಯಿಯೋ ಏನು ಅಂದನು. ಎಲೀಷನು -- ನೀನು ಅರಾಮ್ಯರ ಮೇಲೆ ಅರಸನಾಗುವಿ ಎಂದು ಕರ್ತನು ನನಗೆ ತಿಳಿಸಿ ದ್ದಾನೆ ಅಂದನು.
ಬಹು ಐಶ್ವರ್ಯಕ್ಕಿಂತಲೂ ಒಳ್ಳೆಯ ಹೆಸರನ್ನೂ ಬೆಳ್ಳಿ ಬಂಗಾರಕ್ಕಿಂತ ಪ್ರೀತಿಯ ದಯವನ್ನೂ ಆರಿಸಿಕೊಳ್ಳುವದು ಉತ್ತಮ.
ಅಮೂಲ್ಯವಾದ ತೈಲಕ್ಕಿಂತ ಒಳ್ಳೆಯ ಹೆಸರು ಉತ್ತಮ; ಒಬ್ಬನ ಜನ್ಮದಿನಕ್ಕಿಂತ ಮರಣದ ದಿನವೇ ಮೇಲು.
ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಪ್ರಾಮಾಣಿಕರಾಗಿ ನಡೆದುಕೊಳ್ಳ ಬೇಕೆಂದು ಅಪೇಕ್ಷಿಸುವವರಾದ ನಮಗೆ ಒಳ್ಳೇ ಮನಸ್ಸಾಕ್ಷಿ ಇದೆಯೆಂದು ನಂಬಿದ್ದೇವೆ.