ಇಗೋ, ನಮ್ಮ ಚೀಲಗಳ ಬಾಯಲ್ಲಿ ನಮಗೆ ಸಿಕ್ಕಿದ ಹಣವನ್ನು ನಿಮಗೆ ಕೊಡುವದಕ್ಕೆ ಕಾನಾನ್ ದೇಶದಿಂದ ತಂದೆವು. ಹೀಗಿರಲು ನಿನ್ನ ಯಜಮಾನನ ಮನೆಯೊಳಗಿಂದ ಬೆಳ್ಳಿ ಬಂಗಾರವನ್ನು ಹೇಗೆ ಕದ್ದುಕೊಂಡೇವು?
Cross references
ಆಗ ಅವರು--ನಿಶ್ಚಯವಾಗಿ ನಮ್ಮ ಸಹೋದರನ ಅಪರಾಧವು ನಮ್ಮ ಮೇಲೆ ಇದೆ. ಅವನು ನಮ್ಮನ್ನು ಬೇಡಿಕೊಂಡಾಗ ಅವನ ಪ್ರಾಣ ಸಂಕಟವನ್ನು ನೋಡಿಯೂ ಕೇಳದೆ ಹೋದೆವು. ಆದಕಾರಣ ಈ ಸಂಕಟವು ನಮ್ಮ ಮೇಲೆ ಬಂದಿತು ಎಂದು ಅಂದುಕೊಂಡರು.
ಒಬ್ಬನು ತನ್ನ ಕತ್ತೆಗೆ ಆಹಾರವನ್ನು ಕೊಡುವದಕ್ಕಾಗಿ ವಸತಿ ಗೃಹದಲ್ಲಿ ತನ್ನ ಚೀಲವನ್ನು ಬಿಚ್ಚಿದಾಗ ಇಗೋ, ಚೀಲದ ಬಾಯಿಯಲ್ಲಿಟ್ಟಿದ ತನ್ನ ಹಣವನ್ನು ಕಂಡನು.
ಇದಲ್ಲದೆ ಅವರು ತಮ್ಮ ಚೀಲಗಳನ್ನು ಬರಿದು ಮಾಡುತ್ತಿದ್ದಾಗ ಇಗೋ, ಅವನವನ ಹಣದ ಗಂಟು ಅವನವನ ಚೀಲದಲ್ಲಿ ಇತ್ತು. ಅವರೂ ಅವರ ತಂದೆಯೂ ಆ ಹಣದ ಗಂಟುಗಳನ್ನು ನೋಡಿ ಭಯಪಟ್ಟರು.
ಇದಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿರಿ. ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳುಹಿಸಿದ ಹಣವನ್ನು ಸಹ ತೆಗೆದುಕೊಂಡು ಹೋಗಿರಿ. ಒಂದು ವೇಳೆ ಅದು ಅವರಿಗೆ ತಿಳಿಯದೆ ಇದ್ದಿರ ಬಹುದು.
ಅವರು ಯೋಸೇಫನ ಮನೆಗೆ ತರಲ್ಪಟ್ಟಿದ್ದರಿಂದ ಭಯಪಟ್ಟು--ಹಿಂದೆ ನಮ್ಮ ಚೀಲಗಳಲ್ಲಿ ತಿರಿಗಿ ಸೇರಿದ ಹಣಕ್ಕಾಗಿ ನಮ್ಮನ್ನು ಹಿಡಿದು ನಮ್ಮ ಮೇಲೆ ಬಿದ್ದು ನಮ್ಮನ್ನು ದಾಸರನ್ನಾಗಿಮಾಡಿ ನಮ್ಮ ಕತ್ತೆಗಳನ್ನು ತಕ್ಕೊಳ್ಳುವದಕ್ಕೆ ನಮ್ಮನ್ನು ಇಲ್ಲಿಗೆ ತಂದಿದ್ದಾನೆ ಎಂದು ಅಂದರು.
ಇದಾದ ಮೇಲೆ ನಾವು ವಸತಿಗೃಹಕ್ಕೆ ಬಂದು ನಮ್ಮ ಚೀಲಗಳನ್ನು ತೆರೆದಾಗ ಇಗೋ, ಪ್ರತಿಯೊಬ್ಬನ ಹಣವು ಅದರದರ ತೂಕದ ಪ್ರಕಾರ ಹಣವು ಅವನವನ ಚೀಲದಲ್ಲೇ ಇತ್ತು. ನಮ್ಮ ಕೈಗಳಲ್ಲಿ ಅದನ್ನು ತಿರಿಗಿ ತೆಗೆದುಕೊಂಡು ಬಂದಿದ್ದೇವೆ.
ಆಗ ಅವರು ಅವನಿಗೆ--ನಮ್ಮ ಒಡೆಯನು ಯಾಕೆ ಇಂಥಾ ಮಾತುಗಳನ್ನಾಡುತ್ತಾನೆ? ಈ ಪ್ರಕಾರ ಮಾಡುವದು ನಿನ್ನ ದಾಸರಿಗೆ ದೂರವಾಗಿರಲಿ.
ಕದಿಯಬಾರದು.
ಕದಿಯಬೇಡ.
ಅವನು ಆತನಿಗೆ--ಅವು ಯಾವವು ಎಂದು ಕೇಳಿದನು. ಅದಕ್ಕೆ ಯೇಸು--ನೀನು ನರಹತ್ಯ ಮಾಡಬಾರದು, ನೀನು ವ್ಯಭಿಚಾರ ಮಾಡಬಾರದು, ನೀನು ಕದಿಯ ಬಾರದು, ನೀನು ಸುಳ್ಳುಸಾಕ್ಷಿ ಹೇಳ ಬಾರದು.
ಹೇಗಂದರೆ ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳ ಬಾರದು, ಆಶಿಸಬಾರದು ಈ ಮೊದಲಾದ ಎಲ್ಲಾ ಕಟ್ಟಳೆಗಳು--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿವೆ.
ಯಾಕಂದರೆ ಯಾವನಾದರೂ ನ್ಯಾಯಪ್ರಮಾಣವನ್ನೆಲ್ಲಾ ಕೈಕೊಂಡು ನಡೆದು ಒಂದೇ ಒಂದರಲ್ಲಿ ತಪ್ಪಿದರೆ ಅವನು ಎಲ್ಲಾ ವಿಷಯದಲ್ಲಿಯೂ ಅಪರಾಧಿಯಾಗುತ್ತಾನೆ.