ನಿಮ್ಮ ಸಾಮಾನುಗಳಿಗಾಗಿ ಚಿಂತಿಸಬೇಡಿರಿ; ಐಗುಪ್ತದೇಶದಲ್ಲಿರುವ ಉತ್ತಮ ವಾದದ್ದೆಲ್ಲಾ ನಿಮ್ಮದೇ ಎಂದು ಹೇಳು ಅಂದನು.
Cross references
ಅಬೀಮೆಲೆಕನು--ಇಗೋ, ನನ್ನ ದೇಶವು ನಿನ್ನ ಮುಂದೆ ಇದೆ; ನಿನಗೆ ಇಷ್ಟವಾಗಿರುವ ಸ್ಥಳದಲ್ಲಿ ವಾಸಮಾಡು ಅಂದನು.
ನಿಮ್ಮ ತಂದೆಯನ್ನೂ ನಿಮ್ಮ ನಿಮ್ಮ ಮನೆಯವರನ್ನೂ ಕರಕೊಂಡು ನನ್ನ ಬಳಿಗೆ ಬನ್ನಿರಿ. ಐಗುಪ್ತದೇಶದ ಉತ್ತಮವಾದದ್ದನ್ನು ನಾನು ನಿಮಗೆ ಕೊಡುವೆನು. ಈ ದೇಶದ ಸಾರವನ್ನು ಊಟಮಾಡುವಿರಿ.
ಐಗುಪ್ತದೇಶವು ನಿನ್ನ ಮುಂದೆ ಇದೆ. ದೇಶದ ಉತ್ತಮವಾದದ್ದರಲ್ಲಿ ನಿನ್ನ ತಂದೆಯೂ ಸಹೋದರರೂ ವಾಸಮಾಡುವಂತೆ ಮಾಡು. ಗೋಷೆನ್ ಸೀಮೆಯಲ್ಲಿ ಅವರು ವಾಸವಾ ಗಿರಲಿ. ಅವರಲ್ಲಿ ಚಟುವಟಿಕೆಯುಳ್ಳವರು ಇದ್ದಾರೆಂದು ನಿನಗೆ ತಿಳಿದರೆ ಅವರನ್ನು ನಮಗಿರುವ ಮಂದೆಗಳ ಮೇಲೆ ವಿಚಾರಕರನ್ನಾಗಿ ಇರಿಸು ಅಂದನು.
ಒಬ್ಬನು ತನ್ನ ನೆರೆಯವನಿಗೆ ತನ್ನ ಹಣವನ್ನಾಗಲಿ ಸಾಮಾನುಗಳನ್ನಾಗಲಿ ಇಟ್ಟುಕೊಳ್ಳುವದಕ್ಕೆ ಕೊಟ್ಟಾಗ ಅದು ಅವನ ಮನೆಯಿಂದ ಕಳ್ಳತನವಾಗಿ ಆ ಕಳ್ಳನು ಸಿಕ್ಕಿದರೆ ಅವನು ಎರಡರಷ್ಟು ಕೊಡಬೇಕು.
ನಿನ್ನ ದೇವರಾದ ಕರ್ತನು ನಿನಗೆ ಒಪ್ಪಿಸುವ ಜನಗಳನ್ನೆಲ್ಲಾ ನೀನು ಸಂಹರಿಸಿಬಿಡುವಿ; ಅವರ ಮೇಲೆ ನೀನು ಕಟಾಕ್ಷವಿಡಬಾರದು; ಇಲ್ಲವೆ ಅವರ ದೇವರು ಗಳನ್ನು ಸೇವಿಸಬಾರದು; ಅದು ನಿನಗೆ ಉರುಲಾ ಗುವದು.
ನಿನ್ನ ಕಣ್ಣು ಅವನನ್ನು ಕರುಣಿಸಬಾರದು; ನಿನಗೆ ಒಳ್ಳೆದಾಗುವ ಹಾಗೆ ಅಪರಾಧವಿಲ್ಲದ ರಕ್ತದ ದೋಷವನ್ನು ಇಸ್ರಾ ಯೇಲಿನಿಂದ ತೆಗೆದುಹಾಕಬೇಕು.
ನಿನ್ನ ಕಣ್ಣು ಕರುಣಿಸಬಾರದು; ಪ್ರಾಣಕ್ಕೆ ಪ್ರಾಣ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಕಾಲು ಕೊಡಬೇಕು.
ಇಸ್ರಾಯೇಲ್ಯರು ಪಾಪಮಾಡಿ ನಾನು ನಿಮಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ವಿಾರಿದರು; ಅವರು ವಂಚನೆಮಾಡಿ ಶಾಪಕ್ಕೀಡಾದ ದ್ದರಲ್ಲಿ ಕಳವುಮಾಡಿ ತೆಗೆದುಕೊಂಡು ಅದನ್ನು ತಮ್ಮ ಸಾಮಾನುಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ.
ಆದದರಿಂದ ಅವನು ಈಗ ಇಲ್ಲಿ ಬರುವನೋ ಎಂದು ಕರ್ತನನ್ನು ವಿಚಾರಿಸಿದರು. ಕರ್ತನು--ಇಗೋ, ಅವನು ಸಾಮಗ್ರಿ ಯಲ್ಲಿ ಅಡಗಿಕೊಂಡಿದ್ದಾನೆ ಎಂದು ಹೇಳಿದನು.
ದಾವೀದನು ತನ್ನ ಮನುಷ್ಯ ರಿಗೆ--ನೀವು ಒಬ್ಬೊಬ್ಬನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ ಅಂದನು. ಪ್ರತಿಯೊಬ್ಬನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡನು; ಹಾಗೆಯೇ ದಾವೀದನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡನು. ದಾವೀದನ ಹಿಂದೆ ಹೆಚ್ಚು ಕಡಿಮೆ ನಾನೂರು ಮಂದಿ ಹೋದರು; ಆದರೆ ಇನ್ನೂರು ಮಂದಿ ಸಾಮಗ್ರಿಗಳ ಬಳಿಯಲ್ಲಿ ನಿಂತರು.
ಆದರೆ ಯುದ್ಧಕ್ಕೆ ಹೋದವನ ಪಾಲಿನ ಹಾಗೆಯೇ ಸಾಮಗ್ರಿಯ ಬಳಿಯಲ್ಲಿ ಕಾದಿರುವವನ ಪಾಲೂ ಇರಲಿ; ಅವರು ಸಮವಾಗಿ ಪಾಲು ಮಾಡಿಕೊಳ್ಳಬೇಕು.
ಆದದರಿಂದ ನೀವು ಪ್ರಬಲವಾಗಿ ದೇಶದ ಒಳ್ಳೇ ದನ್ನು ತಿಂದು ಅದನ್ನು ಎಂದಿಗೂ ನಿಮ್ಮ ಮಕ್ಕಳಿಗೆ ಸ್ವಾಸ್ಥ್ಯವಾಗಿ ಕೊಡುವ ಹಾಗೆ ನೀವು ನಿಮ್ಮ ಕುಮಾರ್ತೆ ಯರನ್ನು ಅವರ ಕುಮಾರರಿಗೆ ಕೊಡಬೇಡಿರಿ; ಅವರ ಕುಮಾರ್ತೆಯರನ್ನು ನಿಮ್ಮ ಕುಮಾರರಿಗೆ ತಕ್ಕೊಳ್ಳ ಬೇಡಿರಿ. ಇಲ್ಲವೆ ಅವರ ಸಮಾಧಾನವನ್ನೂ ಅವರ ಮೇಲನ್ನೂ ಎಂದಿಗೂ ಬಯಸಬೇಡಿರಿ ಎಂಬದು.
ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ;
ಅವರ ಬಿಲ್ಲುಗಳು ಸಹ ಯುವಕರನ್ನು ಹೊಡೆದು ತುಂಡುತುಂಡು ಮಾಡುವವು; ಇವರು ಗರ್ಭಫಲವನ್ನು ಕರುಣಿಸರು, ಇವರ ಕಣ್ಣುಗಳು ಮಕ್ಕಳನ್ನೂ ಉಳಿಸುವದಿಲ್ಲ.
ನನ್ನ ಕಣ್ಣುಗಳು ನಿನ್ನನ್ನು ಕಟಾಕ್ಷಿಸುವದಿಲ್ಲ; ನಾನು ನಿನ್ನನ್ನು ಕನಿಕರಿಸು ವದೂ ಇಲ್ಲ, ಆದರೆ ನಿನ್ನ ಮಾರ್ಗಗಳ ಪ್ರಕಾರ ನಿನ್ನ ಮೇಲೆ ಮುಯ್ಯಿ ತೀರಿಸುತ್ತೇನೆ, ನಿನ್ನ ಅಸಹ್ಯಗಳು ನಿನ್ನ ಮಧ್ಯೆ ಇರುವವು, ನಾನೇ ಕರ್ತನೆಂದು ನಿನಗೆ ತಿಳಿಯುವದು.
ನನ್ನ ಕಣ್ಣು ಕಟಾಕ್ಷಿಸುವದಿಲ್ಲ; ನಾನು ನಿನ್ನನ್ನು ಕನಿಕರಿಸುವದೂ ಇಲ್ಲ, ನಿನ್ನ ಮಾರ್ಗಗಳಿಗೂ ನಿನ್ನ ಮಧ್ಯದಲ್ಲಿರುವ ಅಸಹ್ಯಗಳಿಗೂ ತಕ್ಕದ್ದನ್ನು ನಿನಗೆ ಮುಯ್ಯಿ ತೀರಿಸುತ್ತೇನೆ. ಆಗ ಕರ್ತನಾದ ನಾನೇ ಹೊಡೆಯುತ್ತಿರುವನೆಂದು ನಿನಗೆ ತಿಳಿಯುವದು.
ಅದನ್ನು ನಾನು ಕೇಳುತ್ತಿರುವಾಗ ಇತರರಿಗೆ ಅವನು ಹೇಳಿದ್ದೇನಂದರೆ --ನೀವೂ ಅವನ ಹಿಂದೆ ಪಟ್ಟಣದಲ್ಲಿ ಹಾದು ಹೋಗಿ ಹೊಡೆಯಿರಿ; ನಿಮ್ಮ ಕಣ್ಣುಗಳು ಕನಿಕರಿಸದೆ ಇರಲಿ, ಕಟಾಕ್ಷಿಸದೆಯೂ ಇರಲಿ.
ಮನುಷ್ಯ ಪುತ್ರನೇ, ನೀನು ತೆಗೆದುಹಾಕು ವದಕ್ಕೆ ಸಾಮಾನುಗಳನ್ನು ಸಿದ್ಧಮಾಡಿ ಹಗಲಿನಲ್ಲಿ ಅವರ ದೃಷ್ಟಿಯಿಂದ ತೊಲಗಿ ಹೋಗು; ಹೌದು, ಅವರ ಕಣ್ಣುಗಳ ಮುಂದೆಯೇ ನಿನ್ನ ಸ್ಥಳವನ್ನು ಬಿಟ್ಟು ಬೇರೊಂದು ಸ್ಥಳಕ್ಕೆ ಹೋಗು; ಅವರು ತಿರುಗಿ ಬೀಳುವ ಮನೆತನದವರಾದಾಗ್ಯೂ ಒಂದು ವೇಳೆ ಮನಸ್ಸು ಮಾಡಿಯಾರು.
ಆದರೂ ಅವರನ್ನು ನಾನು ನಾಶಮಾಡದ ಹಾಗೆ ನನ್ನ ಕಣ್ಣು ಕನಿಕರಿಸಿತು; ನಾನು ಅವರನ್ನು ಅರಣ್ಯದಲ್ಲಿ ಸಂಪೂರ್ಣವಾಗಿ ಮುಗಿಸಿಬಿಡ ಲಿಲ್ಲ.
ಮಾಳಿಗೆಯ ಮೇಲಿರುವವನು ತನ್ನ ಮನೆಯೊಳಗಿಂದ ಏನಾದರೂ ತಕ್ಕೊಳ್ಳುವದಕ್ಕಾಗಿ ಕೆಳಗೆ ಇಳಿಯದಿರಲಿ;
ಆ ದಿನದಲ್ಲಿ ಮನೆಯ ಮಾಳಿಗೆಯ ಮೇಲೆ ಇದ್ದವನು ಮನೆಯಲ್ಲಿದ್ದ ತನ್ನ ಸಾಮಾನುಗಳನ್ನು ತೆಗೆದುಕೊಳ್ಳಲು ಕೆಳಗಿಳಿದು ಬಾರ ದಿರಲಿ. ಹಾಗೆಯೇ ಹೊಲದಲ್ಲಿದ್ದವನು ಹಿಂದಿರುಗಿ ಬಾರದಿರಲಿ.