ಯೋಸೇಫನು ತನ್ನ ತಂದೆಯನ್ನೂ ತನ್ನ ಸಹೋ ದರರನ್ನೂ ತನ್ನ ತಂದೆಯ ಮನೆಯವರೆಲ್ಲರನ್ನೂ ಕುಟುಂಬಗಳ ಪ್ರಕಾರ ಆಹಾರಕ್ಕೆ ಕೊಟ್ಟು ಅವರನ್ನು ಸಂರಕ್ಷಣೆ ಮಾಡಿದನು.
Cross references
ಆದದ ರಿಂದ ನಿಮ್ಮ ಸಂತತಿಯನ್ನು ಭೂಮಿಯಲ್ಲಿ ಉಳಿಸುವ ದಕ್ಕೂ ದೊಡ್ಡ ಬಿಡುಗಡೆಯಿಂದ ನಿಮ್ಮ ಪ್ರಾಣಗಳನ್ನು ಉಳಿಸುವದಕ್ಕೂ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾನೆ.
ಗೋಷೆನ್ ದೇಶದಲ್ಲಿ ನೀನು ವಾಸವಾಗಿದ್ದು ನಿನ್ನ ಮಕ್ಕಳೂ ಮೊಮ್ಮಕ್ಕಳೂ ದನ ಕುರಿಗಳೂ ನಿನಗಿದ್ದದ್ದೆಲ್ಲವೂ ನನ್ನ ಸವಿಾಪ ದಲ್ಲಿರಬೇಕು;
ಅಲ್ಲಿ ನಿನ್ನನ್ನು ಪೋಷಿಸುವೆನು. ಯಾಕಂದರೆ ಇನ್ನೂ ಕ್ಷಾಮದ ಐದು ವರುಷಗಳಿವೆ. ನಿನಗೂ ನಿನ್ನ ಮನೆಗೂ ನಿನಗಿರುವದೆಲ್ಲದಕ್ಕೂ ಬಡತನವಾಗಬಾರದು ಎಂದು ಹೇಳಿರಿ.
ಯೋಸೇಫನು ಬಂದು ಫರೋಹನಿಗೆ-- ನನ್ನ ತಂದೆಯೂ ನನ್ನ ಸಹೋದರರೂ ತಮ್ಮ ಕುರಿ ದನಗಳನ್ನು ತಮಗಿದ್ದ ಎಲ್ಲವುಗಳನ್ನು ತೆಗೆದುಕೊಂಡು ಕಾನಾನ್ದೇಶದಿಂದ ಬಂದಿದ್ದಾರೆ. ಇಗೋ, ಅವರು ಗೋಷೆನ್ ಸೀಮೆಯಲ್ಲಿ ಇದ್ದಾರೆ ಅಂದನು.
ಹೀಗೆ ಭೂಮಿಯು ಫರೋಹನದಾಯಿತು. ಅವನು ಜನರನ್ನು ಐಗುಪ್ತದ ಒಂದು ಮೇರೆಯಿಂದ ಇನ್ನೊಂದು ಮೇರೆಯ ವರೆಗೆ ಇದ್ದ ಪಟ್ಟಣಗಳಲ್ಲಿ ಸೇರಿಸಿದನು.
ಬೆಳೆ ಬಂದಾಗ ಐದನೆಯ ಪಾಲನ್ನು ಫರೋಹನಿಗೆ ಕೊಡಬೇಕು. ನಾಲ್ಕು ಪಾಲು ಹೊಲದ ಬೀಜಕ್ಕಾ ಗಿಯೂ ನಿಮ್ಮ ಆಹಾರಕ್ಕಾಗಿಯೂ ನಿಮ್ಮ ಮಕ್ಕಳ ಆಹಾರಕ್ಕಾಗಿಯೂ ನಿಮಗೆ ಇರಲಿ ಅಂದನು.
ಹೀಗಿರುವದರಿಂದ ನೀವು ಭಯಪಡಬೇಡಿರಿ. ನಾನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಸಂರಕ್ಷಿಸುತ್ತೇನೆ ಎಂದು ಹೇಳಿ ಅವರನ್ನು ಸಂತೈಸಿ ದಯೆಯಿಂದ ಮಾತನಾಡಿದನು.
ನಿನ್ನ ಕರ್ತನಾದ ದೇವರು ನಿನಗೆ ಕೊಡುವ ದೇಶದಲ್ಲಿ ನಿನ್ನ ದಿವಸಗಳು ಹೆಚ್ಚಾಗುವಂತೆ ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸು.
ಅವನು ನಿನಗೆ ಪ್ರಾಣವನ್ನು ಪುನರ್ಜೀವಿಸುವವ ನಾಗಿಯೂ ನಿನ್ನ ವೃದ್ಧ ವಯಸ್ಸಿನಲ್ಲಿ ಸಂರಕ್ಷಿಸುವವ ನಾಗಿಯೂ ಇರುವನು. ಯಾಕಂದರೆ ನಿನ್ನನ್ನು ಪ್ರೀತಿ ಮಾಡುವ ಏಳು ಮಂದಿ ಮಕ್ಕಳಿಗಿಂತ ನಿನಗೆ ಉತ್ತಮ ಳಾಗಿರುವ ನಿನ್ನ ಸೊಸೆಯು ಅವನನ್ನು ಹೆತ್ತಳು ಅಂದರು.
ಬಟ್ಟಲು ಮೊದಲುಗೊಂಡು ಕೊಡದ ತನಕ ಸಕಲ ಸಾಧಾರಣ ಪಾತ್ರೆಗಳನ್ನು ಅಂದರೆ ತಂದೆಯ ಸಂತಾನ, ಸಂತತಿಯಾದ ಅವನ ಮನೆಯ ಎಲ್ಲಾ ವೈಭವವನ್ನು ಅವರು ಅವನಿಗೆ ವಹಿ ಸುವರು.ಆ ದಿನದಲ್ಲಿ ಸೈನ್ಯಗಳ ಕರ್ತನು ಇಂತೆನ್ನುತ್ತಾನೆ--ಭದ್ರವಾದ ಸ್ಥಳದಲ್ಲಿ ಮೊಳೆಯನ್ನು ತೆಗೆದುಹಾಕಿ, ಅದು ಕೀಳಲ್ಪಟ್ಟು, ಬೀಳುವದು. ಅದ ರಲ್ಲಿ ಇದ್ದ ಭಾರವೂ ತೆಗೆದುಹಾಕಲ್ಪಡುವದು; ಕರ್ತನೇ ಇದನ್ನು ನುಡಿದಿದ್ದಾನೆ.
ಯಾಕಂ ದರೆ ದೇವರು ಅಪ್ಪಣೆ ಕೊಟ್ಟು ಹೇಳಿದ್ದೇನಂದರೆ--ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು. ಮತ್ತು--ಯಾವನಾದರೂ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಶಪಿಸಿದರೆ ಅವನು ಸಾಯಲೇಬೇಕು ಎಂಬದೇ.
ಯಾಕಂದರೆ ಮೋಶೆಯು--ನಿನ್ನ ತಂದೆಯನ್ನು ನಿನ್ನ ತಾಯಿಯನ್ನು ಸನ್ಮಾನಿಸಬೇಕೆಂತಲೂ ಮತ್ತು--ತಂದೆಯನ್ನಾಗಲೀ ತಾಯಿಯನ್ನಾಗಲೀ ಶಪಿಸುವವನು ಸಾಯಲೇ ಬೇಕೆಂತಲೂ ಹೇಳಿದ್ದಾನೆ.
ದಾದಿಯು ತನ್ನ ಮಕ್ಕಳನ್ನು ಪೋಷಿಸುವಂತೆ ನಾವು ನಿಮ್ಮ ಮಧ್ಯದಲ್ಲಿ ಸೌಮ್ಯದಿಂದಿದ್ದೆವು.
ದೇಹಸಾಧನೆಯು ಸ್ವಲ್ಪ ಮಟ್ಟಿಗೆ ಲಾಭಕರವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಲಾಭಕರವಾದದ್ದು; ಆದಕ್ಕೆ ಈಗಲೂ ಮುಂದೆ ಬರುವದಕ್ಕೂ ಜೀವಾಗ್ದಾನ ಉಂಟು.
ಆದರೆ ಯಾವ ವಿಧವೆಗಾದರೂ ಮಕ್ಕಳಾಗಲಿ, ಮೊಮ್ಮಕ್ಕಳಾ ಗಲಿ, ಇದ್ದರೆ ಅವರೇ ಮೊದಲು ತಮ್ಮ ಮನೆಯಲ್ಲಿ ಭಕ್ತಿ ತೋರಿಸುವದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪ ಕಾರ ಮಾಡುವದಕ್ಕೂ ಕಲಿತುಕೊಳ್ಳಲಿ; ಇದು ದೇವರ ದೃಷ್ಟಿಯಲ್ಲಿ ಯೋಗ್ಯವಾದದ್ದೂ ಮೆಚ್ಚಿಕೆಯಾದದ್ದೂ ಆಗಿದೆ.
ಯಾವನಾದರೂ ಸ್ವಂತದವರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ನಂಬಿಕೆಯನ್ನು ಅಲ್ಲಗಳೆ ದವನು ನಂಬದವನಿಗಿಂತ ಕೆಟ್ಟವನೂ ಆಗಿದ್ದಾನೆ.