ವೈದಿಕರ ಭೂಮಿಯನ್ನು ಮಾತ್ರ ಅವನು ಕೊಂಡು ಕೊಳ್ಳಲಿಲ್ಲ. ಯಾಕಂದರೆ ಫರೋಹನು ವೈದಿಕರಿಗೆ ಭಾಗಗಳನ್ನು ನೇಮಿಸಿದ್ದನು. ಅವನು ಅವರಿಗೆ ನೇಮಿಸಿದ್ದನ್ನು ಅವರು ಊಟಮಾಡುತ್ತಿದ್ದರು; ಆದ ದರಿಂದ ಅವರು ತಮ್ಮ ಭೂಮಿಗಳನ್ನು ಮಾರಲಿಲ್ಲ.
Cross references
ಸಾಲೇಮಿನ ಅರಸನಾದ ಮೆಲ್ಕೀಚೆದೇಕನು ರೊಟ್ಟಿಯನ್ನೂ ದ್ರಾಕ್ಷಾ ರಸವನ್ನೂ ತಂದನು. ಇವನು ಮಹೋನ್ನತನಾದ ದೇವರ ಯಾಜಕನು.
ಫರೋಹನು ಯೋಸೇಫನಿಗೆ ಸಾಫ್ನತ್ಪನ್ನೇಹ ಎಂದು ಹೆಸರಿಟ್ಟನು. ತರುವಾಯ ಓನಿನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು. ಆಗ ಯೋಸೇಫನು ಐಗುಪ್ತದೇಶದಲ್ಲೆಲ್ಲಾ ಹೊರಟು ಸಂಚರಿಸಿದನು.
ಇದಲ್ಲದೆ ಬರಗಾಲದ ವರುಷಗಳು ಬರುವದಕ್ಕೆ ಮುಂಚೆ ಯೋಸೇಫನಿಗೆ ಇಬ್ಬರು ಕುಮಾರರು ಹುಟ್ಟಿದರು. ಓನಿನ ಯಾಜಕನಾದ ಪೋಟೀಫೆರನ ಮಗಳಾಗಿದ್ದ ಆಸನತ್ ಅವರನ್ನು ಯೋಸೇಫನಿಗೆ ಹೆತ್ತಳು.
ಹೀಗೆ ಯೋಸೇಫನು ಫರೋಹನಿಗೆ ಐದನೆಯ ಪಾಲು ಆಗಬೇಕೆಂಬದನ್ನು ಐಗುಪ್ತದ ಭೂಮಿಗೆ ಇಂದಿನ ವರೆಗೂ ನೇಮಕಮಾಡಿ ಸ್ಥಾಪಿಸಿ ದನು. ವೈದಿಕರ ಭೂಮಿಯು ಮಾತ್ರ ಫರೋಹ ನದಾಗಲಿಲ್ಲ.
ನೀನು ಭೂಮಿಯ ಮೇಲೆ ಜೀವಿಸುವ ವರೆಗೆ ಲೇವಿಯನನ್ನು ಬಿಟ್ಟುಬಿಡದ ಹಾಗೆ ನೋಡಿಕೋ.
ಲೇವಿಯರ ಪಿತೃಗಳ ಹಿರಿಯರು ಕಾನಾನ್ ದೇಶದ ಶೀಲೋವಿನಲ್ಲಿರುವ ಯಾಜಕ ನಾದ ಎಲಿಯಾಜರನ ಬಳಿಗೂ ನೂನನ ಮಗನಾದ ಯೆಹೋಶುವನ ಬಳಿಗೂ ಇಸ್ರಾಯೇಲ್ ಮಕ್ಕಳ ಗೋತ್ರಗಳ ಪಿತೃಗಳಲ್ಲಿರುವ ಹಿರಿಯರ ಬಳಿಗೂ ಬಂದು ಅವರ ಸಂಗಡ ಮಾತನಾಡಿ--
ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಪೆಲೇತ್ಯರ ಮೇಲೆ ಯಜಮಾನನಾಗಿದ್ದನು. ಆದರೆ ದಾವೀದನ ಕುಮಾರರು ಮುಖ್ಯ ಪ್ರಭು ಗಳಾಗಿದ್ದರು.
ಇದಲ್ಲದೆ ಯಾಜಕರೂ ಲೇವಿ ಯರೂ ಹಾಡುಗಾರರೂ ದ್ವಾರಪಾಲಕರೂ ನೆತಿನಿ ಯರೂ ಮೊದಲಾದ ದೇವರ ಆಲಯದ ಸೇವಕರನ್ನು ಕುರಿತು ಏನಂದರೆ--ಅವರ ಮೇಲೆ ತೆರಿಗೆಯನ್ನಾದರೂ ಕಪ್ಪವನ್ನಾದರೂ ಸುಂಕವನ್ನಾದರೂ ಹೊರಿಸಲು ಅಪ್ಪಣೆ ಇಲ್ಲವೆಂದು ನಿಮಗೆ ತಿಳಿಸುತ್ತೇನೆ.
ಲೇವಿಯರ ಪಾಲುಗಳು ಅವರಿಗೆ ಕೊಡಲಿಲ್ಲ ವೆಂದು ನನಗೆ ತಿಳಿಯಿತು. ಯಾಕಂದರೆ ಸೇವೆಯನ್ನು ಮಾಡುವ ಲೇವಿಯರೂ ಹಾಡುಗಾರರೂ ತಮ್ಮ ತಮ್ಮ ಹೊಲಕ್ಕೆ ಓಡಿಹೋಗುತ್ತಿದ್ದರು.
ಪ್ರಯಾಣಕ್ಕೆ ಹಸಿಬೆಯನ್ನಾಗಲೀ ಎರಡು ಮೇಲಂಗಿಗಳ ನ್ನಾಗಲೀ ಕೆರಗಳನ್ನಾಗಲೀ ಕೋಲುಗಳನ್ನಾಗಲೀ ತಕ್ಕೊ ಳ್ಳಬೇಡಿರಿ; ಯಾಕಂದರೆ ಕೆಲಸ ಮಾಡುವವನು ತನ್ನ ಆಹಾರಕ್ಕೆ ಯೋಗ್ಯನಾಗಿದ್ದಾನೆ.
ಪವಿತ್ರವಾದವುಗಳ ಸೇವೆ ಮಾಡುವವರು ಆಲಯದವುಗಳಿಂದ ಜೀವಿಸುವರೆಂದೂ ಯಜ್ಞವೇದಿಯ ಬಳಿಯಲ್ಲಿ ಸೇವೆ ಮಾಡುವವರು ಯಜ್ಞವೇದಿಯೊಂದಿಗೆ ಪಾಲುಗಾರರೆಂದೂ ನಿಮಗೆ ಗೊತ್ತಿಲ್ಲವೋ?
ವಾಕ್ಯದಲ್ಲಿ ಉಪದೇಶಹೊಂದುವವನು ಉಪದೇಶ ಮಾಡುವವನಿಗೆ ತನಿಗರುವ ಎಲ್ಲಾ ಒಳ್ಳೆಯವುಗಳಲ್ಲಿ ಪಾಲುಕೊಡಲಿ.
ಇದಲ್ಲದೆ ನಾವು ನಿಮ್ಮ ಸಂಗಡ ಇದ್ದಾಗ ಕೆಲಸ ಮಾಡಲೊ ಲ್ಲದವನು ಊಟ ಮಾಡಬಾರದೆಂದು ನಿಮಗೆ ಆಜ್ಞಾಪಿಸಿದೆವಷ್ಟೆ.
ಚೆನ್ನಾಗಿ ಅಧಿಕಾರ ನಡಿಸುವ ಹಿರಿಯರನ್ನು, ಅವ ರೊಳಗೆ ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆ ಯಲ್ಲಿಯೂ ಕಷ್ಟಪಡುವವರನ್ನು ಇಮ್ಮಡಿಯಾದ ಮಾನಕ್ಕೆ ಯೋಗ್ಯರೆಂದು ಎಣಿಸಬೇಕು.