ಆಗ ಯೋಸೇಫನು ಜನರಿಗೆ--ಇಗೋ, ಇಂದು ನಿಮ್ಮನ್ನೂ ನಿಮ್ಮ ಭೂಮಿಯನ್ನೂ ಫರೋಹನಿಗಾಗಿ ಕೊಂಡುಕೊಂಡಿದ್ದೇನೆ. ಇಗೋ, ಇಲ್ಲಿ ನಿಮಗೆ ಬೀಜವಿದೆ. ನೀವು ಭೂಮಿಯಲ್ಲಿ ಬೀಜಬಿತ್ತಿರಿ.
Cross references
ಅವುಗಳ ತರುವಾಯ ಏರಿಬಂದ ಬಡಕಲಾದ ಕೆಟ್ಟ ಏಳು ಹಸುಗಳು ಏಳು ವರುಷಗಳು. ಮೂಡಣ ಗಾಳಿಯಿಂದ ಬತ್ತಿಹೋದ ಏಳು ಬಡಕಲಾದ ತೆನೆಗಳು ಬರವು ಇರುವ ಏಳು ವರುಷಗಳು ಅಂದನು.
ಈ ಎರಡು ವರುಷಗಳ ವರೆಗೆ ಭೂಮಿಯಲ್ಲಿ ಕ್ಷಾಮವಿತ್ತು. ಇದಲ್ಲದೆ ಇನ್ನೂ ಐದು ವರುಷಗಳ ವರೆಗೆ ಬಿತ್ತುವದೂ ಕೊಯ್ಯುವದೂ ಇರುವದಿಲ್ಲ.
ಬಡವನನ್ನು ಪರಾಂಬರಿಸುವವನು ಧನ್ಯನು; ಕೇಡಿನ ಸಮಯದಲ್ಲಿ ಕರ್ತನು ಅವನನ್ನು ತಪ್ಪಿಸುವನು.
ಅಲ್ಲಿ ಹಸಿದವರನ್ನು ವಾಸಿಸಮಾಡುತ್ತಾನೆ; ಆಗ ಅವರು ವಾಸಿಸುವ ಪಟ್ಟಣವನ್ನು ಸ್ಥಾಪಿಸಿ,
ಒಳ್ಳೇಮನುಷ್ಯನು ದಯೆ ತೋರಿಸಿ ಸಾಲಕೊಡುತ್ತಾನೆ; ತನ್ನ ಕಾರ್ಯಗಳನ್ನು ನ್ಯಾಯದಿಂದ ನಡಿಸುವನು.
ಧಾನ್ಯವನ್ನು ಬಿಗಿಹಿಡಿಯುವವನನ್ನು ಜನರು ಶಪಿಸುವರು; ಅದನ್ನು ಮಾರುವವನ ತಲೆಯ ಮೇಲೆ ಆಶೀರ್ವಾದವು ನೆಲೆಯಾಗಿರುವದು.
ತನ್ನ ಹೊಲವನ್ನು ವ್ಯವಸಾಯ ಮಾಡುವವನು ರೊಟ್ಟಿಯಿಂದ ತೃಪ್ತಿ ಹೊಂದುವನು; ನಿಷ್ಪ್ರಯೋಜಕರನ್ನು ಹಿಂಬಾಲಿಸುವ ವನು ವಿವೇಕ ಶೂನ್ಯನು.
ಬಡವರಿಗೆ ಭೂಮಿಯ ಸಾಗುವಳಿಯಲ್ಲಿ ಬಹಳ ಆಹಾರವು ಸಿಕ್ಕುತ್ತದೆ; ನ್ಯಾಯ ತೀರ್ಪಿನ ಕೊರತೆಯಿಂದ ಹಾಳಾಗುವದು ಉಂಟು.
ಬೆಳಿಗ್ಗೆ ನಿನ್ನ ಬೀಜವನ್ನು ಬಿತ್ತು, ಸಂಜೆ ತನಕ ನಿನ್ನ ಕೈಯನ್ನು ಹಿಂತೆಗೆಯಬೇಡ; ಇದೋ, ಅದೋ ಯಾವದೋ ಕೈಗೂಡಿ ಬರು ವದೋ ಇಲ್ಲವೆ ಎರಡೂ ಒಂದೇ ರೀತಿ ಒಳ್ಳೆಯದಾ ಗುವವೋ ಎಂದು ನಿನಗೆ ತಿಳಿಯದು.
ಬಿತ್ತನೆಗಾಗಿ ಉಳುವವನು ಹಗಲೆಲ್ಲಾ ಉಳುತ್ತಿರುವನೋ? ತನ್ನ ಭೂಮಿಯ ಮಣ್ಣು ಹೆಂಟೆಯನ್ನು ತೆಗೆದು (ದಿನವೆಲ್ಲಾ) ಹೊಡೆ ಯುವನೋ?
ಮಳೆಯೂ ಹಿಮವೂ ಆಕಾಶದಿಂದ ಇಳಿದು ಬಂದು ಅಲ್ಲಿಗೆ ಹಿಂತಿರುಗಿ ಹೋಗದೆ ಭೂಮಿಯನ್ನು ತೋಯಿಸಿ ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ರೊಟ್ಟಿಯನ್ನೂ ಕೊಡು ವಂತೆಯೂ ಫಲವನ್ನು ಹುಟ್ಟಿಸಿ ಚಿಗುರುಗೊಳಿಸುವ ಹಾಗೆಯೂ,
ಹಾಗಾದರೆ ತನ್ನ ಮನೆಯಲ್ಲಿದ್ದವರಿಗೆ ತಕ್ಕ ಕಾಲ ದಲ್ಲಿ ಆಹಾರ ಕೊಡುವಂತೆ ಅವರ ಮೇಲೆ ತನ್ನ ಯಜಮಾನನು ನೇಮಿಸಿದ ಅಧಿಕಾರಿಯೂ ನಂಬಿಗಸ್ತನೂ ಜ್ಞಾನಿಯೂ ಆದ ಸೇವಕನು ಯಾರು?
ಬಿತ್ತುವವನಿಗೆ ಬೀಜವನ್ನೂ ತಿನ್ನುವವನಿಗೆ ಆಹಾರ ವನ್ನೂ ಕೊಡುವಾತನು ನಿಮಗೂ ಬಿತ್ತುವದಕ್ಕೆ ಬೀಜವನ್ನು ಕೊಟ್ಟು ಹೆಚ್ಚಿಸಿ ನಿಮ್ಮ ನೀತಿಯಿಂದಾದ ಕಾರ್ಯಗಳ ಫಲಗಳನ್ನು ವೃದ್ಧಿಪಡಿಸುವನು.)