ಆಗ ಅವರು--ನೀನೇ ನಮ್ಮನ್ನು ಬದುಕಿಸಿದ್ದೀ, ನಮ್ಮ ಒಡೆಯನ ಕಣ್ಣುಗಳ ಮುಂದೆ ನಮಗೆ ಕೃಪೆ ದೊರಕಲಿ. ನಾವು ಫರೋಹನ ದಾಸರಾಗಿರುವೆವು ಅಂದರು.
Cross references
ಇದಲ್ಲದೆ ಜೀವವುಳ್ಳ ಎಲ್ಲಾ ಶರೀರಗಳ ಎಲ್ಲಾ ವಿಧವಾದ ಎರಡೆರಡು ನಿನ್ನ ಸಂಗಡ ಜೀವದಲ್ಲಿ ಕಾಪಾಡುವಂತೆ ನೀನು ಅವುಗಳನ್ನು ನಾವೆಯೊಳಗೆ ತರಬೇಕು; ಅವು ಗಂಡು ಹೆಣ್ಣಾಗಿರಬೇಕು.
ನನ್ನ ಕರ್ತನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರೆತಿದ್ದರೆ ನಿನ್ನ ದಾಸನ ಬಳಿಯಿಂದ ಹೊರಟುಹೋಗಬೇಡ.
ಆಗ ದೂತರು ಯಾಕೋಬನ ಬಳಿಗೆ ಹಿಂತಿರುಗಿ ಬಂದು--ನಾವು ನಿನ್ನ ಸಹೋದರನಾದ ಏಸಾವನ ಬಳಿಗೆ ಹೋಗಿ ಬಂದಿದ್ದೇವೆ; ಅವನು ನಾನೂರು ಮಂದಿಯನ್ನು ಕರಕೊಂಡು ನಿನ್ನನ್ನು ಎದುರುಗೊಳ್ಳುವದಕ್ಕೆ ಬರುತ್ತಾನೆ ಅಂದರು.
ಅದಕ್ಕೆ ಏಸಾವನು--ನನ್ನ ಬಳಿಯಲ್ಲಿರುವ ಜನರಲ್ಲಿ ಕೆಲವರನ್ನು ನಿನ್ನ ಬಳಿಯಲ್ಲಿ ಬಿಟ್ಟು ಹೋಗುತ್ತೇನೆ ಅನ್ನಲು ಯಾಕೋಬನು--ಅದರ ಅಗತ್ಯವೇನು? ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಲಿ ಅಂದನು.
ಫರೋಹನು ಯೋಸೇಫನಿಗೆ ಸಾಫ್ನತ್ಪನ್ನೇಹ ಎಂದು ಹೆಸರಿಟ್ಟನು. ತರುವಾಯ ಓನಿನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು. ಆಗ ಯೋಸೇಫನು ಐಗುಪ್ತದೇಶದಲ್ಲೆಲ್ಲಾ ಹೊರಟು ಸಂಚರಿಸಿದನು.
ಈ ಎರಡು ವರುಷಗಳ ವರೆಗೆ ಭೂಮಿಯಲ್ಲಿ ಕ್ಷಾಮವಿತ್ತು. ಇದಲ್ಲದೆ ಇನ್ನೂ ಐದು ವರುಷಗಳ ವರೆಗೆ ಬಿತ್ತುವದೂ ಕೊಯ್ಯುವದೂ ಇರುವದಿಲ್ಲ.
ನೀವು ನನಗೆ ವಿರೋಧವಾಗಿ ಕೇಡನ್ನು ಆಲೋಚಿ ಸಿದಿರಿ; ಆದರೆ ದೇವರು ಈಗ ಮಾಡಿದ ಹಾಗೆ ಬಹುಜನರನ್ನು ಬದುಕಿಸುವದಕ್ಕೋಸ್ಕರ ಮೇಲಿಗಾಗಿ ಆಲೋಚನೆ ಮಾಡಿದನು.
ಅದಕ್ಕೆ ಅವಳು ನನ್ನ ಒಡೆಯನೇ, ನನಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಲಿ. ಯಾಕಂದರೆ ನನ್ನನ್ನು ನೀನು ಆದರಿಸಿದಿ; ನಾನು ನಿನ್ನ ದಾಸಿಗಳಲ್ಲಿ ಒಬ್ಬಳಲ್ಲ ದಿದ್ದರೂ ನನ್ನ ಕೂಡ ಸ್ನೇಹದಿಂದ ಮಾತನಾಡಿದಿಅಂದಳು.
ಧಾನ್ಯವನ್ನು ಬಿಗಿಹಿಡಿಯುವವನನ್ನು ಜನರು ಶಪಿಸುವರು; ಅದನ್ನು ಮಾರುವವನ ತಲೆಯ ಮೇಲೆ ಆಶೀರ್ವಾದವು ನೆಲೆಯಾಗಿರುವದು.