ಆತನು ನನಗೆ--ಇಗೋ, ನಿನ್ನನ್ನು ಅಭಿವೃದ್ಧಿಪಡಿಸಿ ಹೆಚ್ಚಿಸಿ ಜನ ಸಮೂಹವನ್ನಾಗಿ ಮಾಡಿ ನಿನ್ನ ತರುವಾಯ ಹುಟ್ಟುವ ನಿನ್ನ ಸಂತತಿಗೆ ಈ ದೇಶವನ್ನು ಶಾಶ್ವತ ಸ್ವಾಸ್ಥ್ಯವಾಗಿ ಕೊಡುತ್ತೇನೆ ಎಂದು ಹೇಳಿದನು.
Cross references
ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ.
ನೀನು ನೋಡುವ ದೇಶ ವನ್ನೆಲ್ಲಾ ನಾನು ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.
ನಾನು ನಿನ್ನನ್ನು ಅತ್ಯಧಿಕವಾಗಿ ವೃದ್ಧಿ ಯಾಗಮಾಡಿ ನಿನ್ನಿಂದ ಜನಾಂಗಗಳಾಗ ಮಾಡುವೆನು; ನಿನ್ನಿಂದ ಅರಸರು ಹುಟ್ಟುವರು.
ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ಶಾಶ್ವತವಾದ ಸ್ವಾಸ್ಥ್ಯವಾಗಿ ಕೊಡುತ್ತೇನೆ. ನಾನು ಅವರ ದೇವರಾಗಿರುವೆನು ಅಂದನು.
ನಿನ್ನ ಮನೆಯಲ್ಲಿ ಹುಟ್ಟಿದವನಿಗೂ ನಿನ್ನ ಹಣದಿಂದ ಕೊಂಡುಕೊಂಡ ವನಿಗೂ ಸುನ್ನತಿಮಾಡಿಸತಕ್ಕದ್ದು. ಹೀಗೆ ನನ್ನ ಒಡಂಬಡಿಕೆಯು ನಿಮ್ಮ ಶರೀರದಲ್ಲಿ ನಿತ್ಯವಾದ ಒಡಂಬಡಿಕೆಯಾಗಿರುವದು.
ನಿನ್ನನ್ನು ಆಶೀರ್ವದಿ ಸಿಯೇ ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರ ದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸೇ ಹೆಚ್ಚಿಸುವೆನು; ನಿನ್ನ ಸಂತಾನವು ತನ್ನ ಶತ್ರುಗಳ ದ್ವಾರವನ್ನು ವಶ ಮಾಡಿಕೊಳ್ಳುವದು.
ನಿನ್ನ ಸಂತತಿಯನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯಲ್ಲಿ ಭೂಮಿಯ ಜನಾಂಗ ಗಳೆಲ್ಲಾ ಆಶೀರ್ವದಿಸಲ್ಪಡುವವು.
ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನೀನು ಜನಸಮುದಾಯವಾಗುವಂತೆ ನಿನ್ನನ್ನು ಅಭಿವೃದ್ಧಿ ಮಾಡಿ ಹೆಚ್ಚಿಸಲಿ,
ಇಗೋ, ಕರ್ತನು ಅದರ ಮೇಲೆ ನಿಂತುಕೊಂಡು ಹೇಳಿದ್ದೇನಂದರೆ--ನಿನ್ನ ತಂದೆ ಯಾದ ಅಬ್ರಹಾಮನ ಕರ್ತನಾದ ದೇವರೂ ಇಸಾಕನ ದೇವರೂ ನಾನೇ, ನೀನು ಮಲಗಿರುವ ಭೂಮಿಯನ್ನು ನಿನಗೂ ನಿನ್ನ ಸಂತತಿಗೂ ಕೊಡುವೆನು.
ನಾನು --ನಿನಗೆ ಖಂಡಿತ ವಾಗಿ ಒಳ್ಳೆಯದನ್ನು ಮಾಡುವೆನು, ನಿನ್ನ ಸಂತತಿಯನ್ನು ಎಣಿಸುವದಕ್ಕಾಗದ ಸಮುದ್ರದ ಮರಳಿನ ಹಾಗೆ ಮಾಡುವೆನು ಎಂದು ಹೇಳಿದಿಯಲ್ಲಾ ಎಂದು ಬೇಡಿಕೊಂಡನು.
ದೇವರು ಅವನಿಗೆ ಹೇಳಿದ್ದೇನಂದರೆ--ಸರ್ವಶಕ್ತನಾದ ದೇವರು ನಾನೇ, ನೀನು ಅಭಿವೃದ್ಧಿಯಾಗಿ ಹೆಚ್ಚಾಗು; ಜನಾಂಗವೂ ಜನಾಂಗಗಳ ಗುಂಪೂ ನಿನ್ನಿಂದ ಉಂಟಾಗುವವು; ಅರಸರು ನಿನ್ನಿಂದ ಹುಟ್ಟುವರು.
ಆತನು ಅವನಿಗೆ--ನಿನ್ನ ತಂದೆಯ ದೇವರಾಗಿರುವ ದೇವರು ನಾನೇ. ನೀನು ಐಗುಪ್ತಕ್ಕೆ ಇಳಿದು ಹೋಗು ವದಕ್ಕೆ ಭಯಪಡಬೇಡ; ಯಾಕಂದರೆ ಅಲ್ಲಿ ನಾನು ನಿನ್ನನ್ನು ದೊಡ್ಡಜನಾಂಗವಾಗ ಮಾಡುವೆನು.
ಆದರೆ ಇಸ್ರಾಯೇಲ್ಯರು ಐಗುಪ್ತದೇಶದ ಗೋಷೆನ್ ಸೀಮೆಯಲ್ಲಿ ವಾಸವಾಗಿದ್ದು ಆಸ್ತಿಯನ್ನು ಸಂಪಾದಿಸಿ ಬೆಳೆದು ಬಹಳವಾಗಿ ಹೆಚ್ಚಿದ್ದರು.
ಆದರೆ ಇಸ್ರಾಯೇಲನ ಮಕ್ಕಳು ಅತ್ಯಧಿಕವಾಗಿ ಅಭಿವೃದ್ಧಿ ಹೊಂದಿ ಹೆಚ್ಚಿ ಹರಡಿಕೊಂಡು ಬಲಗೊಂಡರು. ಆ ದೇಶವು ಅವರಿಂದ ತುಂಬಿತು.
ಆಗ ಅವರನ್ನು ತಮ್ಮ ಬಿಟ್ಟೀಕೆಲಸಗಳಿಂದ ಶ್ರಮೆಪಡಿಸುವ ಹಾಗೆ ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ನೇಮಿಸಿದರು. ಅವರು ಫರೋಹನಿಗೆ ಪಿತೋಮ್ ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.
ಮಹೋನ್ನತನು ಜನಾಂಗಗಳಿಗೆ ಸ್ವಾಸ್ತ್ಯ ಹಂಚಿ ಆತನು ಆದಾಮನ ಮಕ್ಕಳನ್ನು ವಿಂಗಡಿಸಿದಾಗ ಇಸ್ರಾ ಯೇಲ್ ಮಕ್ಕಳ ಲೆಕ್ಕದ ಪ್ರಕಾರ ಜನಗಳ ಮೇರೆಗಳನ್ನು ಇಟ್ಟನು.
ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ತಂದೆಗಳು(ಪಿತೃಗಳು) ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮಕ್ಕಳ ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ಪ್ರಧಾನನಾಗಿರುವನು.
ನನ್ನ ಜನರಾದ ಇಸ್ರಾಯೇಲ್ಯರನ್ನು ಸೆರೆಯಿಂದ ತಿರಿಗಿ ಬರಮಾಡುವೆನು; ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು; ದ್ರಾಕ್ಷೇತೋಟ ಗಳನ್ನು ನೆಟ್ಟು ಅವುಗಳ ದ್ರಾಕ್ಷಾರಸವನ್ನು ಕುಡಿಯು ವರು; ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.