ಆಗ ಯಾಕೋಬನು ತನ್ನ ಕುಮಾರರನ್ನು ಕರೆಯಿಸಿ ಅವರಿಗೆ ನೀವೆಲ್ಲರೂ ಕೂಡಿ ಕೊಳ್ಳಿರಿ, ಅಂತ್ಯದಿನಗಳಲ್ಲಿ ಸಂಭವಿಸುವದನ್ನು ನಿಮಗೆ ತಿಳಿಸುತ್ತೇನೆ.
Cross references
ಬಾ, ಈ ಜನರು ನಿನ್ನ ಜನರಿಗೆ ಕಡೇ ದಿವಸಗಳಲ್ಲಿ ಏನು ಮಾಡುವರೋ ಅದನ್ನು ನಿನಗೆ ತಿಳಿಸುವೆನು ಅಂದನು.
ನೀನು ಇಕ್ಕಟ್ಟಿಗೆ ಗುರಿಯಾಗಿ ಇವೆಲ್ಲವುಗಳು ನಿನಗೆ ಸಂಭವಿಸಿದಾಗ ಕಡೇ ದಿವಸ ಗಳಲ್ಲಿ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು
ಜನರನ್ನೂ ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ನಿನ್ನ ಬಾಗಲುಗಳಲ್ಲಿರುವ ಪರವಾಸಿಗಳನ್ನೂ ಅವರು ಕೇಳಿ ಕಲಿತು ನಿಮ್ಮ ದೇವರಾದ ಕರ್ತನಿಗೆ ಭಯಪಟ್ಟು ಈ ನ್ಯಾಯಪ್ರಮಾಣದ ವಾಕ್ಯಗಳನ್ನೆಲ್ಲಾ ಕಾಪಾಡಿ ಮಾಡುವ ಹಾಗೆ ಕೂಡಿಸು.
ನಿಮ್ಮ ಗೋತ್ರಗಳ ಎಲ್ಲಾ ಹಿರಿಯರನ್ನೂ ನಿಮ್ಮ ಅಧಿಕಾರಿ ಗಳನ್ನೂ ನನ್ನ ಬಳಿಗೆ ಕೂಡಿಸಿರಿ; ಆಗ ಈ ಮಾತುಗಳನ್ನು ಅವರು ಕೇಳುವಹಾಗೆ ಆಡುವೆನು; ಆಕಾಶವನ್ನೂ ಭೂಮಿಯನ್ನೂ ಸಾಕ್ಷಿಗೆ ಕರೆಯುವೆನು.
ದೇವರ ಮನುಷ್ಯನಾದ ಮೋಶೆ ಸಾಯುವದಕ್ಕಿಂತ ಮುಂಚೆ ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ಆಶೀರ್ವಾದವು ಯಾವದಂದರೆ--
ಕರ್ತನ ಗುಟ್ಟು ಆತ ನಿಗೆ ಭಯಪಡುವವರೊಂದಿಗೆ ಅದೆ; ತನ್ನ ಒಡಂಬಡಿಕೆ ಯನ್ನು ಆತನು ಅವರಿಗೆ ತಿಳಿಸುವನು.
ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ, ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿರಿ ಎಂದು ಹೇಳಿದನು.
ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು.
ಆದದರಿಂದ ಸೈನ್ಯ ಗಳ ಕರ್ತನು ನನ್ನ ಕಿವಿಗಳಲ್ಲಿ ಪ್ರಕಟ ಮಾಡಿದ್ದೇನಂದರೆ ನಿಶ್ಚಯವಾಗಿ ಈ ದುಷ್ಕೃತ್ಯಗಳು ನೀವು ಸಾಯುವ ತನಕ ಮನ್ನಿಸಲ್ಪಡುವದೇ ಇಲ್ಲ.
ಇಗೋ, ನಿನ್ನ ಪೂರ್ವಿಕರ ಕಾಲದಿಂದ ಇಂದಿನ ವರೆಗೆ ನಿನ್ನ ಮನೆಯಲ್ಲಿ ಸಂಗ್ರಹವಾದ ದ್ದೆಲ್ಲವೂ ಬಾಬೆಲಿಗೆ ಒಯ್ಯಲ್ಪಡುವ ದಿವಸವು ಬರು ವದು. ಇಲ್ಲೇನೂ ಉಳಿಯುವದಿಲ್ಲ.
ನೀವೆಲ್ಲರೂ ಕೂಡಿಕೊಂಡು ಕೇಳಿರಿ. ಅವುಗಳ ಮಧ್ಯದಲ್ಲಿ ಈ ಸಂಗತಿಗಳನ್ನು ಪ್ರಕಟಿಸಿದವರು ಯಾರು? ಕರ್ತನು ಅವನನ್ನು ಪ್ರೀತಿಮಾಡಿದ್ದಾನೆ. ಆತನು ಬಾಬೆಲಿನಲ್ಲಿ ಅವನ ಇಷ್ಟವನ್ನು ನೆರವೇರಿಸುವನು; ಆತನ ಹಸ್ತವು ಕಸ್ದೀಯರ ಮೇಲಿರುವದು.
ನಮ್ಮ ಸುದ್ಧಿಯನ್ನು ಯಾರು ನಂಬಿದ್ದಾರೆ? ಕರ್ತನ ತೋಳು ಯಾರಿಗೆ ಪ್ರಕಟವಾ ಯಿತು?
ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತ ದೇವರು ಪರಲೋಕದಲ್ಲಿದ್ದಾನೆ; ಆತನು ದಿವಸಗಳ ಅಂತ್ಯದಲ್ಲಿ ಸಂಭವಿಸುವಂತವುಗಳನ್ನು ಅರಸನಾದ ನೆಬೂಕದ್ನೆಚ್ಚ ರನಿಗೆ ತಿಳಿಯಪಡಿಸುತ್ತಾನೆ. ನಿನ್ನ ಕನಸಿನಲ್ಲಿ, ನಿನ್ನ ಹಾಸಿಗೆಯಲ್ಲಿ ಬಂದ ನಿನ್ನ ಮನಸ್ಸಿನ ದರ್ಶನಗಳು ಇವೇ ಆಗಿವೆ,
ಅರಸನು ದಾನಿಯೇಲನಿಗೆ ಉತ್ತರವಾಗಿ--ನೀನು ಈ ರಹಸ್ಯವನ್ನು ಪ್ರಕಟ ಮಾಡಲು ಸಮರ್ಥನಾದದರಿಂದ ನಿಶ್ಚಯವಾಗಿ ನಿಮ್ಮ ದೇವರು ದೇವರುಗಳಿಗೆ ದೇವರಾಗಿಯೂ ಅರಸುಗಳ ಕರ್ತನಾಗಿಯೂ ರಹಸ್ಯಗಳನ್ನು ಪ್ರಕಟಮಾಡುವಾತ ನಾಗಿಯೂ ಆಗಿದ್ದಾನೆ ಅಂದನು.
ಪಾರಸಿಯ ಅರಸನಾದ ಕೋರೇಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬೇಲ್ತೆ ಶಚ್ಚರನೆಂಬ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು. ಬಹಳ ಕಷ್ಟದ ಆ ಸಂಗತಿಯು ಸತ್ಯವಾಗಿದೆ. ಅವನು ಕಂಡ ದರ್ಶನವನ್ನು ಗ್ರಹಿಸಿ ಆ ಸಂಗತಿಯನ್ನು ಮಂದಟ್ಟು ಮಾಡಿಕೊಂಡನು.
ಈ ಅಂತ್ಯದಿನಗಳಲ್ಲಿ ನಿನ್ನ ಜನರಿಗಾದ ಗತಿಯನ್ನು ನಿನಗೆ ತಿಳಿಸುವದಕ್ಕೋಸ್ಕರ ನಾನು ಬಂದೆನು. ಆ ಕಾಲದ ಸಂಗತಿಯನ್ನು ವ್ಯಕ್ತಪಡಿ ಸುವ ಹಾಗೆ ದರ್ಶನವು ಇನ್ನೂ ಅನೇಕ ದಿವಸಗಳ ವರೆಗೂ ಇದೆ.
ನಿಶ್ಚಯ ವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಮರ್ಮ ವನ್ನು ತಿಳಿಸದೆ ಕರ್ತನಾದ ದೇವರು ಏನನ್ನೂ ಮಾಡು ವದಿಲ್ಲ.
ಅಂತ್ಯದಿವಸಗಳಲ್ಲಿ ಆಗುವದೇನಂದರೆ, ಕರ್ತನ ಆಲಯದ ಪರ್ವತವು ಬೆಟ್ಟಗಳ ತುದಿಯಲ್ಲಿ ನೆಲೆಯಾಗಿ ಗುಡ್ಡಗಳಿಗಿಂತ ಎತ್ತರ ವಾಗಿರುವದು; ಜನಗಳು ಅದರ ಬಳಿಗೆ ಪ್ರವಾಹದಂತೆ ಬರುವರು.
ಕರ್ತನಾಗಿರುವ ಕ್ರಿಸ್ತನನ್ನು ಅವನು ನೋಡುವದಕ್ಕಿಂತ ಮುಂಚೆ ಮರಣ ಹೊಂದುವದಿಲ್ಲವೆಂದು ಪರಿಶುದ್ಧಾತ್ಮನಿಂದ ಅವನಿಗೆ ಪ್ರಕಟವಾಗಿತ್ತು.
ಕಡೇ ದಿವಸಗಳಲ್ಲಿ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿಸು ವರು; ಇದಲ್ಲದೆ ನಿಮ್ಮ ಯೌವನಸ್ಥರಿಗೆ ದರ್ಶನಗಳಾ ಗುವವು; ನಿಮ್ಮ ವೃದ್ಧರಿಗೆ ಕನಸುಗಳು ಬೀಳುವವು ಎಂದು ದೇವರು ಹೇಳುತ್ತಾನೆ.
ನೀತಿವಂತನು ನಂಬಿಕೆಯಿಂದಲೇ ಜೀವಿಸುವನು ಎಂದು ಬರೆಯಲ್ಪಟ್ಟಂತೆ ದೇವರ ನೀತಿಯು ಅದರಲ್ಲಿ ವಿಶ್ವಾಸದಿಂದ ವಿಶ್ವಾಸಕ್ಕೆ ಪ್ರಕಟವಾಯಿತು.
ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ.
ಆದರೆ ಕಡೇ ದಿವಸಗಳಲ್ಲಿ ಅಪಾಯಕರ ವಾದ ಕಾಲಗಳು ಬರುವವೆಂಬದನ್ನು ಸಹ ತಿಳಿದುಕೋ.
ಈ ಅಂತ್ಯದಿನಗಳಲ್ಲಿ ನಮ್ಮ ಸಂಗಡ ತನ್ನ ಮಗನ ಮುಖಾಂತರ ಮಾತನಾಡಿದ್ದಾನೆ. ಈತನನ್ನು ಎಲ್ಲಕ್ಕೂ ಬಾಧ್ಯನನ್ನಾಗಿ ನೇಮಿಸಿದನು, ಈತನ ಮೂಲಕವೇ ಲೋಕಗಳನ್ನು ಉಂಟು ಮಾಡಿದನು.
ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುವದ ಕ್ಕಾಗಿಯೂ ಸತ್ಕಾರ್ಯ ಮಾಡುವದಕ್ಕಾಗಿಯೂ ಒಬ್ಬರ ನ್ನೊಬ್ಬರು ಪ್ರೇರೇಪಿಸೋಣ.
ಸಹೋದರ ಪ್ರೀತಿಯು ನೆಲೆಯಾಗಿರಲಿ.
ಇದಾದ ಮೇಲೆ ನಾನು ನೋಡಿದಾಗ ಇಗೋ, ಪರಲೋಕದಲ್ಲಿ ತೆರೆದಿದ್ದ ಬಾಗಿಲು ಕಾಣಿಸಿತು; ನನ್ನ ಸಂಗಡ ತುತೂರಿಯು ಮಾತನಾಡುತ್ತದೊ ಎಂಬಂತೆ ನಾನು ಮೊದಲು ಕೇಳಿದ್ದ ಧ್ವನಿಯು ನನಗೆ ಕೇಳಿಸಿತು; ಅದು--ಇಲ್ಲಿಗೆ ಮೇಲಕ್ಕೇರಿ ಬಾ, ಮುಂದೆ ಆಗತಕ್ಕವುಗಳನ್ನು ನಾನು ನಿನಗೆ ತೋರಿ ಸ