ಅಂದರೆ ನಿನಗೆ ಸಹಾಯಮಾಡುವ ನಿನ್ನ ತಂದೆಯ ದೇವರಿಂದ, ಮೇಲಿರುವ ಪರಲೋಕದ ಆಶೀರ್ವಾದಗಳೊಂದಿಗೂ ಕೆಳಗಿರುವ ಅಗಾಧದ ಆಶೀರ್ವಾದಗಳೊಂದಿಗೂ ಮೊಲೆಗಳ ಮತ್ತು ಗರ್ಭದ ಆಶೀರ್ವಾದಗಳೊಂದಿಗೂ ನಿನ್ನನ್ನು ಆಶೀರ್ವದಿಸುವ ಸರ್ವಶಕ್ತನಿಂದ ಬಲಿಷ್ಠನಾಗಿ ಮಾಡಲ್ಪಟ್ಟಿವೆ. (ಅಲ್ಲಿಂದ ಆತನು ಇಸ್ರಾಯೇಲನ ಕುರುಬನೂ ಬಂಡೆಯೂ ಆಗಿದ್ದಾನೆ.)
Cross references
ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಾನೇ ಸರ್ವಶಕ್ತನಾದ ದೇವರು; ನನ್ನ ಸನ್ನಿಧಿಯಲ್ಲಿ ನಡೆದು ನೀನು ಸಂಪೂರ್ಣನಾಗಿರು.
ಆದದರಿಂದ ದೇವರು ನಿನಗೆ ಆಕಾಶದ ಮಂಜನ್ನೂ ಸಾರವುಳ್ಳ ಭೂಮಿಯನ್ನೂ ಸಮೃದ್ಧಿಯಾದ ಧಾನ್ಯ ದ್ರಾಕ್ಷಾರಸವನ್ನೂ ಕೊಡಲಿ.
ಇಗೋ, ಕರ್ತನು ಅದರ ಮೇಲೆ ನಿಂತುಕೊಂಡು ಹೇಳಿದ್ದೇನಂದರೆ--ನಿನ್ನ ತಂದೆ ಯಾದ ಅಬ್ರಹಾಮನ ಕರ್ತನಾದ ದೇವರೂ ಇಸಾಕನ ದೇವರೂ ನಾನೇ, ನೀನು ಮಲಗಿರುವ ಭೂಮಿಯನ್ನು ನಿನಗೂ ನಿನ್ನ ಸಂತತಿಗೂ ಕೊಡುವೆನು.
ನನ್ನನ್ನು ಸಮಾಧಾನ ವಾಗಿ ನನ್ನ ತಂದೆಯ ಮನೆಗೆ ತಿರಿಗಿ ಬರಮಾಡಿದರೆ ಕರ್ತನು ನನಗೆ ದೇವರಾಗಿರುವನು.ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವದು. ಆಗ ನೀನು ನನಗೆ ಕೊಡುವದ ರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು ಅಂದನು.
ನಾವು ಎದ್ದು ಬೇತೇಲಿಗೆ ಹೋಗೋಣ; ಶ್ರಮೆಯ ದಿನದಲ್ಲಿ ನನ್ನನ್ನು ಆಲೈಸಿ ನಾನು ಹೋದ ದಾರಿಯಲ್ಲಿ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ನಾನು ಯಜ್ಞವೇದಿಯನ್ನು ಕಟ್ಟುವೆನು ಅಂದನು.
ದೇವರು ಅವನಿಗೆ ಹೇಳಿದ್ದೇನಂದರೆ--ಸರ್ವಶಕ್ತನಾದ ದೇವರು ನಾನೇ, ನೀನು ಅಭಿವೃದ್ಧಿಯಾಗಿ ಹೆಚ್ಚಾಗು; ಜನಾಂಗವೂ ಜನಾಂಗಗಳ ಗುಂಪೂ ನಿನ್ನಿಂದ ಉಂಟಾಗುವವು; ಅರಸರು ನಿನ್ನಿಂದ ಹುಟ್ಟುವರು.
ಅದಕ್ಕವನು--ನಿಮಗೆ ಸಮಾಧಾನವಿರಲಿ, ಭಯ ಪಡಬೇಡಿರಿ. ನಿಮ್ಮ ದೇವರೂ ನಿಮ್ಮ ತಂದೆಯ ದೇವರೂ ನಿಮ್ಮ ಚೀಲಗಳಲ್ಲಿ ನಿಮಗೆ ದ್ರವ್ಯವನ್ನು ಕೊಟ್ಟಿದ್ದಾನೆ. ನಿಮ್ಮ ಹಣವು ನನಗೆ ಮುಟ್ಟಿತು ಎಂದು ಹೇಳಿ ಸಿಮೆಯೋನನನ್ನು ಅವರ ಬಳಿಗೆ ತಂದನು.
ನನ್ನ ಬಲವೇ ಮತ್ತು ನನ್ನ ಕೈಯ ಸಾಮರ್ಥ್ಯವೇ ನನಗೆ ಈ ಆಸ್ತಿಯನ್ನು ಸಂಪಾದಿಸಿತೆಂದು ನಿನ್ನ ಹೃದಯದಲ್ಲಿ ಹೇಳಿಕೊಳ್ಳದ ಹಾಗೆ ನೋಡಿಕೋ.
ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳಿದರೆ ಈ ಎಲ್ಲಾ ಆಶೀರ್ವಾದಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.
ದೇವರ ಮನುಷ್ಯನಾದ ಮೋಶೆ ಸಾಯುವದಕ್ಕಿಂತ ಮುಂಚೆ ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ಆಶೀರ್ವಾದವು ಯಾವದಂದರೆ--
ಯೋಸೇಫನ ವಿಷಯವಾಗಿ--ಅವನ ದೇಶವು ಆಕಾಶದ ಅಮೂಲ್ಯವಾದವುಗಳಿಂದಲೂ ಮಂಜಿ ನಿಂದಲೂ ಕೆಳಗೆ ಮಲಗಿರುವ ಅಗಾಧದಿಂದಲೂ
ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
ಹೌದು, ಕರ್ತನು ಒಳ್ಳೇದನ್ನು ಮಾಡುವನು. ನಮ್ಮ ಭೂಮಿಯು ಅದರ ಬೆಳೆಯನ್ನು ಕೊಡುವದು.ನೀತಿಯು ಆತನ ಮುಂದೆ ಹೋಗುತ್ತಾ ನಾವು ಆತನ ಹೆಜ್ಜೆಗಳಲ್ಲಿ ನಡೆಯುವಂತೆ ಮಾರ್ಗವನ್ನು ಮಾಡುವದು.
ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
ಆದಕಾರಣ ಮನುಷ್ಯ ಮಾತ್ರದವರ ವಿಷಯದಲ್ಲಿ ಯಾರೂ ಹಿಗ್ಗದಿರಲಿ. ಯಾಕಂದರೆ ಸಮಸ್ತವೂ ನಿಮ್ಮದು;
ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯ ಆಶೀರ್ವಾದ ಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.
ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿ ಯೊಂದು ಕೊರತೆಯನ್ನು ನೀಗಿಸುವನು.
ದೇಹಸಾಧನೆಯು ಸ್ವಲ್ಪ ಮಟ್ಟಿಗೆ ಲಾಭಕರವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಲಾಭಕರವಾದದ್ದು; ಆದಕ್ಕೆ ಈಗಲೂ ಮುಂದೆ ಬರುವದಕ್ಕೂ ಜೀವಾಗ್ದಾನ ಉಂಟು.