Home Bibles ಆದಿಕಾಂಡ 49:33 · ಕನ್ನಡ ಬೈಬಲ್
ಆದಿಕಾಂಡ 49:33 · ಕನ್ನಡ ಬೈಬಲ್

ಯಾಕೋ ಬನು ತನ್ನ ಕುಮಾರರಿಗೆ ಆಜ್ಞಾಪಿಸಿ ಮುಗಿಸಿದ ಮೇಲೆ ತನ್ನ ಕಾಲುಗಳನ್ನು ಮಂಚದ ಮೇಲೆ ಮುದುರಿಕೊಂಡನು. ಅವನು ಪ್ರಾಣ ಬಿಟ್ಟು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು.

Cross references

ಆದಿಕಾಂಡ 15:5

ಕರ್ತನು ಅವನನ್ನು ಹೊರಗೆ ಕರಕೊಂಡು ಬಂದು--ಈಗ ನೀನು ಆಕಾಶವನ್ನು ದೃಷ್ಟಿಸಿ ನಕ್ಷತ್ರ ಗಳನ್ನು ಲೆಕ್ಕಿಸಶಕ್ತನಾದರೆ ಅವುಗಳನ್ನು ಲೆಕ್ಕಿಸು ಅಂದನು. ಆತನು ಅವನಿಗೆ--ಅದರಂತೆಯೇ ನಿನ್ನ ಸಂತತಿಯು ಆಗುವದು ಎಂದು ಅವನಿಗೆ ಹೇಳಿದನು.

ಆದಿಕಾಂಡ 25:8

ಅವನು ಪೂರ್ಣಾಯುಷ್ಯನಾಗಿ ತುಂಬಾ ಮುದುಕನಾಗಿದ್ದು ಸತ್ತು ತನ್ನ ಜನರೊಂದಿಗೆ ಸೇರಿಸ ಲ್ಪಟ್ಟನು.

ಆದಿಕಾಂಡ 25:17

ಇಷ್ಮಾಯೇಲನು ಬದುಕಿದ ವರುಷಗಳು ನೂರ ಮೂವತ್ತೇಳು ವರುಷಗಳು; ಅವನು ಪ್ರಾಣಬಿಟ್ಟು ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು.

ಆದಿಕಾಂಡ 35:29

ಇಸಾಕನು ಮುದುಕನಾಗಿಯೂ ತುಂಬಾ ಆಯುಷ್ಯದವನಾಗಿಯೂ ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು. ಅವನ ಕುಮಾರರಾದ ಏಸಾವನೂ ಯಾಕೋಬನೂ ಅವನನ್ನು ಹೂಣಿಟ್ಟರು.

ಆದಿಕಾಂಡ 49:1

ಆಗ ಯಾಕೋಬನು ತನ್ನ ಕುಮಾರರನ್ನು ಕರೆಯಿಸಿ ಅವರಿಗೆ ನೀವೆಲ್ಲರೂ ಕೂಡಿ ಕೊಳ್ಳಿರಿ, ಅಂತ್ಯದಿನಗಳಲ್ಲಿ ಸಂಭವಿಸುವದನ್ನು ನಿಮಗೆ ತಿಳಿಸುತ್ತೇನೆ.

ಆದಿಕಾಂಡ 49:24

ಆದರೆ ಅವನ ಬಿಲ್ಲು ಬಲವಾಗಿ ನೆಲೆಸಿತ್ತು. ಅವನ ಕೈತೋಳುಗಳು ಯಾಕೋಬನ ಪರಾಕ್ರಮಿಯಾದ ದೇವರ ಕೈಗಳಿಂದ,

ಆದಿಕಾಂಡ 49:29

ಅವನು ಅವರಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ--ನಾನು ನನ್ನ ಜನರೊಂದಿಗೆ ಕೂಡಿಸಲ್ಪ ಡುತ್ತೇನೆ. ನನ್ನ ತಂದೆಗಳ ಸಂಗಡ ಹಿತ್ತಿಯನಾದ ಎಫ್ರೋನಿನ ಹೊಲದಲ್ಲಿರುವ ಗವಿಯಲ್ಲಿ

ಯೆಹೋಶುವ 24:27

ಯೆಹೋಶುವನು ಜನ ರಿಗೆಲ್ಲಾ--ಇಗೋ, ಈ ಕಲ್ಲು ನಿಮ್ಮ ಮಧ್ಯದಲ್ಲಿ ಸಾಕ್ಷಿಯಾಗಿರಲಿ. ಯಾಕಂದರೆ ಅದು ಕರ್ತನು ನಮ್ಮ ಸಂಗಡ ಹೇಳಿದ ಎಲ್ಲಾ ವಚನಗಳನ್ನು ಕೇಳಿತು. ಆದದರಿಂದ ನೀವು ನಿಮ್ಮ ದೇವರನ್ನು ಅಲ್ಲಗಳೆಯದ ಹಾಗೆ ಇದೇ ನಿಮಗೆ ಸಾಕ್ಷಿಯಾಗಿರಲಿ ಎಂದು ಹೇಳಿದನು.

2 ಅರಸುಗಳು 13:14

ಆಗ ಎಲೀಷನು ಮರಣಕರವಾದ ವ್ಯಾಧಿ ಯಿಂದ ಬಿದ್ದು ಸತ್ತಾಗ ಇಸ್ರಾಯೇಲಿನ ಅರಸನಾದ ಯೋವಾಷನು ಅವನ ಬಳಿಗೆ ಬಂದು ಅವನ ಮುಂದೆ ಬಿದ್ದು ಅತ್ತು ಅವನಿಗೆ--ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥವೂ ಅದರ ಕುದುರೆ ರಾಹುತನೂ ಆದವನೇ ಅಂದನು.

2 ಅರಸುಗಳು 13:20

ಎಲೀಷನು ಸತ್ತ ತರುವಾಯ ಅವನನ್ನು ಹೂಣಿ ಟ್ಟರು. ವರುಷದ ಆರಂಭದಲ್ಲಿ ಮೋವಾಬ್ಯರ ದಂಡು ಗಳು ದೇಶದಲ್ಲಿ ಪ್ರವೇಶಿಸಿದವು.

ಯೋಬ 5:26

ಸಿವುಡು ತನ್ನ ಕಾಲದಲ್ಲಿ ಏಳುವಂತೆ ನೀನು ಪೂರ್ಣ ಪ್ರಾಯದವನಾಗಿ ಸಮಾಧಿಗೆ ಸೇರುವಿ.ಇಗೋ, ಇದನ್ನೇ ನಾವು ವಿಚಾರಿಸಿದೆವು; ಅದು ಇದೇ; ಇದನ್ನು ಆಲಿಸು; ನಿನ್ನ ಹಿತಕ್ಕಾಗಿ ಇದನ್ನು ತಿಳುಕೋ.

ಯೋಬ 14:10

ಆದರೆ ಮನುಷ್ಯನು ಸತ್ತು ಕ್ಷಯಿಸಿ ಹೋಗುತ್ತಾನೆ; ಮನುಷ್ಯನು ಪ್ರಾಣ ಬಿಟ್ಟ ಬಳಿಕ ಅವನೆಲ್ಲಿರುವನು?

ಯೋಬ 30:23

ಮರಣಕ್ಕೂ ಎಲ್ಲಾ ಜೀವಿಗಳ ನೇಮಕವಾದ ಮನೆಗೂ ನನ್ನನ್ನು ತಿರುಗಿಸುವಿ ಎಂದು ತಿಳಿದಿದ್ದೇನೆ.

ಸಭಾಪ್ರಸಂಗಿ 12:7

ಆಮೇಲೆ ಧೂಳು ಅದು ಇದ್ದ ಹಾಗೆಯೇ ಭೂಮಿಗೆ ಹಿಂತಿರುಗುವದು; ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂತಿರುಗು ವದು.

ಯೆಶಾಯ 57:1

ನೀತಿವಂತನು ನಾಶವಾಗುವನು, ಅದನ್ನು ಯಾವ ಮನುಷ್ಯನು ಮನಸ್ಸಿಗೆ ತಾರನು. ಕರುಣೆಯುಳ್ಳ ಮನುಷ್ಯರು ತೆಗೆದುಹಾಕಲ್ಪಡುವರು, ನೀತಿವಂತನು ಮುಂದೆ ಬರುವ ಕೇಡಿನಿಂದ ಪಾರಾಗು ತ್ತಾನೆಂಬದನ್ನು ಯಾರೂ ಯೋಚಿಸರು.

ಲೂಕ 2:29

ಕರ್ತನೇ, ಈಗ ನಿನ್ನ ಮಾತಿನ ಪ್ರಕಾರ ನಿನ್ನ ದಾಸನನ್ನು ಸಮಾಧಾನದಲ್ಲಿ ಹೋಗ ಮಾಡುತ್ತೀ;

ಅಪೋಸ್ತಲರ ಕೃತ್ಯಗಳು 7:15

ಹೀಗೆ ಯಾಕೋಬನು ಐಗುಪ್ತ ದೇಶಕ್ಕೆ ಇಳಿದು ಹೋದನು. ಅಲ್ಲಿ ಅವನೂ ನಮ್ಮ ಪಿತೃಗಳೂ ಮೃತಿಹೊಂದಿದರು.

ಹೆಬ್ರಿಯರಿಗೆ 11:13

ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದದೆ ಅವುಗಳನ್ನು ದೂರದಿಂದ ನೋಡಿ ನಿಶ್ಚಯದೊಡನೆ ಅಪ್ಪಿಕೊಂಡು ನಂಬಿಕೆಯುಳ್ಳವರಾಗಿ ಮೃತರಾದರು; ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿ ಗಳೂ ಆಗಿದ್ದೇವೆಂದು ಒಪ್ಪಿಕೊಂಡರು.

ಹೆಬ್ರಿಯರಿಗೆ 11:22

ಯೋಸೇಫನು ಸಾಯುವಾಗ ಇಸ್ರಾಯೇಲಿನ ಮಕ್ಕಳು ಹೊರಡುವದನ್ನು ಕುರಿತು ನಂಬಿಕೆಯಿಂದಲೇ ಮಾತನಾಡಿ ತನ್ನ ಎಲುಬುಗಳ ವಿಷಯದಲ್ಲಿ ಅಪ್ಪಣೆಕೊಟ್ಟನು.

ಹೆಬ್ರಿಯರಿಗೆ 12:23

ಪರ ಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಸಾರ್ವತ್ರಿಕ ಸಂಘಕ್ಕೂ ಚೊಚ್ಚಲ ಮಕ್ಕಳ ಸಭೆಗೂ ಎಲ್ಲರಿಗೆ ನ್ಯಾಯಾ ಧಿಪತಿಯಾಗಿರುವ ದೇವರ ಬಳಿಗೂ ಸಿದ್ದಿಗೆ ಬಂದಿರುವ ನೀತಿವಂತರ ಆತ್ಮಗಳ ಬಳಿಗೂ

Interlinear

Choose Theme