ಯೆಹೂದನೇ, ನಿನ್ನ ಸಹೋದರರು ನಿನ್ನನ್ನು ಹೊಗಳು ವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವದು, ನಿನ್ನ ತಂದೆಯ ಮಕ್ಕಳು ನಿನಗೆ ಅಡ್ಡ ಬೀಳುವರು.
Cross references
ಜನಗಳು ನಿನ್ನನ್ನು ಸೇವಿಸಲಿ, ಜನಾಂಗಗಳು ನಿನಗೆ ಅಡ್ಡಬೀಳಲಿ, ನಿನ್ನ ಸಹೋದರರಿಗೆ ನೀನು ದೊರೆ ಯಾಗಿರು. ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ, ನಿನ್ನನ್ನು ಶಪಿಸುವವರಿಗೆ ಶಾಪವೂ ಆಶೀರ್ವದಿಸುವ ವರಿಗೆ ಆಶೀರ್ವಾದವೂ ಆಗಲಿ ಅಂದನು.
ಆಕೆಯು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು--ಈಗ ನಾನು ಕರ್ತನನ್ನು ಸ್ತುತಿಸುವೆನು ಎಂದು ಹೇಳಿ ಅವನಿಗೆ ಯೆಹೂದನೆಂದು ಹೆಸರಿಟ್ಟಳು. ಆಕೆಯು ಹೆರುವದು ನಿಂತುಹೋಯಿತು.
ಇಗೋ, ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು; ಆಗ ಇಗೋ, ನನ್ನ ಸಿವುಡು ಎದ್ದು ನಿಂತಿತು; ಆಗ ಇಗೋ, ನಿಮ್ಮ ಸಿವುಡುಗಳು ತಿರುಗಿ ಕೊಂಡು ನನ್ನ ಸಿವುಡಿಗೆ ಅಡ್ಡಬಿದ್ದವು ಅಂದನು.
ಆಗ ಯೋಸೇಫನು ದೇಶದ ಮೇಲೆಲ್ಲಾ ಅಧಿಪತಿಯಾ ಗಿದ್ದನು. ದೇಶದ ಜನರಿಗೆಲ್ಲಾ ಧಾನ್ಯವನ್ನು ಮಾರು ವವನು ಅವನೇ ಆಗಿದ್ದನು. ಹೀಗಿರಲಾಗಿ ಯೋಸೇಫನ ಸಹೋದರರು ಬಂದು ತಮ್ಮ ಮುಖಗಳನ್ನು ನೆಲದ ಮಟ್ಟಿಗೂ ತಗ್ಗಿಸಿ ಅವನಿಗೆ ಅಡ್ಡಬಿದ್ದರು.
ಯೆಹೂದನು ಅವನ ಸವಿಾಪಕ್ಕೆ ಬಂದು--ಓ ನನ್ನ ಒಡೆಯನೇ, ನನ್ನ ಒಡೆಯನ ಕಿವಿಗಳಲ್ಲಿ ಒಂದು ಮಾತು ಹೇಳುವದಕ್ಕೆ ನಿನ್ನ ದಾಸನಿಗೆ ಅಪ್ಪಣೆ ಯಾಗಬೇಕು. ನಿನ್ನ ದಾಸನ ಮೇಲೆ ನಿನ್ನ ಕೋಪವು ಉರಿಯದೆ ಇರಲಿ. ಯಾಕಂದರೆ ನೀನು ಫರೋ ಹನಿಗೆ ಸಮಾನನು.
ಯೆಹೂದನ ಮಕ್ಕಳು: ಏರ್ ಓನಾನ್ ಶೇಲಾಹ ಪೆರೆಚ್ ಜೆರಹ. ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು. ಪೆರೆಚನ ಮಕ್ಕಳು: ಹೆಚ್ರೋನ್ ಹಾಮೂಲ್ ಎಂಬವರು.
ಯೆಹೂ ದನ ಗೋತ್ರದಲ್ಲಿ ಎಣಿಸಲ್ಪಟ್ಟವರು ಎಪ್ಪತ್ತನಾಲ್ಕು ಸಾವಿರದ ಆರುನೂರು.
ಯೂದನ ಮಕ್ಕಳ ಪಾಳೆಯದ ಧ್ವಜವು ಅದರ ಸೈನ್ಯಗಳ ಪ್ರಕಾರ ಮೊದಲು ಹೊರಟಿತು. ಅವರ ಸೈನ್ಯದ ಮೇಲೆ ಅವ್ಮೆಾನಾದಾಬನ ಮಗನಾದ ನಹಶೋ ನನು ಇದ್ದನು.
ಯೆಹೂದನ ಕುಟುಂಬಗಳಲ್ಲಿ ಎಣಿಸಲ್ಪಟ್ಟವರು ಎಪ್ಪತ್ತಾರು ಸಾವಿರದ ಐನೂರು ಮಂದಿ.
ಯೂದನ ಆಶೀರ್ವಾದವು ಇದೇ; ಕರ್ತನೇ, ಯೂದನ ಶಬ್ದವನ್ನು ಕೇಳು; ಅವನನ್ನು ತನ್ನ ಜನರ ಬಳಿಗೆ ಸೇರಿಸು; ತನ್ನ ಕೈಗಳು ಅವನಿಗೆ ಸಾಕಾಗಿವೆ. ಅವನ ವೈರಿಗಳ ವಿಷಯದಲ್ಲಿ ಅವನಿಗೆ ಸಹಾಯ ವಾಗಿರು ಎಂದು ಹೇಳಿದನು.
ಅವರನ್ನು ಯೆಹೋಶುವನ ಬಳಿಗೆ ತೆಗೆದುಕೊಂಡು ಬಂದಾಗ ಯೆಹೋಶುವನು ಇಸ್ರಾಯೇಲ್ಯರೆಲ್ಲರನ್ನು ಕರಿಸಿ ತನ್ನ ಸಂಗಡ ಬಂದ ಯುದ್ಧಸ್ಥರಾದ ಅಧಿಕಾರಿಗಳಿಗೆ--ನೀವು ಸವಿಾಪಕ್ಕೆ ಬಂದು ನಿಮ್ಮ ಪಾದಗಳನ್ನು ಈ ಅರಸುಗಳ ಕುತ್ತಿಗೆಗಳ ಮೇಲೆ ಇಡಿರಿ ಅಂದನು. ಆಗ ಅವರು ಸವಿಾಪಕ್ಕೆ ಬಂದು ತಮ್ಮ ಪಾದಗಳನ್ನು ಅವರ ಕುತ್ತಿಗೆಗಳ ಮೇಲೆ ಇಟ್ಟರು.
ಯೂದನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬ ಗಳ ಪ್ರಕಾರ ಉಂಟಾದ ಸ್ವಾಸ್ತ್ಯವೇನಂದರೆ--
ಯೆಹೋಶುವನು ಸತ್ತ ತರುವಾಯ ಆದದ್ದೇನಂದರೆ, ಇಸ್ರಾಯೇಲ್ ಮಕ್ಕಳು ಕರ್ತನಿಗೆ--ಕಾನಾನ್ಯರ ಮೇಲೆ ಮೊದಲು ನಮಗಾಗಿ ಯುದ್ಧಕ್ಕೆ ಹೋಗುವವರು ಯಾರು ಎಂದು ಕೇಳಿದರು.
ಅದಕ್ಕೆ ಕರ್ತನು--ಯೂದನು ಹೋಗಲಿ; ಇಗೋ, ನಾನು ಆ ದೇಶವನ್ನು ಅವನ ಕೈಯಲ್ಲಿ ಒಪ್ಪಿಸಿಕೊಟ್ಟಿ ದ್ದೇನೆ ಅಂದನು.
ಆಗ ಇಸ್ರಾಯೇಲಿನ ಮಕ್ಕಳು ಎದ್ದು ದೇವರ ಮನೆಗೆ ಹೋಗಿ ತಮ್ಮಲ್ಲಿ ಮೊದಲು ಬೆನ್ಯಾವಿಾನನ ಮಕ್ಕಳ ಸಂಗಡ ಯುದ್ಧಮಾಡುವದಕ್ಕೆ ಹೋಗ ಬೇಕಾ ದವರು ಯಾರೆಂದು ದೇವರನ್ನು ಕೇಳಿದರು. ಅದಕ್ಕೆ ಕರ್ತನು -- ಯೊಹೂದ ಕುಲದವರು ಮೊದಲು ಹೋಗಬೇಕು ಅಂದನು.
ಹಾಗೆಯೇ ಇಸ್ರಾಯೇಲಿನ ಹಿರಿಯರೆಲ್ಲರೂ ಹೆಬ್ರೋನಿನಲ್ಲಿರುವ ಅರಸನ ಬಳಿಗೆ ಬಂದಾಗ ಅರಸ ನಾದ ದಾವೀದನು ಹೆಬ್ರೋನಿನಲ್ಲಿ ಕರ್ತನ ಮುಂದೆ ಅವರ ಸಂಗಡ ಒಡಂಬಡಿಕೆಯನ್ನು ಮಾಡಿದನು. ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸ ನಾಗಿರಲು ಅಭಿಷೇಕಮಾಡಿದರು.
ನನ್ನ ಶತ್ರುಗಳು ನನಗೆ ಬೆನ್ನು ಕೊಡುವಂತೆ ಮಾಡಿದಿ; ನಾನು ನನ್ನ ಹಗೆಯವರನ್ನು ಸಂಹರಿಸುವ ಹಾಗೆ ಮಾಡಿದ್ದಿ.
ಯೋವಾಬನು ಅರಸನಿಗೆ ಕೊಟ್ಟ ಜನರ ಒಟ್ಟು ಲೆಕ್ಕವೇನಂದರೆ, ಇಸ್ರಾಯೇಲ್ಯರಲ್ಲಿ ಕತ್ತಿ ಹಿಡಿಯತಕ್ಕ ಪರಾಕ್ರಮವುಳ್ಳ ಎಂಟು ಲಕ್ಷ ಮಂದಿ ಇದ್ದರು. ಯೆಹೂದದ ಜನರು ಐದು ಲಕ್ಷ ಮಂದಿಯಾಗಿದ್ದರು.
ಹೀಗೆ ಅರಸನಾದ ಸೊಲೊಮೋನನು ಸಮಸ್ತ ಇಸ್ರಾಯೇಲಿನ ಮೇಲೆ ಅರಸ ನಾಗಿದ್ದನು.
ಯೆಹೂದನು ತನ್ನ ಸಹೋದರರಿಗಿಂತ ಪ್ರಬಲವುಳ್ಳವನಾದನು. ಅವ ನಿಂದ ಮುಖ್ಯ ಅಧಿಕಾರಿಯು ಹುಟ್ಟಿದನು. ಆದರೆ ಚೊಚ್ಚಲತನ ಯೋಸೆಫನದಾಗಿತ್ತು).
ಕೀಷನ ಮಗನಾದ ಸೌಲನ ನಿಮಿತ್ತ ತಾನು ಇನ್ನೂ ಬಚ್ಚಿಟ್ಟುಕೊಂಡಿರುವಾಗ ಚಿಕ್ಲಗಿ ನಲ್ಲಿರುವ ದಾವೀದನ ಬಳಿಗೆ ಬಂದವರು ಇವರೇ; ಅವರು ಪರಾಕ್ರಮಶಾಲಿಗಳಲ್ಲಿ ಸೇರಿದವರೂ ಯುದ್ಧಕ್ಕೆ ಸಹಾಯಕರೂ
ಪ್ರತಿ ಪಟ್ಣಣದಲ್ಲಿ ಖೇಡ್ಯಗಳನ್ನೂ ಈಟಿಗಳನ್ನೂ ಇಟ್ಟು ಯೆಹೂದ ಬೆನ್ಯಾವಿಾನಿನವರು ಅವನ ಕಡೆ ಇದ್ದದ್ದರಿಂದ ಅವುಗಳನ್ನು ಬಹಳ ಭದ್ರಪಡಿಸಿದನು.
ಹಾಗೆಯೇ ಅವರು ಕಟ್ಟಿಸಿ ವೃದ್ಧಿಹೊಂದಿದರು. ಇದ ಲ್ಲದೆ ಆಸನಿಗೆ ಖೇಡ್ಯಗಳನ್ನೂ ಈಟಿಗಳನ್ನೂ ಹಿಡಿ ಯುವ ರಾಣುವೆ ಇತ್ತು. ಯೆಹೂದದವರು ಮೂರು ಲಕ್ಷಮಂದಿಯೂ ಬೆನ್ಯಾವಿಾನಿನವರು ಗುರಾಣಿಗಳನ್ನು ಹಿಡಿಯುವವರೂ, ಬಿಲ್ಲುಗಳನ್ನು ಎಸೆಯುವವರೂ ಎರಡು ಲಕ್ಷದ ಎಂಭತ್ತು ಸಾವಿರ ಮಂದಿಯೂ ಇದ್ದರು. ಇವರೆಲ್ಲರು ಪರಾಕ್ರಮಶಾಲಿಗಳಾಗಿದ್ದರು.
ಇದಲ್ಲದೆ ಅವನು ಯೆಹೂದದ ಬೆನ್ಯಾ ವಿಾನನ ಸಮಸ್ತರನ್ನೂ ಎಫ್ರಾಯಾಮಿನಿಂದಲೂ ಮನಸ್ಸೆಯಿಂದಲೂ ಸಿಮೆಯೋನಿನಿಂದಲೂ ಅವರ ಕಡೆಗೆ ಬಂದ ಅನ್ಯರನ್ನೂ ಕೂಡಿಸಿದನು. ಅವನ ದೇವರಾದ ಕರ್ತನು ಅವನ ಸಂಗಡ ಇದ್ದಾನೆಂದು ಇವರು ಕಂಡು ಇಸ್ರಾಯೇಲಿನೊಳಗಿಂದ ಅನೇಕರು ಅವನ ಕಡೆಗೆ ಹೋದರು.
ಅವನು ಇಸ್ರಾಯೇಲಿಗೆ ವಿರೋಧವಾಗಿ ತನ್ನನ್ನು ಬಲಪಡಿಸಿ ಕೊಂಡನು. ಇದಲ್ಲದೆ ಅವನು ಯೆಹೂದದಲ್ಲಿ ಸಮಸ್ತ ಕೋಟೆಯುಳ್ಳ ಪಟ್ಟಣಗಳಲ್ಲಿ ಸೈನ್ಯವನ್ನು ಇಟ್ಟು ಯೆಹೂ ದದಲ್ಲಿಟ್ಟ ಹಾಗೆ ತನ್ನ ತಂದೆಯಾದ ಆಸನು ತೆಗೆದು ಕೊಂಡ ಎಫ್ರಾಯಾಮಿನ ಪಟ್ಟಣಗಳಲ್ಲಿ ಸೈನ್ಯಗಳನ್ನು ಇಟ್ಟನು.
ತಮ್ಮ ಪಿತೃಗಳ ಮನೆಯ ಪ್ರಕಾರ ವಾಗಿರುವ ಅವರ ಲೆಕ್ಕವೇನಂದರೆ, ಯೆಹೂದದ ಸಹಸ್ರಗಳ ಅಧಿಪತಿಗಳಲ್ಲಿ ಅದ್ನನು ಮುಖ್ಯಸ್ಥನಾಗಿ ದ್ದನು; ಅವನ ಸಂಗಡ ಪರಾಕ್ರಮಶಾಲಿಗಳು ಮೂರು ಲಕ್ಷಮಂದಿ ಇದ್ದರು.
ಆದಾಗ್ಯೂ ಅಶೇರ, ಮನಸ್ಸೆ, ಜೆಬುಲೂನ್ ಇವರಲ್ಲಿ ಕೆಲವರು ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇಮಿಗೆ ಬಂದರು.
ನನ್ನ ಹಗೆಯವರನ್ನು ನಾಶಮಾಡುವಂತೆ ಶತ್ರುಗಳ ಕುತ್ತಿಗೆಗಳನ್ನು ನೀನು ನನಗೆ ಕೊಟ್ಟಿದ್ದೀ.
ದೇವರು ಯೆಹೂದದಲ್ಲಿ ಪ್ರಸಿದ್ಧವಾಗಿದ್ದಾನೆ; ಇಸ್ರಾಯೇಲಿನಲ್ಲಿ ಆತನ ಹೆಸರು ದೊಡ್ಡದಾಗಿದೆ.
ಯೆಹೂದನ ಕುಲವನ್ನೂ ತಾನು ಪ್ರೀತಿ ಮಾಡಿದ ಚೀಯೋನ್ ಪರ್ವತವನ್ನೂ ಆದುಕೊಂಡು,
ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
ನಿನ್ನ ಜೋಯಿಸರು ವ್ಯರ್ಥವಾದದ್ದನ್ನು ನೋಡಿ ಸಾಕ್ಷಾತ್ಕರಿಸಿ ಸುಳ್ಳಾಗಿ ಶಕುನ ಹೇಳುತ್ತಿದ್ದಾರೆ, ಹೀಗೆ ನಿನ್ನನ್ನು ಹತವಾದ ದುಷ್ಟರ ಕುತ್ತಿಗೆಗಳ ಮೇಲೆ ತಂದಿದ್ದಾರೆ. ಅವರ ಅಂತ್ಯದಿನವು ಬಂದಿದೆ; ಅದೇ ಅವರ ಅಕ್ರಮಗಳಿಗೆ ಅಂತ್ಯವಾಗಿದೆ.
ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.
ನಮ್ಮ ಕರ್ತನು ಯೂದಾ ಗೋತ್ರದಲ್ಲಿ ಜನಿಸಿದಾತನೆಂಬದು ಸ್ಪಷ್ಟವಾಗಿದೆಯಷ್ಟೆ; ಈ ಗೋತ್ರದ ವಿಷಯದಲ್ಲಿ ಮೋಶೆಯು ಯಾಜಕರ ಸಂಬಂಧವಾಗಿ ಏನೂ ಹೇಳಲಿಲ್ಲ.
ಅಂದಿನಿಂದ ತನ್ನ ವಿರೋಧಿಗಳು ತನ್ನ ಪಾದ ಪೀಠವಾಗಿ ಮಾಡಲ್ಪಡುವ ತನಕ ಆತನು ಎದುರುನೋಡುವನು.
ಆಗ ಹಿರಿಯರಲ್ಲಿ ಒಬ್ಬನು ನನಗೆ--ಅಳಬೇಡ; ಅಗೋ, ಯೂದಾ ಗೋತ್ರದ ಸಿಂಹವೂ ದಾವೀದನ ಅಂಕುರದವನೂ ಆಗಿರುವಾತನು ಆ ಪುಸ್ತಕವನ್ನು ತೆರೆಯುವದಕ್ಕೂ ಅದರ ಏಳು ಮುದ್ರೆ ಗಳನ್ನು ಬಿಚ್ಚುವದಕ್ಕೂ ಜಯಹೊಂದಿದ್ದಾನೆ ಎಂದು ಹೇಳಿದನು.
ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.