ಹನೋ ಕನಿಂದ ಮೆತೂಷೆಲಹನು ಹುಟ್ಟಿದ ತರುವಾಯ ಅವನು ಮುನ್ನೂರು ವರುಷ ದೇವರೊಂದಿಗೆ ನಡೆದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
Cross references
ದೇವರೊಂದಿಗೆ ನಡೆಯುತ್ತಿದ್ದ ಹನೋಕನನ್ನು ಆತನು ತಕ್ಕೊಂಡದ್ದರಿಂದ ಅವನು ಕಾಣದೆಹೋದನು.
ನೋಹನ ವಂಶಾವಳಿಗಳು ಇವೇ: ನೋಹನು ತನ್ನ ವಂಶದವರಲ್ಲಿ ನೀತಿವಂತನೂ ಸಂಪೂರ್ಣನೂ ಆಗಿದ್ದನು; ನೋಹನು ದೇವರ ಸಂಗಡ ನಡೆಯು ತ್ತಿದ್ದನು.
ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಾನೇ ಸರ್ವಶಕ್ತನಾದ ದೇವರು; ನನ್ನ ಸನ್ನಿಧಿಯಲ್ಲಿ ನಡೆದು ನೀನು ಸಂಪೂರ್ಣನಾಗಿರು.
ಅವನು ನನಗೆ--ನಾನು ಯಾರ ಮುಂದೆ ನಡೆದುಕೊಳ್ಳುತ್ತೇನೋ ಆ ಕರ್ತನು ತನ್ನ ದೂತನನ್ನು ನಿನ್ನ ಸಂಗಡ ಕಳುಹಿಸಿ ನೀನು ನನ್ನ ಬಂಧುಗಳೊಳಗಿಂದಲೂ ನನ್ನ ತಂದೆಯ ಮನೆಯೊಳಗಿಂದಲೂ ನನ್ನ ಮಗನಿಗೋಸ್ಕರ ಹೆಂಡತಿಯನ್ನು ತಕ್ಕೊಳ್ಳುವ ಹಾಗೆ ನಿನ್ನ ಮಾರ್ಗವನ್ನು ಸಫಲಮಾಡುವನು;
ಆಗ ಅವನು ಯೋಸೇಫನನ್ನು ಆಶೀರ್ವದಿಸಿ--ನನ್ನ ತಂದೆಗಳಾದ ಅಬ್ರಹಾಮನೂ ಇಸಾಕನೂ ಯಾವಾತನ ಮುಂದೆ ನಡಕೊಂಡರೋ ಆ ದೇವರೇ, ನಾನು ಹುಟ್ಟಿದಂದಿನಿಂದ ಇಂದಿನ ವರೆಗೆ ನನ್ನನ್ನು ಪೋಷಣೆ ಮಾಡಿದ ದೇವರು,
ಆಗ ಕರ್ತನು ಮೋಶೆಗೆ--ಇಗೋ, ರೊಟ್ಟಿಯನ್ನು ನಿಮಗಾಗಿ ನಾನು ಆಕಾಶದಿಂದ ಸುರಿಸುತ್ತೇನೆ; ಅವರು ನನ್ನ ನ್ಯಾಯಪ್ರಮಾಣದ ಪ್ರಕಾರ ನಡೆದುಕೊಳ್ಳುವರೋ ಇಲ್ಲವೋ ಎಂದು ನಾನು ಅವರನ್ನು ಪರೀಕ್ಷಿಸುವ ಹಾಗೆ ಜನರು ಹೊರಗೆಹೋಗಿ ಪ್ರತಿದಿನ ಆ ದಿನಕ್ಕೆ ಬೇಕಾದ ದ್ದನ್ನು ಕೂಡಿಸಲಿ.
ನಾನು ನಿಮ್ಮ ಮಧ್ಯದಲ್ಲಿ ನಡೆದು ನಿಮ್ಮ ದೇವ ರಾಗಿರುವೆನು; ನೀವು ನನ್ನ ಜನರಾಗಿರುವಿರಿ.
ನೀವು ಬದುಕುವ ಹಾಗೆಯೂ ನಿಮಗೆ ಒಳ್ಳೆಯದಾಗುವ ಹಾಗೆಯೂ ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ಮಾರ್ಗ ಗಳಲ್ಲಿ ನಡಕೊಳ್ಳಬೇಕು.
ನಿಮ್ಮ ದೇವರಾದ ಕರ್ತನನ್ನೇ ಅನುಸರಿಸಿ ಆತನಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಂಡು ಆತನ ಸ್ವರವನ್ನು ಕೇಳಿ ಆತನಿಗೆ ಸೇವೆಮಾಡಿ ಆತನಿಗೆ ಅಂಟಿಕೊಳ್ಳಬೇಕು.
ನೀನು ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ಕಾಪಾಡಿ ಆತನ ಮಾರ್ಗಗಳಲ್ಲಿ ನಡೆದರೆ ಕರ್ತನು ನಿನಗೆ ಪ್ರಮಾಣಮಾಡಿದ ಹಾಗೆ ನಿನ್ನನ್ನು ತನಗೆ ಪರಿಶುದ್ಧ ಜನವಾಗಿ ಸ್ಥಾಪಿಸುವನು.
ನೀನು ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ನಿನ್ನ ದೇವರಾದ ಕರ್ತನ ನಿಯಮಗಳನ್ನೂ ಆಜ್ಞೆಗಳನ್ನೂ ನ್ಯಾಯಗಳನ್ನೂ ಸಾಕ್ಷಿಗಳನ್ನೂ ಕೈಕೊಂಡು ಆತನ ಮಾರ್ಗದಲ್ಲಿ ನಡೆಯುವ ಹಾಗೆ ಆತನ ಆಜ್ಞೆಯನ್ನು ಕೈಗೊಳ್ಳು.
ಓ ಕರ್ತನೇ, ನಾನು ಸತ್ಯದಿಂದಲೂ ಪೂರ್ಣಹೃದಯದಿಂದಲೂ ನಿನ್ನ ಮುಂದೆ ನಡೆದು ನಿನ್ನ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂದು ನೆನಸು ಅಂದನು. ಹಿಜ್ಕೀಯನು ಬಹಳವಾಗಿ ಅತ್ತನು.
ನಾನು ಕರ್ತನನ್ನು ಯಾವಾಗಲೂ ನನ್ನ ಮುಂದೆ ಇಟ್ಟುಕೊಂಡಿದ್ದೇನೆ. ಆತನು ನನ್ನ ಬಲಗಡೆಯಲ್ಲಿ ಇರುವದರಿಂದ ನಾನು ಕದಲೆನು.
ನಾನಾದರೋ ನನ್ನ ಯಥಾರ್ಥತ್ವದಲ್ಲಿ ನಡೆಯು ತ್ತೇನೆ: ನನ್ನನ್ನು ವಿಮೋಚಿಸು; ನನಗೆ ಕರುಣೆಯುಳ್ಳ ವನಾಗಿರು.ನನ್ನ ಪಾದವು ಸಮಸ್ಥಳದಲ್ಲಿ ನಿಲ್ಲುತ್ತದೆ; ಸಭೆಗಳಲ್ಲಿ ನಾನು ಕರ್ತನನ್ನು ಸ್ತುತಿಸುವೆನು.
ನನ್ನ ಪ್ರಾಣವನ್ನು ಮರಣದಿಂದ ಬಿಡಿಸಿದ್ದೀ, ಹಾಗೆ ನಾನು ಜೀವಿತರ ಬೆಳಕಿನಲ್ಲಿ ದೇವರ ಮುಂದೆ ನಡೆಯುವ ನನ್ನ ಪಾದಗಳನ್ನು ಬೀಳದಂತೆ ನೀನು ತಪ್ಪಿಸುವದಿಲ್ಲವೋ?
ಓ ಕರ್ತನೆ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನಿನ್ನ ಸತ್ಯದಲ್ಲಿ ನಡೆದುಕೊಳ್ಳುವೆನು; ನಿನ್ನ ಹೆಸರಿಗೆ ಭಯಪಡುವ ಹಾಗೆ ನನ್ನ ಹೃದಯವನ್ನು ಐಕ್ಯಪಡಿಸು.
ಜೀವಿತರ ದೇಶದಲ್ಲಿ ಕರ್ತನ ಮುಂದೆ ನಡೆದುಕೊಳ್ಳುವೆನು.
ಕರ್ತನಿಗೆ ಭಯಪಟ್ಟು ಆತನ ಮಾರ್ಗಗಳಲ್ಲಿ ನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು.
ನನ್ನನ್ನು ಎಳಕೋ, ನಾವು ನಿನ್ನ ಹಿಂದೆ ಓಡುವೆವು; ಅರಸನು ನನ್ನನ್ನು ತನ್ನ ಕೊಠಡಿಗಳಿಗೆ ಕರಕೊಂಡು ಬಂದಿದ್ದಾನೆ. ನಾವು ನಿನ್ನಲ್ಲಿ ಉಲ್ಲಾಸಪಟ್ಟು ಸಂತೋಷಪಡುತ್ತೇವೆ; ದ್ರಾಕ್ಷಾರಸ ಕ್ಕಿಂತ ನಿನ್ನ ಪ್ರೀತಿಯನ್ನು ಜ್ಞಾಪಕಮಾಡುತ್ತೇವೆ; ಯಥಾ ರ್ಥರು ನಿನ್ನನ್ನು ಪ್ರೀತಿಮಾಡುತ್ತಾರೆ.
ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು? ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ? ಕರ್ತನ ಮಾರ್ಗ ಗಳು ನ್ಯಾಯವಾಗಿದೆ; ಮತ್ತು ನೀತಿವಂತರು ಅದರಲ್ಲಿ ನಡೆಯುವರು; ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು.
ಒಪ್ಪಂದಮಾಡಿಕೊಳ್ಳದ ಹೊರತು ಇಬ್ಬರು ಜೊತೆ ಯಾಗಿ ನಡೆಯಲು ಸಾಧ್ಯವೋ?
ಎಲ್ಲಾ ಜನಗಳಲ್ಲಿ ಪ್ರತಿಯೊಬ್ಬನು ತನ್ನ ತನ್ನ ದೇವರ ಹೆಸರಿನಲ್ಲಿ ನಡೆ ಯುವನು; ಆದರೆ ನಾವು ನಮ್ಮ ದೇವರಾದ ಕರ್ತನ ಹೆಸರಿನಲ್ಲಿ ಎಂದೆಂದಿಗೂ ನಡೆಯುವೆವು.
ಮನುಷ್ಯನೇ, ಉತ್ತಮವಾದ ದ್ದನ್ನು ನಿನಗೆ ಆತನು ತಿಳಿಸಿದ್ದಾನೆ; ಹೌದು, ನ್ಯಾಯ ವನ್ನು ಮಾಡುವದೂ ಕರುಣೆಯನ್ನು ಪ್ರೀತಿಮಾಡು ವದೂ ನಿನ್ನ ದೇವರ ಸಂಗಡ ವಿನಯವಾಗಿ ನಡ ಕೊಳ್ಳುವದೂ ಇದನ್ನೇ ಹೊರತು ಕರ್ತನು ಇನ್ನೇನು ನಿನ್ನಿಂದ ಕೇಳುತ್ತಾನೆ.
ಸತ್ಯದ ನ್ಯಾಯಪ್ರಮಾಣವು ಅವನ ಬಾಯಲ್ಲಿ ಇತ್ತು; ಅಕ್ರಮವು ಅವನ ತುಟಿಗಳಲ್ಲಿ ಸಿಕ್ಕಲಿಲ್ಲ. ಅವನು ಸಮಾಧಾನದಿಂದಲೂ ನ್ಯಾಯ ದಿಂದಲೂ ನನ್ನ ಸಂಗಡ ನಡೆದುಕೊಂಡು ಅನೇಕರನ್ನು ಅಕ್ರಮದಿಂದ ತಿರುಗಿಸಿದನು.
ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನ್ಯಾಯವಿಧಿಗಳನ್ನು ತಪ್ಪಿಲ್ಲದೆ ಕೈಕೊಂಡು ದೇವರ ಮುಂದೆ ನೀತಿವಂತರಾಗಿದ್ದರು.
ಹೀಗಿರಲಾಗಿ ಯೂದಾಯ ಗಲಿಲಾಯ ಸಮಾ ರ್ಯ ಸೀಮೆಗಳಲ್ಲಿದ್ದ ಸಭೆಗಳು ಭಕ್ತಿವೃದ್ಧಿ ಹೊಂದಿದವು; ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಆದರಣೆ ಹೊಂದಿ ಹೆಚ್ಚುತ್ತಾ ಬಂದವು.
ಆದದರಿಂದ ಕ್ರಿಸ್ತ ಯೇಸುವಿನಲ್ಲಿ ರುವವರಿಗೆ ಅಪರಾಧ ನಿರ್ಣಯವು ಈಗ ಇಲ್ಲವೇ ಇಲ್ಲ; ಇವರು ಶರೀರಕ್ಕನುಸಾರವಾಗಿ ಅಲ್ಲ, ಆತ್ಮನಿಗನುಸಾರವಾಗಿಯೇ ನಡೆಯುವವರಾಗಿದ್ದಾರೆ.
ದೇವರು ಒಬ್ಬೊಬ್ಬನಿಗೆ ಹೇಗೆ ಹಂಚಿಕೊಟ್ಟನೋ ಮತ್ತು ಕರ್ತನು ಒಬ್ಬೊಬ್ಬನನ್ನು ಹೇಗೆ ಕರೆದನೋ ಅದಕ್ಕೆ ತಕ್ಕಂತೆ ನಡೆಯಲಿ; ಹೀಗೆ ನಾನು ಎಲ್ಲಾ ಸಭೆಗಳಲ್ಲಿಯೂ ನೇಮಕಮಾಡುತ್ತೇನೆ.
ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.
ಆದಕಾರಣ ನೀವು ನಡಕೊಳ್ಳುವ ರೀತಿಯನ್ನು ಜಾಗ್ರತೆಯಿಂದ ನೋಡಿಕೊಳ್ಳಿರಿ. ಜ್ಞಾನವಿಲ್ಲದವರಾಗಿ ರದೆ ಜ್ಞಾನವಂತರಾಗಿರ್ರಿ.
ಕರ್ತನಿಗೆ ಯೋಗ್ಯರಾಗಿ ನಡೆದು ಎಲ್ಲಾ ವಿಧದಲ್ಲಿ ಆತನನ್ನು ಸಂತೋಷಪಡಿ ಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯ ವೆಂಬ ಫಲವನ್ನು ಕೊಡುತ್ತಾ ದೇವರ ಜ್ಞಾನದಲ್ಲಿ ಅಭಿವೃದ್ಧಿಯಾಗುತ್ತಿರಬೇಕೆಂತಲೂ
ಸಮಯ ವನ್ನು ಸುಮ್ಮನೆ ಕಳಕೊಳ್ಳದೆ ಅದನ್ನು ಬೆಲೆಯುಳ್ಳದ್ದೆಂದು ಉಪಯೋಗಿಸಿ ಹೊರಗಿನವರ ಮುಂದೆ ಜ್ಞಾನವುಳ್ಳ ವರಾಗಿ ನಡೆದುಕೊಳ್ಳಿರಿ.
ತನ್ನ ರಾಜ್ಯಕ್ಕೂ ಪ್ರಭಾವಕ್ಕೂ ಕರೆದ ದೇವರಿಗೆ ನೀವು ಯೋಗ್ಯರಾಗಿ ನಡೆಯಬೇಕೆಂದು ಖಂಡಿತವಾಗಿ ಹೇಳುತ್ತಾ ಇದ್ದೆವೆಂಬದು ನಿಮಗೆ ತಿಳಿದದೆ.
ಸಹೋದರರೇ, ನೀವು ಹೇಗೆ ನಡೆದು ಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿರುವ ಪ್ರಕಾರವೇ ನೀವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗಬೇಕೆಂದು ನಾವು ಕರ್ತನಾದ ಯೇಸು ವಿನ ಮೂಲಕ ನಿಮ್ಮನ್ನು ಬೇಡಿಕೊಂಡು ಎಚ್ಚರಿಸುತ್ತೇವೆ.
ಹನೋಕನು ಮರಣವನ್ನು ಅನುಭವಿಸದೆ ಒಯ್ಯ ಲ್ಪಟ್ಟದ್ದು ನಂಬಿಕೆಯಿಂದಲೇ; ಅವನನ್ನು ದೇವರು ತೆಗೆದುಕೊಂಡು ಹೋದದರಿಂದ ಅವನು ಯಾರಿಗೂ ಸಿಕ್ಕಲಿಲ್ಲ; ಅವನು ಒಯ್ಯಲ್ಪಡುವದಕ್ಕಿಂತ ಮೊದಲು ದೇವರನ್ನು ಮೆಚ್ಚಿಸುವವನಾಗಿದ್ದನೆಂದು ಸಾಕ್ಷಿ ಉಂಟು.
ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.