Home Bibles ಆದಿಕಾಂಡ 5:29 · ಕನ್ನಡ ಬೈಬಲ್
ಆದಿಕಾಂಡ 5:29 · ಕನ್ನಡ ಬೈಬಲ್

ಅವನಿಗೆ ನೋಹ ಎಂದು ಕರೆದು--ಕರ್ತನು ಭೂಮಿಯನ್ನು ಶಪಿಸಿದ್ದರಿಂದ ನಮಗೆ ಉಂಟಾದ ಕೈಕಷ್ಟದಲ್ಲಿಯೂ ಪ್ರಯಾಸದಲ್ಲಿಯೂ ಇವನೇ ನಮ್ಮನ್ನು ಆದರಿಸುವನು ಎಂದು ಹೇಳಿದನು.

Cross references

ಆದಿಕಾಂಡ 3:17

ಆದಾಮನಿಗೆ ಆತನು--ನೀನು ನಿನ್ನ ಹೆಂಡತಿಯ ಮಾತನ್ನು ಕೇಳಿ ತಿನ್ನಬಾರದೆಂದು ನಾನು ನಿನ ಆಜ್ಞಾಪಿಸಿದ ಮರದ ಫಲವನ್ನು ತಿಂದಕಾರಣ ನಿನ್ನ ನಿಮಿತ್ತ ಭೂಮಿಯು ಶಪಿಸಲ್ಪಟ್ಟಿದೆ; ನಿನ್ನ ಜೀವನದ ದಿನಗಳಲ್ಲೆಲ್ಲಾ ದುಃಖದಲ್ಲೇ ನೀನು ಅದರ ಫಲವನ್ನು ತಿನ್ನುವಿ.

ಆದಿಕಾಂಡ 4:11

ಆದದರಿಂದ ಈಗ ನಿನ್ನ ಕೈಯಿಂದ ನಿನ್ನ ಸಹೋದರನ ರಕ್ತವನ್ನು ಕುಡಿಯುವದಕ್ಕೆ ತನ್ನ ಬಾಯನ್ನು ತೆರೆದ ಭೂಮಿಯ ದೆಸೆಯಿಂದ ನೀನು ಶಪಿಸಲ್ಪಟ್ಟವನಾದಿ.

ಆದಿಕಾಂಡ 6:8

ಆದರೆ ನೋಹನಿಗೆ ಕರ್ತನ ದೃಷ್ಟಿಯಲ್ಲಿ ಕೃಪೆ ದೊರಕಿತು.

ಆದಿಕಾಂಡ 7:23

ಮನುಷ್ಯರೂ ಪಶು ಗಳೂ ಕ್ರಿಮಿಗಳೂ ಆಕಾಶದ ಪಕ್ಷಿಗಳೂ ಭೂಮಿಯ ಮೇಲಿರುವ ಎಲ್ಲಾ ಜೀವರಾಶಿಗಳೂ ನಾಶವಾದವು. ಅವು ಭೂಮಿಯ ಮೇಲಿಂದ ಅಳಿಸಲ್ಪಟ್ಟವು. ನೋಹನೂ ಅವನ ಸಂಗಡ ನಾವೆಯಲ್ಲಿದ್ದವರೂ ಮಾತ್ರ ಜೀವದಿಂದ ಉಳಿಸಲ್ಪಟ್ಟರು.ಜಲವು ಭೂಮಿಯ ಮೇಲೆ ನೂರೈವತ್ತು ದಿನ ಪ್ರಬಲ ವಾಯಿತು.

ಆದಿಕಾಂಡ 9:24

ನೋಹನು ದ್ರಾಕ್ಷಾರಸದ ಅಮಲಿನಿಂದ ಎಚ್ಚತ್ತು ತನ್ನ ಚಿಕ್ಕಮಗನು ತನಗೆ ಮಾಡಿದ್ದನ್ನು ತಿಳಿದು ಅವನು--

ಯೆಶಾಯ 54:9

ಇದು ನನಗೆ ನೋಹನ ಕಾಲದ ಪ್ರಳಯ ದಂತಿದೆ; ನೋಹನ ಕಾಲದ ಪ್ರಳಯವು ಇನ್ನು ಭೂಮಿಯ ಮೇಲೆ ಹರಿಯಗೊಡಿಸುವದಿಲ್ಲವೆಂದು ನಾನು ಪ್ರಮಾಣಮಾಡಿದ ಹಾಗೆಯೇ ಇನ್ನು ನಿನ್ನ ಮೇಲೆ ಕೋಪಗೊಳ್ಳುವದಿಲ್ಲ ಇಲ್ಲವೇ ನಿನ್ನನ್ನು ಗದರಿಸುವದಿಲ್ಲ ಎಂದು ಪ್ರಮಾಣಮಾಡಿದ್ದೇನೆ.

ಯೆಹೆಜ್ಕೇಲ 14:14

ನೋಹ ದಾನಿಯೇಲ ಯೋಬ ಎಂಬ ಈ ಮೂವರು ಅದರಲ್ಲಿದ್ದರೂ ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರು ಎಂದು ದೇವರಾದ ಕರ್ತನು ಹೇಳುತ್ತಾನೆ.

ಯೆಹೆಜ್ಕೇಲ 14:20

ನೋಹ ದಾನಿ ಯೇಲ ಯೋಬ ಎಂಬವರು ಅದರಲ್ಲಿದ್ದಾಗ್ಯೂ ಅವರು ಮಗನನ್ನಾದರೂ ಮಗಳನ್ನಾದರೂ ತಪ್ಪಿಸದೆ ನನ್ನ ಜೀವ ದಾಣೆ, ತಮ್ಮ ಪ್ರಾಣಗಳನ್ನು ಮಾತ್ರ ನೀತಿಯಿಂದ ತಪ್ಪಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ.

ಮತ್ತಾಯ 24:37

ಆದರೆ ನೋಹನ ದಿವಸಗಳು ಇದ್ದಂತೆಯೇ ಮನುಷ್ಯ ಕುಮಾರನ ಬರೋಣವೂ ಇರುವದು.

ಲೂಕ 3:36

ಇವನು ಕಯಿನಾನನ ಮಗನು; ಇವನು ಅರ್ಫಕ್ಷಾದನ ಮಗನು; ಇವನು ಶೇಮನ ಮಗನು; ಇವನು ನೋಹನ ಮಗನು; ಇವನು ಲಾಮೆಕನ ಮಗನು;

ಲೂಕ 17:26

ನೋಹನ ದಿವಸಗಳಲ್ಲಿ ಹೇಗೆ ಇತ್ತೋ ಅದೇ ರೀತಿಯಲ್ಲಿ ಮನುಷ್ಯಕುಮಾರನ ದಿವಸಗಳಲ್ಲಿಯೂ ಇರುವದು.

ಹೆಬ್ರಿಯರಿಗೆ 11:7

ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.

1 ಪೇತ್ರ 3:20

ಆದರೆ ನೋಹನ ದಿನಗಳಲ್ಲಿ ನಾವೆಯನ್ನು ಕಟ್ಟುತ್ತಿರಲು ದೇವರ ದೀರ್ಘಶಾಂತಿಯು ಒಂದು ಸಾರಿ ಕಾದಿದ್ದಾಗ ಆತನಿಗೆ ಅವಿಧೇಯರಾ ಗಿದ್ದವರ ಬಳಿಗೆ ಹೋಗಿ ಆತನು ಸಾರಿದನು. ಆ ನಾವೆಯೊಳಗೆ ಕೆಲವರು ಅಂದರೆ ಎಂಟೇ ಜನರು ನೀರಿನ ಮೂಲಕ ರಕ್ಷಣೆ ಹೊಂದಿದರು.

2 ಪೇತ್ರ 2:5

ಆತನು ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಮೇಲೆ ಜಲಪ್ರಳಯವನ್ನು ಬರಮಾಡಿ ದನು; ಆದರೆ ನೀತಿಯನ್ನು ಸಾರುತ್ತಿದ್ದ ಎಂಟನೆಯ ವನಾದ ನೋಹನನ್ನು ರಕ್ಷಿಸಿದನು.

Interlinear

Choose Theme