ತಮ್ಮ ತಂದೆ ಸತ್ತುಹೋದದ್ದನ್ನು ಯೋಸೇಫನ ಸಹೋದರರು ನೋಡಿ--ಒಂದು ವೇಳೆ ಯೋಸೇಫನು ನಮ್ಮನ್ನು ಹಗೆಮಾಡಿ ನಾವು ಅವನಿಗೆ ಮಾಡಿದ್ದ ಎಲ್ಲಾ ಕೇಡಿಗೆ ನಿಶ್ಚಯವಾಗಿ ಪ್ರತೀಕಾರ ಮಾಡಾನು ಎಂದು ಅಂದುಕೊಂಡು
Cross references
ತಂದೆಯು ಯಾಕೋಬನಿಗೆ ಕೊಟ್ಟ ಆಶೀರ್ವಾದ ಕ್ಕೋಸ್ಕರ ಏಸಾವನು ಅವನನ್ನು ಹಗೆಮಾಡಿ--ನನ್ನ ತಂದೆಗೋಸ್ಕರ ದುಃಖಪಡುವ ದಿನಗಳು ಸವಿಾಪ ವಾಗಿವೆ, ತರುವಾಯ ನಾನು ನನ್ನ ಸಹೋದರ ನಾದ ಯಾಕೋಬನನ್ನು ಕೊಲ್ಲುವೆನು ಎಂದು ಹೃದಯದಲ್ಲಿ ಅಂದುಕೊಂಡನು.
ಅವರು ದೂರದಿಂದ ಅವನನ್ನು ನೋಡಿದಾಗ ಅವನು ಅವರ ಸವಿಾಪಕ್ಕೆ ಬರುವದಕ್ಕೆ ಮುಂಚೆಯೇ ಅವರು ಅವನನ್ನು ಕೊಂದುಹಾಕಬೇಕೆಂದು ಅವ ನಿಗೆ ವಿರೋಧವಾಗಿ ಒಳಸಂಚುಮಾಡಿಕೊಂಡರು.
ಈ ಪ್ರಕಾರ (ಮಿದ್ಯಾನ್ಯರ ವರ್ತಕರು ಹಾದುಹೋಗುತ್ತಿದ್ದಾಗ) ಅವರು ಯೋಸೇಫನನ್ನು ತಗ್ಗಿನಿಂದ ಮೇಲೆತ್ತಿ ಇಷ್ಮಾಯೇಲ್ಯ ರಿಗೆ ಅವನನ್ನು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು, ಅವರು ಯೋಸೇಫನನ್ನು ಐಗುಪ್ತಕ್ಕೆ ಕರಕೊಂಡು ಹೋದರು.
ಯೋಸೇಫನು ಎಲ್ಲರನ್ನು ಒಟ್ಟಿಗೆ ಮೂರು ದಿನಗಳು ಸೆರೆಯಲ್ಲಿಟ್ಟನು.
ಆಗ ಅವರು--ನಿಶ್ಚಯವಾಗಿ ನಮ್ಮ ಸಹೋದರನ ಅಪರಾಧವು ನಮ್ಮ ಮೇಲೆ ಇದೆ. ಅವನು ನಮ್ಮನ್ನು ಬೇಡಿಕೊಂಡಾಗ ಅವನ ಪ್ರಾಣ ಸಂಕಟವನ್ನು ನೋಡಿಯೂ ಕೇಳದೆ ಹೋದೆವು. ಆದಕಾರಣ ಈ ಸಂಕಟವು ನಮ್ಮ ಮೇಲೆ ಬಂದಿತು ಎಂದು ಅಂದುಕೊಂಡರು.
ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದ ಲ್ಲಿರುವರೋ ಅವರ ಹೃದಯಗಳಲ್ಲಿ ಅಧೈರ್ಯವನ್ನು ಹುಟ್ಟಿಸುವೆನು; ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವದು, ಕತ್ತಿಗೆ ಓಡಿಹೋದ ಹಾಗೆ ಓಡಿಹೋಗು ವರು; ಓಡಿಸುವವನಿಲ್ಲದೆ ಬೀಳುವರು.
ಭಯಂಕರವಾದ ಶಬ್ದ ಅವನ ಕಿವಿಗಳಲ್ಲಿ ಅದೆ; ವೃದ್ಧಿಯಲ್ಲಿರುವಾಗ ಹಾಳುಮಾಡುವವನು ಅವನ ಮೇಲೆ ಬರುತ್ತಾನೆ.
ಅಲ್ಲಿ ಅವರು ಭಯಭ್ರಾಂತ ರಾದರು; ಯಾಕಂದರೆ ದೇವರು ನೀತಿವಂತರ ಸಂತತಿ ಯಲ್ಲಿ ಇದ್ದಾನೆ.
ಭಯವಿಲ್ಲದಿರುವಲ್ಲಿ ಅವರು ಭಯ ಭ್ರಾಂತರಾದರು; ನಿನಗೆ ವಿರೋಧವಾಗಿ ದಂಡು ಇಳಿ ಸುವವನ ಎಲುಬುಗಳನ್ನು ದೇವರು ಚದರಿಸಿ ಬಿಟ್ಟಿ ದ್ದಾನೆ. ನೀನು ಅವರನ್ನು ನಾಚಿಕೆಪಡಿಸಿದ್ದೀ; ದೇವರು ಅವರನ್ನು ತಿರಸ್ಕರಿಸಿದ್ದಾನೆ.ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬಂದರೆ ಎಷ್ಟೋ ಒಳ್ಳೇದು. ದೇವರು ತನ್ನ ಜನರನ್ನು ಸೆರೆಯಿಂದ ತಿರುಗಿ ಬರಮಾಡುವಾಗ ಯಾಕೋಬನು ಉಲ್ಲಾಸಿಸುವನು, ಇಸ್ರಾಯೇಲನು ಸಂತೋಷಿ ಸುವನು.
ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟರು ಓಡಿಹೋಗುತ್ತಾರೆ; ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ.
ಅವರ ಮನಸ್ಸಾಕ್ಷಿಯು ಸಹ ಸಾಕ್ಷಿಕೊಟ್ಟು ಅವರ ಯೋಚನೆಗಳು ಒಂದಕ್ಕೊಂದು ತಪ್ಪುಹೊರಿಸುತ್ತಾ ಇಲ್ಲವೆ ಪ್ರತಿವಾದ ಮಾಡುತ್ತಾ ಇರುವದರಿಂದ ಅವರು ತಮ್ಮ ಹೃದಯ ಗಳಲ್ಲಿ ಬರೆದಿರುವ ನ್ಯಾಯಪ್ರಮಾಣದ ಕ್ರಿಯೆಗಳನ್ನು ತೋರಿಸುತ್ತಾರೆ).