Home Bibles ಆದಿಕಾಂಡ 6:13 · ಕನ್ನಡ ಬೈಬಲ್
ಆದಿಕಾಂಡ 6:13 · ಕನ್ನಡ ಬೈಬಲ್

ಆಗ ದೇವರು ನೋಹನಿಗೆ--ಮನುಷ್ಯರೆಲ್ಲರ ಅಂತ್ಯವು ನನ್ನ ಮುಂದೆ ಬಂತು; ಅವರಿಂದ ಭೂಮಿಯು ಬಲಾತ್ಕಾರದಿಂದ ತುಂಬಿದೆ; ಇಗೋ, ನಾನು ಭೂಮಿಯೊಂದಿಗೆ ಅವರನ್ನು ನಾಶಮಾಡು ವೆನು.

Cross references

ಆದಿಕಾಂಡ 6:4

ಆ ದಿನಗಳಲ್ಲಿ ಭೂಮಿಯ ಮೇಲೆ ಮಹಾ ಶರೀರಗಳಾದವರು ಇದ್ದರು, ಆಮೇಲೆಯೂ ಇದ್ದರು; ದೇವಕುಮಾರರು ಮನುಷ್ಯ ಕುಮಾರ್ತೆಯರನ್ನು ಕೂಡಿದಾಗ ಅವರಿಗೆ ಮಕ್ಕಳನ್ನು ಹೆತ್ತರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾದ ಪರಾಕ್ರಮಶಾಲಿ ಗಳಾಗಿದ್ದವರು.

ಆದಿಕಾಂಡ 6:11

ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟು ಹೋಗಿದ್ದರು; ಭೂಮಿಯು ಬಲಾತ್ಕಾರದಿಂದ ತುಂಬಿತ್ತು.

ಆದಿಕಾಂಡ 7:23

ಮನುಷ್ಯರೂ ಪಶು ಗಳೂ ಕ್ರಿಮಿಗಳೂ ಆಕಾಶದ ಪಕ್ಷಿಗಳೂ ಭೂಮಿಯ ಮೇಲಿರುವ ಎಲ್ಲಾ ಜೀವರಾಶಿಗಳೂ ನಾಶವಾದವು. ಅವು ಭೂಮಿಯ ಮೇಲಿಂದ ಅಳಿಸಲ್ಪಟ್ಟವು. ನೋಹನೂ ಅವನ ಸಂಗಡ ನಾವೆಯಲ್ಲಿದ್ದವರೂ ಮಾತ್ರ ಜೀವದಿಂದ ಉಳಿಸಲ್ಪಟ್ಟರು.ಜಲವು ಭೂಮಿಯ ಮೇಲೆ ನೂರೈವತ್ತು ದಿನ ಪ್ರಬಲ ವಾಯಿತು.

ಆದಿಕಾಂಡ 49:5

ಸಿಮೆಯೋ ನನೂ ಲೇವಿಯೂ ಸಹೋದರರು; ಕ್ರೂರತ್ವದ ಆಯುಧಗಳು ಅವರ ನಿವಾಸಗಳಲ್ಲಿ ಇವೆ.

ಯೆರೆಮಿಯ 4:23

ನಾನು ಭೂಮಿಯನ್ನು ನೋಡಿದೆನು, ಇಗೋ, ಅದು ನಿರಾಕಾರವಾಗಿಯೂ ಹಾಳಾಗಿಯೂ ಶೂನ್ಯವಾಗಿಯೂ ಇತ್ತು; ಆಕಾಶಗಳನ್ನು ಸಹ ನೋಡಿದೆನು, ಅವುಗಳಿಗೆ ಬೆಳಕಿರಲಿಲ್ಲ.

ಯೆರೆಮಿಯ 51:13

ಕರ್ತನ ಆಲಯವನ್ನೂ ಅರಸನ ಮನೆಯನ್ನೂ ಯೆರೂಸಲೇಮಿನ ಎಲ್ಲಾ ಮನೆಗಳನ್ನೂ ದೊಡ್ಡವರ ಎಲ್ಲಾ ಮನೆಗಳನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು;

ಯೆಹೆಜ್ಕೇಲ 7:2

ಮನುಷ್ಯಪುತ್ರನೇ, ದೇವರಾದ ಕರ್ತನು ಇಸ್ರಾ ಯೇಲ್‌ ದೇಶಕ್ಕೆ ಹೀಗೆ ಹೇಳುತ್ತಾನೆ--ಅಂತ್ಯವು ಬಂದಿದೆ; ಈ ದೇಶದ ನಾಲ್ಕು ಮೂಲೆಗಳಲ್ಲೂ ಅಂತ್ಯವು ಬಂದಿದೆ.

ಹೊಶೇಯ 4:1

ಇಸ್ರಾಯೇಲಿನ ಮಕ್ಕಳಾದ ನೀವು ಕರ್ತನ ವಾಕ್ಯವನ್ನು ಕೇಳಿರಿ; ದೇಶದ ನಿವಾಸಿಗಳ ಸಂಗಡ ಕರ್ತನಿಗೆ ತರ್ಕವುಂಟು; ದೇಶದಲ್ಲಿ ಸತ್ಯವೂ ಇಲ್ಲ, ಕನಿಕರವೂ ಇಲ್ಲ, ಇಲ್ಲವೆ ದೇವರ ತಿಳುವಳಿ ಕೆಯೂ ಇಲ್ಲ.

ಆಮೋಸ 8:2

ಆಗ ಅವನು--ಆಮೋಸನೇ, ಏನು ನೋಡುತ್ತಿರುವೆ ಎಂದಾಗ ನಾನು--ಮಾಗಿದ ಹಣ್ಣುಗಳ ಪುಟ್ಟಿ ಅಂದೆನು. ಆಗ ಕರ್ತನು ನನಗೆ--ನನ್ನ ಜನರಾದ ಇಸ್ರಾಯೇಲ್ಯರಿಗೆ ಅಂತ್ಯವು ಬಂತು; ನಾನು ಇನ್ನು ಮೇಲೆ ಅವರನು ದಾಟಿಹೋಗುವದಿಲ್ಲ ಎಂದು ಹೇಳಿದೆನು.

ಹೆಬ್ರಿಯರಿಗೆ 11:7

ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.

1 ಪೇತ್ರ 4:7

ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ; ಆದದರಿಂದ ನೀವು ಸ್ವಸ್ಥಚಿತ್ತರಾಗಿಯೂ ಪ್ರಾರ್ಥನೆಗೆ ಎಚ್ಚರ ವಾಗಿಯೂ ಇರ್ರಿ.

2 ಪೇತ್ರ 3:6

ಆ ನೀರುಗಳಿಂದಲೇ ಆ ಕಾಲದಲ್ಲಿದ್ದ ಲೋಕವು ಜಲಪ್ರಳಯದಲ್ಲಿ ನಾಶ ವಾಯಿತು.

2 ಪೇತ್ರ 3:10

ಆದರೂ ಕರ್ತನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗು ವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು; ಭೂಮಿಯೂ ಅದರಲ್ಲಿ ರುವ ಕೆಲಸಗಳೂ ಸುಟ್ಟುಹೋಗುವವು.

Interlinear

Choose Theme