ಆಗ ದೇವರು ನೋಹನಿಗೆ--ಮನುಷ್ಯರೆಲ್ಲರ ಅಂತ್ಯವು ನನ್ನ ಮುಂದೆ ಬಂತು; ಅವರಿಂದ ಭೂಮಿಯು ಬಲಾತ್ಕಾರದಿಂದ ತುಂಬಿದೆ; ಇಗೋ, ನಾನು ಭೂಮಿಯೊಂದಿಗೆ ಅವರನ್ನು ನಾಶಮಾಡು ವೆನು.
Cross references
ಆ ದಿನಗಳಲ್ಲಿ ಭೂಮಿಯ ಮೇಲೆ ಮಹಾ ಶರೀರಗಳಾದವರು ಇದ್ದರು, ಆಮೇಲೆಯೂ ಇದ್ದರು; ದೇವಕುಮಾರರು ಮನುಷ್ಯ ಕುಮಾರ್ತೆಯರನ್ನು ಕೂಡಿದಾಗ ಅವರಿಗೆ ಮಕ್ಕಳನ್ನು ಹೆತ್ತರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾದ ಪರಾಕ್ರಮಶಾಲಿ ಗಳಾಗಿದ್ದವರು.
ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟು ಹೋಗಿದ್ದರು; ಭೂಮಿಯು ಬಲಾತ್ಕಾರದಿಂದ ತುಂಬಿತ್ತು.
ಮನುಷ್ಯರೂ ಪಶು ಗಳೂ ಕ್ರಿಮಿಗಳೂ ಆಕಾಶದ ಪಕ್ಷಿಗಳೂ ಭೂಮಿಯ ಮೇಲಿರುವ ಎಲ್ಲಾ ಜೀವರಾಶಿಗಳೂ ನಾಶವಾದವು. ಅವು ಭೂಮಿಯ ಮೇಲಿಂದ ಅಳಿಸಲ್ಪಟ್ಟವು. ನೋಹನೂ ಅವನ ಸಂಗಡ ನಾವೆಯಲ್ಲಿದ್ದವರೂ ಮಾತ್ರ ಜೀವದಿಂದ ಉಳಿಸಲ್ಪಟ್ಟರು.ಜಲವು ಭೂಮಿಯ ಮೇಲೆ ನೂರೈವತ್ತು ದಿನ ಪ್ರಬಲ ವಾಯಿತು.
ಸಿಮೆಯೋ ನನೂ ಲೇವಿಯೂ ಸಹೋದರರು; ಕ್ರೂರತ್ವದ ಆಯುಧಗಳು ಅವರ ನಿವಾಸಗಳಲ್ಲಿ ಇವೆ.
ನಾನು ಭೂಮಿಯನ್ನು ನೋಡಿದೆನು, ಇಗೋ, ಅದು ನಿರಾಕಾರವಾಗಿಯೂ ಹಾಳಾಗಿಯೂ ಶೂನ್ಯವಾಗಿಯೂ ಇತ್ತು; ಆಕಾಶಗಳನ್ನು ಸಹ ನೋಡಿದೆನು, ಅವುಗಳಿಗೆ ಬೆಳಕಿರಲಿಲ್ಲ.
ಕರ್ತನ ಆಲಯವನ್ನೂ ಅರಸನ ಮನೆಯನ್ನೂ ಯೆರೂಸಲೇಮಿನ ಎಲ್ಲಾ ಮನೆಗಳನ್ನೂ ದೊಡ್ಡವರ ಎಲ್ಲಾ ಮನೆಗಳನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು;
ಮನುಷ್ಯಪುತ್ರನೇ, ದೇವರಾದ ಕರ್ತನು ಇಸ್ರಾ ಯೇಲ್ ದೇಶಕ್ಕೆ ಹೀಗೆ ಹೇಳುತ್ತಾನೆ--ಅಂತ್ಯವು ಬಂದಿದೆ; ಈ ದೇಶದ ನಾಲ್ಕು ಮೂಲೆಗಳಲ್ಲೂ ಅಂತ್ಯವು ಬಂದಿದೆ.
ಇಸ್ರಾಯೇಲಿನ ಮಕ್ಕಳಾದ ನೀವು ಕರ್ತನ ವಾಕ್ಯವನ್ನು ಕೇಳಿರಿ; ದೇಶದ ನಿವಾಸಿಗಳ ಸಂಗಡ ಕರ್ತನಿಗೆ ತರ್ಕವುಂಟು; ದೇಶದಲ್ಲಿ ಸತ್ಯವೂ ಇಲ್ಲ, ಕನಿಕರವೂ ಇಲ್ಲ, ಇಲ್ಲವೆ ದೇವರ ತಿಳುವಳಿ ಕೆಯೂ ಇಲ್ಲ.
ಆಗ ಅವನು--ಆಮೋಸನೇ, ಏನು ನೋಡುತ್ತಿರುವೆ ಎಂದಾಗ ನಾನು--ಮಾಗಿದ ಹಣ್ಣುಗಳ ಪುಟ್ಟಿ ಅಂದೆನು. ಆಗ ಕರ್ತನು ನನಗೆ--ನನ್ನ ಜನರಾದ ಇಸ್ರಾಯೇಲ್ಯರಿಗೆ ಅಂತ್ಯವು ಬಂತು; ನಾನು ಇನ್ನು ಮೇಲೆ ಅವರನು ದಾಟಿಹೋಗುವದಿಲ್ಲ ಎಂದು ಹೇಳಿದೆನು.
ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.
ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ; ಆದದರಿಂದ ನೀವು ಸ್ವಸ್ಥಚಿತ್ತರಾಗಿಯೂ ಪ್ರಾರ್ಥನೆಗೆ ಎಚ್ಚರ ವಾಗಿಯೂ ಇರ್ರಿ.
ಆ ನೀರುಗಳಿಂದಲೇ ಆ ಕಾಲದಲ್ಲಿದ್ದ ಲೋಕವು ಜಲಪ್ರಳಯದಲ್ಲಿ ನಾಶ ವಾಯಿತು.
ಆದರೂ ಕರ್ತನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗು ವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು; ಭೂಮಿಯೂ ಅದರಲ್ಲಿ ರುವ ಕೆಲಸಗಳೂ ಸುಟ್ಟುಹೋಗುವವು.