Home Bibles ಆದಿಕಾಂಡ 6:17 · ಕನ್ನಡ ಬೈಬಲ್
ಆದಿಕಾಂಡ 6:17 · ಕನ್ನಡ ಬೈಬಲ್

ಇಗೋ, ನಾನು ನಾನಾಗಿಯೇ ಆಕಾಶದ ಕೆಳಗೆ ಜೀವಶ್ವಾಸವಿರುವವುಗಳನ್ನೆಲ್ಲಾ ನಾಶ ಮಾಡುವದಕ್ಕೆ ಜಲಪ್ರಳಯವನ್ನು ಭೂಮಿಯ ಮೇಲೆ ಬರಮಾಡುತ್ತೇನೆ; ಆಗ ಭೂಮಿಯಲ್ಲಿರುವದೆಲ್ಲಾ ಸತ್ತುಹೋಗುವದು.

Cross references

ಆದಿಕಾಂಡ 2:7

ಕರ್ತನಾದ ದೇವರು ಭೂಮಿಯ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸ ವನ್ನು ಊದಿದನು; ಆಗ ಮನುಷ್ಯನು ಜೀವಾತ್ಮ ನಾದನು.

ಆದಿಕಾಂಡ 6:7

ಇದಲ್ಲದೆ ಕರ್ತನು--ನಾನು ಸೃಷ್ಟಿಸಿದ ಮನುಷ್ಯ ನನ್ನೂ ಮನುಷ್ಯನ ಸಂಗಡ ಸಕಲ ಮೃಗ, ಕ್ರಿಮಿ, ಆಕಾಶದ ಪಕ್ಷಿಗಳನ್ನೂ ಭೂಮುಖದಿಂದ ನಾಶಮಾಡು ವೆನು; ನಾನು ಅವರನ್ನು ಉಂಟುಮಾಡಿದ್ದಕ್ಕೆ ಅದು ಪಶ್ಚಾತ್ತಾಪಪಡುವಂತೆ ಆಯಿತು ಅಂದನು.

ಆದಿಕಾಂಡ 6:13

ಆಗ ದೇವರು ನೋಹನಿಗೆ--ಮನುಷ್ಯರೆಲ್ಲರ ಅಂತ್ಯವು ನನ್ನ ಮುಂದೆ ಬಂತು; ಅವರಿಂದ ಭೂಮಿಯು ಬಲಾತ್ಕಾರದಿಂದ ತುಂಬಿದೆ; ಇಗೋ, ನಾನು ಭೂಮಿಯೊಂದಿಗೆ ಅವರನ್ನು ನಾಶಮಾಡು ವೆನು.

ಆದಿಕಾಂಡ 7:4

ಇನ್ನು ಏಳು ದಿವಸಗಳಲ್ಲಿ ಭೂಮಿಯ ಮೇಲೆ ನಾಲ್ವತ್ತು ಹಗಲು ನಾಲ್ವತು ರಾತ್ರಿ ಮಳೆಯು ಬರುವಂತೆ ನಾನು ಮಾಡುವೆನು. ನಾನು ಉಂಟುಮಾಡಿದ ಜೀವರಾಶಿಯನ್ನೆಲ್ಲಾ ಭೂಮುಖದಿಂದ ನಾಶಮಾಡು ತ್ತೇನೆ ಅಂದನು.

ಆದಿಕಾಂಡ 7:15

ಹೀಗೆ ಜೀವಶ್ವಾಸವಿರುವ ಎಲ್ಲಾ ಶರೀರಗಳಲ್ಲಿಯೂ ಎರಡೆರಡು ನೋಹನ ಬಳಿಗೆ ನಾವೆಯೊಳಗೆ ಹೋದವು.

ಆದಿಕಾಂಡ 7:17

ನಾಲ್ವತ್ತು ದಿನ ಭೂಮಿಯ ಮೇಲೆ ಪ್ರಳಯವು ಇತ್ತು; ಆಗ ನೀರುಗಳು ಹೆಚ್ಚಿ ನಾವೆಯನ್ನು ಎತ್ತಲು ಅದು ಭೂಮಿಯಿಂದ ಎತ್ತಲ್ಪಟ್ಟಿತು.

ಆದಿಕಾಂಡ 7:21

ಆಗ ಪಶು ಪಕ್ಷಿ ಮೃಗ ಭೂಮಿಯಲ್ಲಿ ಹರಿದಾಡುವ ಕ್ರಿಮಿ ಎಲ್ಲಾ ಮನುಷ್ಯರು ಸಹಿತವಾಗಿ ಅಂತೂ ಭೂಮಿಯ ಮೇಲೆ ಚಲಿಸುವ ಎಲ್ಲಾ ಶರೀರಗಳು ಸತ್ತುಹೋದವು.

ಆದಿಕಾಂಡ 7:23

ಮನುಷ್ಯರೂ ಪಶು ಗಳೂ ಕ್ರಿಮಿಗಳೂ ಆಕಾಶದ ಪಕ್ಷಿಗಳೂ ಭೂಮಿಯ ಮೇಲಿರುವ ಎಲ್ಲಾ ಜೀವರಾಶಿಗಳೂ ನಾಶವಾದವು. ಅವು ಭೂಮಿಯ ಮೇಲಿಂದ ಅಳಿಸಲ್ಪಟ್ಟವು. ನೋಹನೂ ಅವನ ಸಂಗಡ ನಾವೆಯಲ್ಲಿದ್ದವರೂ ಮಾತ್ರ ಜೀವದಿಂದ ಉಳಿಸಲ್ಪಟ್ಟರು.ಜಲವು ಭೂಮಿಯ ಮೇಲೆ ನೂರೈವತ್ತು ದಿನ ಪ್ರಬಲ ವಾಯಿತು.

ಆದಿಕಾಂಡ 9:9

ಇಗೋ, ನಾನು ನನ್ನ ಒಡಂಬಡಿಕೆಯನ್ನು ನಿಮ್ಮ ಸಂಗಡಲೂ ನಿಮ್ಮ ತರುವಾಯ ನಿಮ್ಮ ಸಂತತಿ ಯವರ ಸಂಗಡಲೂ

ನಿರ್ಗಮಕಾಂಡ 14:17

ಇಗೋ, ನಾನು ಐಗುಪ್ತ್ಯರ ಹೃದಯವನ್ನು ಕಠಿಣಮಾಡುತ್ತೇನೆ; ಅವರು ಇವರನ್ನು ಹಿಂದಟ್ಟುವರು. ಇದಲ್ಲದೆ ಫರೋಹನ ಮೇಲೆಯೂ ಅವನ ಎಲ್ಲಾ ಸೈನ್ಯದ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿಕೊಳ್ಳುವೆನು.

ಲೇವ್ಯಕಾಂಡ 26:28

ನಾನು ಕೋಪದಿಂದ ನಿಮಗೆ ವಿರೋಧವಾಗಿ ನಡೆದು ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಶಿಕ್ಷಿಸುವೆನು.

ದ್ವಿತೀಯೋಪದೇಶಕಾಂಡ 32:39

ನಾನು ಆತನೇ ಎಂದೂ ನನ್ನ ಹಾಗೆ ಬೇರೆ ದೇವರಿಲ್ಲವೆಂದೂ ಈಗ ನೋಡಿರಿ; ನಾನೇ ಸಾಯಿಸು ತ್ತೇನೆ, ಬದುಕಿಸುತ್ತೇನೆ; ಗಾಯ ಮಾಡುತ್ತೇನೆ, ನಾನೇ ಸ್ವಸ್ಥ ಮಾಡುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.

ಯೋಬ 22:16

ಅವರು ಆ ಕಾಲ ದಲ್ಲಿ ಕಡಿಯಲ್ಪಟ್ಟರು; ಅವರ ಅಸ್ತಿವಾರವು ಪ್ರವಾಹ ದಲ್ಲಿ ಕೊರೆದು ಹೋಯಿತು.

ಕೀರ್ತನೆಗಳು 29:10

ಕರ್ತನು ಪ್ರಳಯದ ಮೇಲೆ ಕೂತುಕೊಳ್ಳುತ್ತಾನೆ; ಹೌದು, ಯುಗಯುಗಕ್ಕೂ ಕರ್ತನು ಅರಸನಾಗಿ ಕೂತು ಕೊಂಡಿದ್ದಾನೆ.ಕರ್ತನು ತನ್ನ ಜನರಿಗೆ ಬಲವನ್ನು ಕೊಡುವನು; ಕರ್ತನು ತನ್ನ ಜನರನ್ನು ಸಮಾಧಾನ ದಿಂದ ಆಶೀರ್ವದಿಸುವನು.

ಕೀರ್ತನೆಗಳು 93:3

ಕರ್ತನೇ, ಪ್ರವಾಹಗಳು ಎತ್ತಲ್ಪಟ್ಟಿವೆ; ಪ್ರವಾಹಗಳು ತಮ್ಮ ಶಬ್ದವನ್ನು ಎತ್ತಿವೆ; ಪ್ರವಾಹ ಗಳು ತಮ್ಮ ತೆರೆಗಳನ್ನು ಎತ್ತುತ್ತವೆ.

ಕೀರ್ತನೆಗಳು 107:34

ಫಲ ವುಳ್ಳ ಭೂಮಿಯನ್ನು ಬಂಜರಾಗಿಯೂ ಅದರ ನಿವಾಸಿ ಗಳ ಕೆಟ್ಟತನಕ್ಕೋಸ್ಕರ ಮಾರ್ಪಡಿಸುತ್ತಾನೆ.

ಯೆಶಾಯ 51:12

ನಾನೇ, ನಾನೇ ನಿನ್ನನ್ನು ಆದರಿಸುವವನಾಗಿ ದ್ದೇನೆ; ಹಾಗಾದರೆ ಸಾಯುವ ಮನುಷ್ಯನಿಗೂ ಹುಲ್ಲಿನಂತೆ ಮಾಡಲ್ಪಟ್ಟಿರುವ ನರಪುತ್ರನಿಗೂ ಭಯ ಪಡುವ ನೀನು ಯಾರು?

ಯೆಶಾಯ 54:9

ಇದು ನನಗೆ ನೋಹನ ಕಾಲದ ಪ್ರಳಯ ದಂತಿದೆ; ನೋಹನ ಕಾಲದ ಪ್ರಳಯವು ಇನ್ನು ಭೂಮಿಯ ಮೇಲೆ ಹರಿಯಗೊಡಿಸುವದಿಲ್ಲವೆಂದು ನಾನು ಪ್ರಮಾಣಮಾಡಿದ ಹಾಗೆಯೇ ಇನ್ನು ನಿನ್ನ ಮೇಲೆ ಕೋಪಗೊಳ್ಳುವದಿಲ್ಲ ಇಲ್ಲವೇ ನಿನ್ನನ್ನು ಗದರಿಸುವದಿಲ್ಲ ಎಂದು ಪ್ರಮಾಣಮಾಡಿದ್ದೇನೆ.

ಯೆಹೆಜ್ಕೇಲ 5:8

ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು, ನಾನೇ, ನಿನಗೆ ವಿರೋಧವಾಗಿದ್ದೇನೆ; ಜನಾಂಗಗಳ ಕಣ್ಣುಗಳ ಮುಂದೆ ನಿನ್ನ ಮಧ್ಯದಲ್ಲಿ ನ್ಯಾಯತೀರ್ಪನ್ನು ಮಾಡುತ್ತೇನೆ.

ಯೆಹೆಜ್ಕೇಲ 6:3

ಇಸ್ರಾಯೇ ಲಿನ ಪರ್ವತಗಳೇ, ದೇವರಾದ ಕರ್ತನ ವಾಕ್ಯವನ್ನು ಕೇಳಿರಿ; ದೇವರಾದ ಕರ್ತನು ಪರ್ವತಗಳಿಗೂ ಗುಡ್ಡ ಗಳಿಗೂ ನದಿಗಳಿಗೂ ಕಣಿವೆಗಳಿಗೂ ಹೀಗೆ ಹೇಳು ತ್ತಾನೆ--ಇಗೋ, ನಾನು, ನಾನೇ ನಿಮ್ಮ ಮೇಲೆ ಕತ್ತಿ ಯನ್ನು ತಂದು ನಿಮ್ಮ ಎತ್ತರ ಸ್ಥಳಗಳನ್ನು (ಮೇಡುಗ ಳನ್ನು) ನಾಶಮಾಡುತ್ತೇನೆ.

ಯೆಹೆಜ್ಕೇಲ 34:11

ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ಹೌದು, ನಾನೇ ನನ್ನ ಕುರಿಗಳನ್ನು ವಿಚಾರಿಸಿ ಅವುಗಳನ್ನು ಹುಡುಕುತ್ತೇನೆ.

ಯೆಹೆಜ್ಕೇಲ 34:20

ಆದದರಿಂದ ದೇವರಾದ ಕರ್ತನು ನಿಮಗೆ ಹೀಗೆ ಹೇಳುತ್ತಾನೆ-- ಇಗೋ, ನಾನು, ನಾನೇ ಕೊಬ್ಬಿದ ದನಕ್ಕೂ ಮತ್ತು ಬಡಕಲಾದ ದನಕ್ಕೂ ನಡುವೆ ನ್ಯಾಯತೀರಿಸುತ್ತೇನೆ.

ಹೊಶೇಯ 5:14

ನಾನು ಎಫ್ರಾಯಾಮಿಗೆ ಸಿಂಹದ ಹಾಗೆಯೂ ಯೆಹೂದದ ಮನೆತನದವರಿಗೆ ಪ್ರಾಯದ ಸಿಂಹದ ಹಾಗೆಯೂ ಇರುವೆನು. ಹೌದು, ನಾನು, ನಾನೇ ಸೀಳಿಬಿಟ್ಟು ಹೋಗುವೆನು, ನಾನು ಎತ್ತಿಕೊಂಡು ಹೋಗಲು ಅವನನ್ನು ಯಾರೂ ಬಿಡಿಸಲಾರರು.ತಾವು ತಮ್ಮ ಅಪರಾಧವನ್ನು ಅರಿಕೆಮಾಡಿ ನನ್ನ ಮುಖವನ್ನು ಹುಡುಕುವ ವರೆಗೂ ನಾನು ತಿರುಗಿ ಕೊಂಡು ನನ್ನ ಸ್ಥಳಕ್ಕೆ ಹೋಗುವೆನು, ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.

ಆಮೋಸ 9:6

ಆಕಾಶದಲ್ಲಿ ಉಪ್ಪರಿಗೆ ಗಳನ್ನು ಕಟ್ಟಿಕೊಂಡು ಭೂಮಿಯ ಮೇಲೆ ತಮ ತಂಡಗಳನ್ನು ಸ್ಥಾಪಿಸಿ ಸಮುದ್ರದ ನೀರನ್ನು ಕರೆದು ಅದನ್ನು ಭೂಮಿಯ ಮೇಲೆ ಒಯ್ಯುವಂತೆ ಮಾಡು ವವನು ಆತನೇ. ಆತನ ಹೆಸರು ಕರ್ತನು.

ಮತ್ತಾಯ 24:39

ಪ್ರಳಯವು ಬಂದು ಅವರನ್ನು ಬಡುಕೊಂಡು ಹೊಗುವವರೆಗೂ ಅವರಿಗೆ ತಿಳಿದಿರಲಿಲ್ಲ; ಹಾಗೆಯೇ ಮನುಷ್ಯ ಕುಮಾರನ ಬರೋಣವೂ ಇರುವದು.

ಲೂಕ 17:27

ನೋಹನು ನಾವೆಯಲ್ಲಿ ಸೇರಿದ ದಿನದ ವರೆಗೂ ಅವರು ತಿನ್ನುತ್ತಾ ಕುಡಿಯುತ್ತಾ ಮದುವೆಮಾಡಿಕೊಳ್ಳುತ್ತಾ ಮತ್ತು ಮದುವೆಮಾಡಿ ಕೊಡುತ್ತಾ ಇದ್ದರು. ಆಗ ಜಲಪ್ರಳಯವು ಬಂದು ಅವರೆಲ್ಲರನ್ನು ನಾಶಮಾಡಿತ್ತು.

ರೋಮಾಪುರದವರಿಗೆ 5:12

ಈ ವಿಷಯ ಹೇಗಂದರೆ, ಒಬ್ಬ ಮನುಷ್ಯ ನಿಂದಲೇ ಪಾಪವೂ ಪಾಪದಿಂದ ಮರಣವೂ ಲೋಕ ದೊಳಗೆ ಸೇರಿದವು; ಎಲ್ಲರೂ ಪಾಪಮಾಡಿದ್ದರಿಂದ ಮರಣವು ಹೀಗೆ ಎಲ್ಲರಲ್ಲಿಯೂ ವ್ಯಾಪಿಸಿತು.

ರೋಮಾಪುರದವರಿಗೆ 5:21

ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.

ರೋಮಾಪುರದವರಿಗೆ 6:23

ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.

ರೋಮಾಪುರದವರಿಗೆ 8:20

ಸೃಷ್ಟಿಯು ವ್ಯರ್ಥತ್ವಕ್ಕೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು ಒಳಪಡಿಸಿದಾತನ ಮುಖಾಂ ತರ ನಿರೀಕ್ಷೆಯಲ್ಲಿಯೇ.

ಹೆಬ್ರಿಯರಿಗೆ 11:7

ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.

1 ಪೇತ್ರ 3:20

ಆದರೆ ನೋಹನ ದಿನಗಳಲ್ಲಿ ನಾವೆಯನ್ನು ಕಟ್ಟುತ್ತಿರಲು ದೇವರ ದೀರ್ಘಶಾಂತಿಯು ಒಂದು ಸಾರಿ ಕಾದಿದ್ದಾಗ ಆತನಿಗೆ ಅವಿಧೇಯರಾ ಗಿದ್ದವರ ಬಳಿಗೆ ಹೋಗಿ ಆತನು ಸಾರಿದನು. ಆ ನಾವೆಯೊಳಗೆ ಕೆಲವರು ಅಂದರೆ ಎಂಟೇ ಜನರು ನೀರಿನ ಮೂಲಕ ರಕ್ಷಣೆ ಹೊಂದಿದರು.

2 ಪೇತ್ರ 2:5

ಆತನು ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಮೇಲೆ ಜಲಪ್ರಳಯವನ್ನು ಬರಮಾಡಿ ದನು; ಆದರೆ ನೀತಿಯನ್ನು ಸಾರುತ್ತಿದ್ದ ಎಂಟನೆಯ ವನಾದ ನೋಹನನ್ನು ರಕ್ಷಿಸಿದನು.

Interlinear

Choose Theme